Homeಕರ್ನಾಟಕ‘ಹಂದಿಗಳೊಂದಿಗೆ...' | ಕೇಂದ್ರ ಸಚಿವ ಕುಮಾರಸ್ವಾಮಿಗೆ ಎಡಿಜಿಪಿ ತೀಕ್ಷ್ಣ ಪ್ರತಿಕ್ರಿಯೆ

‘ಹಂದಿಗಳೊಂದಿಗೆ…’ | ಕೇಂದ್ರ ಸಚಿವ ಕುಮಾರಸ್ವಾಮಿಗೆ ಎಡಿಜಿಪಿ ತೀಕ್ಷ್ಣ ಪ್ರತಿಕ್ರಿಯೆ

- Advertisement -
- Advertisement -

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಇತ್ತಿಚೆಗಿನ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್‌ಐಟಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ ಚಂದ್ರಶೇಖರ್ ಅವರು ‘ಹಂದಿಗಳೊಂದಿಗೆ ಎಂದಿಗೂ ಗುದ್ದಾಡಬೇಡಿ’ ಎಂದು ಹೇಳಿದ್ದಾರೆ. ಹಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೆಪ್ಟಂಬರ್ 28 ರಂದು ಎಸ್‌ಐಟಿ ಸಿಬ್ಬಂದಿಗೆ ಪತ್ರ ಬರೆದಿರುವ ಚಂದ್ರಶೇಖರ್ ಅವರು, ಕೇಂದ್ರ ಸಚಿವರನ್ನು “ಎಸ್‌ಐಟಿಯ ಅಪರಾಧ ಸಂಖ್ಯೆ 16/14” ಆರೋಪಿ ಎಂದು ಉಲ್ಲೇಖಿಸಿದ್ದಾರೆ ಮತ್ತು ಕುಮಾರಸ್ವಾಮಿ ಅವರು “ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳು ಮತ್ತು ಬೆದರಿಕೆಗಳನ್ನು” ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂಓದಿ: ಅಂಗಡಿ ಮಾಲೀಕರ ಗುರುತು ವಿವಾದ | ಖರ್ಗೆ ಭೇಟಿಯಾದ ಹಿಮಾಚಲ ಸಚಿವ ವಿಕ್ರಮಾದಿತ್ಯ ಸಿಂಗ್

ಜಾರ್ಜ್ ಬರ್ನಾರ್ಡ್ ಶಾ ಉಲ್ಲೇಖವನ್ನು ಉಲ್ಲೇಖಿಸಿದ ಅವರು “ಹಂದಿಗಳೊಂದಿಗೆ ಎಂದಿಗೂ ಗುದ್ದಾಡಬೇಡಿ. ಇಬ್ಬರೂ ಕೊಳಕಾಗುತ್ತೀರಿ ಮತ್ತು ಹಂದಿ ಕೂಡಾ ಅದನ್ನು ಇಷ್ಟಪಡುತ್ತದೆ” ಎಂದು ಹೇಳಿದ್ದಾರೆ. ನಮ್ಮ ಕರ್ತವ್ಯ ನಿರ್ವಹಣೆಯ ಸಮಯದಲ್ಲಿ ಅಪರಾಧಿಗಳು ಮತ್ತು ಆರೋಪಿಗಳನ್ನು ಎದುರಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ಕೆಲವೊಮ್ಮೆ ನಾವು ಎದುರಿಸುವ ಅಪರಾಧಿಗಳು ಮತ್ತು ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ಇದು ಕರ್ತವ್ಯ ನಿರ್ವಹಿಸುವ ನಮ್ಮನ್ನು ತಡೆಯುವಂತೆ ಆಗಬಾರದು” ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಹಂದಿ

ಬೆಂಗಳೂರಿನ ಗಂಗೇನಹಳ್ಳಿಯಲ್ಲಿ 1.1 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿರುವ ಬಗ್ಗೆ ಕುಮಾರಸ್ವಾಮಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ, ಚಂದ್ರಶೇಖರ್ ಅವರು ಕಾಂಗ್ರೆಸ್ ರಕ್ಷಣೆಯಲ್ಲಿ ಭ್ರಷ್ಟಾಚಾರ ಮತ್ತು ಪುರಾವೆಗಳ ಕಟ್ಟುಕಥೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದರು.

ಇದನ್ನೂಓದಿ: ಕೇರಳ | ಆರೆಸ್ಸೆಸ್‌ ನಾಯಕರ ಭೇಟಿಯಾದ ಎಡಿಜಿಪಿ ಪದಚ್ಯುತಿಗೆ ಸಿಪಿಐ ಆಗ್ರಹ

ಚಂದ್ರಶೇಖರ್ ಅವರ ಪತ್ರಕ್ಕೆ ಭಾನುವಾರ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, “ಚಂದ್ರಶೇಖರ್ ಅಧಿಕಾರಿಯ ಸೋಗಿನಲ್ಲಿ ಕ್ರಿಮಿನಲ್ ಆಗಿದ್ದು, ಅವರ ವಿರುದ್ಧ ಸರಣಿ ಅಪರಾಧ ಎಸಗಿರುವ ಆರೋಪವಿದೆ,” ಎಂದು ಹೇಳಿದ್ದಾರೆ.

ಚಂದ್ರಶೇಖರ್ ಅವರ ಪತ್ರದಲ್ಲಿ, “ಎಸ್‌ಐಟಿ ಆರೋಪಿಗೆ ಸಕ್ಷಮ ಪ್ರಾಧಿಕಾರದಿಂದ ಪ್ರಾಸಿಕ್ಯೂಷನ್ ಮಂಜೂರು ಮಾಡುವಂತೆ ಕೋರಿತ್ತು ಮತ್ತು ಅವರು ಜಾಮೀನಿನಲ್ಲಿದ್ದರು. ನಮ್ಮ ಕರ್ತವ್ಯವನ್ನು ನಿಭಾಯಿಸದಂತೆ ನಮ್ಮನ್ನು ತಡೆಯಲು ಕುಮಾರಸ್ವಾಮಿ ಈ ರೀತಿ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ನನ್ನ ಮೇಲೆ ದಾಳಿ ಮಾಡುವ ಮೂಲಕ ಎಸ್‌ಐಟಿ ಅಧಿಕಾರಿಗಳ ಮನಸ್ಸಿನಲ್ಲಿ ಭಯ ಮೂಡಿಸುವುದು ಅವರ ಉದ್ದೇಶವಾಗಿದೆ. ಆದರೆ ಒಬ್ಬ ಆರೋಪಿ, ಎಷ್ಟೇ ಉನ್ನತ ಮತ್ತು ಶಕ್ತಿಶಾಲಿಯಾಗಿದ್ದರೂ, ಆತ ಆರೋಪಿಯೆ ಆಗಿದ್ದಾನೆ” ಎಂದು ಹೇಳಿದ್ದಾರೆ.

ಇದನ್ನೂಓದಿ: ಆದೇಶವನ್ನು ಉಲ್ಲಂಘಿಸಿ ಅಕ್ರಮ ಧ್ವಂಸ | ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಅಸ್ಸಾಂ ನಿವಾಸಿಗಳು

2006ರಿಂದ 2007ರ ಅವಧಿಯಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ಗಣಿ ಗುತ್ತಿಗೆ ನೀಡಿಕೆಯಲ್ಲಿನ ಅಕ್ರಮಗಳ ಕುರಿತು ಐಪಿಎಸ್ ಅಧಿಕಾರಿಯಾಗಿರುವ ಚಂದ್ರಶೇಖರ್ ಅವರು ತನಿಖೆ ನಡೆಸುತ್ತಿದ್ದಾರೆ. ಈ ವರ್ಷದ ಆಗಸ್ಟ್‌ನಲ್ಲಿ ಅವರ ಅಧೀನದಲ್ಲಿರುವ ಎಸ್‌ಐಟಿ ಕೇಂದ್ರ ಸಚಿವರ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿ ರಾಜ್ಯಪಾಲರಿಗೆ ಹೆಚ್ಚುವರಿ ದಾಖಲೆಗಳನ್ನು ಕೋರಿತ್ತು.

ಚಂದ್ರಶೇಖರ್ ವಿರುದ್ಧ ಕಿರಿಯ ಅಧಿಕಾರಿಯೊಬ್ಬರು ನೀಡಿದ ದೂರಿನ ಪ್ರತಿಯನ್ನು ಕುಮಾರಸ್ವಾಮಿ ಬಿಡುಗಡೆ ಮಾಡಿದ ಮರುದಿನ ಚಂದ್ರಶೇಖರ್ ಅವರು ಈ ಪತ್ರ ಬರೆದಿದ್ದಾರೆ. ಚಂದ್ರಶೇಖರ್ ಅವರು “ಅಕ್ರಮ ನಿರ್ಮಾಣ ಮತ್ತು ಅತಿಕ್ರಮಣ” ದಲ್ಲಿ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದ್ದಾರೆ.

ವಿಡಿಯೊ ನೋಡಿ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಾಮಕುಮಾರ್ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...