Homeಮುಖಪುಟಅಯೋಧ್ಯೆ: ಕಳ್ಳರ ಕಾಟಕ್ಕೆ ಬೇಸತ್ತ ರಾಮಭಕ್ತರು!

ಅಯೋಧ್ಯೆ: ಕಳ್ಳರ ಕಾಟಕ್ಕೆ ಬೇಸತ್ತ ರಾಮಭಕ್ತರು!

- Advertisement -
- Advertisement -

ಅಯೋಧ್ಯೆಯಲ್ಲಿ ನಿನ್ನೆ ರಾಮಮಂದಿರ ಉದ್ಘಾಟನೆಯಾಗಿದೆ. ದೇಶದ ವಿವಿಧೆಡೆಯಿಂದ ರಾಮನ ಭಕ್ತರ ದಂಡು ಅಯೋಧ್ಯೆಗೆ ತೆರಳಿದ್ದಾರೆ. ಇದೀಗ ರಾಮ ಮಂದಿರದಲ್ಲಿ ಭಕ್ತಾದಿಗಳ ಭಾರೀ ನೂಕುನುಗ್ಗಲಿನ ನಡುವೆ ಜೇಬುಗಳ್ಳರು ಸಕ್ರಿಯರಾಗಿರುವ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ದೇವಸ್ಥಾನದ ದ್ವಾರಗಳಲ್ಲಿ ಜನಸಂದಣಿ ಹೆಚ್ಚಿರುವುದರಿಂದ ಅದನ್ನೇ ಬಳಸಿಕೊಂಡ ಜೇಬುಗಳ್ಳರು, ಕೈಚೀಲ  ನಗದು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದಾರೆ.

ಇಂದು ರಾಮಮಂದಿರವನ್ನು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕೊಟ್ಟ ಹಿನ್ನೆಲೆ ಸಾವಿರಾರು ರಾಮಭಕ್ತರು  ಅಯೋಧ್ಯೆಗೆ ತಲುಪಿದ್ದಾರೆ. ನಿನ್ನೆ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮ ನಡೆದಿತ್ತು. ಇಂದು ಬೆಳಗ್ಗೆ 7 ಗಂಟೆಯಿಂದ ಜನರಿಗೆ ರಾಮಮಂದಿರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.

ಪೂರ್ಣಿಮಾ ಎಂಬವರು ಅಯೋಧ್ಯೆಗೆ ರಾಮಮಂದಿರ ವೀಕ್ಷಣೆಗೆ ಬಂದಿದ್ದರು. ಭಕ್ತಾದಿಗಳ ಸರತಿ ಸಾಲುಗಳ ಮೂಲಕ ಸಾಗುತ್ತಿದ್ದರು. ಆ ಬಳಿಕ ಅವರು ಚೀಲವನ್ನು ಪರಿಶೀಲಿಸಿದಾಗ ಬ್ಲೇಡ್‌ನಿಂದ ಬ್ಯಾಗ್‌ನ್ನು ಕತ್ತರಿಸಿ ನಗದು ಮತ್ತು ಇತರ ವಸ್ತುಗಳು ಕಳ್ಳತನ ಮಾಡಲಾಗಿತ್ತು. ಭಕ್ತರ ಭಾರೀ ನೂಕುನುಗ್ಗಲು ಹಿನ್ನೆಲೆ ನಿಯಂತ್ರಿಸಲು ಆಡಳಿತಕ್ಕೆ ಕಷ್ಟವಾಗಬಹುದು. ಆದರೆ ಕಳ್ಳರಿಂದ ಭಕ್ತರನ್ನು ಉಳಿಸಬೇಕು ಎಂದು ಅವರು ಹೇಳಿದ್ದಾರೆ. ತಮ್ಮ ಕೈಚೀಲದಲ್ಲಿ ಬಿರುಕು ಬಿಟ್ಟಿರುವುದನ್ನು ತೋರಿಸಿ ಜನರ ಗುಂಪಿನಲ್ಲಿ ಚೀಲವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದೆ, ಆದರೆ ಜೇಬುಗಳ್ಳರು ತಮ್ಮ ಕೆಲಸ ಮಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಅಹಮದಾಬಾದ್ ನಿವಾಸಿಯಾದ ಪ್ರಾಪ್ತಿ ಅಯೋಧ್ಯೆಗೆ ಬಂದಿದ್ದರು. ಆಕೆಯ ಬ್ಯಾಗ್‌ನ ಜಿಪ್ ತೆರೆದು ಆಕೆಯ ಆಧಾರ್ ಕಾರ್ಡ್, ಎಟಿಎಂ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಹಾಗೂ ಇತರೆ ದಾಖಲೆಗಳನ್ನು ಕದ್ದೊಯ್ದಿದ್ದಾರೆ. ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಹುದೆಂಬ ಭಯ ಈಗ ಆಕೆಗೆ ಕಾಡುತ್ತಿದೆ. ನಾನು ನನ್ನ ಬ್ಯಾಗ್‌ನ್ನು ಎಚ್ಚರಿಕೆಯಿಂದ ಹಿಡಿದುಕೊಂಡಿದ್ದೆ. ಅವರು ಜಿಪ್‌ ಹೇಗೆ ತೆರೆದು ದಾಖಲೆಗಳನ್ನು ತೆಗೆದುಕೊಂಡರು ಎಂಬುದರ ಬಗ್ಗೆ ನನಗೆ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಜೇಬುಗಳ್ಳರ ಕೆಂಗಣ್ಣಿಗೆ ಗುರಿಯಾಗಿ ಹಣ ಮತ್ತು ಇತರ ವಸ್ತುಗಳನ್ನು ಹಲವಾರು ಯಾತ್ರಾರ್ಥಿಗಳು ಕಳೆದುಕೊಂಡಿದ್ದಾರೆ. ನಗರದ ಹೊರಗಿನಿಂದ ಬಂದಿರುವ ಅಪರಾಧಿಗಳ ತಂಡ ಕಳ್ಳತನದ ಹಿಂದೆ ಇರಬಹುದೆಂದು ಸ್ಥಳೀಯ ನಿವಾಸಿಗಳು ಶಂಕಿಸಿದ್ದಾರೆ.

ನಾವು ಜನವರಿ 16ರಿಂದ ಅಯೋಧ್ಯೆಯಲ್ಲಿದ್ದೇವೆ. ಈ ಕಳ್ಳರು ಅಯೋಧ್ಯೆಯವರಲ್ಲ. ನಾವು ಇಲ್ಲಿ ಭೇಟಿಯಾದ ಆಟೋ ಚಾಲಕರು, ಬಸ್ ಚಾಲಕರು ಮತ್ತು ಕ್ಯಾಬ್ ಡ್ರೈವರ್‌ಗಳು ತುಂಬಾ ಪ್ರಾಮಾಣಿಕರು. ನಾವು ನಮ್ಮ ಲಗೇಜ್‌ಗಳನ್ನು ಸಹ ಅವರ ಬಳಿ ಬಿಟ್ಟು ಹೋಗಿದ್ದೆವು, ಆದರೆ ಯಾವುದೇ ವಸ್ತು ಕಾಣೆಯಾಗಲಿಲ್ಲ. ಜೇಬುಗಳ್ಳರು ಇಲ್ಲಿಂದ ಬಂದವರಲ್ಲ, ಭಕ್ತಾದಿಗಳು ಸರಿಯಾದ ಸರತಿ ಸಾಲಿನಲ್ಲಿ ದರ್ಶನಕ್ಕೆ ತೆರಳಲು ಮತ್ತು ಅಂತಹ ಘಟನೆಗಳನ್ನು ತಡೆಯಲು ದೇವಸ್ಥಾನದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕೆಂದು ಕೆಲವರು  ಒತ್ತಾಯಿಸಿದ್ದಾರೆ.

ಆಂಧ್ರಪ್ರದೇಶದ ಕಲ್ಯಾಣ್ ಎಂಬಾತನ ಮೊಬೈಲ್‌ ಫೋನ್‌ ಕಳ್ಳತನ ಮಾಡಲಾಗಿದ್ದು, ರಾಮನ ದರ್ಶನಕ್ಕೆ ಬಂದವ ಮೊಬೈಲ್‌ ಕಳೆದುಕೊಂಡು ದೇವಸ್ಥಾನದ ಸಮೀಪವಿರುವ ಸೈಬರ್ ಸೆಂಟರ್‌ಗೆ ಭೇಟಿ ನೀಡಿ ಆನ್‌ಲೈನ್ ದೂರು ದಾಖಲಿಸಿದ್ದಾನೆ. ಕಳೆದ ಎರಡು ದಿನಗಳಿಂದ ಕಳ್ಳತನದ ದೂರುಗಳನ್ನು ದಾಖಲಿಸಲು ಕನಿಷ್ಠ 20 ಜನರು ತಮ್ಮ ಸೈಬರ್‌ಗೆ ಭೇಟಿ ನೀಡಿದ್ದಾರೆ ಎಂದು ಸೈಬರ್ ಮಾಲಕ ವಿನೋದ್ ತಿಳಿಸಿದ್ದಾರೆ. ನಗದು, ವ್ಯಾಲೆಟ್‌ಗಳು ಮತ್ತು ಸೆಲ್‌ಫೋನ್‌ಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳರ ತಂಡ ಜನರ ಗುಂಪನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೇರಳ: ರಾಮಮಂದಿರ ಉದ್ಘಾಟನೆ ದಿನ ಅನುಮತಿಯಿಲ್ಲದೆ ಶಾಲೆಗೆ ರಜೆ; ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why you are not showing, Mumbai Meera road incident. Always against BJP. Why Karnataka CM openly telling Ten thousand crores for Muslims. Who’s Money he is giving. Why you are paper not comment

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...