HomeಮುಖಪುಟPIB ಫ್ಯಾಕ್ಟ್‌ಚೆಕ್‌ ನಿಯಮಗಳು ಟಿವಿ ಮಾಧ್ಯಮಗಳಿಗೆ ಅನ್ವಯಿಸುವುದಿಲ್ಲ: ಸಚಿವ ರಾಜೀವ್ ಚಂದ್ರಶೇಖರ್

PIB ಫ್ಯಾಕ್ಟ್‌ಚೆಕ್‌ ನಿಯಮಗಳು ಟಿವಿ ಮಾಧ್ಯಮಗಳಿಗೆ ಅನ್ವಯಿಸುವುದಿಲ್ಲ: ಸಚಿವ ರಾಜೀವ್ ಚಂದ್ರಶೇಖರ್

- Advertisement -
- Advertisement -

ಡಿಜಿಟಲ್ ಮೀಡಿಯಗಳ ಮೇಲೆ ನಿಯಂತ್ರಣ ಹೇರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಐಟಿ ನಿಯಮಗಳನ್ನು ಬಿಗಿಗೊಳಿಸಲು ಹೊರಟಿದೆ. ಈ ಐಟಿ ನಿಯಮಗಳ ಅಡಿಯಲ್ಲಿ ಪಿಐಬಿ ಫ್ಯಾಕ್ಟ್ ಚೆಕ್ ಅಥವಾ ಸರ್ಕಾರಿ ಅಧಿಕೃತ ಸಂಸ್ಥೆಯು ಫ್ಯಾಕ್ಟ್ ಚೆಕ್ ಮೂಲಕ ನಕಲಿ ಸುದ್ದಿಗಳನ್ನು ತಡೆಯುವ ಕೆಲಸ ಮಾಡುತ್ತವೆ. ಆದರೆ ಇದೀಗ ಈ ಬಗ್ಗೆ ಮಾತನಾಡಿದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್, ‘ಈ ನಿಯಮಗಳು ಕೇವಲ ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗೆ ಮಾತ್ರ ಸೀಮೀತವಾಗಿದ್ದು, ಟಿವಿ ಸುದ್ದಿ ವಾಹಿನಿಗಳಿಗೆ ಅನ್ವಯಿಸುವುದಿಲ್ಲ’ ಎಂದು ಹೇಳಿದ್ದಾರೆ.

ಈ ಬಗ್ಗೆ ಪಿಟಿಐ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಂದ್ರಶೇಖರ್, “ಐಟಿ ನಿಯಮಗಳು ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಿಗೆ ಮಾತ್ರ ಸೀಮಿತ” ಎಂದು ಹೇಳಿದ್ದಾರೆ.

“ಯಾವುದೇ ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ವಿಷಯವನ್ನು ಪೋಸ್ಟ್ ಮಾಡದ ಹೊರತು ಇದು ಟಿವಿಯಲ್ಲಿ ಅನ್ವಯಿಸುವುದಿಲ್ಲ. ಐಟಿ ನಿಯಮಗಳು ಆನ್‌ಲೈನ್ ಮಧ್ಯವರ್ತಿಗಳಿಗೆ ಮಾತ್ರ ಸೀಮಿತವಾಗಿದೆ” ಎಂದು ಸಚಿವರು ಹೇಳಿದರು.

ಸರ್ಕಾರವು ಯಾವುದೇ ಡಿಜಿಟಲ್ ಮೀಡಿಯಾ ವಿಷಯವನ್ನು ತೆಗೆದುಹಾಕುವ ಪ್ರಸ್ತಾಪದ ಕುರಿತು ಕಾಮೆಂಟ್‌ಗಳನ್ನು ಆಹ್ವಾನಿಸಿದೆ. ಅವುಗಳ ಮೇಲೆ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ವಿಷಯವನ್ನು ನಕಲಿ, ಸುಳ್ಳು ಅಥವಾ ತಪ್ಪುದಾರಿಗೆಳೆಯುವ ವಿಷಯ ಎಂದು PIB ಫ್ಯಾಕ್ಟ್ ಚೆಕ್ ಏಜೆನ್ಸಿ ಅಥವಾ ಸರ್ಕಾರದಿಂದ ಯಾವುದೇ ಅಧಿಕೃತ ಏಜೆನ್ಸಿಯು ನಿರ್ಧರಿಸುತ್ತವೆ.

ಈ ಪ್ರಸ್ತಾವನೆಯನ್ನು ಕಾರ್ಯಗತಗೊಳಿಸುವ ಮೊದಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮುಂದಿನ ತಿಂಗಳು ಮಧ್ಯಸ್ಥಗಾರರೊಂದಿಗೆ ಚರ್ಚೆ ನಡೆಸಲಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸಂಪಾದಕರ ಸಂಘ ಮತ್ತು ಇತರ ಮಧ್ಯಸ್ಥಗಾರರನ್ನು ಆಹ್ವಾನಿಸಿ ಸಮಾಲೋಚನೆ ನಡೆಸುತ್ತೇವೆ ಎಂದು ಸಚಿವರು ಹೇಳಿದರು.

2021ರಲ್ಲಿ ನಿಯಮಗಳು ಹೇಗಿರಲಿವೆ ಎಂಬ ಬಗ್ಗೆ ಮಾರ್ಪಾಡುಗಳನ್ನು ಬಿಡುಗಡೆ ಮಾಡಿತ್ತು, ಇದನ್ನು ಸಾರ್ವಜನಿಕ ಸಮಾಲೋಚನೆಗಾಗಿ ಬಿಡಲಾಗಿತ್ತು. ಸಚಿವಾಲಯವು ಕಳೆದ ವಾರ ಕರಡು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, ಈ ನಿಯಮಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಭಾಗಶಃ ಕಾರ್ಯಗತಗೊಳಿಸುತ್ತದೆ.

ಪ್ರಸ್ತಾವಿತ ತಿದ್ದುಪಡಿಯ ಅಡಿಯಲ್ಲಿ, ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯ ಪರಿಶೀಲನಾ ಘಟಕವು ನಕಲಿ ಅಥವಾ ಸುಳ್ಳು ಎಂದು ಗುರುತಿಸಿದ ಮಾಹಿತಿಯನ್ನು ಅಪ್‌ಲೋಡ್ ಮಾಡುವುದು, ಪ್ರಕಟಿಸುವುದು, ರವಾನೆ ಮಾಡುವುದು ಅಥವಾ ಹಂಚಿಕೊಳ್ಳದಿರುವಂತೆ ತಡೆಯುವುದು ಮಧ್ಯವರ್ತಿಗಳ ಕರ್ತವ್ಯವಾಗಿರುತ್ತದೆ. ಇದು ನಾಗರಿಕರಿಗೆ ಪೋರ್ಟಲ್‌ನಲ್ಲಿ ಅಥವಾ ಇ-ಮೇಲ್ ಮತ್ತು ವಾಟ್ಸಾಪ್ ಮೂಲಕ ಬರುವ ನಕಲಿ ಮಾಹಿತಿಯನ್ನು  ತಡೆಯುತ್ತದೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದು, “ಪಿಐಬಿಯ ಫ್ಯಾಕ್ಟ್ ಚೆಕಿಂಗ್ ಮೂಲಕ “ನಕಲಿ” ಎಂದು ಗುರುತಿಸಲಾದ ಸುದ್ದಿ ಅಥವಾ ಮಾಹಿತಿಯನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ನಿರ್ದೇಶಿಸಲು ಪ್ರಯತ್ನಿಸುವ ಐಟಿ ನಿಯಮಗಳಿಗೆ ತಿದ್ದುಪಡಿಗಳನ್ನು “ಮುಕ್ತಗೊಳಿಸುವಂತೆ” ಒತ್ತಾಯಿಸಿದೆ. ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಡಿಜಿಟಲ್ ಮಾಧ್ಯಮದ ನಿಯಂತ್ರಕ ಚೌಕಟ್ಟಿನ ಕುರಿತು ಪತ್ರಿಕಾ ಸಂಸ್ಥೆಗಳು, ಮಾಧ್ಯಮ ಸಂಸ್ಥೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆಯನ್ನು ಪ್ರಾರಂಭಿಸುವಂತೆ ಮಂಗಳವಾರ ವೈಷ್ಣವ್ ಅವರಿಗೆ ಕಳುಹಿಸಲಾದ ಪತ್ರದಲ್ಲಿ ಗಿಲ್ಡ್ ಸಚಿವಾಲಯವನ್ನು ಕೇಳಿದೆ. ಪ್ರಸ್ತಾವಿತ ತಿದ್ದುಪಡಿಯಿಂದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಗೆ ವ್ಯಾಪಕ ಅಧಿಕಾರವನ್ನು ನೀಡಿದಂತಾಗುತ್ತದೆ” ಎಂದು ಗಿಲ್ಡ್ ಹೇಳಿದೆ.

ನಕಲಿ ಸುದ್ದಿಗಳನ್ನು ತಗೆದುಹಾಕುವ ನಿರ್ಣಯವು ಸರ್ಕಾರದ ಏಕೈಕ ಸಂಸ್ಥೆಯ ಕೈಯಲ್ಲಿ ಇರಬಾರದು ಮತ್ತು ಪತ್ರಿಕಾ ಸೆನ್ಸಾರ್‍‌ಶಿಪ್‌ಗೆ ಕಾರಣವಾಗುತ್ತದೆ ಎಂದು ಗಿಲ್ಡ್ ಇಲ್ಲಿ ಹೇಳಿಕೆಯಲ್ಲಿ ತಿಳಿಸಿದೆ. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಕರಡು ತಿದ್ದುಪಡಿಯ ಬಗ್ಗೆ “ಆಳವಾದ ಕಳವಳ” ವ್ಯಕ್ತಪಡಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತರಾದ ರಾಘವೇಂದ್ರ ಅವರು, “ಡಿಜಿಟಲ್ ಮೀಡಿಯಾಗಳಲ್ಲಿ ಸುಳ್ಳುಸುದ್ದಿಗಳು ಬರುತ್ತಿರುವುದು ನಿಜವೇ ಇದ್ದರೂ ಕೂಡ, ಇತ್ತೀಚೆಗೆ ಅತಿಹೆಚ್ಚು ಸುಳ್ಳುಗಳನ್ನು ಟಿವಿ ಮಾಧ್ಯಮಗಳೇ ಹರಡುತ್ತವೆ ಎಂದು ಹೇಳಿದರು. ಕೇಂದ್ರ ಸರ್ಕಾರ ಪ್ರಸ್ತಾವಿತ ತಿದ್ದುಪಡಿಯಿಂದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಗೆ ವ್ಯಾಪಕ ಅಧಿಕಾರವನ್ನು ನೀಡಲು ಮುಂದಾಗಿದೆ. ಇದು ಸರ್ಕಾರದ ಅಡಿಯಲ್ಲಿ ಬರುವುದುರಿಂದ ನಕಲಿ ಸುದ್ದಿಯ ನಿಯಂತ್ರಣದ ಹೆಸರಲ್ಲಿ ಪತ್ರಿಕಾ ಸ್ವಾತಂತ್ರಹರಣವಾಗುವಂತೆ ಮಾಡಿದರೆ ಏನು ಮಾಡುವುದು” ಎಂದು ಆತಂಕ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....