Homeಮುಖಪುಟಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ

ಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ

- Advertisement -
- Advertisement -

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ಫ್ಯಾಕ್ಟ್-ಚೆಕ್ ಯುನಿಟ್ 9 ಯೂಟ್ಯೂಬ್ ಚಾನೆಲ್‌ಗಳು ಹರಡಿರುವ ಸುಳ್ಳು ಮಾಹಿತಿಯನ್ನು ಬಯಲು ಮಾಡಿದೆ.

ಸುಳ್ಳು ಸುದ್ದಿಯನ್ನು ಹರಡುತ್ತಿದ್ದ ಯೂಟ್ಯೂಬ್ ಚಾನೆಲ್‌ಗಳು 83 ಲಕ್ಷ ಚಂದಾದಾರರನ್ನು ಹೊಂದಿವೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಈ ಚಾನೆಲ್‌ಗಳು ಭಾರತದ ಮುಖ್ಯ ನ್ಯಾಯಮೂರ್ತಿ, ಪ್ರಧಾನ ಮಂತ್ರಿ ಮತ್ತು ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಸಾಂವಿಧಾನಿಕ ಹುದ್ದೆಗಳಲ್ಲಿರುವ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂಗಳು) ನಿಷೇಧಿಸಲಾಗಿದೆ ಮತ್ತು ಕೇಂದ್ರ ಸಚಿವರ ರಾಜೀನಾಮೆ ಅಥವಾ ಸಾವಿನ ಬಗ್ಗೆ ಕೆಲವು ಚಾನೆಲ್‌ಗಳು ತಪ್ಪಾಗಿ ಹೇಳಿಕೊಂಡಿವೆ ಎಂದು  ಫ್ಯಾಕ್ಟ್-ಚೆಕ್ ಯುನಿಟ್ ಹೇಳಿಕೊಂಡಿದೆ.

ಸುಳ್ಳು ಸುದ್ದಿ ಹರಡುತ್ತಿದೆ ಎಂದು ಪಟ್ಟಿ ಮಾಡಲಾದ ಯುಟ್ಯೂಬ್‌ ಚಾನಲ್‌ಗಳು: ಬಜರಂಗ್ ಎಜುಕೇಶನ್  (Bajrang Education) (24.3 ಲಕ್ಷ ಚಂದಾದಾರರನ್ನು ಹೊಂದಿದೆ), ಆಪ್ಕೆ ಗುರೂಜಿ(Aapke Guruji) (34.7 ಲಕ್ಷ ಚಂದಾದಾರರನ್ನು ಹೊಂದಿದೆ), ಬಿಜೆ ನ್ಯೂಸ್ (Bj News) (5.29 ಲಕ್ಷ ಚಂದಾದಾರರನ್ನು ಹೊಂದಿದೆ), ಸಂಸಾನಿ ಲೈವ್ ಟಿವಿ ( Sansani Live TV) (4.33 ಲಕ್ಷ ಚಂದಾದಾರರನ್ನು ಹೊಂದಿದೆ), ಜಿವಿಟಿ ನ್ಯೂಸ್( GVT News ) (8.16 ಲಕ್ಷ ಚಂದಾದಾರರನ್ನು ಹೊಂದಿದೆ), ಡೈಲಿ ಸ್ಟಡಿ ( Daily Study) (3.35 ಲಕ್ಷ ಚಂದಾದಾರನ್ನು ಹೊಂದಿದೆ), ಭಾರತ್ ಏಕ್ತಾ ನ್ಯೂಸ್(Bharat Ekta News ) (11,700 ಚಂದಾದಾರರನ್ನು ಹೊಂದಿದೆ), ಅಬ್ ಬೋಲೆಗಾ ಭಾರತ್(Ab Bolega Bharat) (1.78 ಲಕ್ಷ ಚಂದಾದಾರರನ್ನು ಹೊಂದಿದೆ) ಮತ್ತು ಸರ್ಕಾರಿ ಯೋಜನೆ ಅಧಿಕೃತ(Sarkari Yojana Official ) (1 ಲಕ್ಷ ಚಂದಾದಾರನ್ನು ಹೊಂದಿದೆ).

ಈ ಚಾನೆಲ್‌ಗಳಲ್ಲಿನ ನಕಲಿ ವಿಷಯಗಳಲ್ಲಿ ಹೆಚ್ಚಿನವು ಹಿಂದಿಯಲ್ಲಿದೆ. ಆದ್ದರಿಂದ ಇದನ್ನು ಭಾರತದಿಂದ ಸೃಷ್ಟಿಸಿರುವ  ಹೆಚ್ಚಿನ ಸಾಧ್ಯತೆಗಳಿವೆ ಎಂದು  ವರದಿ ತಿಳಿಸಿದೆ. ಇತ್ತೀಚೆಗೆ 2021ರ ಮಾಹಿತಿ ತಂತ್ರಜ್ಞಾನ ಇಲಾಖೆ ನಿಯಮಗಳ ಅಡಿಯಲ್ಲಿ ತುರ್ತಾಗಿ ಸರ್ಕಾರವು ಹಲವಾರು YouTube ಚಾನಲ್‌ಗಳನ್ನು ಬ್ಲಾಕ್‌ ಮಾಡಿತ್ತು. YouTube ಚಾನಲ್‌ಗಳು ಹರಡುವ ನಕಲಿ ಸುದ್ದಿಗಳ ಬಗ್ಗೆ ಮತ್ತು ಟ್ರಾಫಿಕ್‌ ಹೆಚ್ಚಿಸಲು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಬಗ್ಗೆ ಫ್ಯಾಕ್ಟ್-ಚೆಕ್ ಯುನಿಟ್ ನಿಗಾ ವಹಿಸುತ್ತಿದೆ.

ಈ ಹಿಂದೆ 2022ರ ಡಿಸೆಂಬರ್‌ನಿಂದ ಸುಳ್ಳು ಮಾಹಿತಿಯನ್ನು ಪ್ರಕಟಿಸಿದ ಆರೋಪದ ಮೇಲೆ 26 YouTube ಚಾನಲ್‌ಗಳ ಹೆಸರನ್ನು PIB ಬಹಿರಂಗಪಡಿಸಿತ್ತು. 2021ರ IT ನಿಯಮಗಳಡಿಯಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು 120ಕ್ಕೂ ಹೆಚ್ಚು YouTube ಚಾನಲ್‌ಗಳನ್ನು ಬ್ಲಾಕ್‌ ಮಾಡಿತ್ತು.

ಇದನ್ನು ಓದಿ: ಪ.ಬಂಗಾಳ: ರಾಷ್ಟ್ರಗೀತೆಗೆ ಅವಮಾನ; 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...