Homeಮುಖಪುಟರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

ಆರೆಸ್ಸೆಸ್‌ನ ಬಾವುಟ ಹಿಡಿದ ಭಾರತ ಮಾತೆಯ ಚಿತ್ರವನ್ನು ಸರ್ಕಾರಿ ಕಾರ್ಯಕ್ರಮದಲ್ಲಿ ಇರಿಸಿದ್ದನ್ನು ವಿರೋಧಿಸಿ, ಕೇರಳ ಸರ್ಕಾರವು ರಾಜಭವನದಲ್ಲಿ ನಡೆದ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿದೆ. ರಾಜಭವನದ ಕೇಂದ್ರ ಸಭಾಂಗಣದಲ್ಲಿ ಗುರುವಾರ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ  ಇರಿಸಲಾಗಿದ್ದ ಚಿತ್ರವು ಆರ್‌ಎಸ್‌ಎಸ್ ಹೆಚ್ಚಾಗಿ ಬಳಸುವ ಭಾರತ ಮಾತೆಯ ಚಿತ್ರ ಎಂದು ಸರ್ಕಾರ ವಾದಿಸಿದೆ. ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ

ಚಿತ್ರವನ್ನು ಬದಲಾಯಿಸುವಂತೆ ಕೇಳಿದ್ದ ಸರ್ಕಾರದ ವಿನಂತಿಯನ್ನು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ತಿರಸ್ಕರಿಸಿದ ನಂತರ, ರಾಜ್ಯದ ಕೃಷಿ ಇಲಾಖೆಯು ಸಮಾರಂಭವನ್ನು ಸರ್ಕಾರಿ ಸಚಿವಾಲಯದ ದರ್ಬಾರ್ ಹಾಲ್‌ಗೆ ಸ್ಥಳಾಂತರಿಸಿದೆ.

ಪ್ರಸ್ತುತ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಈ ವರ್ಷದ ಆರಂಭದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ರಾಜಭವನದ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು ಇದೇ ಮೊದಲು.

ರಾಜ್ಯಪಾಲರನ್ನು ಮುಖ್ಯ ಅತಿಥಿಯಾಗಿಟ್ಟುಕೊಂಡು ರಾಜಭವನದಲ್ಲಿ ಪರಿಸರ ದಿನಾಚರಣೆಯ ರಾಜ್ಯ ಮಟ್ಟದ ಉದ್ಘಾಟನೆಯನ್ನು ಕೃಷಿ ಇಲಾಖೆ ಯೋಜಿಸಿತ್ತು. ರಾಜಭವನದ ಕೇಂದ್ರ ಸಭಾಂಗಣದಲ್ಲಿ ನಡೆದ ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಕೃಷಿ ಇಲಾಖೆಯ ಅಧಿಕಾರಿಗಳು, ಸ್ಥಳದಲ್ಲಿ ಬಳಸಬೇಕಾದ ಭಾರತ ಮಾತೆಯ ಚಿತ್ರವು ಸಂಘ ಪರಿವಾರವು ಸಾಮಾನ್ಯವಾಗಿ ಬಳಸುವ ಆರೆಸ್ಸೆಸ್‌ನ ಭಾವುಟ ಹಿಡಿದ ಚಿತ್ರವಾಗಿದೆ ಎಂದು ಗಮನಿಸಿದ್ದಾರೆ. ಇದರ ನಂತರ ಅವರು ಸಿಪಿಐ ನಾಯಕ ಮತ್ತು ಕೃಷಿ ಸಚಿವ ಪಿ ಪ್ರಸಾದ್ ಅವರೊಂದಿಗೆ ಈ ವಿಷಯವನ್ನು ಚರ್ಚಿಸಿದ್ದರು, ಅವರು ಚಿತ್ರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪರಿಣಾಮವಾಗಿ, ಇಲಾಖೆಯು ರಾಜ್ಯ ಸಚಿವಾಲಯದ ದರ್ಬಾರ್ ಸಭಾಂಗಣದಲ್ಲಿ ತನ್ನದೇ ಆದ ಕಾರ್ಯವನ್ನು ನಡೆಸಿದೆ. ರಾಜಭವನದಲ್ಲಿ ಕಾರ್ಯಕ್ರಮವನ್ನು ಸರ್ಕಾರ ಯೋಜಿಸಿತ್ತು ಆದರೆ ಫೋಟೋದ ಬಗ್ಗೆ ರಾಜ್ಯಪಾಲರೊಂದಿಗೆ ಉಂಟಾದ ಬಿಕ್ಕಟ್ಟಿನ ನಂತರ ಅದರ ಸ್ಥಳವನ್ನು ಬದಲಾಯಿಸಿದೆ ಎಂದು ಸಚಿವ ಪಿ. ಪ್ರಸಾದ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಸ್ಥಳದಲ್ಲಿ (ರಾಜಭವನದ ಕೇಂದ್ರ ಸಭಾಂಗಣ) ಪ್ರದರ್ಶಿಸಲಾದ ಭಾರತ ಮಾತೆಯ ಚಿತ್ರವು ಆರ್‌ಎಸ್‌ಎಸ್ ಬಳಸುವಂತಹ ಚಿತ್ರವಾಗಿದೆ. ಸಾಂವಿಧಾನಿಕ ಸಂಸ್ಥೆಯ ಹುದ್ದೆಯು ಅದನ್ನು ಬಳಸಬಾರದು. ಸಾಂವಿಧಾನಿಕವಾಗಿ, ಸರ್ಕಾರಿ ಸಮಾರಂಭದಲ್ಲಿ ಆ ಚಿತ್ರವನ್ನು ಬಳಸುವುದು ಸೂಕ್ತವಲ್ಲ. ರಾಜ್ಯಪಾಲರು ಆ ಚಿತ್ರವನ್ನು ಬಳಸಬೇಕೆಂದು ಒತ್ತಾಯಿಸಿದರು, ಆದರೆ ನಾವು ಆ ನಿರ್ಧಾರವನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ, ಸರ್ಕಾರಿ ಕಾರ್ಯಕ್ರಮವನ್ನು ರಾಜಭವನದಿಂದ ಹೊರಗೆ ಸ್ಥಳಾಂತರಿಸಲಾಯಿತು, ”ಎಂದು ಅವರು ಹೇಳಿದ್ದಾರೆ.

ಈ ವಿವಾದದ ಬಗ್ಗೆ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜಭವನದಲ್ಲಿ ನಡೆದ ಮತ್ತೊಂದು ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ, “ಸಚಿವರು ಭಾರತ ಮಾತೆಯ ಭಾವಚಿತ್ರವನ್ನು ಡಯಾಸ್‌ನಿಂದ ತೆಗೆದುಹಾಕಬೇಕೆಂದು ಬಯಸಿದ್ದರು. ನಾವು ಭಾರತ ಮಾತೆಯನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ತಿಳಿಸಿದ್ದೇನೆ. ಭಾರತ ಮಾತೆಯನ್ನು ದೂರವಿಡಲು ಸಾಧ್ಯವಿಲ್ಲ… ಯಾವುದೇ ಕಡೆಯಿಂದ ಏನೇ ಒತ್ತಡ ಬಂದರೂ, ಭಾರತ ಮಾತೆಯ ಬಗ್ಗೆ ಯಾವುದೇ ರಾಜಿ ಇರುವುದಿಲ್ಲ.” ಎಂದು ಹೇಳಿದ್ದಾರೆ.

ರಾಜಭವನದಲ್ಲಿ ಏನು ಬಳಸಬೇಕು ಅಥವಾ ಬಳಸಬಾರದು ಎಂದು ಸಚಿವರು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ರಾಜಭವನದ ಮೂಲಗಳು ತಿಳಿಸಿವೆ. ರಾಜಭವನದಲ್ಲಿ ಕಾರ್ಯಕ್ರಮವು ಯೋಜಿಸಿದಂತೆ ನಡೆಯಿತು ಮತ್ತು ಅದರಲ್ಲಿ “ರಾಜ್ಯಪಾಲರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು” ಎಂದು ಮೂಲಗಳು ತಿಳಿಸಿವೆ. “ರಾಜಭವನದಲ್ಲಿ ಕಾರ್ಯಕ್ರಮ ನಡೆಯುತ್ತಿರುವಾಗ, ಏನು ಬಳಸಬೇಕು ಮತ್ತು ಏನು ಬಳಸಬಾರದು ಎಂದು ಸಚಿವರು ನಿರ್ದೇಶಿಸುವಂತಿಲ್ಲ. ಭಾರತ ಮಾತೆಯ ಯಾವ ಚಿತ್ರವನ್ನು ಬಳಸಬೇಕೆಂದು ಹೇಳುವ ಹಕ್ಕು ಸಚಿವರಿಗೆ ಇಲ್ಲ” ಎಂದು ರಾಜ್ಯಪಾಲರದ ಮೂಲವನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆಪರೇಷನ್ ಸಿಂಧೂರ್: ಮೇಣದಬತ್ತಿಯ ಬೆಳಕಿನಿಂದ ಬ್ರಹ್ಮೋಸ್‌ ಮಾದರಿಗೆ ಬದಲಾವಣೆ” ಎಂಬ ವಿಚಾರದ ಕುರಿತು ರಾಜಭವನದಲ್ಲಿ ಆರೆಸ್ಸೆಸ್‌ ನಾಯಕ ಗುರುಮೂರ್ತಿ ಮಾಡಿದ ಭಾಷಣದ ಎರಡು ವಾರಗಳ ನಂತರ ಈ ಘಟನೆ ನಡೆದಿದೆ. ಈ ಘಟನೆಯನ್ನು ವಿಪಕ್ಷ ಕಾಂಗ್ರೆಸ್ ಕೂಡಾ ವಿರೋಧಿಸಿದ್ದು, “ರಾಜಭವನದನ್ನು ಆರ್‌ಎಸ್‌ಎಸ್ ಪ್ರಧಾನ ಕಚೇರಿಯಾಗಿ ಪರಿವರ್ತಿಸಲಾಗುತ್ತಿದೆ” ಎಂದು ಹೇಳಿತ್ತು.

ಆರೆಸ್ಸೆಸ್ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ ಬಳಸಿರುವ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕ ವಿ ಡಿ ಸತೀಸನ್ ಅವರು, ರಾಜಭವನದಲ್ಲಿ ಭಾರತ ಮಾತೆಯ ಚಿತ್ರವನ್ನು ಬಳಸುವುದು “ಸರಿಯಲ್ಲ” ಎಂದು ಹೇಳಿದ್ದಾರೆ.

“ವಾರಗಳ ಹಿಂದೆ, ಆರ್‌ಎಸ್‌ಎಸ್ ಸಿದ್ಧಾಂತವಾದಿ ಗುರುಮೂರ್ತಿ ಅವರನ್ನು ಭಾಷಣಕ್ಕಾಗಿ ರಾಜಭವನಕ್ಕೆ ಕರೆತರಲಾಯಿತು. ಅವರು ಮಾಜಿ ಪ್ರಧಾನಿಗಳನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದರು. ಮುಖ್ಯಮಂತ್ರಿ ವಿಜಯನ್ ಅದರ ಬಗ್ಗೆ ಏಕೆ ಮೌನವಾಗಿದ್ದಾರೆ? ಅವರು ರಾಜ್ಯಪಾಲರ ಬಗ್ಗೆ ಮಾತನಾಡಲು ಹೆದರುತ್ತಾರೆ. ರಾಜಭವನವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದನ್ನು ಅಂತಹ ರಾಜಕೀಯ ಕಾರ್ಯಕ್ರಮಗಳಿಗೆ ವೇದಿಕೆಯನ್ನಾಗಿ ಮಾಡಬಾರದು” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕದ ಹೋರಾಟಗಾರರೊಬ್ಬರು, ರಾಜ್ಯ ವಿಧಾನಸಭೆಯಲ್ಲಿ ಕೂಡಾ ಪ್ರತಿ ಶುಕ್ರವಾರ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸದೆ ಯಾವ ಕೆಲಸವೂ ಪ್ರಾರಂಭವಾಗುವುದಿಲ್ಲ. ರಾಜ್ಯದ ಸರ್ಕಾರಿ ಕಚೇರಿ, ಕಾರ್ಯಾಲಯ ಹಾಗೂ ಪೊಲೀಸ್ ಠಾಣೆಗಳು ಸೇರಿದಂತೆ ಪೂಜೆ ಪುರಸ್ಕಾರಗಳು ನಡೆಯುತ್ತವೆ. ಇವೆಲ್ಲವೂ ಅಸಂವಿಧಾನಿಕ ಆಚರಣಗಳು, ಜಾತ್ಯಾತೀತ ನಾಡಿನಲ್ಲಿ ಧಾರ್ಮಿಕ ತಟಸ್ಥತೆ ಇರಬೇಕಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡಾ ಈ ಬಗ್ಗೆ ಗಮನವಹಿಸಬೇಕು” ಎಂದು ಹೇಳಿದ್ದಾರೆ.  ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...