Homeಗೌರಿ ಕಣ್ಣೋಟದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್‌ ಬರಹ

ದೈಹಿಕ ಸೌಂದರ್ಯದ ಬಗ್ಗೆ ಗಮನ ಕೊಡದೆ ನಾನು ನನ್ನ ಸಮಯವನ್ನು ಆಂತರ್ಯದ ಸದ್ಗುಣಗಳನ್ನು ಹೆಚ್ಚಿಸಿಕೊಳ್ಳುವತ್ತ ವ್ಯಯಿಸಿದರೆ ನಾನು ಈ ಜಗತ್ತಿನಲ್ಲಿ ನನ್ನ ಕೈಲಾದಷ್ಟು ಬದಲಾವಣೆ ಮತ್ತು ಅಭಿವೃದ್ಧಿಯನ್ನು ತರಬಹುದೆನಿಸುತ್ತದೆ.

- Advertisement -
- Advertisement -

ಇತ್ತೀಚೆಗೆ ಇಂಟರ್‌ನೆಟ್‌ನಲ್ಲಿ ಯಾರೋ ಒಬ್ಬ ಓರ್ವ ಯುವತಿಯ ಫೋಟೊ ಒಂದನ್ನು ಹಾಕಿ “ಇದನ್ನು ಹೇಗೆ ಅರ್ಥಮಾಡಿಕೊಳ್ಳುವುದೆಂದು ನನಗೆ ಗೊತ್ತಾಗಲಿಲ್ಲ’’ ಎಂದು ಅದರಡಿ ಬರೆದಿದ್ದ. ಆತನ ಗೊಂದಲಕ್ಕೆ ಕಾರಣ ಆ ಹುಡುಗಿಯ ಮುಖದ ಮೇಲಿದ್ದ ದಟ್ಟವಾದ ಕೂದಲು. ಸೌಂದರ್ಯ ಕುರಿತು ಸಾಮಾನ್ಯ ಜನರ ಅಭಿಪ್ರಾಯ ಮತ್ತು ಪುರುಷರ ನಿರೀಕ್ಷೆಗೆ ಬೆಲೆ ಕೊಡದ ಆ ಯುವತಿ ತನ್ನ ಸಿಖ್ ಧರ್ಮದ ನಂಬಿಕೆಯಂತೆ ತನ್ನ ಮುಖದ ಮೇಲಿರುವ ಕೂದಲನ್ನು ಬೋಳಿಸಿಕೊಂಡಿರಲಿಲ್ಲ. ಸಹಜವಾಗಿಯೇ ಇದು ಆ ವ್ಯಕ್ತಿಗೆ ವಿಚಿತ್ರವಾಗಿ ಕಂಡಿತ್ತು.

ಆತ ಈ ಫೋಟೋವನ್ನು ಹಾಕಿದ ನಂತರ ಅದರಲ್ಲಿರುವ ಯುವತಿಯ ಧಾರ್ಮಿಕ ನಂಬಿಕೆಯನ್ನು ಬೆಂಬಲಿಸುತ್ತ ಮತ್ತು ಅದನ್ನು ಲೇವಡಿ ಮಾಡಿದ ವ್ಯಕ್ತಿಯ ಅಸೂಕ್ಷ್ಮತೆಯನ್ನು ಖಂಡಿಸುತ್ತಾ ಹಲವಾರು ಪ್ರತಿಕ್ರಿಯೆಗಳು ಬಂದವು. ಹಾಗೆಯೇ ಆಕೆಯನ್ನು ತಮಾಷೆ ಮಾಡಿದವರಿಗೂ ಕೊರತೆ ಇರಲಿಲ್ಲ. ಆಕೆಯ ಸುತ್ತ ಎಲ್ಲ ತರಹದ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವಾಗಲೇ ಆ ಯುವತಿಯೇ ತನ್ನ ಅಭಿಪ್ರಾಯವನ್ನು ದಾಖಲಿಸಿದಳು. ಆಕೆ ಅದೆಷ್ಟು ಸೂಕ್ಷ್ಮಮನಸ್ಸಿನ, ದೃಢ ನಂಬಿಕೆಯ, ಸಂವೇದನಾಶೀಲ ಯುವತಿ ಎಂದರೆ ಆಕೆಯನ್ನು ಎಲ್ಲರೂ ಹಾಡಿಹೊಗಳಿದರು.

ಆ ಯುವತಿಯ ಪ್ರತಿಕ್ರಿಯೆ ಹೀಗಿತ್ತು:

“ಹಾಯ್ ಗೆಳೆಯರೆ. ನಾನು ಬಲ್‌ಪ್ರೀತ್ ಕೌರ್. ಆ ಫೋಟೋದಲ್ಲಿರುವ ಹುಡುಗಿ. ನನ್ನ ಸ್ನೇಹಿತರು ಫೇಸ್ಸ್ಬುಕ್‌ನಲ್ಲಿ ಈ ಫೋಟೋದ ಬಗ್ಗೆ ನನ್ನ ಗಮನ ಸೆಳೆಯುವ ತನಕ ಈ ಕುರಿತು ನನಗೆ ಗೊತ್ತಿರಲಿಲ್ಲ. ಈ ನನ್ನ ಫೋಟೊವನ್ನು ತೆಗೆದವರು ನನ್ನನ್ನು ಕೇಳಿದ್ದರೆ ನಾನು ಸ್ಮೈಲ್‌ ಮಾಡಿ ಸಹಕರಿಸುತ್ತಿದ್ದೆ. ಈ ಫೋಟೋಗೆ ಬಂದಿರುವ ನಕಾರಾತ್ಮಕ ಮತ್ತು ಸಕಾರಾತ್ಮಕ ಪ್ರತಿಕ್ರಿಯೆಗಳನ್ನು ಓದಿ ನನಗೆ ಮುಜುಗರವಾಗಲಿ, ಅವಮಾನವಾಗಲಿ ಆಗಿಲ್ಲ. ಯಾಕೆಂದರೆ ನಾನು ಇರುವುದೇ ಹೀಗೆ. ಹೌದು, ನಾನು ಧರ್ಮದ ದೀಕ್ಷೆ ಪಡೆದಿರುವ, ಮುಖದ ಮೇಲೆ ಕೂದಲನ್ನು ಹೊಂದಿರುವ ಸಿಖ್ ಮಹಿಳೆ. ನಾನು ಇತರೆ ಮಹಿಳೆಯರಿಗಿಂತ ಭಿನ್ನವಾಗಿ ಕಾಣುವುದರಿಂದ ನನ್ನ ಲಿಂಗದ ಬಗ್ಗೆ ಹಲವರಿಗೆ ಅನುಮಾನ ಮೂಡುತ್ತದೆ ಎಂಬುದನ್ನು ನಾನು ಬಲ್ಲೆ. ಅದರೆ ಧರ್ಮಧೀಕ್ಷೆ ಪಡೆದಿರುವ ಸಿಖ್ಖರು ಈ ದೇಹವನ್ನು ದೇವರೇ ನಮಗೆ ಕೊಟ್ಟಿದ್ದೆಂದೂ, ಈ ದೇಹ ಪವಿತ್ರವೆಂದೂ (ಒಂದು ರೀತಿಯಲ್ಲಿ ಇದು ಲಿಂಗರಹಿತ ದೇಹ), ಇದನ್ನು ದೇವರು ಕೊಟ್ಟಂತೆಯೇ ಕಾಪಾಡಿಕೊಳ್ಳಬೇಕೆಂದೂ ನಂಬಿದ್ದೇವೆ. ಹೇಗೆ ಮಕ್ಕಳು ತಮಗೆ ಜನ್ಮ ನೀಡಿದ ತಂದೆ/ತಾಯಿಯನ್ನು ತಿರಸ್ಕರಿಸುವುದಿಲ್ಲವೋ, ಹಾಗೆಯೇ ಸಿಖ್ಖರು ದೇವರು ಕೊಟ್ಟಿರುವ ದೇಹವನ್ನು ತಿರಸ್ಕರಿಸುವುದಿಲ್ಲ. “ನಾನು, ನನ್ನದು’’ ಎಂಬ ಭಾವನೆಯಲ್ಲಿ ನಮ್ಮ ದೇಹವನ್ನು ಒಂದು ಪರಿಕರದಂತೆ ಬದಲಾಯಿಸುತ್ತಾ ಹೋದರೆ ನಾವು ನಮ್ಮ ಒಳಗೇ ನಮ್ಮ ಅಹಂ ಮತ್ತು ದೈವತ್ವದ ನಡುವೆ ಬಿರುಕನ್ನು ಮೂಡಿಸಿಕೊಳ್ಳುತ್ತೇವೆ. ಸೌಂದರ್ಯದ ಬಗ್ಗೆ ಸಮಾಜದ ಪರಿಕಲ್ಪನೆಯನ್ನು ಮೀರಿ ನಿಲ್ಲುವ ಮೂಲಕ ನಾನು ನನ್ನ ಕೃತ್ಯಗಳ ಬಗ್ಗೆ ಹೆಚ್ಚು ಗಮನಹರಿಸಲು ನನಗೆ ಸಾಧ್ಯ ಎಂದು ನಾನು ನಂಬಿದ್ದೇನೆ. ನನ್ನ ಚಿಂತನೆ, ವರ್ತನೆ ಮತ್ತು ಕೃತ್ಯಗಳು ನನ್ನ ಈ ದೇಹದ ವಿನ್ಯಾಸಕ್ಕಿಂತ ಮೌಲ್ಯಯುತವಾದದ್ದೆಂದು ಭಾವಿಸಿದ್ದೇನೆ”.

ಎಷ್ಟೇ ಆದರೂ ಕೊನೆಗೂ ಈ ದೇಹ ಬೂದಿ ಆಗುವುದರಿಂದ ಇದರ ಬಗ್ಗೆ ಯಾಕಷ್ಟು ಚಡಪಡಿಸಬೇಕು? ನಾನು ಸತ್ತ ನಂತರ ಯಾರೂ ನಾನು ಹೇಗಿದ್ದೆ ಎಂದು ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಅಷ್ಟೇ ಯಾಕೆ, ನನ್ನ ಮಕ್ಕಳೂ, ನನ್ನ ದನಿಯನ್ನೂ ಮರೆತುಬಿಡುತ್ತಾರೆ. ಕಾಲಕ್ರಮೇಣ ನಮ್ಮ ಶಾರೀರಿಕ ನೆನಪುಗಳೂ ಅಳಿಸಿಹೋಗುತ್ತವೆ. ಬದಲಾಗಿ ನನ್ನ ಪ್ರಭಾವ ಮತ್ತು ನನ್ನ ಲೆಗಸಿ ಉಳಿದಿರುತ್ತದೆ. ದೈಹಿಕ ಸೌಂದರ್ಯದ ಬಗ್ಗೆ ಗಮನ ಕೊಡದೆ ನಾನು ನನ್ನ ಸಮಯವನ್ನು ಆಂತರ್ಯದ ಸದ್ಗುಣಗಳನ್ನು ಹೆಚ್ಚಿಸಿಕೊಳ್ಳುವತ್ತ ವ್ಯಯಿಸಿದರೆ ನಾನು ಈ ಜಗತ್ತಿನಲ್ಲಿ ನನ್ನ ಕೈಲಾದಷ್ಟು ಬದಲಾವಣೆ ಮತ್ತು ಅಭಿವೃದ್ಧಿಯನ್ನು ತರಬಹುದೆನಿಸುತ್ತದೆ.

ಆದ್ದರಿಂದ ನನಗೆ ನನ್ನ ಮುಖ ಹೇಗಿದೆ ಎಂಬುದಕ್ಕಿಂತ ಆ ಮುಖದ ಹಿಂದೆ ಇರುವ ನಗೆ ಮುಖ್ಯವಾಗಿದೆ. ಮುಂದೆ ಯಾರದರೂ ನನ್ನನ್ನು ನೋಡಿದರೆ ದಯವಿಟ್ಟು ನನಗೆ ಹಲೋ ಹೇಳಿ ನನ್ನನ್ನು ಮಾತನಾಡಿಸಿ. ನನ್ನ ಈ ಫೋಟೋಗೆ ಬಂದಿರುವ ಪಾಸಿಟಿವ್ ಮತ್ತು ನೆಗಟಿವ್, ಎರಡೂ ರೀತಿಯ ಪ್ರತಿಕ್ರಿಯೆಗಳಿಂದ ನಾನು ನನ್ನನ್ನಲ್ಲದೆ ಇತರರನ್ನೂ ಇನ್ನೂ ಚೆನ್ನಾಗಿ ಅರ್ಥಮಾಡಿಕೊಳ್ಳುವುದಕ್ಕೆ ಸಾಧ್ಯವಾಗಿದ್ದರಿಂದ ನಾನು ಎಲ್ಲರಿಗೂ ಆಭಾರಿ ಆಗಿದ್ದೇನೆ.

ಅಂದಹಾಗೆ ನಾನು ಫೋಟೊದಲ್ಲಿ ತೊಟ್ಟಿರುವ ಯೋಗಾ ಪ್ಯಾಂಟ್‌ಗಳು ತುಂಬಾ ಆರಾಮಾಗಿರುತ್ತವೆ. ಹಾಗೆಯೇ ನಾನು ತೊಟ್ಟಿರುವ `ಬೆಟ್ಟರ್ ಟುಗೆದರ್’ ಎಂಬ ಬರಹ ಇರುವ ಟೀಶರ್ಟ್ ಒಂದು ಅಂತರ್‌ಧರ್ಮೀಯ ಯುವಕರ ಸಂಘಟನೆಯದ್ದು. ಕತೆಗಳನ್ನು ಹೇಳುವ ಮತ್ತು ಸಂವಾದಗಳನ್ನು ನಡೆಸುವ ಮೂಲಕ ವಿವಿಧ ಧರ್ಮಗಳ ನಡುವೆ ಸಾಮರಸ್ಯ ತರುವ ಉದ್ದೇಶ ಆ ಯುವ ಸಂಘಟನೆಯದ್ದು. ನನ್ನ ಬಗ್ಗೆ ಇದು ಇನ್ನಷ್ಟು ವಿವರಣೆ ನೀಡುತ್ತದೆಂದು ಇಲ್ಲಿ ಇದನ್ನು ಉಲ್ಲೇಖಿಸಿದ್ದೇನೆ.

“ನನ್ನ ಮಾತುಗಳಿಂದ ಯಾರಿಗಾದರೂ ನೋವುಂಟಾಗಿದ್ದರೆ ದಯವಿಟ್ಟು ನನ್ನನ್ನು ಕ್ಷಮಿಸಿ.’’

ಬಲ್‌ಪ್ರೀತ್ ಕೌರ್‌ಳ ಪ್ರತಿಕ್ರಿಯೆ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾಗಲೇ ಆಕೆಯ ಫೋಟೋವನ್ನು ಇಂಟರ್‌ನೆಟ್‌ನಲ್ಲಿ ಪೋಸ್ಟ್ ಮಾಡಿದ ವ್ಯಕ್ತಿ ತಪ್ಪೊಪ್ಪಿಕೊಂಡ. ಆತ ಹೀಗೆ ಬರೆದ:

“ನಾನು ಬಲ್‌ಪ್ರೀತಳ ಫೋಟೊ ಹಾಕಿದ್ದು ತಮಾಷೆಯಾಗಿರಲಿಲ್ಲ ಎಂದು ನನಗೆ ಅರಿವಾಗಿದೆ. ನಾನು ಸಿಖ್ಖರ, ಬಲ್‌ಪ್ರೀತಳ ಮತ್ತು ಇತರರ ಕ್ಷಮೆ ಕೇಳುತ್ತೇನೆ. ಇತರರನ್ನು ಲೇವಡಿ ಮಾಡುವುದು ಹಲವರಿಗೆ ಸಂತೋಷ ಕೊಡಬಹುದು, ಆದರೆ ಆ ಲೇವಡಿಗೆ ಗುರಿಯಾಗುವವರನ್ನು ಅಗೌರವಿಸುತ್ತದೆ. ನಾನು ಮಾಡಿದ್ದು ಸಂಪೂರ್ಣವಾಗಿ ತಪ್ಪು ಎಂದು ನನಗೆ ಗೊತ್ತು.”

ಇದಾದ ನಂತರ ನಾನು ಸಿಖ್ಖ್ ಧರ್ಮದ ಬಗ್ಗೆ ಹೆಚ್ಚು ಓದಿಕೊಂಡಿದ್ದು ಅದು ನಿಜವಾಗಲೂ ಆಸಕ್ತಿದಾಯಕವಾಗಿದೆ. ಬಲ್‌ಪ್ರೀತ್ ಹೇಳುವಂತೆ ನಮ್ಮ ದೈಹಿಕ ಸೌಂದರ್ಯಕ್ಕೆ ಹೆಚ್ಚು ಗಮನ ಕೊಡುವುದಕ್ಕಿಂತ ನಾವೊಂದು ಉತ್ತಮವಾದ ಲೆಗಸಿಯನ್ನು ಬಿಟ್ಟುಹೋಗುವುದು ಮುಖ್ಯ.

ಬಲ್‌ಪ್ರೀತ್, ನಾನು ಈ ಕುರಿತು ಮುಕ್ತವಾಗಿ ಚಿಂತಿಸದ ವ್ಯಕ್ತಿಯಾಗಿದ್ದಕ್ಕೆ ನನ್ನನ್ನು ಕ್ಷಮಿಸು. ನೀನು ನನಗಿಂತ ಉತ್ತಮ ವ್ಯಕ್ತಿ ಅಗಿರುವೆ.

ಸಿಖ್ಖರೇ, ನಾನು ನಿಮ್ಮ ಜೀವನಕ್ರಮದ ಬಗ್ಗೆ ಮತ್ತು ನಿಮ್ಮ ಸಂಸ್ಕೃತಿಯ ಬಗ್ಗೆ ಅವಹೇಳನ ಮಾಡಿದ್ದಕ್ಕೆ ನಿಮ್ಮ ಕ್ಷಮೆ ಕೇಳುತ್ತೇನೆ. ಬಲ್‌ಪ್ರೀತ್ ತಾನು ನಂಬಿರುವ ಸಿದ್ಧಾಂತದಲ್ಲಿ ಇಟ್ಟುರುವ ನಂಬಿಕೆ ನನ್ನನ್ನು ಸ್ತಬ್ಧನನ್ನಾಗಿಸಿದೆ.

ಆತ ಅಷ್ಟಕ್ಕೆ ಸುಮ್ಮನಾಗಲಿಲ್ಲ. ಅಮೆರಿಕದ ಒಹೈಯೋ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ, ಮುಂದೆ ನ್ಯೂರೋ ಸರ್ಜನ್ ಆಗಬೇಕೆಂಬ ಗುರಿ ಹೊಂದಿರುವ ಬಲ್‌ಪ್ರೀತಳಿಗೆ ವೈಯಕ್ತಿಕವಾಗಿ ಈ ಮೇಲ್ ಮೂಲಕ ಕ್ಷಮೆ ಕೋರಿದ. ಅದನ್ನು ಓದಿ ಬಲ್‌ಪ್ರೀತ್ ಎಷ್ಟು ದಂಗಾದಳೆಂದರೆ “ಆತ ಪ್ರಾಮಾಣಿಕವಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ನಿಜವಾಗಲೂ ಹೇಳಬೇಕೆಂದರೆ ನನಗೂ ಆ ರೀತಿ ಕ್ಷಮೆ ಕೇಳುವುದು ಕಷ್ಟವಾಗುತ್ತಿತ್ತೇನೋ’’ ಎಂದಿದ್ದಾಳೆ. ಹಾಗೆ ಹೇಳುವ ಮೂಲಕ ಬಲ್‌ಪ್ರೀತ್ ನಿಜವಾಗಲೂ ಎಷ್ಟು ಧಾರಾಳ ಮನಸ್ಸಿನವಳು ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾಳೆ.

ಸದ್ಯದಲ್ಲೇ ಆತ ಓಹೈಯೋಗೆ ಬಂದು ಆಕೆಯನ್ನು ಮುಖತಃ ಭೇಟಿ ಆಗಿ ಕ್ಷಮೆ ಕೋರಲೂ ಸಿದ್ಧ ಎಂದಿದ್ದಾನೆ. ಅದಕ್ಕೆ ಬಲ್‌ಪ್ರೀತ್ “ಅದರ ಅಗತ್ಯವಿಲ್ಲ. ಆದರೆ ನಾವು ಭೇಟಿ ಆದರೆ ಈ ಬಾರಿ ಜೊತೆಯಾಗಿ ಫೋಟೋ ತೆಗೆಸಿಕೊಳ್ಳೋಣ’’ ಎಂದು ತಮಾಷೆ ಮಾಡಿದ್ದಾಳೆ!

ಇತರರ ಧಾರ್ಮಿಕ ನಂಬಿಕೆಯ ಬಗ್ಗೆ, ಉಡುಗೆತೊಡುಗೆಗಳ ಬಗ್ಗೆ, ದೈಹಿಕ ಸೌಂದರ್ಯದ ಬಗ್ಗೆ ಪೂರ್ವಾಗ್ರಹಗಳನ್ನು ಹೊಂದಿರುವವರು ಅವುಗಳನ್ನು ಲೇವಡಿ ಮಾಡುವುದು ಸಾಮಾನ್ಯ. ಆದರೆ ಬಲ್‌ಪ್ರೀತ್ ಎಂಬ ಯುವತಿ ತನ್ನ ತಾಳ್ಮೆ, ದಿಟ್ಟತನ ಮತ್ತು ಸೂಕ್ಷ್ಮತೆಯಿಂದ ಅಂತಹ ಪೂರ್ವಾಗ್ರಹಗಳನ್ನು ಮನಮುಟ್ಟುವಂತೆ ತೊಡೆದುಹಾಕಿದ್ದಾಳೆ. ಇದು ಇತರರಿಗೆ ಮೇಲುಪಂಕ್ತಿ ಆಗಲಿ ಎಂಬ ಆಶಯ ನನ್ನದು…

ಗೌರಿ ಲಂಕೇಶ್‌

ಅಕ್ಟೋಬರ್ 17, 2012


ಇದನ್ನೂ ಓದಿ: ದೊರೆಸ್ವಾಮಿ ಎಂಬ ರಾಕ್‍ಸ್ಟಾರ್ !! ಆರು ವರ್ಷದ ಹಿಂದೆ ಗೌರಿ ಲಂಕೇಶ್‌ ಬರೆದ ಲೇಖನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...