HomeಮುಖಪುಟPIB ಫ್ಯಾಕ್ಟ್‌ಚೆಕ್‌ ನಿಯಮಗಳು ಟಿವಿ ಮಾಧ್ಯಮಗಳಿಗೆ ಅನ್ವಯಿಸುವುದಿಲ್ಲ: ಸಚಿವ ರಾಜೀವ್ ಚಂದ್ರಶೇಖರ್

PIB ಫ್ಯಾಕ್ಟ್‌ಚೆಕ್‌ ನಿಯಮಗಳು ಟಿವಿ ಮಾಧ್ಯಮಗಳಿಗೆ ಅನ್ವಯಿಸುವುದಿಲ್ಲ: ಸಚಿವ ರಾಜೀವ್ ಚಂದ್ರಶೇಖರ್

- Advertisement -
- Advertisement -

ಡಿಜಿಟಲ್ ಮೀಡಿಯಗಳ ಮೇಲೆ ನಿಯಂತ್ರಣ ಹೇರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಐಟಿ ನಿಯಮಗಳನ್ನು ಬಿಗಿಗೊಳಿಸಲು ಹೊರಟಿದೆ. ಈ ಐಟಿ ನಿಯಮಗಳ ಅಡಿಯಲ್ಲಿ ಪಿಐಬಿ ಫ್ಯಾಕ್ಟ್ ಚೆಕ್ ಅಥವಾ ಸರ್ಕಾರಿ ಅಧಿಕೃತ ಸಂಸ್ಥೆಯು ಫ್ಯಾಕ್ಟ್ ಚೆಕ್ ಮೂಲಕ ನಕಲಿ ಸುದ್ದಿಗಳನ್ನು ತಡೆಯುವ ಕೆಲಸ ಮಾಡುತ್ತವೆ. ಆದರೆ ಇದೀಗ ಈ ಬಗ್ಗೆ ಮಾತನಾಡಿದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್, ‘ಈ ನಿಯಮಗಳು ಕೇವಲ ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗೆ ಮಾತ್ರ ಸೀಮೀತವಾಗಿದ್ದು, ಟಿವಿ ಸುದ್ದಿ ವಾಹಿನಿಗಳಿಗೆ ಅನ್ವಯಿಸುವುದಿಲ್ಲ’ ಎಂದು ಹೇಳಿದ್ದಾರೆ.

ಈ ಬಗ್ಗೆ ಪಿಟಿಐ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಂದ್ರಶೇಖರ್, “ಐಟಿ ನಿಯಮಗಳು ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಿಗೆ ಮಾತ್ರ ಸೀಮಿತ” ಎಂದು ಹೇಳಿದ್ದಾರೆ.

“ಯಾವುದೇ ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ವಿಷಯವನ್ನು ಪೋಸ್ಟ್ ಮಾಡದ ಹೊರತು ಇದು ಟಿವಿಯಲ್ಲಿ ಅನ್ವಯಿಸುವುದಿಲ್ಲ. ಐಟಿ ನಿಯಮಗಳು ಆನ್‌ಲೈನ್ ಮಧ್ಯವರ್ತಿಗಳಿಗೆ ಮಾತ್ರ ಸೀಮಿತವಾಗಿದೆ” ಎಂದು ಸಚಿವರು ಹೇಳಿದರು.

ಸರ್ಕಾರವು ಯಾವುದೇ ಡಿಜಿಟಲ್ ಮೀಡಿಯಾ ವಿಷಯವನ್ನು ತೆಗೆದುಹಾಕುವ ಪ್ರಸ್ತಾಪದ ಕುರಿತು ಕಾಮೆಂಟ್‌ಗಳನ್ನು ಆಹ್ವಾನಿಸಿದೆ. ಅವುಗಳ ಮೇಲೆ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ವಿಷಯವನ್ನು ನಕಲಿ, ಸುಳ್ಳು ಅಥವಾ ತಪ್ಪುದಾರಿಗೆಳೆಯುವ ವಿಷಯ ಎಂದು PIB ಫ್ಯಾಕ್ಟ್ ಚೆಕ್ ಏಜೆನ್ಸಿ ಅಥವಾ ಸರ್ಕಾರದಿಂದ ಯಾವುದೇ ಅಧಿಕೃತ ಏಜೆನ್ಸಿಯು ನಿರ್ಧರಿಸುತ್ತವೆ.

ಈ ಪ್ರಸ್ತಾವನೆಯನ್ನು ಕಾರ್ಯಗತಗೊಳಿಸುವ ಮೊದಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮುಂದಿನ ತಿಂಗಳು ಮಧ್ಯಸ್ಥಗಾರರೊಂದಿಗೆ ಚರ್ಚೆ ನಡೆಸಲಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸಂಪಾದಕರ ಸಂಘ ಮತ್ತು ಇತರ ಮಧ್ಯಸ್ಥಗಾರರನ್ನು ಆಹ್ವಾನಿಸಿ ಸಮಾಲೋಚನೆ ನಡೆಸುತ್ತೇವೆ ಎಂದು ಸಚಿವರು ಹೇಳಿದರು.

2021ರಲ್ಲಿ ನಿಯಮಗಳು ಹೇಗಿರಲಿವೆ ಎಂಬ ಬಗ್ಗೆ ಮಾರ್ಪಾಡುಗಳನ್ನು ಬಿಡುಗಡೆ ಮಾಡಿತ್ತು, ಇದನ್ನು ಸಾರ್ವಜನಿಕ ಸಮಾಲೋಚನೆಗಾಗಿ ಬಿಡಲಾಗಿತ್ತು. ಸಚಿವಾಲಯವು ಕಳೆದ ವಾರ ಕರಡು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, ಈ ನಿಯಮಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಭಾಗಶಃ ಕಾರ್ಯಗತಗೊಳಿಸುತ್ತದೆ.

ಪ್ರಸ್ತಾವಿತ ತಿದ್ದುಪಡಿಯ ಅಡಿಯಲ್ಲಿ, ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯ ಪರಿಶೀಲನಾ ಘಟಕವು ನಕಲಿ ಅಥವಾ ಸುಳ್ಳು ಎಂದು ಗುರುತಿಸಿದ ಮಾಹಿತಿಯನ್ನು ಅಪ್‌ಲೋಡ್ ಮಾಡುವುದು, ಪ್ರಕಟಿಸುವುದು, ರವಾನೆ ಮಾಡುವುದು ಅಥವಾ ಹಂಚಿಕೊಳ್ಳದಿರುವಂತೆ ತಡೆಯುವುದು ಮಧ್ಯವರ್ತಿಗಳ ಕರ್ತವ್ಯವಾಗಿರುತ್ತದೆ. ಇದು ನಾಗರಿಕರಿಗೆ ಪೋರ್ಟಲ್‌ನಲ್ಲಿ ಅಥವಾ ಇ-ಮೇಲ್ ಮತ್ತು ವಾಟ್ಸಾಪ್ ಮೂಲಕ ಬರುವ ನಕಲಿ ಮಾಹಿತಿಯನ್ನು  ತಡೆಯುತ್ತದೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದು, “ಪಿಐಬಿಯ ಫ್ಯಾಕ್ಟ್ ಚೆಕಿಂಗ್ ಮೂಲಕ “ನಕಲಿ” ಎಂದು ಗುರುತಿಸಲಾದ ಸುದ್ದಿ ಅಥವಾ ಮಾಹಿತಿಯನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ನಿರ್ದೇಶಿಸಲು ಪ್ರಯತ್ನಿಸುವ ಐಟಿ ನಿಯಮಗಳಿಗೆ ತಿದ್ದುಪಡಿಗಳನ್ನು “ಮುಕ್ತಗೊಳಿಸುವಂತೆ” ಒತ್ತಾಯಿಸಿದೆ. ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಡಿಜಿಟಲ್ ಮಾಧ್ಯಮದ ನಿಯಂತ್ರಕ ಚೌಕಟ್ಟಿನ ಕುರಿತು ಪತ್ರಿಕಾ ಸಂಸ್ಥೆಗಳು, ಮಾಧ್ಯಮ ಸಂಸ್ಥೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆಯನ್ನು ಪ್ರಾರಂಭಿಸುವಂತೆ ಮಂಗಳವಾರ ವೈಷ್ಣವ್ ಅವರಿಗೆ ಕಳುಹಿಸಲಾದ ಪತ್ರದಲ್ಲಿ ಗಿಲ್ಡ್ ಸಚಿವಾಲಯವನ್ನು ಕೇಳಿದೆ. ಪ್ರಸ್ತಾವಿತ ತಿದ್ದುಪಡಿಯಿಂದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಗೆ ವ್ಯಾಪಕ ಅಧಿಕಾರವನ್ನು ನೀಡಿದಂತಾಗುತ್ತದೆ” ಎಂದು ಗಿಲ್ಡ್ ಹೇಳಿದೆ.

ನಕಲಿ ಸುದ್ದಿಗಳನ್ನು ತಗೆದುಹಾಕುವ ನಿರ್ಣಯವು ಸರ್ಕಾರದ ಏಕೈಕ ಸಂಸ್ಥೆಯ ಕೈಯಲ್ಲಿ ಇರಬಾರದು ಮತ್ತು ಪತ್ರಿಕಾ ಸೆನ್ಸಾರ್‍‌ಶಿಪ್‌ಗೆ ಕಾರಣವಾಗುತ್ತದೆ ಎಂದು ಗಿಲ್ಡ್ ಇಲ್ಲಿ ಹೇಳಿಕೆಯಲ್ಲಿ ತಿಳಿಸಿದೆ. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಕರಡು ತಿದ್ದುಪಡಿಯ ಬಗ್ಗೆ “ಆಳವಾದ ಕಳವಳ” ವ್ಯಕ್ತಪಡಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತರಾದ ರಾಘವೇಂದ್ರ ಅವರು, “ಡಿಜಿಟಲ್ ಮೀಡಿಯಾಗಳಲ್ಲಿ ಸುಳ್ಳುಸುದ್ದಿಗಳು ಬರುತ್ತಿರುವುದು ನಿಜವೇ ಇದ್ದರೂ ಕೂಡ, ಇತ್ತೀಚೆಗೆ ಅತಿಹೆಚ್ಚು ಸುಳ್ಳುಗಳನ್ನು ಟಿವಿ ಮಾಧ್ಯಮಗಳೇ ಹರಡುತ್ತವೆ ಎಂದು ಹೇಳಿದರು. ಕೇಂದ್ರ ಸರ್ಕಾರ ಪ್ರಸ್ತಾವಿತ ತಿದ್ದುಪಡಿಯಿಂದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಗೆ ವ್ಯಾಪಕ ಅಧಿಕಾರವನ್ನು ನೀಡಲು ಮುಂದಾಗಿದೆ. ಇದು ಸರ್ಕಾರದ ಅಡಿಯಲ್ಲಿ ಬರುವುದುರಿಂದ ನಕಲಿ ಸುದ್ದಿಯ ನಿಯಂತ್ರಣದ ಹೆಸರಲ್ಲಿ ಪತ್ರಿಕಾ ಸ್ವಾತಂತ್ರಹರಣವಾಗುವಂತೆ ಮಾಡಿದರೆ ಏನು ಮಾಡುವುದು” ಎಂದು ಆತಂಕ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...