Homeಗೌರಿ ಕಣ್ಣೋಟದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ದೈಹಿಕ ಸೌಂದರ್ಯದ ಬಗ್ಗೆ ಗಮನ ಕೊಡದೆ ನಾನು ನನ್ನ ಸಮಯವನ್ನು ಆಂತರ್ಯದ ಸದ್ಗುಣಗಳನ್ನು ಹೆಚ್ಚಿಸಿಕೊಳ್ಳುವತ್ತ ವ್ಯಯಿಸಿದರೆ ನಾನು ಈ ಜಗತ್ತಿನಲ್ಲಿ ನನ್ನ ಕೈಲಾದಷ್ಟು ಬದಲಾವಣೆ ಮತ್ತು ಅಭಿವೃದ್ಧಿಯನ್ನು ತರಬಹುದೆನಿಸುತ್ತದೆ.

- Advertisement -
- Advertisement -

ಇತ್ತೀಚೆಗೆ ಇಂಟರ್‌ನೆಟ್‌ನಲ್ಲಿ ಯಾರೋ ಒಬ್ಬ ಓರ್ವ ಯುವತಿಯ ಫೋಟೊ ಒಂದನ್ನು ಹಾಕಿ “ಇದನ್ನು ಹೇಗೆ ಅರ್ಥಮಾಡಿಕೊಳ್ಳುವುದೆಂದು ನನಗೆ ಗೊತ್ತಾಗಲಿಲ್ಲ’’ ಎಂದು ಅದರಡಿ ಬರೆದಿದ್ದ. ಆತನ ಗೊಂದಲಕ್ಕೆ ಕಾರಣ ಆ ಹುಡುಗಿಯ ಮುಖದ ಮೇಲಿದ್ದ ದಟ್ಟವಾದ ಕೂದಲು. ಸೌಂದರ್ಯ ಕುರಿತು ಸಾಮಾನ್ಯ ಜನರ ಅಭಿಪ್ರಾಯ ಮತ್ತು ಪುರುಷರ ನಿರೀಕ್ಷೆಗೆ ಬೆಲೆ ಕೊಡದ ಆ ಯುವತಿ ತನ್ನ ಸಿಖ್ ಧರ್ಮದ ನಂಬಿಕೆಯಂತೆ ತನ್ನ ಮುಖದ ಮೇಲಿರುವ ಕೂದಲನ್ನು ಬೋಳಿಸಿಕೊಂಡಿರಲಿಲ್ಲ. ಸಹಜವಾಗಿಯೇ ಇದು ಆ ವ್ಯಕ್ತಿಗೆ ವಿಚಿತ್ರವಾಗಿ ಕಂಡಿತ್ತು.

ಆತ ಈ ಫೋಟೋವನ್ನು ಹಾಕಿದ ನಂತರ ಅದರಲ್ಲಿರುವ ಯುವತಿಯ ಧಾರ್ಮಿಕ ನಂಬಿಕೆಯನ್ನು ಬೆಂಬಲಿಸುತ್ತ ಮತ್ತು ಅದನ್ನು ಲೇವಡಿ ಮಾಡಿದ ವ್ಯಕ್ತಿಯ ಅಸೂಕ್ಷ್ಮತೆಯನ್ನು ಖಂಡಿಸುತ್ತಾ ಹಲವಾರು ಪ್ರತಿಕ್ರಿಯೆಗಳು ಬಂದವು. ಹಾಗೆಯೇ ಆಕೆಯನ್ನು ತಮಾಷೆ ಮಾಡಿದವರಿಗೂ ಕೊರತೆ ಇರಲಿಲ್ಲ. ಆಕೆಯ ಸುತ್ತ ಎಲ್ಲ ತರಹದ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವಾಗಲೇ ಆ ಯುವತಿಯೇ ತನ್ನ ಅಭಿಪ್ರಾಯವನ್ನು ದಾಖಲಿಸಿದಳು. ಆಕೆ ಅದೆಷ್ಟು ಸೂಕ್ಷ್ಮಮನಸ್ಸಿನ, ದೃಢ ನಂಬಿಕೆಯ, ಸಂವೇದನಾಶೀಲ ಯುವತಿ ಎಂದರೆ ಆಕೆಯನ್ನು ಎಲ್ಲರೂ ಹಾಡಿಹೊಗಳಿದರು.

ಆ ಯುವತಿಯ ಪ್ರತಿಕ್ರಿಯೆ ಹೀಗಿತ್ತು:

“ಹಾಯ್ ಗೆಳೆಯರೆ. ನಾನು ಬಲ್‌ಪ್ರೀತ್ ಕೌರ್. ಆ ಫೋಟೋದಲ್ಲಿರುವ ಹುಡುಗಿ. ನನ್ನ ಸ್ನೇಹಿತರು ಫೇಸ್ಸ್ಬುಕ್‌ನಲ್ಲಿ ಈ ಫೋಟೋದ ಬಗ್ಗೆ ನನ್ನ ಗಮನ ಸೆಳೆಯುವ ತನಕ ಈ ಕುರಿತು ನನಗೆ ಗೊತ್ತಿರಲಿಲ್ಲ. ಈ ನನ್ನ ಫೋಟೊವನ್ನು ತೆಗೆದವರು ನನ್ನನ್ನು ಕೇಳಿದ್ದರೆ ನಾನು ಸ್ಮೈಲ್‌ ಮಾಡಿ ಸಹಕರಿಸುತ್ತಿದ್ದೆ. ಈ ಫೋಟೋಗೆ ಬಂದಿರುವ ನಕಾರಾತ್ಮಕ ಮತ್ತು ಸಕಾರಾತ್ಮಕ ಪ್ರತಿಕ್ರಿಯೆಗಳನ್ನು ಓದಿ ನನಗೆ ಮುಜುಗರವಾಗಲಿ, ಅವಮಾನವಾಗಲಿ ಆಗಿಲ್ಲ. ಯಾಕೆಂದರೆ ನಾನು ಇರುವುದೇ ಹೀಗೆ. ಹೌದು, ನಾನು ಧರ್ಮದ ದೀಕ್ಷೆ ಪಡೆದಿರುವ, ಮುಖದ ಮೇಲೆ ಕೂದಲನ್ನು ಹೊಂದಿರುವ ಸಿಖ್ ಮಹಿಳೆ. ನಾನು ಇತರೆ ಮಹಿಳೆಯರಿಗಿಂತ ಭಿನ್ನವಾಗಿ ಕಾಣುವುದರಿಂದ ನನ್ನ ಲಿಂಗದ ಬಗ್ಗೆ ಹಲವರಿಗೆ ಅನುಮಾನ ಮೂಡುತ್ತದೆ ಎಂಬುದನ್ನು ನಾನು ಬಲ್ಲೆ. ಅದರೆ ಧರ್ಮಧೀಕ್ಷೆ ಪಡೆದಿರುವ ಸಿಖ್ಖರು ಈ ದೇಹವನ್ನು ದೇವರೇ ನಮಗೆ ಕೊಟ್ಟಿದ್ದೆಂದೂ, ಈ ದೇಹ ಪವಿತ್ರವೆಂದೂ (ಒಂದು ರೀತಿಯಲ್ಲಿ ಇದು ಲಿಂಗರಹಿತ ದೇಹ), ಇದನ್ನು ದೇವರು ಕೊಟ್ಟಂತೆಯೇ ಕಾಪಾಡಿಕೊಳ್ಳಬೇಕೆಂದೂ ನಂಬಿದ್ದೇವೆ. ಹೇಗೆ ಮಕ್ಕಳು ತಮಗೆ ಜನ್ಮ ನೀಡಿದ ತಂದೆ/ತಾಯಿಯನ್ನು ತಿರಸ್ಕರಿಸುವುದಿಲ್ಲವೋ, ಹಾಗೆಯೇ ಸಿಖ್ಖರು ದೇವರು ಕೊಟ್ಟಿರುವ ದೇಹವನ್ನು ತಿರಸ್ಕರಿಸುವುದಿಲ್ಲ. “ನಾನು, ನನ್ನದು’’ ಎಂಬ ಭಾವನೆಯಲ್ಲಿ ನಮ್ಮ ದೇಹವನ್ನು ಒಂದು ಪರಿಕರದಂತೆ ಬದಲಾಯಿಸುತ್ತಾ ಹೋದರೆ ನಾವು ನಮ್ಮ ಒಳಗೇ ನಮ್ಮ ಅಹಂ ಮತ್ತು ದೈವತ್ವದ ನಡುವೆ ಬಿರುಕನ್ನು ಮೂಡಿಸಿಕೊಳ್ಳುತ್ತೇವೆ. ಸೌಂದರ್ಯದ ಬಗ್ಗೆ ಸಮಾಜದ ಪರಿಕಲ್ಪನೆಯನ್ನು ಮೀರಿ ನಿಲ್ಲುವ ಮೂಲಕ ನಾನು ನನ್ನ ಕೃತ್ಯಗಳ ಬಗ್ಗೆ ಹೆಚ್ಚು ಗಮನಹರಿಸಲು ನನಗೆ ಸಾಧ್ಯ ಎಂದು ನಾನು ನಂಬಿದ್ದೇನೆ. ನನ್ನ ಚಿಂತನೆ, ವರ್ತನೆ ಮತ್ತು ಕೃತ್ಯಗಳು ನನ್ನ ಈ ದೇಹದ ವಿನ್ಯಾಸಕ್ಕಿಂತ ಮೌಲ್ಯಯುತವಾದದ್ದೆಂದು ಭಾವಿಸಿದ್ದೇನೆ”.

ಎಷ್ಟೇ ಆದರೂ ಕೊನೆಗೂ ಈ ದೇಹ ಬೂದಿ ಆಗುವುದರಿಂದ ಇದರ ಬಗ್ಗೆ ಯಾಕಷ್ಟು ಚಡಪಡಿಸಬೇಕು? ನಾನು ಸತ್ತ ನಂತರ ಯಾರೂ ನಾನು ಹೇಗಿದ್ದೆ ಎಂದು ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಅಷ್ಟೇ ಯಾಕೆ, ನನ್ನ ಮಕ್ಕಳೂ, ನನ್ನ ದನಿಯನ್ನೂ ಮರೆತುಬಿಡುತ್ತಾರೆ. ಕಾಲಕ್ರಮೇಣ ನಮ್ಮ ಶಾರೀರಿಕ ನೆನಪುಗಳೂ ಅಳಿಸಿಹೋಗುತ್ತವೆ. ಬದಲಾಗಿ ನನ್ನ ಪ್ರಭಾವ ಮತ್ತು ನನ್ನ ಲೆಗಸಿ ಉಳಿದಿರುತ್ತದೆ. ದೈಹಿಕ ಸೌಂದರ್ಯದ ಬಗ್ಗೆ ಗಮನ ಕೊಡದೆ ನಾನು ನನ್ನ ಸಮಯವನ್ನು ಆಂತರ್ಯದ ಸದ್ಗುಣಗಳನ್ನು ಹೆಚ್ಚಿಸಿಕೊಳ್ಳುವತ್ತ ವ್ಯಯಿಸಿದರೆ ನಾನು ಈ ಜಗತ್ತಿನಲ್ಲಿ ನನ್ನ ಕೈಲಾದಷ್ಟು ಬದಲಾವಣೆ ಮತ್ತು ಅಭಿವೃದ್ಧಿಯನ್ನು ತರಬಹುದೆನಿಸುತ್ತದೆ.

ಆದ್ದರಿಂದ ನನಗೆ ನನ್ನ ಮುಖ ಹೇಗಿದೆ ಎಂಬುದಕ್ಕಿಂತ ಆ ಮುಖದ ಹಿಂದೆ ಇರುವ ನಗೆ ಮುಖ್ಯವಾಗಿದೆ. ಮುಂದೆ ಯಾರದರೂ ನನ್ನನ್ನು ನೋಡಿದರೆ ದಯವಿಟ್ಟು ನನಗೆ ಹಲೋ ಹೇಳಿ ನನ್ನನ್ನು ಮಾತನಾಡಿಸಿ. ನನ್ನ ಈ ಫೋಟೋಗೆ ಬಂದಿರುವ ಪಾಸಿಟಿವ್ ಮತ್ತು ನೆಗಟಿವ್, ಎರಡೂ ರೀತಿಯ ಪ್ರತಿಕ್ರಿಯೆಗಳಿಂದ ನಾನು ನನ್ನನ್ನಲ್ಲದೆ ಇತರರನ್ನೂ ಇನ್ನೂ ಚೆನ್ನಾಗಿ ಅರ್ಥಮಾಡಿಕೊಳ್ಳುವುದಕ್ಕೆ ಸಾಧ್ಯವಾಗಿದ್ದರಿಂದ ನಾನು ಎಲ್ಲರಿಗೂ ಆಭಾರಿ ಆಗಿದ್ದೇನೆ.

ಅಂದಹಾಗೆ ನಾನು ಫೋಟೊದಲ್ಲಿ ತೊಟ್ಟಿರುವ ಯೋಗಾ ಪ್ಯಾಂಟ್‌ಗಳು ತುಂಬಾ ಆರಾಮಾಗಿರುತ್ತವೆ. ಹಾಗೆಯೇ ನಾನು ತೊಟ್ಟಿರುವ `ಬೆಟ್ಟರ್ ಟುಗೆದರ್’ ಎಂಬ ಬರಹ ಇರುವ ಟೀಶರ್ಟ್ ಒಂದು ಅಂತರ್‌ಧರ್ಮೀಯ ಯುವಕರ ಸಂಘಟನೆಯದ್ದು. ಕತೆಗಳನ್ನು ಹೇಳುವ ಮತ್ತು ಸಂವಾದಗಳನ್ನು ನಡೆಸುವ ಮೂಲಕ ವಿವಿಧ ಧರ್ಮಗಳ ನಡುವೆ ಸಾಮರಸ್ಯ ತರುವ ಉದ್ದೇಶ ಆ ಯುವ ಸಂಘಟನೆಯದ್ದು. ನನ್ನ ಬಗ್ಗೆ ಇದು ಇನ್ನಷ್ಟು ವಿವರಣೆ ನೀಡುತ್ತದೆಂದು ಇಲ್ಲಿ ಇದನ್ನು ಉಲ್ಲೇಖಿಸಿದ್ದೇನೆ.

“ನನ್ನ ಮಾತುಗಳಿಂದ ಯಾರಿಗಾದರೂ ನೋವುಂಟಾಗಿದ್ದರೆ ದಯವಿಟ್ಟು ನನ್ನನ್ನು ಕ್ಷಮಿಸಿ.’’

ಬಲ್‌ಪ್ರೀತ್ ಕೌರ್‌ಳ ಪ್ರತಿಕ್ರಿಯೆ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾಗಲೇ ಆಕೆಯ ಫೋಟೋವನ್ನು ಇಂಟರ್‌ನೆಟ್‌ನಲ್ಲಿ ಪೋಸ್ಟ್ ಮಾಡಿದ ವ್ಯಕ್ತಿ ತಪ್ಪೊಪ್ಪಿಕೊಂಡ. ಆತ ಹೀಗೆ ಬರೆದ:

“ನಾನು ಬಲ್‌ಪ್ರೀತಳ ಫೋಟೊ ಹಾಕಿದ್ದು ತಮಾಷೆಯಾಗಿರಲಿಲ್ಲ ಎಂದು ನನಗೆ ಅರಿವಾಗಿದೆ. ನಾನು ಸಿಖ್ಖರ, ಬಲ್‌ಪ್ರೀತಳ ಮತ್ತು ಇತರರ ಕ್ಷಮೆ ಕೇಳುತ್ತೇನೆ. ಇತರರನ್ನು ಲೇವಡಿ ಮಾಡುವುದು ಹಲವರಿಗೆ ಸಂತೋಷ ಕೊಡಬಹುದು, ಆದರೆ ಆ ಲೇವಡಿಗೆ ಗುರಿಯಾಗುವವರನ್ನು ಅಗೌರವಿಸುತ್ತದೆ. ನಾನು ಮಾಡಿದ್ದು ಸಂಪೂರ್ಣವಾಗಿ ತಪ್ಪು ಎಂದು ನನಗೆ ಗೊತ್ತು.”

ಇದಾದ ನಂತರ ನಾನು ಸಿಖ್ಖ್ ಧರ್ಮದ ಬಗ್ಗೆ ಹೆಚ್ಚು ಓದಿಕೊಂಡಿದ್ದು ಅದು ನಿಜವಾಗಲೂ ಆಸಕ್ತಿದಾಯಕವಾಗಿದೆ. ಬಲ್‌ಪ್ರೀತ್ ಹೇಳುವಂತೆ ನಮ್ಮ ದೈಹಿಕ ಸೌಂದರ್ಯಕ್ಕೆ ಹೆಚ್ಚು ಗಮನ ಕೊಡುವುದಕ್ಕಿಂತ ನಾವೊಂದು ಉತ್ತಮವಾದ ಲೆಗಸಿಯನ್ನು ಬಿಟ್ಟುಹೋಗುವುದು ಮುಖ್ಯ.

ಬಲ್‌ಪ್ರೀತ್, ನಾನು ಈ ಕುರಿತು ಮುಕ್ತವಾಗಿ ಚಿಂತಿಸದ ವ್ಯಕ್ತಿಯಾಗಿದ್ದಕ್ಕೆ ನನ್ನನ್ನು ಕ್ಷಮಿಸು. ನೀನು ನನಗಿಂತ ಉತ್ತಮ ವ್ಯಕ್ತಿ ಅಗಿರುವೆ.

ಸಿಖ್ಖರೇ, ನಾನು ನಿಮ್ಮ ಜೀವನಕ್ರಮದ ಬಗ್ಗೆ ಮತ್ತು ನಿಮ್ಮ ಸಂಸ್ಕೃತಿಯ ಬಗ್ಗೆ ಅವಹೇಳನ ಮಾಡಿದ್ದಕ್ಕೆ ನಿಮ್ಮ ಕ್ಷಮೆ ಕೇಳುತ್ತೇನೆ. ಬಲ್‌ಪ್ರೀತ್ ತಾನು ನಂಬಿರುವ ಸಿದ್ಧಾಂತದಲ್ಲಿ ಇಟ್ಟುರುವ ನಂಬಿಕೆ ನನ್ನನ್ನು ಸ್ತಬ್ಧನನ್ನಾಗಿಸಿದೆ.

ಆತ ಅಷ್ಟಕ್ಕೆ ಸುಮ್ಮನಾಗಲಿಲ್ಲ. ಅಮೆರಿಕದ ಒಹೈಯೋ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ, ಮುಂದೆ ನ್ಯೂರೋ ಸರ್ಜನ್ ಆಗಬೇಕೆಂಬ ಗುರಿ ಹೊಂದಿರುವ ಬಲ್‌ಪ್ರೀತಳಿಗೆ ವೈಯಕ್ತಿಕವಾಗಿ ಈ ಮೇಲ್ ಮೂಲಕ ಕ್ಷಮೆ ಕೋರಿದ. ಅದನ್ನು ಓದಿ ಬಲ್‌ಪ್ರೀತ್ ಎಷ್ಟು ದಂಗಾದಳೆಂದರೆ “ಆತ ಪ್ರಾಮಾಣಿಕವಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ನಿಜವಾಗಲೂ ಹೇಳಬೇಕೆಂದರೆ ನನಗೂ ಆ ರೀತಿ ಕ್ಷಮೆ ಕೇಳುವುದು ಕಷ್ಟವಾಗುತ್ತಿತ್ತೇನೋ’’ ಎಂದಿದ್ದಾಳೆ. ಹಾಗೆ ಹೇಳುವ ಮೂಲಕ ಬಲ್‌ಪ್ರೀತ್ ನಿಜವಾಗಲೂ ಎಷ್ಟು ಧಾರಾಳ ಮನಸ್ಸಿನವಳು ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾಳೆ.

ಸದ್ಯದಲ್ಲೇ ಆತ ಓಹೈಯೋಗೆ ಬಂದು ಆಕೆಯನ್ನು ಮುಖತಃ ಭೇಟಿ ಆಗಿ ಕ್ಷಮೆ ಕೋರಲೂ ಸಿದ್ಧ ಎಂದಿದ್ದಾನೆ. ಅದಕ್ಕೆ ಬಲ್‌ಪ್ರೀತ್ “ಅದರ ಅಗತ್ಯವಿಲ್ಲ. ಆದರೆ ನಾವು ಭೇಟಿ ಆದರೆ ಈ ಬಾರಿ ಜೊತೆಯಾಗಿ ಫೋಟೋ ತೆಗೆಸಿಕೊಳ್ಳೋಣ’’ ಎಂದು ತಮಾಷೆ ಮಾಡಿದ್ದಾಳೆ!

ಇತರರ ಧಾರ್ಮಿಕ ನಂಬಿಕೆಯ ಬಗ್ಗೆ, ಉಡುಗೆತೊಡುಗೆಗಳ ಬಗ್ಗೆ, ದೈಹಿಕ ಸೌಂದರ್ಯದ ಬಗ್ಗೆ ಪೂರ್ವಾಗ್ರಹಗಳನ್ನು ಹೊಂದಿರುವವರು ಅವುಗಳನ್ನು ಲೇವಡಿ ಮಾಡುವುದು ಸಾಮಾನ್ಯ. ಆದರೆ ಬಲ್‌ಪ್ರೀತ್ ಎಂಬ ಯುವತಿ ತನ್ನ ತಾಳ್ಮೆ, ದಿಟ್ಟತನ ಮತ್ತು ಸೂಕ್ಷ್ಮತೆಯಿಂದ ಅಂತಹ ಪೂರ್ವಾಗ್ರಹಗಳನ್ನು ಮನಮುಟ್ಟುವಂತೆ ತೊಡೆದುಹಾಕಿದ್ದಾಳೆ. ಇದು ಇತರರಿಗೆ ಮೇಲುಪಂಕ್ತಿ ಆಗಲಿ ಎಂಬ ಆಶಯ ನನ್ನದು…

ಗೌರಿ ಲಂಕೇಶ್‌

ಅಕ್ಟೋಬರ್ 17, 2012


ಇದನ್ನೂ ಓದಿ: ದೊರೆಸ್ವಾಮಿ ಎಂಬ ರಾಕ್‍ಸ್ಟಾರ್ !! ಆರು ವರ್ಷದ ಹಿಂದೆ ಗೌರಿ ಲಂಕೇಶ್‌ ಬರೆದ ಲೇಖನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...