Homeಮುಖಪುಟಅಯೋಧ್ಯೆ: ಕಳ್ಳರ ಕಾಟಕ್ಕೆ ಬೇಸತ್ತ ರಾಮಭಕ್ತರು!

ಅಯೋಧ್ಯೆ: ಕಳ್ಳರ ಕಾಟಕ್ಕೆ ಬೇಸತ್ತ ರಾಮಭಕ್ತರು!

- Advertisement -
- Advertisement -

ಅಯೋಧ್ಯೆಯಲ್ಲಿ ನಿನ್ನೆ ರಾಮಮಂದಿರ ಉದ್ಘಾಟನೆಯಾಗಿದೆ. ದೇಶದ ವಿವಿಧೆಡೆಯಿಂದ ರಾಮನ ಭಕ್ತರ ದಂಡು ಅಯೋಧ್ಯೆಗೆ ತೆರಳಿದ್ದಾರೆ. ಇದೀಗ ರಾಮ ಮಂದಿರದಲ್ಲಿ ಭಕ್ತಾದಿಗಳ ಭಾರೀ ನೂಕುನುಗ್ಗಲಿನ ನಡುವೆ ಜೇಬುಗಳ್ಳರು ಸಕ್ರಿಯರಾಗಿರುವ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ದೇವಸ್ಥಾನದ ದ್ವಾರಗಳಲ್ಲಿ ಜನಸಂದಣಿ ಹೆಚ್ಚಿರುವುದರಿಂದ ಅದನ್ನೇ ಬಳಸಿಕೊಂಡ ಜೇಬುಗಳ್ಳರು, ಕೈಚೀಲ  ನಗದು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದಾರೆ.

ಇಂದು ರಾಮಮಂದಿರವನ್ನು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕೊಟ್ಟ ಹಿನ್ನೆಲೆ ಸಾವಿರಾರು ರಾಮಭಕ್ತರು  ಅಯೋಧ್ಯೆಗೆ ತಲುಪಿದ್ದಾರೆ. ನಿನ್ನೆ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮ ನಡೆದಿತ್ತು. ಇಂದು ಬೆಳಗ್ಗೆ 7 ಗಂಟೆಯಿಂದ ಜನರಿಗೆ ರಾಮಮಂದಿರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.

ಪೂರ್ಣಿಮಾ ಎಂಬವರು ಅಯೋಧ್ಯೆಗೆ ರಾಮಮಂದಿರ ವೀಕ್ಷಣೆಗೆ ಬಂದಿದ್ದರು. ಭಕ್ತಾದಿಗಳ ಸರತಿ ಸಾಲುಗಳ ಮೂಲಕ ಸಾಗುತ್ತಿದ್ದರು. ಆ ಬಳಿಕ ಅವರು ಚೀಲವನ್ನು ಪರಿಶೀಲಿಸಿದಾಗ ಬ್ಲೇಡ್‌ನಿಂದ ಬ್ಯಾಗ್‌ನ್ನು ಕತ್ತರಿಸಿ ನಗದು ಮತ್ತು ಇತರ ವಸ್ತುಗಳು ಕಳ್ಳತನ ಮಾಡಲಾಗಿತ್ತು. ಭಕ್ತರ ಭಾರೀ ನೂಕುನುಗ್ಗಲು ಹಿನ್ನೆಲೆ ನಿಯಂತ್ರಿಸಲು ಆಡಳಿತಕ್ಕೆ ಕಷ್ಟವಾಗಬಹುದು. ಆದರೆ ಕಳ್ಳರಿಂದ ಭಕ್ತರನ್ನು ಉಳಿಸಬೇಕು ಎಂದು ಅವರು ಹೇಳಿದ್ದಾರೆ. ತಮ್ಮ ಕೈಚೀಲದಲ್ಲಿ ಬಿರುಕು ಬಿಟ್ಟಿರುವುದನ್ನು ತೋರಿಸಿ ಜನರ ಗುಂಪಿನಲ್ಲಿ ಚೀಲವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದೆ, ಆದರೆ ಜೇಬುಗಳ್ಳರು ತಮ್ಮ ಕೆಲಸ ಮಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಅಹಮದಾಬಾದ್ ನಿವಾಸಿಯಾದ ಪ್ರಾಪ್ತಿ ಅಯೋಧ್ಯೆಗೆ ಬಂದಿದ್ದರು. ಆಕೆಯ ಬ್ಯಾಗ್‌ನ ಜಿಪ್ ತೆರೆದು ಆಕೆಯ ಆಧಾರ್ ಕಾರ್ಡ್, ಎಟಿಎಂ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಹಾಗೂ ಇತರೆ ದಾಖಲೆಗಳನ್ನು ಕದ್ದೊಯ್ದಿದ್ದಾರೆ. ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಹುದೆಂಬ ಭಯ ಈಗ ಆಕೆಗೆ ಕಾಡುತ್ತಿದೆ. ನಾನು ನನ್ನ ಬ್ಯಾಗ್‌ನ್ನು ಎಚ್ಚರಿಕೆಯಿಂದ ಹಿಡಿದುಕೊಂಡಿದ್ದೆ. ಅವರು ಜಿಪ್‌ ಹೇಗೆ ತೆರೆದು ದಾಖಲೆಗಳನ್ನು ತೆಗೆದುಕೊಂಡರು ಎಂಬುದರ ಬಗ್ಗೆ ನನಗೆ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಜೇಬುಗಳ್ಳರ ಕೆಂಗಣ್ಣಿಗೆ ಗುರಿಯಾಗಿ ಹಣ ಮತ್ತು ಇತರ ವಸ್ತುಗಳನ್ನು ಹಲವಾರು ಯಾತ್ರಾರ್ಥಿಗಳು ಕಳೆದುಕೊಂಡಿದ್ದಾರೆ. ನಗರದ ಹೊರಗಿನಿಂದ ಬಂದಿರುವ ಅಪರಾಧಿಗಳ ತಂಡ ಕಳ್ಳತನದ ಹಿಂದೆ ಇರಬಹುದೆಂದು ಸ್ಥಳೀಯ ನಿವಾಸಿಗಳು ಶಂಕಿಸಿದ್ದಾರೆ.

ನಾವು ಜನವರಿ 16ರಿಂದ ಅಯೋಧ್ಯೆಯಲ್ಲಿದ್ದೇವೆ. ಈ ಕಳ್ಳರು ಅಯೋಧ್ಯೆಯವರಲ್ಲ. ನಾವು ಇಲ್ಲಿ ಭೇಟಿಯಾದ ಆಟೋ ಚಾಲಕರು, ಬಸ್ ಚಾಲಕರು ಮತ್ತು ಕ್ಯಾಬ್ ಡ್ರೈವರ್‌ಗಳು ತುಂಬಾ ಪ್ರಾಮಾಣಿಕರು. ನಾವು ನಮ್ಮ ಲಗೇಜ್‌ಗಳನ್ನು ಸಹ ಅವರ ಬಳಿ ಬಿಟ್ಟು ಹೋಗಿದ್ದೆವು, ಆದರೆ ಯಾವುದೇ ವಸ್ತು ಕಾಣೆಯಾಗಲಿಲ್ಲ. ಜೇಬುಗಳ್ಳರು ಇಲ್ಲಿಂದ ಬಂದವರಲ್ಲ, ಭಕ್ತಾದಿಗಳು ಸರಿಯಾದ ಸರತಿ ಸಾಲಿನಲ್ಲಿ ದರ್ಶನಕ್ಕೆ ತೆರಳಲು ಮತ್ತು ಅಂತಹ ಘಟನೆಗಳನ್ನು ತಡೆಯಲು ದೇವಸ್ಥಾನದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕೆಂದು ಕೆಲವರು  ಒತ್ತಾಯಿಸಿದ್ದಾರೆ.

ಆಂಧ್ರಪ್ರದೇಶದ ಕಲ್ಯಾಣ್ ಎಂಬಾತನ ಮೊಬೈಲ್‌ ಫೋನ್‌ ಕಳ್ಳತನ ಮಾಡಲಾಗಿದ್ದು, ರಾಮನ ದರ್ಶನಕ್ಕೆ ಬಂದವ ಮೊಬೈಲ್‌ ಕಳೆದುಕೊಂಡು ದೇವಸ್ಥಾನದ ಸಮೀಪವಿರುವ ಸೈಬರ್ ಸೆಂಟರ್‌ಗೆ ಭೇಟಿ ನೀಡಿ ಆನ್‌ಲೈನ್ ದೂರು ದಾಖಲಿಸಿದ್ದಾನೆ. ಕಳೆದ ಎರಡು ದಿನಗಳಿಂದ ಕಳ್ಳತನದ ದೂರುಗಳನ್ನು ದಾಖಲಿಸಲು ಕನಿಷ್ಠ 20 ಜನರು ತಮ್ಮ ಸೈಬರ್‌ಗೆ ಭೇಟಿ ನೀಡಿದ್ದಾರೆ ಎಂದು ಸೈಬರ್ ಮಾಲಕ ವಿನೋದ್ ತಿಳಿಸಿದ್ದಾರೆ. ನಗದು, ವ್ಯಾಲೆಟ್‌ಗಳು ಮತ್ತು ಸೆಲ್‌ಫೋನ್‌ಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳರ ತಂಡ ಜನರ ಗುಂಪನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೇರಳ: ರಾಮಮಂದಿರ ಉದ್ಘಾಟನೆ ದಿನ ಅನುಮತಿಯಿಲ್ಲದೆ ಶಾಲೆಗೆ ರಜೆ; ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why you are not showing, Mumbai Meera road incident. Always against BJP. Why Karnataka CM openly telling Ten thousand crores for Muslims. Who’s Money he is giving. Why you are paper not comment

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...