Homeಮುಖಪುಟರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

ಆರೆಸ್ಸೆಸ್‌ನ ಬಾವುಟ ಹಿಡಿದ ಭಾರತ ಮಾತೆಯ ಚಿತ್ರವನ್ನು ಸರ್ಕಾರಿ ಕಾರ್ಯಕ್ರಮದಲ್ಲಿ ಇರಿಸಿದ್ದನ್ನು ವಿರೋಧಿಸಿ, ಕೇರಳ ಸರ್ಕಾರವು ರಾಜಭವನದಲ್ಲಿ ನಡೆದ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿದೆ. ರಾಜಭವನದ ಕೇಂದ್ರ ಸಭಾಂಗಣದಲ್ಲಿ ಗುರುವಾರ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ  ಇರಿಸಲಾಗಿದ್ದ ಚಿತ್ರವು ಆರ್‌ಎಸ್‌ಎಸ್ ಹೆಚ್ಚಾಗಿ ಬಳಸುವ ಭಾರತ ಮಾತೆಯ ಚಿತ್ರ ಎಂದು ಸರ್ಕಾರ ವಾದಿಸಿದೆ. ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ

ಚಿತ್ರವನ್ನು ಬದಲಾಯಿಸುವಂತೆ ಕೇಳಿದ್ದ ಸರ್ಕಾರದ ವಿನಂತಿಯನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ತಿರಸ್ಕರಿಸಿದ ನಂತರ, ರಾಜ್ಯದ ಕೃಷಿ ಇಲಾಖೆಯು ಸಮಾರಂಭವನ್ನು ಸರ್ಕಾರಿ ಸಚಿವಾಲಯದ ದರ್ಬಾರ್ ಹಾಲ್‌ಗೆ ಸ್ಥಳಾಂತರಿಸಿದೆ.

ಪ್ರಸ್ತುತ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಈ ವರ್ಷದ ಆರಂಭದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ರಾಜಭವನದ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು ಇದೇ ಮೊದಲು.

ರಾಜ್ಯಪಾಲರನ್ನು ಮುಖ್ಯ ಅತಿಥಿಯಾಗಿಟ್ಟುಕೊಂಡು ರಾಜಭವನದಲ್ಲಿ ಪರಿಸರ ದಿನಾಚರಣೆಯ ರಾಜ್ಯ ಮಟ್ಟದ ಉದ್ಘಾಟನೆಯನ್ನು ಕೃಷಿ ಇಲಾಖೆ ಯೋಜಿಸಿತ್ತು. ರಾಜಭವನದ ಕೇಂದ್ರ ಸಭಾಂಗಣದಲ್ಲಿ ನಡೆದ ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಕೃಷಿ ಇಲಾಖೆಯ ಅಧಿಕಾರಿಗಳು, ಸ್ಥಳದಲ್ಲಿ ಬಳಸಬೇಕಾದ ಭಾರತ ಮಾತೆಯ ಚಿತ್ರವು ಸಂಘ ಪರಿವಾರವು ಸಾಮಾನ್ಯವಾಗಿ ಬಳಸುವ ಆರೆಸ್ಸೆಸ್‌ನ ಭಾವುಟ ಹಿಡಿದ ಚಿತ್ರವಾಗಿದೆ ಎಂದು ಗಮನಿಸಿದ್ದಾರೆ. ಇದರ ನಂತರ ಅವರು ಸಿಪಿಐ ನಾಯಕ ಮತ್ತು ಕೃಷಿ ಸಚಿವ ಪಿ ಪ್ರಸಾದ್ ಅವರೊಂದಿಗೆ ಈ ವಿಷಯವನ್ನು ಚರ್ಚಿಸಿದ್ದರು, ಅವರು ಚಿತ್ರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪರಿಣಾಮವಾಗಿ, ಇಲಾಖೆಯು ರಾಜ್ಯ ಸಚಿವಾಲಯದ ದರ್ಬಾರ್ ಸಭಾಂಗಣದಲ್ಲಿ ತನ್ನದೇ ಆದ ಕಾರ್ಯವನ್ನು ನಡೆಸಿದೆ. ರಾಜಭವನದಲ್ಲಿ ಕಾರ್ಯಕ್ರಮವನ್ನು ಸರ್ಕಾರ ಯೋಜಿಸಿತ್ತು ಆದರೆ ಫೋಟೋದ ಬಗ್ಗೆ ರಾಜ್ಯಪಾಲರೊಂದಿಗೆ ಉಂಟಾದ ಬಿಕ್ಕಟ್ಟಿನ ನಂತರ ಅದರ ಸ್ಥಳವನ್ನು ಬದಲಾಯಿಸಿದೆ ಎಂದು ಸಚಿವ ಪಿ. ಪ್ರಸಾದ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಸ್ಥಳದಲ್ಲಿ (ರಾಜಭವನದ ಕೇಂದ್ರ ಸಭಾಂಗಣ) ಪ್ರದರ್ಶಿಸಲಾದ ಭಾರತ ಮಾತೆಯ ಚಿತ್ರವು ಆರ್‌ಎಸ್‌ಎಸ್ ಬಳಸುವಂತಹ ಚಿತ್ರವಾಗಿದೆ. ಸಾಂವಿಧಾನಿಕ ಸಂಸ್ಥೆಯ ಹುದ್ದೆಯು ಅದನ್ನು ಬಳಸಬಾರದು. ಸಾಂವಿಧಾನಿಕವಾಗಿ, ಸರ್ಕಾರಿ ಸಮಾರಂಭದಲ್ಲಿ ಆ ಚಿತ್ರವನ್ನು ಬಳಸುವುದು ಸೂಕ್ತವಲ್ಲ. ರಾಜ್ಯಪಾಲರು ಆ ಚಿತ್ರವನ್ನು ಬಳಸಬೇಕೆಂದು ಒತ್ತಾಯಿಸಿದರು, ಆದರೆ ನಾವು ಆ ನಿರ್ಧಾರವನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ, ಸರ್ಕಾರಿ ಕಾರ್ಯಕ್ರಮವನ್ನು ರಾಜಭವನದಿಂದ ಹೊರಗೆ ಸ್ಥಳಾಂತರಿಸಲಾಯಿತು, ”ಎಂದು ಅವರು ಹೇಳಿದ್ದಾರೆ.

ಈ ವಿವಾದದ ಬಗ್ಗೆ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜಭವನದಲ್ಲಿ ನಡೆದ ಮತ್ತೊಂದು ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ, “ಸಚಿವರು ಭಾರತ ಮಾತೆಯ ಭಾವಚಿತ್ರವನ್ನು ಡಯಾಸ್‌ನಿಂದ ತೆಗೆದುಹಾಕಬೇಕೆಂದು ಬಯಸಿದ್ದರು. ನಾವು ಭಾರತ ಮಾತೆಯನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ತಿಳಿಸಿದ್ದೇನೆ. ಭಾರತ ಮಾತೆಯನ್ನು ದೂರವಿಡಲು ಸಾಧ್ಯವಿಲ್ಲ… ಯಾವುದೇ ಕಡೆಯಿಂದ ಏನೇ ಒತ್ತಡ ಬಂದರೂ, ಭಾರತ ಮಾತೆಯ ಬಗ್ಗೆ ಯಾವುದೇ ರಾಜಿ ಇರುವುದಿಲ್ಲ.” ಎಂದು ಹೇಳಿದ್ದಾರೆ.

ರಾಜಭವನದಲ್ಲಿ ಏನು ಬಳಸಬೇಕು ಅಥವಾ ಬಳಸಬಾರದು ಎಂದು ಸಚಿವರು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ರಾಜಭವನದ ಮೂಲಗಳು ತಿಳಿಸಿವೆ. ರಾಜಭವನದಲ್ಲಿ ಕಾರ್ಯಕ್ರಮವು ಯೋಜಿಸಿದಂತೆ ನಡೆಯಿತು ಮತ್ತು ಅದರಲ್ಲಿ “ರಾಜ್ಯಪಾಲರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು” ಎಂದು ಮೂಲಗಳು ತಿಳಿಸಿವೆ. “ರಾಜಭವನದಲ್ಲಿ ಕಾರ್ಯಕ್ರಮ ನಡೆಯುತ್ತಿರುವಾಗ, ಏನು ಬಳಸಬೇಕು ಮತ್ತು ಏನು ಬಳಸಬಾರದು ಎಂದು ಸಚಿವರು ನಿರ್ದೇಶಿಸುವಂತಿಲ್ಲ. ಭಾರತ ಮಾತೆಯ ಯಾವ ಚಿತ್ರವನ್ನು ಬಳಸಬೇಕೆಂದು ಹೇಳುವ ಹಕ್ಕು ಸಚಿವರಿಗೆ ಇಲ್ಲ” ಎಂದು ರಾಜ್ಯಪಾಲರದ ಮೂಲವನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆಪರೇಷನ್ ಸಿಂಧೂರ್: ಮೇಣದಬತ್ತಿಯ ಬೆಳಕಿನಿಂದ ಬ್ರಹ್ಮೋಸ್‌ ಮಾದರಿಗೆ ಬದಲಾವಣೆ” ಎಂಬ ವಿಚಾರದ ಕುರಿತು ರಾಜಭವನದಲ್ಲಿ ಆರೆಸ್ಸೆಸ್‌ ನಾಯಕ ಗುರುಮೂರ್ತಿ ಮಾಡಿದ ಭಾಷಣದ ಎರಡು ವಾರಗಳ ನಂತರ ಈ ಘಟನೆ ನಡೆದಿದೆ. ಈ ಘಟನೆಯನ್ನು ವಿಪಕ್ಷ ಕಾಂಗ್ರೆಸ್ ಕೂಡಾ ವಿರೋಧಿಸಿದ್ದು, “ರಾಜಭವನದನ್ನು ಆರ್‌ಎಸ್‌ಎಸ್ ಪ್ರಧಾನ ಕಚೇರಿಯಾಗಿ ಪರಿವರ್ತಿಸಲಾಗುತ್ತಿದೆ” ಎಂದು ಹೇಳಿತ್ತು.

ಆರೆಸ್ಸೆಸ್ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ ಬಳಸಿರುವ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕ ವಿ ಡಿ ಸತೀಸನ್ ಅವರು, ರಾಜಭವನದಲ್ಲಿ ಭಾರತ ಮಾತೆಯ ಚಿತ್ರವನ್ನು ಬಳಸುವುದು “ಸರಿಯಲ್ಲ” ಎಂದು ಹೇಳಿದ್ದಾರೆ.

“ವಾರಗಳ ಹಿಂದೆ, ಆರ್‌ಎಸ್‌ಎಸ್ ಸಿದ್ಧಾಂತವಾದಿ ಗುರುಮೂರ್ತಿ ಅವರನ್ನು ಭಾಷಣಕ್ಕಾಗಿ ರಾಜಭವನಕ್ಕೆ ಕರೆತರಲಾಯಿತು. ಅವರು ಮಾಜಿ ಪ್ರಧಾನಿಗಳನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದರು. ಮುಖ್ಯಮಂತ್ರಿ ವಿಜಯನ್ ಅದರ ಬಗ್ಗೆ ಏಕೆ ಮೌನವಾಗಿದ್ದಾರೆ? ಅವರು ರಾಜ್ಯಪಾಲರ ಬಗ್ಗೆ ಮಾತನಾಡಲು ಹೆದರುತ್ತಾರೆ. ರಾಜಭವನವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದನ್ನು ಅಂತಹ ರಾಜಕೀಯ ಕಾರ್ಯಕ್ರಮಗಳಿಗೆ ವೇದಿಕೆಯನ್ನಾಗಿ ಮಾಡಬಾರದು” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕದ ಹೋರಾಟಗಾರರೊಬ್ಬರು, ರಾಜ್ಯ ವಿಧಾನಸಭೆಯಲ್ಲಿ ಕೂಡಾ ಪ್ರತಿ ಶುಕ್ರವಾರ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸದೆ ಯಾವ ಕೆಲಸವೂ ಪ್ರಾರಂಭವಾಗುವುದಿಲ್ಲ. ರಾಜ್ಯದ ಸರ್ಕಾರಿ ಕಚೇರಿ, ಕಾರ್ಯಾಲಯ ಹಾಗೂ ಪೊಲೀಸ್ ಠಾಣೆಗಳು ಸೇರಿದಂತೆ ಪೂಜೆ ಪುರಸ್ಕಾರಗಳು ನಡೆಯುತ್ತವೆ. ಇವೆಲ್ಲವೂ ಅಸಂವಿಧಾನಿಕ ಆಚರಣಗಳು, ಜಾತ್ಯಾತೀತ ನಾಡಿನಲ್ಲಿ ಧಾರ್ಮಿಕ ತಟಸ್ಥತೆ ಇರಬೇಕಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡಾ ಈ ಬಗ್ಗೆ ಗಮನವಹಿಸಬೇಕು” ಎಂದು ಹೇಳಿದ್ದಾರೆ.  ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...