Homeಮುಖಪುಟಅಯೋಧ್ಯೆ: ಕಳ್ಳರ ಕಾಟಕ್ಕೆ ಬೇಸತ್ತ ರಾಮಭಕ್ತರು!

ಅಯೋಧ್ಯೆ: ಕಳ್ಳರ ಕಾಟಕ್ಕೆ ಬೇಸತ್ತ ರಾಮಭಕ್ತರು!

- Advertisement -
- Advertisement -

ಅಯೋಧ್ಯೆಯಲ್ಲಿ ನಿನ್ನೆ ರಾಮಮಂದಿರ ಉದ್ಘಾಟನೆಯಾಗಿದೆ. ದೇಶದ ವಿವಿಧೆಡೆಯಿಂದ ರಾಮನ ಭಕ್ತರ ದಂಡು ಅಯೋಧ್ಯೆಗೆ ತೆರಳಿದ್ದಾರೆ. ಇದೀಗ ರಾಮ ಮಂದಿರದಲ್ಲಿ ಭಕ್ತಾದಿಗಳ ಭಾರೀ ನೂಕುನುಗ್ಗಲಿನ ನಡುವೆ ಜೇಬುಗಳ್ಳರು ಸಕ್ರಿಯರಾಗಿರುವ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ದೇವಸ್ಥಾನದ ದ್ವಾರಗಳಲ್ಲಿ ಜನಸಂದಣಿ ಹೆಚ್ಚಿರುವುದರಿಂದ ಅದನ್ನೇ ಬಳಸಿಕೊಂಡ ಜೇಬುಗಳ್ಳರು, ಕೈಚೀಲ  ನಗದು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದಾರೆ.

ಇಂದು ರಾಮಮಂದಿರವನ್ನು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕೊಟ್ಟ ಹಿನ್ನೆಲೆ ಸಾವಿರಾರು ರಾಮಭಕ್ತರು  ಅಯೋಧ್ಯೆಗೆ ತಲುಪಿದ್ದಾರೆ. ನಿನ್ನೆ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮ ನಡೆದಿತ್ತು. ಇಂದು ಬೆಳಗ್ಗೆ 7 ಗಂಟೆಯಿಂದ ಜನರಿಗೆ ರಾಮಮಂದಿರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.

ಪೂರ್ಣಿಮಾ ಎಂಬವರು ಅಯೋಧ್ಯೆಗೆ ರಾಮಮಂದಿರ ವೀಕ್ಷಣೆಗೆ ಬಂದಿದ್ದರು. ಭಕ್ತಾದಿಗಳ ಸರತಿ ಸಾಲುಗಳ ಮೂಲಕ ಸಾಗುತ್ತಿದ್ದರು. ಆ ಬಳಿಕ ಅವರು ಚೀಲವನ್ನು ಪರಿಶೀಲಿಸಿದಾಗ ಬ್ಲೇಡ್‌ನಿಂದ ಬ್ಯಾಗ್‌ನ್ನು ಕತ್ತರಿಸಿ ನಗದು ಮತ್ತು ಇತರ ವಸ್ತುಗಳು ಕಳ್ಳತನ ಮಾಡಲಾಗಿತ್ತು. ಭಕ್ತರ ಭಾರೀ ನೂಕುನುಗ್ಗಲು ಹಿನ್ನೆಲೆ ನಿಯಂತ್ರಿಸಲು ಆಡಳಿತಕ್ಕೆ ಕಷ್ಟವಾಗಬಹುದು. ಆದರೆ ಕಳ್ಳರಿಂದ ಭಕ್ತರನ್ನು ಉಳಿಸಬೇಕು ಎಂದು ಅವರು ಹೇಳಿದ್ದಾರೆ. ತಮ್ಮ ಕೈಚೀಲದಲ್ಲಿ ಬಿರುಕು ಬಿಟ್ಟಿರುವುದನ್ನು ತೋರಿಸಿ ಜನರ ಗುಂಪಿನಲ್ಲಿ ಚೀಲವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದೆ, ಆದರೆ ಜೇಬುಗಳ್ಳರು ತಮ್ಮ ಕೆಲಸ ಮಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಅಹಮದಾಬಾದ್ ನಿವಾಸಿಯಾದ ಪ್ರಾಪ್ತಿ ಅಯೋಧ್ಯೆಗೆ ಬಂದಿದ್ದರು. ಆಕೆಯ ಬ್ಯಾಗ್‌ನ ಜಿಪ್ ತೆರೆದು ಆಕೆಯ ಆಧಾರ್ ಕಾರ್ಡ್, ಎಟಿಎಂ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಹಾಗೂ ಇತರೆ ದಾಖಲೆಗಳನ್ನು ಕದ್ದೊಯ್ದಿದ್ದಾರೆ. ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಹುದೆಂಬ ಭಯ ಈಗ ಆಕೆಗೆ ಕಾಡುತ್ತಿದೆ. ನಾನು ನನ್ನ ಬ್ಯಾಗ್‌ನ್ನು ಎಚ್ಚರಿಕೆಯಿಂದ ಹಿಡಿದುಕೊಂಡಿದ್ದೆ. ಅವರು ಜಿಪ್‌ ಹೇಗೆ ತೆರೆದು ದಾಖಲೆಗಳನ್ನು ತೆಗೆದುಕೊಂಡರು ಎಂಬುದರ ಬಗ್ಗೆ ನನಗೆ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಜೇಬುಗಳ್ಳರ ಕೆಂಗಣ್ಣಿಗೆ ಗುರಿಯಾಗಿ ಹಣ ಮತ್ತು ಇತರ ವಸ್ತುಗಳನ್ನು ಹಲವಾರು ಯಾತ್ರಾರ್ಥಿಗಳು ಕಳೆದುಕೊಂಡಿದ್ದಾರೆ. ನಗರದ ಹೊರಗಿನಿಂದ ಬಂದಿರುವ ಅಪರಾಧಿಗಳ ತಂಡ ಕಳ್ಳತನದ ಹಿಂದೆ ಇರಬಹುದೆಂದು ಸ್ಥಳೀಯ ನಿವಾಸಿಗಳು ಶಂಕಿಸಿದ್ದಾರೆ.

ನಾವು ಜನವರಿ 16ರಿಂದ ಅಯೋಧ್ಯೆಯಲ್ಲಿದ್ದೇವೆ. ಈ ಕಳ್ಳರು ಅಯೋಧ್ಯೆಯವರಲ್ಲ. ನಾವು ಇಲ್ಲಿ ಭೇಟಿಯಾದ ಆಟೋ ಚಾಲಕರು, ಬಸ್ ಚಾಲಕರು ಮತ್ತು ಕ್ಯಾಬ್ ಡ್ರೈವರ್‌ಗಳು ತುಂಬಾ ಪ್ರಾಮಾಣಿಕರು. ನಾವು ನಮ್ಮ ಲಗೇಜ್‌ಗಳನ್ನು ಸಹ ಅವರ ಬಳಿ ಬಿಟ್ಟು ಹೋಗಿದ್ದೆವು, ಆದರೆ ಯಾವುದೇ ವಸ್ತು ಕಾಣೆಯಾಗಲಿಲ್ಲ. ಜೇಬುಗಳ್ಳರು ಇಲ್ಲಿಂದ ಬಂದವರಲ್ಲ, ಭಕ್ತಾದಿಗಳು ಸರಿಯಾದ ಸರತಿ ಸಾಲಿನಲ್ಲಿ ದರ್ಶನಕ್ಕೆ ತೆರಳಲು ಮತ್ತು ಅಂತಹ ಘಟನೆಗಳನ್ನು ತಡೆಯಲು ದೇವಸ್ಥಾನದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕೆಂದು ಕೆಲವರು  ಒತ್ತಾಯಿಸಿದ್ದಾರೆ.

ಆಂಧ್ರಪ್ರದೇಶದ ಕಲ್ಯಾಣ್ ಎಂಬಾತನ ಮೊಬೈಲ್‌ ಫೋನ್‌ ಕಳ್ಳತನ ಮಾಡಲಾಗಿದ್ದು, ರಾಮನ ದರ್ಶನಕ್ಕೆ ಬಂದವ ಮೊಬೈಲ್‌ ಕಳೆದುಕೊಂಡು ದೇವಸ್ಥಾನದ ಸಮೀಪವಿರುವ ಸೈಬರ್ ಸೆಂಟರ್‌ಗೆ ಭೇಟಿ ನೀಡಿ ಆನ್‌ಲೈನ್ ದೂರು ದಾಖಲಿಸಿದ್ದಾನೆ. ಕಳೆದ ಎರಡು ದಿನಗಳಿಂದ ಕಳ್ಳತನದ ದೂರುಗಳನ್ನು ದಾಖಲಿಸಲು ಕನಿಷ್ಠ 20 ಜನರು ತಮ್ಮ ಸೈಬರ್‌ಗೆ ಭೇಟಿ ನೀಡಿದ್ದಾರೆ ಎಂದು ಸೈಬರ್ ಮಾಲಕ ವಿನೋದ್ ತಿಳಿಸಿದ್ದಾರೆ. ನಗದು, ವ್ಯಾಲೆಟ್‌ಗಳು ಮತ್ತು ಸೆಲ್‌ಫೋನ್‌ಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳರ ತಂಡ ಜನರ ಗುಂಪನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೇರಳ: ರಾಮಮಂದಿರ ಉದ್ಘಾಟನೆ ದಿನ ಅನುಮತಿಯಿಲ್ಲದೆ ಶಾಲೆಗೆ ರಜೆ; ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why you are not showing, Mumbai Meera road incident. Always against BJP. Why Karnataka CM openly telling Ten thousand crores for Muslims. Who’s Money he is giving. Why you are paper not comment

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...