HomeಮುಖಪುಟPIB ಫ್ಯಾಕ್ಟ್‌ಚೆಕ್‌ ನಿಯಮಗಳು ಟಿವಿ ಮಾಧ್ಯಮಗಳಿಗೆ ಅನ್ವಯಿಸುವುದಿಲ್ಲ: ಸಚಿವ ರಾಜೀವ್ ಚಂದ್ರಶೇಖರ್

PIB ಫ್ಯಾಕ್ಟ್‌ಚೆಕ್‌ ನಿಯಮಗಳು ಟಿವಿ ಮಾಧ್ಯಮಗಳಿಗೆ ಅನ್ವಯಿಸುವುದಿಲ್ಲ: ಸಚಿವ ರಾಜೀವ್ ಚಂದ್ರಶೇಖರ್

- Advertisement -
- Advertisement -

ಡಿಜಿಟಲ್ ಮೀಡಿಯಗಳ ಮೇಲೆ ನಿಯಂತ್ರಣ ಹೇರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಐಟಿ ನಿಯಮಗಳನ್ನು ಬಿಗಿಗೊಳಿಸಲು ಹೊರಟಿದೆ. ಈ ಐಟಿ ನಿಯಮಗಳ ಅಡಿಯಲ್ಲಿ ಪಿಐಬಿ ಫ್ಯಾಕ್ಟ್ ಚೆಕ್ ಅಥವಾ ಸರ್ಕಾರಿ ಅಧಿಕೃತ ಸಂಸ್ಥೆಯು ಫ್ಯಾಕ್ಟ್ ಚೆಕ್ ಮೂಲಕ ನಕಲಿ ಸುದ್ದಿಗಳನ್ನು ತಡೆಯುವ ಕೆಲಸ ಮಾಡುತ್ತವೆ. ಆದರೆ ಇದೀಗ ಈ ಬಗ್ಗೆ ಮಾತನಾಡಿದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್, ‘ಈ ನಿಯಮಗಳು ಕೇವಲ ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗೆ ಮಾತ್ರ ಸೀಮೀತವಾಗಿದ್ದು, ಟಿವಿ ಸುದ್ದಿ ವಾಹಿನಿಗಳಿಗೆ ಅನ್ವಯಿಸುವುದಿಲ್ಲ’ ಎಂದು ಹೇಳಿದ್ದಾರೆ.

ಈ ಬಗ್ಗೆ ಪಿಟಿಐ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಂದ್ರಶೇಖರ್, “ಐಟಿ ನಿಯಮಗಳು ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಿಗೆ ಮಾತ್ರ ಸೀಮಿತ” ಎಂದು ಹೇಳಿದ್ದಾರೆ.

“ಯಾವುದೇ ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ವಿಷಯವನ್ನು ಪೋಸ್ಟ್ ಮಾಡದ ಹೊರತು ಇದು ಟಿವಿಯಲ್ಲಿ ಅನ್ವಯಿಸುವುದಿಲ್ಲ. ಐಟಿ ನಿಯಮಗಳು ಆನ್‌ಲೈನ್ ಮಧ್ಯವರ್ತಿಗಳಿಗೆ ಮಾತ್ರ ಸೀಮಿತವಾಗಿದೆ” ಎಂದು ಸಚಿವರು ಹೇಳಿದರು.

ಸರ್ಕಾರವು ಯಾವುದೇ ಡಿಜಿಟಲ್ ಮೀಡಿಯಾ ವಿಷಯವನ್ನು ತೆಗೆದುಹಾಕುವ ಪ್ರಸ್ತಾಪದ ಕುರಿತು ಕಾಮೆಂಟ್‌ಗಳನ್ನು ಆಹ್ವಾನಿಸಿದೆ. ಅವುಗಳ ಮೇಲೆ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ವಿಷಯವನ್ನು ನಕಲಿ, ಸುಳ್ಳು ಅಥವಾ ತಪ್ಪುದಾರಿಗೆಳೆಯುವ ವಿಷಯ ಎಂದು PIB ಫ್ಯಾಕ್ಟ್ ಚೆಕ್ ಏಜೆನ್ಸಿ ಅಥವಾ ಸರ್ಕಾರದಿಂದ ಯಾವುದೇ ಅಧಿಕೃತ ಏಜೆನ್ಸಿಯು ನಿರ್ಧರಿಸುತ್ತವೆ.

ಈ ಪ್ರಸ್ತಾವನೆಯನ್ನು ಕಾರ್ಯಗತಗೊಳಿಸುವ ಮೊದಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮುಂದಿನ ತಿಂಗಳು ಮಧ್ಯಸ್ಥಗಾರರೊಂದಿಗೆ ಚರ್ಚೆ ನಡೆಸಲಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸಂಪಾದಕರ ಸಂಘ ಮತ್ತು ಇತರ ಮಧ್ಯಸ್ಥಗಾರರನ್ನು ಆಹ್ವಾನಿಸಿ ಸಮಾಲೋಚನೆ ನಡೆಸುತ್ತೇವೆ ಎಂದು ಸಚಿವರು ಹೇಳಿದರು.

2021ರಲ್ಲಿ ನಿಯಮಗಳು ಹೇಗಿರಲಿವೆ ಎಂಬ ಬಗ್ಗೆ ಮಾರ್ಪಾಡುಗಳನ್ನು ಬಿಡುಗಡೆ ಮಾಡಿತ್ತು, ಇದನ್ನು ಸಾರ್ವಜನಿಕ ಸಮಾಲೋಚನೆಗಾಗಿ ಬಿಡಲಾಗಿತ್ತು. ಸಚಿವಾಲಯವು ಕಳೆದ ವಾರ ಕರಡು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, ಈ ನಿಯಮಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಭಾಗಶಃ ಕಾರ್ಯಗತಗೊಳಿಸುತ್ತದೆ.

ಪ್ರಸ್ತಾವಿತ ತಿದ್ದುಪಡಿಯ ಅಡಿಯಲ್ಲಿ, ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯ ಪರಿಶೀಲನಾ ಘಟಕವು ನಕಲಿ ಅಥವಾ ಸುಳ್ಳು ಎಂದು ಗುರುತಿಸಿದ ಮಾಹಿತಿಯನ್ನು ಅಪ್‌ಲೋಡ್ ಮಾಡುವುದು, ಪ್ರಕಟಿಸುವುದು, ರವಾನೆ ಮಾಡುವುದು ಅಥವಾ ಹಂಚಿಕೊಳ್ಳದಿರುವಂತೆ ತಡೆಯುವುದು ಮಧ್ಯವರ್ತಿಗಳ ಕರ್ತವ್ಯವಾಗಿರುತ್ತದೆ. ಇದು ನಾಗರಿಕರಿಗೆ ಪೋರ್ಟಲ್‌ನಲ್ಲಿ ಅಥವಾ ಇ-ಮೇಲ್ ಮತ್ತು ವಾಟ್ಸಾಪ್ ಮೂಲಕ ಬರುವ ನಕಲಿ ಮಾಹಿತಿಯನ್ನು  ತಡೆಯುತ್ತದೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದು, “ಪಿಐಬಿಯ ಫ್ಯಾಕ್ಟ್ ಚೆಕಿಂಗ್ ಮೂಲಕ “ನಕಲಿ” ಎಂದು ಗುರುತಿಸಲಾದ ಸುದ್ದಿ ಅಥವಾ ಮಾಹಿತಿಯನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ನಿರ್ದೇಶಿಸಲು ಪ್ರಯತ್ನಿಸುವ ಐಟಿ ನಿಯಮಗಳಿಗೆ ತಿದ್ದುಪಡಿಗಳನ್ನು “ಮುಕ್ತಗೊಳಿಸುವಂತೆ” ಒತ್ತಾಯಿಸಿದೆ. ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಡಿಜಿಟಲ್ ಮಾಧ್ಯಮದ ನಿಯಂತ್ರಕ ಚೌಕಟ್ಟಿನ ಕುರಿತು ಪತ್ರಿಕಾ ಸಂಸ್ಥೆಗಳು, ಮಾಧ್ಯಮ ಸಂಸ್ಥೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆಯನ್ನು ಪ್ರಾರಂಭಿಸುವಂತೆ ಮಂಗಳವಾರ ವೈಷ್ಣವ್ ಅವರಿಗೆ ಕಳುಹಿಸಲಾದ ಪತ್ರದಲ್ಲಿ ಗಿಲ್ಡ್ ಸಚಿವಾಲಯವನ್ನು ಕೇಳಿದೆ. ಪ್ರಸ್ತಾವಿತ ತಿದ್ದುಪಡಿಯಿಂದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಗೆ ವ್ಯಾಪಕ ಅಧಿಕಾರವನ್ನು ನೀಡಿದಂತಾಗುತ್ತದೆ” ಎಂದು ಗಿಲ್ಡ್ ಹೇಳಿದೆ.

ನಕಲಿ ಸುದ್ದಿಗಳನ್ನು ತಗೆದುಹಾಕುವ ನಿರ್ಣಯವು ಸರ್ಕಾರದ ಏಕೈಕ ಸಂಸ್ಥೆಯ ಕೈಯಲ್ಲಿ ಇರಬಾರದು ಮತ್ತು ಪತ್ರಿಕಾ ಸೆನ್ಸಾರ್‍‌ಶಿಪ್‌ಗೆ ಕಾರಣವಾಗುತ್ತದೆ ಎಂದು ಗಿಲ್ಡ್ ಇಲ್ಲಿ ಹೇಳಿಕೆಯಲ್ಲಿ ತಿಳಿಸಿದೆ. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಕರಡು ತಿದ್ದುಪಡಿಯ ಬಗ್ಗೆ “ಆಳವಾದ ಕಳವಳ” ವ್ಯಕ್ತಪಡಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತರಾದ ರಾಘವೇಂದ್ರ ಅವರು, “ಡಿಜಿಟಲ್ ಮೀಡಿಯಾಗಳಲ್ಲಿ ಸುಳ್ಳುಸುದ್ದಿಗಳು ಬರುತ್ತಿರುವುದು ನಿಜವೇ ಇದ್ದರೂ ಕೂಡ, ಇತ್ತೀಚೆಗೆ ಅತಿಹೆಚ್ಚು ಸುಳ್ಳುಗಳನ್ನು ಟಿವಿ ಮಾಧ್ಯಮಗಳೇ ಹರಡುತ್ತವೆ ಎಂದು ಹೇಳಿದರು. ಕೇಂದ್ರ ಸರ್ಕಾರ ಪ್ರಸ್ತಾವಿತ ತಿದ್ದುಪಡಿಯಿಂದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಗೆ ವ್ಯಾಪಕ ಅಧಿಕಾರವನ್ನು ನೀಡಲು ಮುಂದಾಗಿದೆ. ಇದು ಸರ್ಕಾರದ ಅಡಿಯಲ್ಲಿ ಬರುವುದುರಿಂದ ನಕಲಿ ಸುದ್ದಿಯ ನಿಯಂತ್ರಣದ ಹೆಸರಲ್ಲಿ ಪತ್ರಿಕಾ ಸ್ವಾತಂತ್ರಹರಣವಾಗುವಂತೆ ಮಾಡಿದರೆ ಏನು ಮಾಡುವುದು” ಎಂದು ಆತಂಕ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...