Homeಮುಖಪುಟಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ

ಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ

- Advertisement -
- Advertisement -

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ಫ್ಯಾಕ್ಟ್-ಚೆಕ್ ಯುನಿಟ್ 9 ಯೂಟ್ಯೂಬ್ ಚಾನೆಲ್‌ಗಳು ಹರಡಿರುವ ಸುಳ್ಳು ಮಾಹಿತಿಯನ್ನು ಬಯಲು ಮಾಡಿದೆ.

ಸುಳ್ಳು ಸುದ್ದಿಯನ್ನು ಹರಡುತ್ತಿದ್ದ ಯೂಟ್ಯೂಬ್ ಚಾನೆಲ್‌ಗಳು 83 ಲಕ್ಷ ಚಂದಾದಾರರನ್ನು ಹೊಂದಿವೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಈ ಚಾನೆಲ್‌ಗಳು ಭಾರತದ ಮುಖ್ಯ ನ್ಯಾಯಮೂರ್ತಿ, ಪ್ರಧಾನ ಮಂತ್ರಿ ಮತ್ತು ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಸಾಂವಿಧಾನಿಕ ಹುದ್ದೆಗಳಲ್ಲಿರುವ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂಗಳು) ನಿಷೇಧಿಸಲಾಗಿದೆ ಮತ್ತು ಕೇಂದ್ರ ಸಚಿವರ ರಾಜೀನಾಮೆ ಅಥವಾ ಸಾವಿನ ಬಗ್ಗೆ ಕೆಲವು ಚಾನೆಲ್‌ಗಳು ತಪ್ಪಾಗಿ ಹೇಳಿಕೊಂಡಿವೆ ಎಂದು  ಫ್ಯಾಕ್ಟ್-ಚೆಕ್ ಯುನಿಟ್ ಹೇಳಿಕೊಂಡಿದೆ.

ಸುಳ್ಳು ಸುದ್ದಿ ಹರಡುತ್ತಿದೆ ಎಂದು ಪಟ್ಟಿ ಮಾಡಲಾದ ಯುಟ್ಯೂಬ್‌ ಚಾನಲ್‌ಗಳು: ಬಜರಂಗ್ ಎಜುಕೇಶನ್  (Bajrang Education) (24.3 ಲಕ್ಷ ಚಂದಾದಾರರನ್ನು ಹೊಂದಿದೆ), ಆಪ್ಕೆ ಗುರೂಜಿ(Aapke Guruji) (34.7 ಲಕ್ಷ ಚಂದಾದಾರರನ್ನು ಹೊಂದಿದೆ), ಬಿಜೆ ನ್ಯೂಸ್ (Bj News) (5.29 ಲಕ್ಷ ಚಂದಾದಾರರನ್ನು ಹೊಂದಿದೆ), ಸಂಸಾನಿ ಲೈವ್ ಟಿವಿ ( Sansani Live TV) (4.33 ಲಕ್ಷ ಚಂದಾದಾರರನ್ನು ಹೊಂದಿದೆ), ಜಿವಿಟಿ ನ್ಯೂಸ್( GVT News ) (8.16 ಲಕ್ಷ ಚಂದಾದಾರರನ್ನು ಹೊಂದಿದೆ), ಡೈಲಿ ಸ್ಟಡಿ ( Daily Study) (3.35 ಲಕ್ಷ ಚಂದಾದಾರನ್ನು ಹೊಂದಿದೆ), ಭಾರತ್ ಏಕ್ತಾ ನ್ಯೂಸ್(Bharat Ekta News ) (11,700 ಚಂದಾದಾರರನ್ನು ಹೊಂದಿದೆ), ಅಬ್ ಬೋಲೆಗಾ ಭಾರತ್(Ab Bolega Bharat) (1.78 ಲಕ್ಷ ಚಂದಾದಾರರನ್ನು ಹೊಂದಿದೆ) ಮತ್ತು ಸರ್ಕಾರಿ ಯೋಜನೆ ಅಧಿಕೃತ(Sarkari Yojana Official ) (1 ಲಕ್ಷ ಚಂದಾದಾರನ್ನು ಹೊಂದಿದೆ).

ಈ ಚಾನೆಲ್‌ಗಳಲ್ಲಿನ ನಕಲಿ ವಿಷಯಗಳಲ್ಲಿ ಹೆಚ್ಚಿನವು ಹಿಂದಿಯಲ್ಲಿದೆ. ಆದ್ದರಿಂದ ಇದನ್ನು ಭಾರತದಿಂದ ಸೃಷ್ಟಿಸಿರುವ  ಹೆಚ್ಚಿನ ಸಾಧ್ಯತೆಗಳಿವೆ ಎಂದು  ವರದಿ ತಿಳಿಸಿದೆ. ಇತ್ತೀಚೆಗೆ 2021ರ ಮಾಹಿತಿ ತಂತ್ರಜ್ಞಾನ ಇಲಾಖೆ ನಿಯಮಗಳ ಅಡಿಯಲ್ಲಿ ತುರ್ತಾಗಿ ಸರ್ಕಾರವು ಹಲವಾರು YouTube ಚಾನಲ್‌ಗಳನ್ನು ಬ್ಲಾಕ್‌ ಮಾಡಿತ್ತು. YouTube ಚಾನಲ್‌ಗಳು ಹರಡುವ ನಕಲಿ ಸುದ್ದಿಗಳ ಬಗ್ಗೆ ಮತ್ತು ಟ್ರಾಫಿಕ್‌ ಹೆಚ್ಚಿಸಲು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಬಗ್ಗೆ ಫ್ಯಾಕ್ಟ್-ಚೆಕ್ ಯುನಿಟ್ ನಿಗಾ ವಹಿಸುತ್ತಿದೆ.

ಈ ಹಿಂದೆ 2022ರ ಡಿಸೆಂಬರ್‌ನಿಂದ ಸುಳ್ಳು ಮಾಹಿತಿಯನ್ನು ಪ್ರಕಟಿಸಿದ ಆರೋಪದ ಮೇಲೆ 26 YouTube ಚಾನಲ್‌ಗಳ ಹೆಸರನ್ನು PIB ಬಹಿರಂಗಪಡಿಸಿತ್ತು. 2021ರ IT ನಿಯಮಗಳಡಿಯಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು 120ಕ್ಕೂ ಹೆಚ್ಚು YouTube ಚಾನಲ್‌ಗಳನ್ನು ಬ್ಲಾಕ್‌ ಮಾಡಿತ್ತು.

ಇದನ್ನು ಓದಿ: ಪ.ಬಂಗಾಳ: ರಾಷ್ಟ್ರಗೀತೆಗೆ ಅವಮಾನ; 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...