Homeಮುಖಪುಟಅಯೋಧ್ಯೆ: ಕಳ್ಳರ ಕಾಟಕ್ಕೆ ಬೇಸತ್ತ ರಾಮಭಕ್ತರು!

ಅಯೋಧ್ಯೆ: ಕಳ್ಳರ ಕಾಟಕ್ಕೆ ಬೇಸತ್ತ ರಾಮಭಕ್ತರು!

- Advertisement -
- Advertisement -

ಅಯೋಧ್ಯೆಯಲ್ಲಿ ನಿನ್ನೆ ರಾಮಮಂದಿರ ಉದ್ಘಾಟನೆಯಾಗಿದೆ. ದೇಶದ ವಿವಿಧೆಡೆಯಿಂದ ರಾಮನ ಭಕ್ತರ ದಂಡು ಅಯೋಧ್ಯೆಗೆ ತೆರಳಿದ್ದಾರೆ. ಇದೀಗ ರಾಮ ಮಂದಿರದಲ್ಲಿ ಭಕ್ತಾದಿಗಳ ಭಾರೀ ನೂಕುನುಗ್ಗಲಿನ ನಡುವೆ ಜೇಬುಗಳ್ಳರು ಸಕ್ರಿಯರಾಗಿರುವ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ದೇವಸ್ಥಾನದ ದ್ವಾರಗಳಲ್ಲಿ ಜನಸಂದಣಿ ಹೆಚ್ಚಿರುವುದರಿಂದ ಅದನ್ನೇ ಬಳಸಿಕೊಂಡ ಜೇಬುಗಳ್ಳರು, ಕೈಚೀಲ  ನಗದು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದಾರೆ.

ಇಂದು ರಾಮಮಂದಿರವನ್ನು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕೊಟ್ಟ ಹಿನ್ನೆಲೆ ಸಾವಿರಾರು ರಾಮಭಕ್ತರು  ಅಯೋಧ್ಯೆಗೆ ತಲುಪಿದ್ದಾರೆ. ನಿನ್ನೆ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮ ನಡೆದಿತ್ತು. ಇಂದು ಬೆಳಗ್ಗೆ 7 ಗಂಟೆಯಿಂದ ಜನರಿಗೆ ರಾಮಮಂದಿರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.

ಪೂರ್ಣಿಮಾ ಎಂಬವರು ಅಯೋಧ್ಯೆಗೆ ರಾಮಮಂದಿರ ವೀಕ್ಷಣೆಗೆ ಬಂದಿದ್ದರು. ಭಕ್ತಾದಿಗಳ ಸರತಿ ಸಾಲುಗಳ ಮೂಲಕ ಸಾಗುತ್ತಿದ್ದರು. ಆ ಬಳಿಕ ಅವರು ಚೀಲವನ್ನು ಪರಿಶೀಲಿಸಿದಾಗ ಬ್ಲೇಡ್‌ನಿಂದ ಬ್ಯಾಗ್‌ನ್ನು ಕತ್ತರಿಸಿ ನಗದು ಮತ್ತು ಇತರ ವಸ್ತುಗಳು ಕಳ್ಳತನ ಮಾಡಲಾಗಿತ್ತು. ಭಕ್ತರ ಭಾರೀ ನೂಕುನುಗ್ಗಲು ಹಿನ್ನೆಲೆ ನಿಯಂತ್ರಿಸಲು ಆಡಳಿತಕ್ಕೆ ಕಷ್ಟವಾಗಬಹುದು. ಆದರೆ ಕಳ್ಳರಿಂದ ಭಕ್ತರನ್ನು ಉಳಿಸಬೇಕು ಎಂದು ಅವರು ಹೇಳಿದ್ದಾರೆ. ತಮ್ಮ ಕೈಚೀಲದಲ್ಲಿ ಬಿರುಕು ಬಿಟ್ಟಿರುವುದನ್ನು ತೋರಿಸಿ ಜನರ ಗುಂಪಿನಲ್ಲಿ ಚೀಲವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದೆ, ಆದರೆ ಜೇಬುಗಳ್ಳರು ತಮ್ಮ ಕೆಲಸ ಮಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಅಹಮದಾಬಾದ್ ನಿವಾಸಿಯಾದ ಪ್ರಾಪ್ತಿ ಅಯೋಧ್ಯೆಗೆ ಬಂದಿದ್ದರು. ಆಕೆಯ ಬ್ಯಾಗ್‌ನ ಜಿಪ್ ತೆರೆದು ಆಕೆಯ ಆಧಾರ್ ಕಾರ್ಡ್, ಎಟಿಎಂ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಹಾಗೂ ಇತರೆ ದಾಖಲೆಗಳನ್ನು ಕದ್ದೊಯ್ದಿದ್ದಾರೆ. ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಹುದೆಂಬ ಭಯ ಈಗ ಆಕೆಗೆ ಕಾಡುತ್ತಿದೆ. ನಾನು ನನ್ನ ಬ್ಯಾಗ್‌ನ್ನು ಎಚ್ಚರಿಕೆಯಿಂದ ಹಿಡಿದುಕೊಂಡಿದ್ದೆ. ಅವರು ಜಿಪ್‌ ಹೇಗೆ ತೆರೆದು ದಾಖಲೆಗಳನ್ನು ತೆಗೆದುಕೊಂಡರು ಎಂಬುದರ ಬಗ್ಗೆ ನನಗೆ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಜೇಬುಗಳ್ಳರ ಕೆಂಗಣ್ಣಿಗೆ ಗುರಿಯಾಗಿ ಹಣ ಮತ್ತು ಇತರ ವಸ್ತುಗಳನ್ನು ಹಲವಾರು ಯಾತ್ರಾರ್ಥಿಗಳು ಕಳೆದುಕೊಂಡಿದ್ದಾರೆ. ನಗರದ ಹೊರಗಿನಿಂದ ಬಂದಿರುವ ಅಪರಾಧಿಗಳ ತಂಡ ಕಳ್ಳತನದ ಹಿಂದೆ ಇರಬಹುದೆಂದು ಸ್ಥಳೀಯ ನಿವಾಸಿಗಳು ಶಂಕಿಸಿದ್ದಾರೆ.

ನಾವು ಜನವರಿ 16ರಿಂದ ಅಯೋಧ್ಯೆಯಲ್ಲಿದ್ದೇವೆ. ಈ ಕಳ್ಳರು ಅಯೋಧ್ಯೆಯವರಲ್ಲ. ನಾವು ಇಲ್ಲಿ ಭೇಟಿಯಾದ ಆಟೋ ಚಾಲಕರು, ಬಸ್ ಚಾಲಕರು ಮತ್ತು ಕ್ಯಾಬ್ ಡ್ರೈವರ್‌ಗಳು ತುಂಬಾ ಪ್ರಾಮಾಣಿಕರು. ನಾವು ನಮ್ಮ ಲಗೇಜ್‌ಗಳನ್ನು ಸಹ ಅವರ ಬಳಿ ಬಿಟ್ಟು ಹೋಗಿದ್ದೆವು, ಆದರೆ ಯಾವುದೇ ವಸ್ತು ಕಾಣೆಯಾಗಲಿಲ್ಲ. ಜೇಬುಗಳ್ಳರು ಇಲ್ಲಿಂದ ಬಂದವರಲ್ಲ, ಭಕ್ತಾದಿಗಳು ಸರಿಯಾದ ಸರತಿ ಸಾಲಿನಲ್ಲಿ ದರ್ಶನಕ್ಕೆ ತೆರಳಲು ಮತ್ತು ಅಂತಹ ಘಟನೆಗಳನ್ನು ತಡೆಯಲು ದೇವಸ್ಥಾನದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕೆಂದು ಕೆಲವರು  ಒತ್ತಾಯಿಸಿದ್ದಾರೆ.

ಆಂಧ್ರಪ್ರದೇಶದ ಕಲ್ಯಾಣ್ ಎಂಬಾತನ ಮೊಬೈಲ್‌ ಫೋನ್‌ ಕಳ್ಳತನ ಮಾಡಲಾಗಿದ್ದು, ರಾಮನ ದರ್ಶನಕ್ಕೆ ಬಂದವ ಮೊಬೈಲ್‌ ಕಳೆದುಕೊಂಡು ದೇವಸ್ಥಾನದ ಸಮೀಪವಿರುವ ಸೈಬರ್ ಸೆಂಟರ್‌ಗೆ ಭೇಟಿ ನೀಡಿ ಆನ್‌ಲೈನ್ ದೂರು ದಾಖಲಿಸಿದ್ದಾನೆ. ಕಳೆದ ಎರಡು ದಿನಗಳಿಂದ ಕಳ್ಳತನದ ದೂರುಗಳನ್ನು ದಾಖಲಿಸಲು ಕನಿಷ್ಠ 20 ಜನರು ತಮ್ಮ ಸೈಬರ್‌ಗೆ ಭೇಟಿ ನೀಡಿದ್ದಾರೆ ಎಂದು ಸೈಬರ್ ಮಾಲಕ ವಿನೋದ್ ತಿಳಿಸಿದ್ದಾರೆ. ನಗದು, ವ್ಯಾಲೆಟ್‌ಗಳು ಮತ್ತು ಸೆಲ್‌ಫೋನ್‌ಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳರ ತಂಡ ಜನರ ಗುಂಪನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೇರಳ: ರಾಮಮಂದಿರ ಉದ್ಘಾಟನೆ ದಿನ ಅನುಮತಿಯಿಲ್ಲದೆ ಶಾಲೆಗೆ ರಜೆ; ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why you are not showing, Mumbai Meera road incident. Always against BJP. Why Karnataka CM openly telling Ten thousand crores for Muslims. Who’s Money he is giving. Why you are paper not comment

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...