Homeಮುಖಪುಟಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ

ಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ

- Advertisement -
- Advertisement -

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ಫ್ಯಾಕ್ಟ್-ಚೆಕ್ ಯುನಿಟ್ 9 ಯೂಟ್ಯೂಬ್ ಚಾನೆಲ್‌ಗಳು ಹರಡಿರುವ ಸುಳ್ಳು ಮಾಹಿತಿಯನ್ನು ಬಯಲು ಮಾಡಿದೆ.

ಸುಳ್ಳು ಸುದ್ದಿಯನ್ನು ಹರಡುತ್ತಿದ್ದ ಯೂಟ್ಯೂಬ್ ಚಾನೆಲ್‌ಗಳು 83 ಲಕ್ಷ ಚಂದಾದಾರರನ್ನು ಹೊಂದಿವೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಈ ಚಾನೆಲ್‌ಗಳು ಭಾರತದ ಮುಖ್ಯ ನ್ಯಾಯಮೂರ್ತಿ, ಪ್ರಧಾನ ಮಂತ್ರಿ ಮತ್ತು ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಸಾಂವಿಧಾನಿಕ ಹುದ್ದೆಗಳಲ್ಲಿರುವ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂಗಳು) ನಿಷೇಧಿಸಲಾಗಿದೆ ಮತ್ತು ಕೇಂದ್ರ ಸಚಿವರ ರಾಜೀನಾಮೆ ಅಥವಾ ಸಾವಿನ ಬಗ್ಗೆ ಕೆಲವು ಚಾನೆಲ್‌ಗಳು ತಪ್ಪಾಗಿ ಹೇಳಿಕೊಂಡಿವೆ ಎಂದು  ಫ್ಯಾಕ್ಟ್-ಚೆಕ್ ಯುನಿಟ್ ಹೇಳಿಕೊಂಡಿದೆ.

ಸುಳ್ಳು ಸುದ್ದಿ ಹರಡುತ್ತಿದೆ ಎಂದು ಪಟ್ಟಿ ಮಾಡಲಾದ ಯುಟ್ಯೂಬ್‌ ಚಾನಲ್‌ಗಳು: ಬಜರಂಗ್ ಎಜುಕೇಶನ್  (Bajrang Education) (24.3 ಲಕ್ಷ ಚಂದಾದಾರರನ್ನು ಹೊಂದಿದೆ), ಆಪ್ಕೆ ಗುರೂಜಿ(Aapke Guruji) (34.7 ಲಕ್ಷ ಚಂದಾದಾರರನ್ನು ಹೊಂದಿದೆ), ಬಿಜೆ ನ್ಯೂಸ್ (Bj News) (5.29 ಲಕ್ಷ ಚಂದಾದಾರರನ್ನು ಹೊಂದಿದೆ), ಸಂಸಾನಿ ಲೈವ್ ಟಿವಿ ( Sansani Live TV) (4.33 ಲಕ್ಷ ಚಂದಾದಾರರನ್ನು ಹೊಂದಿದೆ), ಜಿವಿಟಿ ನ್ಯೂಸ್( GVT News ) (8.16 ಲಕ್ಷ ಚಂದಾದಾರರನ್ನು ಹೊಂದಿದೆ), ಡೈಲಿ ಸ್ಟಡಿ ( Daily Study) (3.35 ಲಕ್ಷ ಚಂದಾದಾರನ್ನು ಹೊಂದಿದೆ), ಭಾರತ್ ಏಕ್ತಾ ನ್ಯೂಸ್(Bharat Ekta News ) (11,700 ಚಂದಾದಾರರನ್ನು ಹೊಂದಿದೆ), ಅಬ್ ಬೋಲೆಗಾ ಭಾರತ್(Ab Bolega Bharat) (1.78 ಲಕ್ಷ ಚಂದಾದಾರರನ್ನು ಹೊಂದಿದೆ) ಮತ್ತು ಸರ್ಕಾರಿ ಯೋಜನೆ ಅಧಿಕೃತ(Sarkari Yojana Official ) (1 ಲಕ್ಷ ಚಂದಾದಾರನ್ನು ಹೊಂದಿದೆ).

ಈ ಚಾನೆಲ್‌ಗಳಲ್ಲಿನ ನಕಲಿ ವಿಷಯಗಳಲ್ಲಿ ಹೆಚ್ಚಿನವು ಹಿಂದಿಯಲ್ಲಿದೆ. ಆದ್ದರಿಂದ ಇದನ್ನು ಭಾರತದಿಂದ ಸೃಷ್ಟಿಸಿರುವ  ಹೆಚ್ಚಿನ ಸಾಧ್ಯತೆಗಳಿವೆ ಎಂದು  ವರದಿ ತಿಳಿಸಿದೆ. ಇತ್ತೀಚೆಗೆ 2021ರ ಮಾಹಿತಿ ತಂತ್ರಜ್ಞಾನ ಇಲಾಖೆ ನಿಯಮಗಳ ಅಡಿಯಲ್ಲಿ ತುರ್ತಾಗಿ ಸರ್ಕಾರವು ಹಲವಾರು YouTube ಚಾನಲ್‌ಗಳನ್ನು ಬ್ಲಾಕ್‌ ಮಾಡಿತ್ತು. YouTube ಚಾನಲ್‌ಗಳು ಹರಡುವ ನಕಲಿ ಸುದ್ದಿಗಳ ಬಗ್ಗೆ ಮತ್ತು ಟ್ರಾಫಿಕ್‌ ಹೆಚ್ಚಿಸಲು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಬಗ್ಗೆ ಫ್ಯಾಕ್ಟ್-ಚೆಕ್ ಯುನಿಟ್ ನಿಗಾ ವಹಿಸುತ್ತಿದೆ.

ಈ ಹಿಂದೆ 2022ರ ಡಿಸೆಂಬರ್‌ನಿಂದ ಸುಳ್ಳು ಮಾಹಿತಿಯನ್ನು ಪ್ರಕಟಿಸಿದ ಆರೋಪದ ಮೇಲೆ 26 YouTube ಚಾನಲ್‌ಗಳ ಹೆಸರನ್ನು PIB ಬಹಿರಂಗಪಡಿಸಿತ್ತು. 2021ರ IT ನಿಯಮಗಳಡಿಯಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು 120ಕ್ಕೂ ಹೆಚ್ಚು YouTube ಚಾನಲ್‌ಗಳನ್ನು ಬ್ಲಾಕ್‌ ಮಾಡಿತ್ತು.

ಇದನ್ನು ಓದಿ: ಪ.ಬಂಗಾಳ: ರಾಷ್ಟ್ರಗೀತೆಗೆ ಅವಮಾನ; 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...