Homeಮುಖಪುಟರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

ಆರೆಸ್ಸೆಸ್‌ನ ಬಾವುಟ ಹಿಡಿದ ಭಾರತ ಮಾತೆಯ ಚಿತ್ರವನ್ನು ಸರ್ಕಾರಿ ಕಾರ್ಯಕ್ರಮದಲ್ಲಿ ಇರಿಸಿದ್ದನ್ನು ವಿರೋಧಿಸಿ, ಕೇರಳ ಸರ್ಕಾರವು ರಾಜಭವನದಲ್ಲಿ ನಡೆದ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿದೆ. ರಾಜಭವನದ ಕೇಂದ್ರ ಸಭಾಂಗಣದಲ್ಲಿ ಗುರುವಾರ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ  ಇರಿಸಲಾಗಿದ್ದ ಚಿತ್ರವು ಆರ್‌ಎಸ್‌ಎಸ್ ಹೆಚ್ಚಾಗಿ ಬಳಸುವ ಭಾರತ ಮಾತೆಯ ಚಿತ್ರ ಎಂದು ಸರ್ಕಾರ ವಾದಿಸಿದೆ. ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ

ಚಿತ್ರವನ್ನು ಬದಲಾಯಿಸುವಂತೆ ಕೇಳಿದ್ದ ಸರ್ಕಾರದ ವಿನಂತಿಯನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ತಿರಸ್ಕರಿಸಿದ ನಂತರ, ರಾಜ್ಯದ ಕೃಷಿ ಇಲಾಖೆಯು ಸಮಾರಂಭವನ್ನು ಸರ್ಕಾರಿ ಸಚಿವಾಲಯದ ದರ್ಬಾರ್ ಹಾಲ್‌ಗೆ ಸ್ಥಳಾಂತರಿಸಿದೆ.

ಪ್ರಸ್ತುತ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಈ ವರ್ಷದ ಆರಂಭದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ರಾಜಭವನದ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು ಇದೇ ಮೊದಲು.

ರಾಜ್ಯಪಾಲರನ್ನು ಮುಖ್ಯ ಅತಿಥಿಯಾಗಿಟ್ಟುಕೊಂಡು ರಾಜಭವನದಲ್ಲಿ ಪರಿಸರ ದಿನಾಚರಣೆಯ ರಾಜ್ಯ ಮಟ್ಟದ ಉದ್ಘಾಟನೆಯನ್ನು ಕೃಷಿ ಇಲಾಖೆ ಯೋಜಿಸಿತ್ತು. ರಾಜಭವನದ ಕೇಂದ್ರ ಸಭಾಂಗಣದಲ್ಲಿ ನಡೆದ ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಕೃಷಿ ಇಲಾಖೆಯ ಅಧಿಕಾರಿಗಳು, ಸ್ಥಳದಲ್ಲಿ ಬಳಸಬೇಕಾದ ಭಾರತ ಮಾತೆಯ ಚಿತ್ರವು ಸಂಘ ಪರಿವಾರವು ಸಾಮಾನ್ಯವಾಗಿ ಬಳಸುವ ಆರೆಸ್ಸೆಸ್‌ನ ಭಾವುಟ ಹಿಡಿದ ಚಿತ್ರವಾಗಿದೆ ಎಂದು ಗಮನಿಸಿದ್ದಾರೆ. ಇದರ ನಂತರ ಅವರು ಸಿಪಿಐ ನಾಯಕ ಮತ್ತು ಕೃಷಿ ಸಚಿವ ಪಿ ಪ್ರಸಾದ್ ಅವರೊಂದಿಗೆ ಈ ವಿಷಯವನ್ನು ಚರ್ಚಿಸಿದ್ದರು, ಅವರು ಚಿತ್ರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪರಿಣಾಮವಾಗಿ, ಇಲಾಖೆಯು ರಾಜ್ಯ ಸಚಿವಾಲಯದ ದರ್ಬಾರ್ ಸಭಾಂಗಣದಲ್ಲಿ ತನ್ನದೇ ಆದ ಕಾರ್ಯವನ್ನು ನಡೆಸಿದೆ. ರಾಜಭವನದಲ್ಲಿ ಕಾರ್ಯಕ್ರಮವನ್ನು ಸರ್ಕಾರ ಯೋಜಿಸಿತ್ತು ಆದರೆ ಫೋಟೋದ ಬಗ್ಗೆ ರಾಜ್ಯಪಾಲರೊಂದಿಗೆ ಉಂಟಾದ ಬಿಕ್ಕಟ್ಟಿನ ನಂತರ ಅದರ ಸ್ಥಳವನ್ನು ಬದಲಾಯಿಸಿದೆ ಎಂದು ಸಚಿವ ಪಿ. ಪ್ರಸಾದ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಸ್ಥಳದಲ್ಲಿ (ರಾಜಭವನದ ಕೇಂದ್ರ ಸಭಾಂಗಣ) ಪ್ರದರ್ಶಿಸಲಾದ ಭಾರತ ಮಾತೆಯ ಚಿತ್ರವು ಆರ್‌ಎಸ್‌ಎಸ್ ಬಳಸುವಂತಹ ಚಿತ್ರವಾಗಿದೆ. ಸಾಂವಿಧಾನಿಕ ಸಂಸ್ಥೆಯ ಹುದ್ದೆಯು ಅದನ್ನು ಬಳಸಬಾರದು. ಸಾಂವಿಧಾನಿಕವಾಗಿ, ಸರ್ಕಾರಿ ಸಮಾರಂಭದಲ್ಲಿ ಆ ಚಿತ್ರವನ್ನು ಬಳಸುವುದು ಸೂಕ್ತವಲ್ಲ. ರಾಜ್ಯಪಾಲರು ಆ ಚಿತ್ರವನ್ನು ಬಳಸಬೇಕೆಂದು ಒತ್ತಾಯಿಸಿದರು, ಆದರೆ ನಾವು ಆ ನಿರ್ಧಾರವನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ, ಸರ್ಕಾರಿ ಕಾರ್ಯಕ್ರಮವನ್ನು ರಾಜಭವನದಿಂದ ಹೊರಗೆ ಸ್ಥಳಾಂತರಿಸಲಾಯಿತು, ”ಎಂದು ಅವರು ಹೇಳಿದ್ದಾರೆ.

ಈ ವಿವಾದದ ಬಗ್ಗೆ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜಭವನದಲ್ಲಿ ನಡೆದ ಮತ್ತೊಂದು ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ, “ಸಚಿವರು ಭಾರತ ಮಾತೆಯ ಭಾವಚಿತ್ರವನ್ನು ಡಯಾಸ್‌ನಿಂದ ತೆಗೆದುಹಾಕಬೇಕೆಂದು ಬಯಸಿದ್ದರು. ನಾವು ಭಾರತ ಮಾತೆಯನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ತಿಳಿಸಿದ್ದೇನೆ. ಭಾರತ ಮಾತೆಯನ್ನು ದೂರವಿಡಲು ಸಾಧ್ಯವಿಲ್ಲ… ಯಾವುದೇ ಕಡೆಯಿಂದ ಏನೇ ಒತ್ತಡ ಬಂದರೂ, ಭಾರತ ಮಾತೆಯ ಬಗ್ಗೆ ಯಾವುದೇ ರಾಜಿ ಇರುವುದಿಲ್ಲ.” ಎಂದು ಹೇಳಿದ್ದಾರೆ.

ರಾಜಭವನದಲ್ಲಿ ಏನು ಬಳಸಬೇಕು ಅಥವಾ ಬಳಸಬಾರದು ಎಂದು ಸಚಿವರು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ರಾಜಭವನದ ಮೂಲಗಳು ತಿಳಿಸಿವೆ. ರಾಜಭವನದಲ್ಲಿ ಕಾರ್ಯಕ್ರಮವು ಯೋಜಿಸಿದಂತೆ ನಡೆಯಿತು ಮತ್ತು ಅದರಲ್ಲಿ “ರಾಜ್ಯಪಾಲರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು” ಎಂದು ಮೂಲಗಳು ತಿಳಿಸಿವೆ. “ರಾಜಭವನದಲ್ಲಿ ಕಾರ್ಯಕ್ರಮ ನಡೆಯುತ್ತಿರುವಾಗ, ಏನು ಬಳಸಬೇಕು ಮತ್ತು ಏನು ಬಳಸಬಾರದು ಎಂದು ಸಚಿವರು ನಿರ್ದೇಶಿಸುವಂತಿಲ್ಲ. ಭಾರತ ಮಾತೆಯ ಯಾವ ಚಿತ್ರವನ್ನು ಬಳಸಬೇಕೆಂದು ಹೇಳುವ ಹಕ್ಕು ಸಚಿವರಿಗೆ ಇಲ್ಲ” ಎಂದು ರಾಜ್ಯಪಾಲರದ ಮೂಲವನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆಪರೇಷನ್ ಸಿಂಧೂರ್: ಮೇಣದಬತ್ತಿಯ ಬೆಳಕಿನಿಂದ ಬ್ರಹ್ಮೋಸ್‌ ಮಾದರಿಗೆ ಬದಲಾವಣೆ” ಎಂಬ ವಿಚಾರದ ಕುರಿತು ರಾಜಭವನದಲ್ಲಿ ಆರೆಸ್ಸೆಸ್‌ ನಾಯಕ ಗುರುಮೂರ್ತಿ ಮಾಡಿದ ಭಾಷಣದ ಎರಡು ವಾರಗಳ ನಂತರ ಈ ಘಟನೆ ನಡೆದಿದೆ. ಈ ಘಟನೆಯನ್ನು ವಿಪಕ್ಷ ಕಾಂಗ್ರೆಸ್ ಕೂಡಾ ವಿರೋಧಿಸಿದ್ದು, “ರಾಜಭವನದನ್ನು ಆರ್‌ಎಸ್‌ಎಸ್ ಪ್ರಧಾನ ಕಚೇರಿಯಾಗಿ ಪರಿವರ್ತಿಸಲಾಗುತ್ತಿದೆ” ಎಂದು ಹೇಳಿತ್ತು.

ಆರೆಸ್ಸೆಸ್ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ ಬಳಸಿರುವ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕ ವಿ ಡಿ ಸತೀಸನ್ ಅವರು, ರಾಜಭವನದಲ್ಲಿ ಭಾರತ ಮಾತೆಯ ಚಿತ್ರವನ್ನು ಬಳಸುವುದು “ಸರಿಯಲ್ಲ” ಎಂದು ಹೇಳಿದ್ದಾರೆ.

“ವಾರಗಳ ಹಿಂದೆ, ಆರ್‌ಎಸ್‌ಎಸ್ ಸಿದ್ಧಾಂತವಾದಿ ಗುರುಮೂರ್ತಿ ಅವರನ್ನು ಭಾಷಣಕ್ಕಾಗಿ ರಾಜಭವನಕ್ಕೆ ಕರೆತರಲಾಯಿತು. ಅವರು ಮಾಜಿ ಪ್ರಧಾನಿಗಳನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದರು. ಮುಖ್ಯಮಂತ್ರಿ ವಿಜಯನ್ ಅದರ ಬಗ್ಗೆ ಏಕೆ ಮೌನವಾಗಿದ್ದಾರೆ? ಅವರು ರಾಜ್ಯಪಾಲರ ಬಗ್ಗೆ ಮಾತನಾಡಲು ಹೆದರುತ್ತಾರೆ. ರಾಜಭವನವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದನ್ನು ಅಂತಹ ರಾಜಕೀಯ ಕಾರ್ಯಕ್ರಮಗಳಿಗೆ ವೇದಿಕೆಯನ್ನಾಗಿ ಮಾಡಬಾರದು” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕದ ಹೋರಾಟಗಾರರೊಬ್ಬರು, ರಾಜ್ಯ ವಿಧಾನಸಭೆಯಲ್ಲಿ ಕೂಡಾ ಪ್ರತಿ ಶುಕ್ರವಾರ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸದೆ ಯಾವ ಕೆಲಸವೂ ಪ್ರಾರಂಭವಾಗುವುದಿಲ್ಲ. ರಾಜ್ಯದ ಸರ್ಕಾರಿ ಕಚೇರಿ, ಕಾರ್ಯಾಲಯ ಹಾಗೂ ಪೊಲೀಸ್ ಠಾಣೆಗಳು ಸೇರಿದಂತೆ ಪೂಜೆ ಪುರಸ್ಕಾರಗಳು ನಡೆಯುತ್ತವೆ. ಇವೆಲ್ಲವೂ ಅಸಂವಿಧಾನಿಕ ಆಚರಣಗಳು, ಜಾತ್ಯಾತೀತ ನಾಡಿನಲ್ಲಿ ಧಾರ್ಮಿಕ ತಟಸ್ಥತೆ ಇರಬೇಕಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡಾ ಈ ಬಗ್ಗೆ ಗಮನವಹಿಸಬೇಕು” ಎಂದು ಹೇಳಿದ್ದಾರೆ.  ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...