HomeಮುಖಪುಟPIB ಫ್ಯಾಕ್ಟ್‌ಚೆಕ್‌ ನಿಯಮಗಳು ಟಿವಿ ಮಾಧ್ಯಮಗಳಿಗೆ ಅನ್ವಯಿಸುವುದಿಲ್ಲ: ಸಚಿವ ರಾಜೀವ್ ಚಂದ್ರಶೇಖರ್

PIB ಫ್ಯಾಕ್ಟ್‌ಚೆಕ್‌ ನಿಯಮಗಳು ಟಿವಿ ಮಾಧ್ಯಮಗಳಿಗೆ ಅನ್ವಯಿಸುವುದಿಲ್ಲ: ಸಚಿವ ರಾಜೀವ್ ಚಂದ್ರಶೇಖರ್

- Advertisement -
- Advertisement -

ಡಿಜಿಟಲ್ ಮೀಡಿಯಗಳ ಮೇಲೆ ನಿಯಂತ್ರಣ ಹೇರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಐಟಿ ನಿಯಮಗಳನ್ನು ಬಿಗಿಗೊಳಿಸಲು ಹೊರಟಿದೆ. ಈ ಐಟಿ ನಿಯಮಗಳ ಅಡಿಯಲ್ಲಿ ಪಿಐಬಿ ಫ್ಯಾಕ್ಟ್ ಚೆಕ್ ಅಥವಾ ಸರ್ಕಾರಿ ಅಧಿಕೃತ ಸಂಸ್ಥೆಯು ಫ್ಯಾಕ್ಟ್ ಚೆಕ್ ಮೂಲಕ ನಕಲಿ ಸುದ್ದಿಗಳನ್ನು ತಡೆಯುವ ಕೆಲಸ ಮಾಡುತ್ತವೆ. ಆದರೆ ಇದೀಗ ಈ ಬಗ್ಗೆ ಮಾತನಾಡಿದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್, ‘ಈ ನಿಯಮಗಳು ಕೇವಲ ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗೆ ಮಾತ್ರ ಸೀಮೀತವಾಗಿದ್ದು, ಟಿವಿ ಸುದ್ದಿ ವಾಹಿನಿಗಳಿಗೆ ಅನ್ವಯಿಸುವುದಿಲ್ಲ’ ಎಂದು ಹೇಳಿದ್ದಾರೆ.

ಈ ಬಗ್ಗೆ ಪಿಟಿಐ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಂದ್ರಶೇಖರ್, “ಐಟಿ ನಿಯಮಗಳು ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಿಗೆ ಮಾತ್ರ ಸೀಮಿತ” ಎಂದು ಹೇಳಿದ್ದಾರೆ.

“ಯಾವುದೇ ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ವಿಷಯವನ್ನು ಪೋಸ್ಟ್ ಮಾಡದ ಹೊರತು ಇದು ಟಿವಿಯಲ್ಲಿ ಅನ್ವಯಿಸುವುದಿಲ್ಲ. ಐಟಿ ನಿಯಮಗಳು ಆನ್‌ಲೈನ್ ಮಧ್ಯವರ್ತಿಗಳಿಗೆ ಮಾತ್ರ ಸೀಮಿತವಾಗಿದೆ” ಎಂದು ಸಚಿವರು ಹೇಳಿದರು.

ಸರ್ಕಾರವು ಯಾವುದೇ ಡಿಜಿಟಲ್ ಮೀಡಿಯಾ ವಿಷಯವನ್ನು ತೆಗೆದುಹಾಕುವ ಪ್ರಸ್ತಾಪದ ಕುರಿತು ಕಾಮೆಂಟ್‌ಗಳನ್ನು ಆಹ್ವಾನಿಸಿದೆ. ಅವುಗಳ ಮೇಲೆ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ವಿಷಯವನ್ನು ನಕಲಿ, ಸುಳ್ಳು ಅಥವಾ ತಪ್ಪುದಾರಿಗೆಳೆಯುವ ವಿಷಯ ಎಂದು PIB ಫ್ಯಾಕ್ಟ್ ಚೆಕ್ ಏಜೆನ್ಸಿ ಅಥವಾ ಸರ್ಕಾರದಿಂದ ಯಾವುದೇ ಅಧಿಕೃತ ಏಜೆನ್ಸಿಯು ನಿರ್ಧರಿಸುತ್ತವೆ.

ಈ ಪ್ರಸ್ತಾವನೆಯನ್ನು ಕಾರ್ಯಗತಗೊಳಿಸುವ ಮೊದಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮುಂದಿನ ತಿಂಗಳು ಮಧ್ಯಸ್ಥಗಾರರೊಂದಿಗೆ ಚರ್ಚೆ ನಡೆಸಲಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸಂಪಾದಕರ ಸಂಘ ಮತ್ತು ಇತರ ಮಧ್ಯಸ್ಥಗಾರರನ್ನು ಆಹ್ವಾನಿಸಿ ಸಮಾಲೋಚನೆ ನಡೆಸುತ್ತೇವೆ ಎಂದು ಸಚಿವರು ಹೇಳಿದರು.

2021ರಲ್ಲಿ ನಿಯಮಗಳು ಹೇಗಿರಲಿವೆ ಎಂಬ ಬಗ್ಗೆ ಮಾರ್ಪಾಡುಗಳನ್ನು ಬಿಡುಗಡೆ ಮಾಡಿತ್ತು, ಇದನ್ನು ಸಾರ್ವಜನಿಕ ಸಮಾಲೋಚನೆಗಾಗಿ ಬಿಡಲಾಗಿತ್ತು. ಸಚಿವಾಲಯವು ಕಳೆದ ವಾರ ಕರಡು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, ಈ ನಿಯಮಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಭಾಗಶಃ ಕಾರ್ಯಗತಗೊಳಿಸುತ್ತದೆ.

ಪ್ರಸ್ತಾವಿತ ತಿದ್ದುಪಡಿಯ ಅಡಿಯಲ್ಲಿ, ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯ ಪರಿಶೀಲನಾ ಘಟಕವು ನಕಲಿ ಅಥವಾ ಸುಳ್ಳು ಎಂದು ಗುರುತಿಸಿದ ಮಾಹಿತಿಯನ್ನು ಅಪ್‌ಲೋಡ್ ಮಾಡುವುದು, ಪ್ರಕಟಿಸುವುದು, ರವಾನೆ ಮಾಡುವುದು ಅಥವಾ ಹಂಚಿಕೊಳ್ಳದಿರುವಂತೆ ತಡೆಯುವುದು ಮಧ್ಯವರ್ತಿಗಳ ಕರ್ತವ್ಯವಾಗಿರುತ್ತದೆ. ಇದು ನಾಗರಿಕರಿಗೆ ಪೋರ್ಟಲ್‌ನಲ್ಲಿ ಅಥವಾ ಇ-ಮೇಲ್ ಮತ್ತು ವಾಟ್ಸಾಪ್ ಮೂಲಕ ಬರುವ ನಕಲಿ ಮಾಹಿತಿಯನ್ನು  ತಡೆಯುತ್ತದೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದು, “ಪಿಐಬಿಯ ಫ್ಯಾಕ್ಟ್ ಚೆಕಿಂಗ್ ಮೂಲಕ “ನಕಲಿ” ಎಂದು ಗುರುತಿಸಲಾದ ಸುದ್ದಿ ಅಥವಾ ಮಾಹಿತಿಯನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ನಿರ್ದೇಶಿಸಲು ಪ್ರಯತ್ನಿಸುವ ಐಟಿ ನಿಯಮಗಳಿಗೆ ತಿದ್ದುಪಡಿಗಳನ್ನು “ಮುಕ್ತಗೊಳಿಸುವಂತೆ” ಒತ್ತಾಯಿಸಿದೆ. ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಡಿಜಿಟಲ್ ಮಾಧ್ಯಮದ ನಿಯಂತ್ರಕ ಚೌಕಟ್ಟಿನ ಕುರಿತು ಪತ್ರಿಕಾ ಸಂಸ್ಥೆಗಳು, ಮಾಧ್ಯಮ ಸಂಸ್ಥೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆಯನ್ನು ಪ್ರಾರಂಭಿಸುವಂತೆ ಮಂಗಳವಾರ ವೈಷ್ಣವ್ ಅವರಿಗೆ ಕಳುಹಿಸಲಾದ ಪತ್ರದಲ್ಲಿ ಗಿಲ್ಡ್ ಸಚಿವಾಲಯವನ್ನು ಕೇಳಿದೆ. ಪ್ರಸ್ತಾವಿತ ತಿದ್ದುಪಡಿಯಿಂದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಗೆ ವ್ಯಾಪಕ ಅಧಿಕಾರವನ್ನು ನೀಡಿದಂತಾಗುತ್ತದೆ” ಎಂದು ಗಿಲ್ಡ್ ಹೇಳಿದೆ.

ನಕಲಿ ಸುದ್ದಿಗಳನ್ನು ತಗೆದುಹಾಕುವ ನಿರ್ಣಯವು ಸರ್ಕಾರದ ಏಕೈಕ ಸಂಸ್ಥೆಯ ಕೈಯಲ್ಲಿ ಇರಬಾರದು ಮತ್ತು ಪತ್ರಿಕಾ ಸೆನ್ಸಾರ್‍‌ಶಿಪ್‌ಗೆ ಕಾರಣವಾಗುತ್ತದೆ ಎಂದು ಗಿಲ್ಡ್ ಇಲ್ಲಿ ಹೇಳಿಕೆಯಲ್ಲಿ ತಿಳಿಸಿದೆ. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಕರಡು ತಿದ್ದುಪಡಿಯ ಬಗ್ಗೆ “ಆಳವಾದ ಕಳವಳ” ವ್ಯಕ್ತಪಡಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತರಾದ ರಾಘವೇಂದ್ರ ಅವರು, “ಡಿಜಿಟಲ್ ಮೀಡಿಯಾಗಳಲ್ಲಿ ಸುಳ್ಳುಸುದ್ದಿಗಳು ಬರುತ್ತಿರುವುದು ನಿಜವೇ ಇದ್ದರೂ ಕೂಡ, ಇತ್ತೀಚೆಗೆ ಅತಿಹೆಚ್ಚು ಸುಳ್ಳುಗಳನ್ನು ಟಿವಿ ಮಾಧ್ಯಮಗಳೇ ಹರಡುತ್ತವೆ ಎಂದು ಹೇಳಿದರು. ಕೇಂದ್ರ ಸರ್ಕಾರ ಪ್ರಸ್ತಾವಿತ ತಿದ್ದುಪಡಿಯಿಂದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಗೆ ವ್ಯಾಪಕ ಅಧಿಕಾರವನ್ನು ನೀಡಲು ಮುಂದಾಗಿದೆ. ಇದು ಸರ್ಕಾರದ ಅಡಿಯಲ್ಲಿ ಬರುವುದುರಿಂದ ನಕಲಿ ಸುದ್ದಿಯ ನಿಯಂತ್ರಣದ ಹೆಸರಲ್ಲಿ ಪತ್ರಿಕಾ ಸ್ವಾತಂತ್ರಹರಣವಾಗುವಂತೆ ಮಾಡಿದರೆ ಏನು ಮಾಡುವುದು” ಎಂದು ಆತಂಕ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...