Homeಮುಖಪುಟಅಯೋಧ್ಯೆ: ಕಳ್ಳರ ಕಾಟಕ್ಕೆ ಬೇಸತ್ತ ರಾಮಭಕ್ತರು!

ಅಯೋಧ್ಯೆ: ಕಳ್ಳರ ಕಾಟಕ್ಕೆ ಬೇಸತ್ತ ರಾಮಭಕ್ತರು!

- Advertisement -
- Advertisement -

ಅಯೋಧ್ಯೆಯಲ್ಲಿ ನಿನ್ನೆ ರಾಮಮಂದಿರ ಉದ್ಘಾಟನೆಯಾಗಿದೆ. ದೇಶದ ವಿವಿಧೆಡೆಯಿಂದ ರಾಮನ ಭಕ್ತರ ದಂಡು ಅಯೋಧ್ಯೆಗೆ ತೆರಳಿದ್ದಾರೆ. ಇದೀಗ ರಾಮ ಮಂದಿರದಲ್ಲಿ ಭಕ್ತಾದಿಗಳ ಭಾರೀ ನೂಕುನುಗ್ಗಲಿನ ನಡುವೆ ಜೇಬುಗಳ್ಳರು ಸಕ್ರಿಯರಾಗಿರುವ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ದೇವಸ್ಥಾನದ ದ್ವಾರಗಳಲ್ಲಿ ಜನಸಂದಣಿ ಹೆಚ್ಚಿರುವುದರಿಂದ ಅದನ್ನೇ ಬಳಸಿಕೊಂಡ ಜೇಬುಗಳ್ಳರು, ಕೈಚೀಲ  ನಗದು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದಾರೆ.

ಇಂದು ರಾಮಮಂದಿರವನ್ನು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕೊಟ್ಟ ಹಿನ್ನೆಲೆ ಸಾವಿರಾರು ರಾಮಭಕ್ತರು  ಅಯೋಧ್ಯೆಗೆ ತಲುಪಿದ್ದಾರೆ. ನಿನ್ನೆ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮ ನಡೆದಿತ್ತು. ಇಂದು ಬೆಳಗ್ಗೆ 7 ಗಂಟೆಯಿಂದ ಜನರಿಗೆ ರಾಮಮಂದಿರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.

ಪೂರ್ಣಿಮಾ ಎಂಬವರು ಅಯೋಧ್ಯೆಗೆ ರಾಮಮಂದಿರ ವೀಕ್ಷಣೆಗೆ ಬಂದಿದ್ದರು. ಭಕ್ತಾದಿಗಳ ಸರತಿ ಸಾಲುಗಳ ಮೂಲಕ ಸಾಗುತ್ತಿದ್ದರು. ಆ ಬಳಿಕ ಅವರು ಚೀಲವನ್ನು ಪರಿಶೀಲಿಸಿದಾಗ ಬ್ಲೇಡ್‌ನಿಂದ ಬ್ಯಾಗ್‌ನ್ನು ಕತ್ತರಿಸಿ ನಗದು ಮತ್ತು ಇತರ ವಸ್ತುಗಳು ಕಳ್ಳತನ ಮಾಡಲಾಗಿತ್ತು. ಭಕ್ತರ ಭಾರೀ ನೂಕುನುಗ್ಗಲು ಹಿನ್ನೆಲೆ ನಿಯಂತ್ರಿಸಲು ಆಡಳಿತಕ್ಕೆ ಕಷ್ಟವಾಗಬಹುದು. ಆದರೆ ಕಳ್ಳರಿಂದ ಭಕ್ತರನ್ನು ಉಳಿಸಬೇಕು ಎಂದು ಅವರು ಹೇಳಿದ್ದಾರೆ. ತಮ್ಮ ಕೈಚೀಲದಲ್ಲಿ ಬಿರುಕು ಬಿಟ್ಟಿರುವುದನ್ನು ತೋರಿಸಿ ಜನರ ಗುಂಪಿನಲ್ಲಿ ಚೀಲವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದೆ, ಆದರೆ ಜೇಬುಗಳ್ಳರು ತಮ್ಮ ಕೆಲಸ ಮಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಅಹಮದಾಬಾದ್ ನಿವಾಸಿಯಾದ ಪ್ರಾಪ್ತಿ ಅಯೋಧ್ಯೆಗೆ ಬಂದಿದ್ದರು. ಆಕೆಯ ಬ್ಯಾಗ್‌ನ ಜಿಪ್ ತೆರೆದು ಆಕೆಯ ಆಧಾರ್ ಕಾರ್ಡ್, ಎಟಿಎಂ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಹಾಗೂ ಇತರೆ ದಾಖಲೆಗಳನ್ನು ಕದ್ದೊಯ್ದಿದ್ದಾರೆ. ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಹುದೆಂಬ ಭಯ ಈಗ ಆಕೆಗೆ ಕಾಡುತ್ತಿದೆ. ನಾನು ನನ್ನ ಬ್ಯಾಗ್‌ನ್ನು ಎಚ್ಚರಿಕೆಯಿಂದ ಹಿಡಿದುಕೊಂಡಿದ್ದೆ. ಅವರು ಜಿಪ್‌ ಹೇಗೆ ತೆರೆದು ದಾಖಲೆಗಳನ್ನು ತೆಗೆದುಕೊಂಡರು ಎಂಬುದರ ಬಗ್ಗೆ ನನಗೆ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಜೇಬುಗಳ್ಳರ ಕೆಂಗಣ್ಣಿಗೆ ಗುರಿಯಾಗಿ ಹಣ ಮತ್ತು ಇತರ ವಸ್ತುಗಳನ್ನು ಹಲವಾರು ಯಾತ್ರಾರ್ಥಿಗಳು ಕಳೆದುಕೊಂಡಿದ್ದಾರೆ. ನಗರದ ಹೊರಗಿನಿಂದ ಬಂದಿರುವ ಅಪರಾಧಿಗಳ ತಂಡ ಕಳ್ಳತನದ ಹಿಂದೆ ಇರಬಹುದೆಂದು ಸ್ಥಳೀಯ ನಿವಾಸಿಗಳು ಶಂಕಿಸಿದ್ದಾರೆ.

ನಾವು ಜನವರಿ 16ರಿಂದ ಅಯೋಧ್ಯೆಯಲ್ಲಿದ್ದೇವೆ. ಈ ಕಳ್ಳರು ಅಯೋಧ್ಯೆಯವರಲ್ಲ. ನಾವು ಇಲ್ಲಿ ಭೇಟಿಯಾದ ಆಟೋ ಚಾಲಕರು, ಬಸ್ ಚಾಲಕರು ಮತ್ತು ಕ್ಯಾಬ್ ಡ್ರೈವರ್‌ಗಳು ತುಂಬಾ ಪ್ರಾಮಾಣಿಕರು. ನಾವು ನಮ್ಮ ಲಗೇಜ್‌ಗಳನ್ನು ಸಹ ಅವರ ಬಳಿ ಬಿಟ್ಟು ಹೋಗಿದ್ದೆವು, ಆದರೆ ಯಾವುದೇ ವಸ್ತು ಕಾಣೆಯಾಗಲಿಲ್ಲ. ಜೇಬುಗಳ್ಳರು ಇಲ್ಲಿಂದ ಬಂದವರಲ್ಲ, ಭಕ್ತಾದಿಗಳು ಸರಿಯಾದ ಸರತಿ ಸಾಲಿನಲ್ಲಿ ದರ್ಶನಕ್ಕೆ ತೆರಳಲು ಮತ್ತು ಅಂತಹ ಘಟನೆಗಳನ್ನು ತಡೆಯಲು ದೇವಸ್ಥಾನದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕೆಂದು ಕೆಲವರು  ಒತ್ತಾಯಿಸಿದ್ದಾರೆ.

ಆಂಧ್ರಪ್ರದೇಶದ ಕಲ್ಯಾಣ್ ಎಂಬಾತನ ಮೊಬೈಲ್‌ ಫೋನ್‌ ಕಳ್ಳತನ ಮಾಡಲಾಗಿದ್ದು, ರಾಮನ ದರ್ಶನಕ್ಕೆ ಬಂದವ ಮೊಬೈಲ್‌ ಕಳೆದುಕೊಂಡು ದೇವಸ್ಥಾನದ ಸಮೀಪವಿರುವ ಸೈಬರ್ ಸೆಂಟರ್‌ಗೆ ಭೇಟಿ ನೀಡಿ ಆನ್‌ಲೈನ್ ದೂರು ದಾಖಲಿಸಿದ್ದಾನೆ. ಕಳೆದ ಎರಡು ದಿನಗಳಿಂದ ಕಳ್ಳತನದ ದೂರುಗಳನ್ನು ದಾಖಲಿಸಲು ಕನಿಷ್ಠ 20 ಜನರು ತಮ್ಮ ಸೈಬರ್‌ಗೆ ಭೇಟಿ ನೀಡಿದ್ದಾರೆ ಎಂದು ಸೈಬರ್ ಮಾಲಕ ವಿನೋದ್ ತಿಳಿಸಿದ್ದಾರೆ. ನಗದು, ವ್ಯಾಲೆಟ್‌ಗಳು ಮತ್ತು ಸೆಲ್‌ಫೋನ್‌ಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳರ ತಂಡ ಜನರ ಗುಂಪನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೇರಳ: ರಾಮಮಂದಿರ ಉದ್ಘಾಟನೆ ದಿನ ಅನುಮತಿಯಿಲ್ಲದೆ ಶಾಲೆಗೆ ರಜೆ; ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why you are not showing, Mumbai Meera road incident. Always against BJP. Why Karnataka CM openly telling Ten thousand crores for Muslims. Who’s Money he is giving. Why you are paper not comment

LEAVE A REPLY

Please enter your comment!
Please enter your name here

- Advertisment -

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...