Homeಕರ್ನಾಟಕಶಾಸಕರು, ಪರಿಷತ್ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ ಪ್ರಶ್ನಿಸಿ ಪಿಐಎಲ್ : ಫೆ.21ಕ್ಕೆ ವಿಚಾರಣೆ

ಶಾಸಕರು, ಪರಿಷತ್ ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ ಪ್ರಶ್ನಿಸಿ ಪಿಐಎಲ್ : ಫೆ.21ಕ್ಕೆ ವಿಚಾರಣೆ

- Advertisement -
- Advertisement -

ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ನೀಡಿ ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಕೆಯಾಗಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (ಕೆಸ್‌ಪಿಸಿಬಿ) ಕೆಲಸ ಮಾಡುತ್ತಿರುವ ಬೆಂಗಳೂರು ನಗರದ ನಿವಾಸಿ ಸೂರಿ ಪಾಯಲ ಅವರು ಪಿಐಎಲ್‌ ಸಲ್ಲಿಸಿದ್ದಾರೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗುರುವಾರ (ಫೆ13) ಪಿಐಎಲ್‌ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ಮುಂದೂಡಿದೆ.

ಅರ್ಜಿದಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಸಾಯಿ ದೀಪಕ್ ಅವರು, “ಶಾಸಕರು, ವಿಧಾನಪರಿಷತ್ ಸದಸ್ಯರನ್ನು ನಿಗಮ-ಮಂಡಳಿಗಳಿಗೆ ನೇಮಕ ಮಾಡಿರುವುದು ಸಮಸ್ಯೆಯಲ್ಲದಿದ್ದರೂ, ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುತ್ತಿರುವುದು ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಯಾಗಿದೆ” ಎಂದು ವಾದಿಸಿದ್ದಾರೆ.

“ಅರ್ಜಿದಾರರಿಗೆ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರನ್ನು ನಿಗಮ-ಮಂಡಳಿ ಹುದ್ದೆಗಳಿಗೆ ನೇಮಕ ಮಾಡುವುದರಿಂದ ಯಾವುದೇ ಸಮಸ್ಯೆ ಇಲ್ಲ” ಎಂದಿದ್ದಾರೆ.

“ಸಂವಿಧಾನದ ವಿಧಿ 164 (1ಎ) ಅಡಿಯಲ್ಲಿ ಶಾಸಕಾಂಗ ಸಭೆಯ ಒಟ್ಟು ಸದಸ್ಯರಲ್ಲಿ ಕೇವಲ 15 ಪ್ರತಿಶತದಷ್ಟು ಮಂದಿಗೆ ಮಾತ್ರ ಸಂಪುಟ ದರ್ಜೆಯ ಸ್ಥಾನಮಾನ ನೀಡಬೇಕು. ಕರ್ನಾಟಕಕ್ಕೆ ಸಂಬಂಧಿಸಿದಂತೆ 34 ಜನರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಬಹುದು. ಸಚಿವ ಸಂಪುಟದಲ್ಲಿ ಈಗಾಗಲೇ 33 ಸದಸ್ಯರಿದ್ದಾರೆ” ಎಂದು ವಕೀಲ ಸಾಯಿ ದೀಪಕ್ ಹೇಳಿದ್ದಾರೆ.

ಅರ್ಜಿದಾರರು ತನ್ನ ಅರ್ಜಿಯಲ್ಲಿ ಆರ್‌ವಿ ದೇಶಪಾಂಡೆ, ಎ.ಎಸ್ ಪೊನ್ನಣ್ಣ, ವಿನಯ್ ಕುಲಕರ್ಣಿ, ಎನ್‌.ಎ ಹ್ಯಾರಿಸ್ ಮತ್ತು ಇತರರು ಸೇರಿದಂತೆ 42 ಜನರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ ಮಾಡಿರುವುದನ್ನು ಉಲ್ಲೇಖಿಸಿದ್ದಾರೆ. ಅವರ ನೇಮಕಾತಿಗಳನ್ನು ರದ್ದುಗೊಳಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಈ ಶಾಸಕರು ಮತ್ತು ಪರಿಷತ್ ಸದಸ್ಯರು ನಿಗಮ-ಮಂಡಳಿಗಳ ಅಧ್ಯಕ್ಷರಾಗಿ, ಮುಖ್ಯಮಂತ್ರಿಯ ಕಾನೂನು ಸಲಹೆಗಾರರಾಗಿ, ಮುಖ್ಯಮಂತ್ರಿಯ ಸಲಹೆಗಾರರಾಗಿ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳಾಗಿ ಮತ್ತು ನವದೆಹಲಿ ವಿಶೇಷ ಪ್ರತಿನಿಧಿಯಾಗಿ ಹುದ್ದೆಗಳನ್ನು ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಎಲ್ಲಾ ಹುದ್ದೆಗಳಿಗೆ ಸಂಪುಟ ದರ್ಜೆಯ ಸ್ಥಾನಮಾನ ಮತ್ತು ಸಂಬಂಧಿತ ಸವಲತ್ತುಗಳು ನೀಡುವ ಮೂಲಕ ಸಂವಿಧಾನದ ವಿಧಿ 102 (ಲಾಭದಾಯಕ ಹುದ್ದೆ ಹೊಂದಿರುವ ಸದಸ್ಯರನ್ನು ಅನರ್ಹಗೊಳಿಸುವುದು) ಮತ್ತು ವಿಧಿ 191 (ಲಾಭದಾಯಕ ಹುದ್ದೆ)ರಲ್ಲಿ ಪ್ರತಿಪಾದಿಸಲಾದ ನಿಬಂಧನೆಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಹುದ್ದೆಗಳಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವುದು ಮಂತ್ರಿ ಮಂಡಳಿಯ ಗಾತ್ರವನ್ನು ನಿರ್ಬಂಧಿಸುವ ವಿಧಿ 164 (1ಎ) ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 10ರ ಉಲ್ಲಂಘನೆಯಾಗಿದೆ. ಇದು ಸರ್ಕಾರದ ಅಡಿಯಲ್ಲಿ ಲಾಭದಾಯಕ ಹುದ್ದೆ ಹೊಂದಿರುವ ಸದಸ್ಯರನ್ನು ಅನರ್ಹಗೊಳಿಸುತ್ತದೆ ಎಂದು ಹೇಳಲಾಗಿದೆ.

“ಅಧ್ಯಕ್ಷರಾಗಿ ನೇಮಕಗೊಂಡ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಹೆಚ್ಚಾಗಿ ಬೆಂಗಳೂರಿನ ಹೊರಗೆ ವಾಸಿಸುವುದರಿಂದ ಅವರ ಕ್ಷೇತ್ರದ ಕರ್ತವ್ಯಗಳನ್ನು ನಿರ್ವಹಿಸುವುದು ಅಪ್ರಾಯೋಗಿಕವಾಗುತ್ತದೆ. ಹೆಚ್ಚಿನ ಪ್ರಯಾಣ ಸಮಸ್ಯೆಗಳು ಎರಡೂ ಹುದ್ದೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗದಂತೆ ಮಾಡುತ್ತದೆ. ನೇಮಕಾತಿಗಳು ಮತ್ತು ಈ ಸದಸ್ಯರಿಗೆ ನೀಡಲಾಗುವ ಹೆಚ್ಚುವರಿ ಸವಲತ್ತುಗಳು ನೀಡುವುದು ಶಾಸಕಾಂಗ ಪ್ರಕ್ರಿಯೆ ಮೇಲಿನ ಸಾರ್ವಜನಿಕರ ನಂಬಿಕೆ ಕ್ಷೀಣಿಸುವಂತೆ ಮಾಡುತ್ತದೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗೆ ಕಾನೂನು ಜಾರಿ : ಮುಖ್ಯಾಂಶಗಳು ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...