Homeಮುಖಪುಟರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

ಆರೆಸ್ಸೆಸ್‌ನ ಬಾವುಟ ಹಿಡಿದ ಭಾರತ ಮಾತೆಯ ಚಿತ್ರವನ್ನು ಸರ್ಕಾರಿ ಕಾರ್ಯಕ್ರಮದಲ್ಲಿ ಇರಿಸಿದ್ದನ್ನು ವಿರೋಧಿಸಿ, ಕೇರಳ ಸರ್ಕಾರವು ರಾಜಭವನದಲ್ಲಿ ನಡೆದ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿದೆ. ರಾಜಭವನದ ಕೇಂದ್ರ ಸಭಾಂಗಣದಲ್ಲಿ ಗುರುವಾರ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ  ಇರಿಸಲಾಗಿದ್ದ ಚಿತ್ರವು ಆರ್‌ಎಸ್‌ಎಸ್ ಹೆಚ್ಚಾಗಿ ಬಳಸುವ ಭಾರತ ಮಾತೆಯ ಚಿತ್ರ ಎಂದು ಸರ್ಕಾರ ವಾದಿಸಿದೆ. ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ

ಚಿತ್ರವನ್ನು ಬದಲಾಯಿಸುವಂತೆ ಕೇಳಿದ್ದ ಸರ್ಕಾರದ ವಿನಂತಿಯನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ತಿರಸ್ಕರಿಸಿದ ನಂತರ, ರಾಜ್ಯದ ಕೃಷಿ ಇಲಾಖೆಯು ಸಮಾರಂಭವನ್ನು ಸರ್ಕಾರಿ ಸಚಿವಾಲಯದ ದರ್ಬಾರ್ ಹಾಲ್‌ಗೆ ಸ್ಥಳಾಂತರಿಸಿದೆ.

ಪ್ರಸ್ತುತ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಈ ವರ್ಷದ ಆರಂಭದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ರಾಜಭವನದ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು ಇದೇ ಮೊದಲು.

ರಾಜ್ಯಪಾಲರನ್ನು ಮುಖ್ಯ ಅತಿಥಿಯಾಗಿಟ್ಟುಕೊಂಡು ರಾಜಭವನದಲ್ಲಿ ಪರಿಸರ ದಿನಾಚರಣೆಯ ರಾಜ್ಯ ಮಟ್ಟದ ಉದ್ಘಾಟನೆಯನ್ನು ಕೃಷಿ ಇಲಾಖೆ ಯೋಜಿಸಿತ್ತು. ರಾಜಭವನದ ಕೇಂದ್ರ ಸಭಾಂಗಣದಲ್ಲಿ ನಡೆದ ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಕೃಷಿ ಇಲಾಖೆಯ ಅಧಿಕಾರಿಗಳು, ಸ್ಥಳದಲ್ಲಿ ಬಳಸಬೇಕಾದ ಭಾರತ ಮಾತೆಯ ಚಿತ್ರವು ಸಂಘ ಪರಿವಾರವು ಸಾಮಾನ್ಯವಾಗಿ ಬಳಸುವ ಆರೆಸ್ಸೆಸ್‌ನ ಭಾವುಟ ಹಿಡಿದ ಚಿತ್ರವಾಗಿದೆ ಎಂದು ಗಮನಿಸಿದ್ದಾರೆ. ಇದರ ನಂತರ ಅವರು ಸಿಪಿಐ ನಾಯಕ ಮತ್ತು ಕೃಷಿ ಸಚಿವ ಪಿ ಪ್ರಸಾದ್ ಅವರೊಂದಿಗೆ ಈ ವಿಷಯವನ್ನು ಚರ್ಚಿಸಿದ್ದರು, ಅವರು ಚಿತ್ರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪರಿಣಾಮವಾಗಿ, ಇಲಾಖೆಯು ರಾಜ್ಯ ಸಚಿವಾಲಯದ ದರ್ಬಾರ್ ಸಭಾಂಗಣದಲ್ಲಿ ತನ್ನದೇ ಆದ ಕಾರ್ಯವನ್ನು ನಡೆಸಿದೆ. ರಾಜಭವನದಲ್ಲಿ ಕಾರ್ಯಕ್ರಮವನ್ನು ಸರ್ಕಾರ ಯೋಜಿಸಿತ್ತು ಆದರೆ ಫೋಟೋದ ಬಗ್ಗೆ ರಾಜ್ಯಪಾಲರೊಂದಿಗೆ ಉಂಟಾದ ಬಿಕ್ಕಟ್ಟಿನ ನಂತರ ಅದರ ಸ್ಥಳವನ್ನು ಬದಲಾಯಿಸಿದೆ ಎಂದು ಸಚಿವ ಪಿ. ಪ್ರಸಾದ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಸ್ಥಳದಲ್ಲಿ (ರಾಜಭವನದ ಕೇಂದ್ರ ಸಭಾಂಗಣ) ಪ್ರದರ್ಶಿಸಲಾದ ಭಾರತ ಮಾತೆಯ ಚಿತ್ರವು ಆರ್‌ಎಸ್‌ಎಸ್ ಬಳಸುವಂತಹ ಚಿತ್ರವಾಗಿದೆ. ಸಾಂವಿಧಾನಿಕ ಸಂಸ್ಥೆಯ ಹುದ್ದೆಯು ಅದನ್ನು ಬಳಸಬಾರದು. ಸಾಂವಿಧಾನಿಕವಾಗಿ, ಸರ್ಕಾರಿ ಸಮಾರಂಭದಲ್ಲಿ ಆ ಚಿತ್ರವನ್ನು ಬಳಸುವುದು ಸೂಕ್ತವಲ್ಲ. ರಾಜ್ಯಪಾಲರು ಆ ಚಿತ್ರವನ್ನು ಬಳಸಬೇಕೆಂದು ಒತ್ತಾಯಿಸಿದರು, ಆದರೆ ನಾವು ಆ ನಿರ್ಧಾರವನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ, ಸರ್ಕಾರಿ ಕಾರ್ಯಕ್ರಮವನ್ನು ರಾಜಭವನದಿಂದ ಹೊರಗೆ ಸ್ಥಳಾಂತರಿಸಲಾಯಿತು, ”ಎಂದು ಅವರು ಹೇಳಿದ್ದಾರೆ.

ಈ ವಿವಾದದ ಬಗ್ಗೆ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜಭವನದಲ್ಲಿ ನಡೆದ ಮತ್ತೊಂದು ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ, “ಸಚಿವರು ಭಾರತ ಮಾತೆಯ ಭಾವಚಿತ್ರವನ್ನು ಡಯಾಸ್‌ನಿಂದ ತೆಗೆದುಹಾಕಬೇಕೆಂದು ಬಯಸಿದ್ದರು. ನಾವು ಭಾರತ ಮಾತೆಯನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ತಿಳಿಸಿದ್ದೇನೆ. ಭಾರತ ಮಾತೆಯನ್ನು ದೂರವಿಡಲು ಸಾಧ್ಯವಿಲ್ಲ… ಯಾವುದೇ ಕಡೆಯಿಂದ ಏನೇ ಒತ್ತಡ ಬಂದರೂ, ಭಾರತ ಮಾತೆಯ ಬಗ್ಗೆ ಯಾವುದೇ ರಾಜಿ ಇರುವುದಿಲ್ಲ.” ಎಂದು ಹೇಳಿದ್ದಾರೆ.

ರಾಜಭವನದಲ್ಲಿ ಏನು ಬಳಸಬೇಕು ಅಥವಾ ಬಳಸಬಾರದು ಎಂದು ಸಚಿವರು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ರಾಜಭವನದ ಮೂಲಗಳು ತಿಳಿಸಿವೆ. ರಾಜಭವನದಲ್ಲಿ ಕಾರ್ಯಕ್ರಮವು ಯೋಜಿಸಿದಂತೆ ನಡೆಯಿತು ಮತ್ತು ಅದರಲ್ಲಿ “ರಾಜ್ಯಪಾಲರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು” ಎಂದು ಮೂಲಗಳು ತಿಳಿಸಿವೆ. “ರಾಜಭವನದಲ್ಲಿ ಕಾರ್ಯಕ್ರಮ ನಡೆಯುತ್ತಿರುವಾಗ, ಏನು ಬಳಸಬೇಕು ಮತ್ತು ಏನು ಬಳಸಬಾರದು ಎಂದು ಸಚಿವರು ನಿರ್ದೇಶಿಸುವಂತಿಲ್ಲ. ಭಾರತ ಮಾತೆಯ ಯಾವ ಚಿತ್ರವನ್ನು ಬಳಸಬೇಕೆಂದು ಹೇಳುವ ಹಕ್ಕು ಸಚಿವರಿಗೆ ಇಲ್ಲ” ಎಂದು ರಾಜ್ಯಪಾಲರದ ಮೂಲವನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆಪರೇಷನ್ ಸಿಂಧೂರ್: ಮೇಣದಬತ್ತಿಯ ಬೆಳಕಿನಿಂದ ಬ್ರಹ್ಮೋಸ್‌ ಮಾದರಿಗೆ ಬದಲಾವಣೆ” ಎಂಬ ವಿಚಾರದ ಕುರಿತು ರಾಜಭವನದಲ್ಲಿ ಆರೆಸ್ಸೆಸ್‌ ನಾಯಕ ಗುರುಮೂರ್ತಿ ಮಾಡಿದ ಭಾಷಣದ ಎರಡು ವಾರಗಳ ನಂತರ ಈ ಘಟನೆ ನಡೆದಿದೆ. ಈ ಘಟನೆಯನ್ನು ವಿಪಕ್ಷ ಕಾಂಗ್ರೆಸ್ ಕೂಡಾ ವಿರೋಧಿಸಿದ್ದು, “ರಾಜಭವನದನ್ನು ಆರ್‌ಎಸ್‌ಎಸ್ ಪ್ರಧಾನ ಕಚೇರಿಯಾಗಿ ಪರಿವರ್ತಿಸಲಾಗುತ್ತಿದೆ” ಎಂದು ಹೇಳಿತ್ತು.

ಆರೆಸ್ಸೆಸ್ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ ಬಳಸಿರುವ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕ ವಿ ಡಿ ಸತೀಸನ್ ಅವರು, ರಾಜಭವನದಲ್ಲಿ ಭಾರತ ಮಾತೆಯ ಚಿತ್ರವನ್ನು ಬಳಸುವುದು “ಸರಿಯಲ್ಲ” ಎಂದು ಹೇಳಿದ್ದಾರೆ.

“ವಾರಗಳ ಹಿಂದೆ, ಆರ್‌ಎಸ್‌ಎಸ್ ಸಿದ್ಧಾಂತವಾದಿ ಗುರುಮೂರ್ತಿ ಅವರನ್ನು ಭಾಷಣಕ್ಕಾಗಿ ರಾಜಭವನಕ್ಕೆ ಕರೆತರಲಾಯಿತು. ಅವರು ಮಾಜಿ ಪ್ರಧಾನಿಗಳನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದರು. ಮುಖ್ಯಮಂತ್ರಿ ವಿಜಯನ್ ಅದರ ಬಗ್ಗೆ ಏಕೆ ಮೌನವಾಗಿದ್ದಾರೆ? ಅವರು ರಾಜ್ಯಪಾಲರ ಬಗ್ಗೆ ಮಾತನಾಡಲು ಹೆದರುತ್ತಾರೆ. ರಾಜಭವನವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದನ್ನು ಅಂತಹ ರಾಜಕೀಯ ಕಾರ್ಯಕ್ರಮಗಳಿಗೆ ವೇದಿಕೆಯನ್ನಾಗಿ ಮಾಡಬಾರದು” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕದ ಹೋರಾಟಗಾರರೊಬ್ಬರು, ರಾಜ್ಯ ವಿಧಾನಸಭೆಯಲ್ಲಿ ಕೂಡಾ ಪ್ರತಿ ಶುಕ್ರವಾರ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸದೆ ಯಾವ ಕೆಲಸವೂ ಪ್ರಾರಂಭವಾಗುವುದಿಲ್ಲ. ರಾಜ್ಯದ ಸರ್ಕಾರಿ ಕಚೇರಿ, ಕಾರ್ಯಾಲಯ ಹಾಗೂ ಪೊಲೀಸ್ ಠಾಣೆಗಳು ಸೇರಿದಂತೆ ಪೂಜೆ ಪುರಸ್ಕಾರಗಳು ನಡೆಯುತ್ತವೆ. ಇವೆಲ್ಲವೂ ಅಸಂವಿಧಾನಿಕ ಆಚರಣಗಳು, ಜಾತ್ಯಾತೀತ ನಾಡಿನಲ್ಲಿ ಧಾರ್ಮಿಕ ತಟಸ್ಥತೆ ಇರಬೇಕಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡಾ ಈ ಬಗ್ಗೆ ಗಮನವಹಿಸಬೇಕು” ಎಂದು ಹೇಳಿದ್ದಾರೆ.  ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...