Homeಮುಖಪುಟರಾಮಮಂದಿರ ಪ್ರಾಣಪ್ರತಿಷ್ಠಾನ: ಮೋದಿ, ಯೋಗಿಗೆ ನಿರ್ಬಂಧ ವಿಧಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ರಾಮಮಂದಿರ ಪ್ರಾಣಪ್ರತಿಷ್ಠಾನ: ಮೋದಿ, ಯೋಗಿಗೆ ನಿರ್ಬಂಧ ವಿಧಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

- Advertisement -
- Advertisement -

ರಾಮಮಂದಿರದ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ನಾಲ್ಕು ದಿನಗಳು ಬಾಕಿ ಇದೆ. ಈ ಮಧ್ಯೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ಸಲ್ಲಿಸಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಗಾಝಿಯಾಬಾದ್ ಜಿಲ್ಲೆಯ ಭೋಲಾ ದಾಸ್ ಎಂಬವರು ಈ ಬಗ್ಗೆ ಮೊದಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, 2024ರ ಸಂಸತ್ತಿನ ಚುನಾವಣೆ ಮುಗಿಯುವವರೆಗೆ ಅಯೋಧ್ಯೆಯಲ್ಲಿ ನಡೆಯುವ ಪ್ರಾಣ-ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾರತದ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಭಾಗವಹಿಸಲು ಅವಕಾಶ ನೀಡದಂತೆ ನ್ಯಾಯಾಲಯದ ನಿರ್ದೇಶನವನ್ನು ಕೋರಿದ್ದಾರೆ.

ಸನಾತನ ಧರ್ಮದ ಶಂಕರಾಚಾರ್ಯರುಗಳ ಅನುಮತಿ ದೊರೆಯುವ ತನಕ ನ್ಯಾಯದ ಹಿತಾಸಕ್ತಿಯಿಂದ ಮೇಲಿನ ನಿರ್ಬಂಧಗಳನ್ನು ಪ್ರಧಾನಿ ಹಾಗೂ ಉತ್ತರಪ್ರದೇಶ ಸಿಎಂಗೆ ಹೇರಬೇಕೆಂದೂ ಪಿಐಎಲ್‌ನಲ್ಲಿ ಕೋರಲಾಗಿದೆ.

ಪಿಐಎಲ್‌ನಲ್ಲಿ ಅರ್ಜಿದಾರರು ಕೆಂದ್ರ ಸರಕಾರ, ಪ್ರಧಾನಿ, ಯುಪಿ ಮುಖ್ಯಮಂತ್ರಿ, ಯುಪಿ ರಾಜ್ಯ ಮತ್ತು ನಾಲ್ವರು ಶಂಕರಾಚಾರ್ಯರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ. ಆಡಳಿತಾರೂಢ ಬಿಜೆಪಿಯು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಮತ್ತು ಲೋಕಸಭೆ ಚುನಾವಣೆಗೆ ಮುಂದಿರುವ ಪಕ್ಷದ ರಾಜಕೀಯ ಹಿತಾಸಕ್ತಿಯಲ್ಲಿ ಸನಾತನ ಸಂಸ್ಕೃತಿಯನ್ನು ನಾಶಪಡಿಸುತ್ತಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ನಿರ್ಬಂಧ ವಿಧಿಸಲು ಕೂಡ ಅರ್ಜಿದಾರರು ಆಗ್ರಹಿಸಿದ್ದಾರೆ. ಹಿಂದೂ ಪಂಚಾಂಗದ ಪ್ರಕಾರ, ಪುಷ್ಯ ಮಾಸದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ಆಯೋಜಿಸಬಾರದು. ಅಲ್ಲದೆ ದೇವಾಲಯ ಇನ್ನೂ ನಿರ್ಮಾಣ ಹಂತದಲ್ಲಿದ್ದು, ಉದ್ಘಾಟನೆ ಸನಾತನ ಸಂಪ್ರದಾಯಕ್ಕೆ ವ್ಯತಿರಿಕ್ತವಾಗಿರುವುದರಿಂದ ದೇವರ ಪ್ರತಿಷ್ಠಾಪನೆ ಮಾಡಬಾರದು ಎಂದು ಅರ್ಜಿದಾರರು ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಶಂಕರಾಚಾರ್ಯರ ಆಕ್ಷೇಪವಿದೆ. ದೇವಾಲಯ ಅಪೂರ್ಣವಾಗಿದ್ದು, ದೇವರ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಸನಾತನ ಧರ್ಮದ ಆಚರಣೆಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ಬಿಜೆಪಿ ಈ ಸಮಾರಂಭ ಹಮ್ಮಿಕೊಂಡಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಈ ಮೊದಲು ರಾಮಂದಿರದ ಕಾಮಗಾರಿ ಪೂರ್ತಿಯಾಗದೆ ಪ್ರಾಣ ಪ್ರತಿಷ್ಠಾಪನೆಗೆ ಶಂಕಾರಾಚಾರ್ಯ ಮಠದ ನಾಲ್ವರು ಪ್ರಸಿದ್ದ ಮಠಾದೀಶರು ವಿರೋಧವನ್ನು ವ್ಯಕ್ತಪಡಿಸಿದ್ದರು. ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ ಮತ್ತು ಸಂವಿಧಾನವೂ ಇದನ್ನು ಅನುಮತಿಸುವುದಿಲ್ಲ ಎಂದು ಪುರಿಯ ಶಂಕರಾಚಾರ್ಯ ಮಠದ ನಿಶ್ಚಲಾನಂದ ಸರಸ್ವತಿ ಅವರು ಹೇಳಿದ್ದರು.

ಸಮಾರಂಭದಲ್ಲಿ ಶಾಸ್ತ್ರಗಳನ್ನು ಪಾಲಿಸದ ಕಾರಣ ಉದ್ಘಾಟನೆಗೆ ಬರುವುದಿಲ್ಲ. ಧರ್ಮಗ್ರಂಥಗಳ ಪ್ರಕಾರ ಪ್ರಾಣ ಪ್ರತಿಷ್ಟಾಪನೆಗೆ ನಿಯಮಗಳಿವೆ ಮತ್ತು ಪ್ರಧಾನ ಮಂತ್ರಿ ಅವುಗಳನ್ನು ಅನುಸರಿಸಬೇಕು. ಒಬ್ಬರ ಹೆಸರನ್ನು ಪ್ರಚಾರ ಮಾಡಲು ಈ ನಿಯಮಗಳನ್ನು ಮೀರುವುದು ವಿನಾಶದ ಹಾದಿಯಲ್ಲಿ ಹೋಗುವುದಾಗಿದೆ ಎಂದು ಶಂಕರಾಚಾರ್ಯರು ಹೇಳಿದ್ದರು.

ಜ.4ರಂದು ಸುದ್ದಿಗಾರರ ಜೊತೆ ಮಾತನಾಡಿದ್ದ ಪುರಿ ಶಂಕರಾಚಾರ್ಯರು, ನನಗೆ ನನ್ನ ಸ್ಥಾನದ ಘನತೆಯ ಅರಿವಿದೆ. ಹೀಗಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಲ್ಲಿ ಭಾಗವಹಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ರಾಮ ಮಂದಿರವನ್ನು ಉದ್ಘಾಟಿಸುತ್ತಾರೆ. ಅವರು ವಿಗ್ರಹವನ್ನು ಸ್ಪರ್ಶಿಸುತ್ತಾರೆ. ಆಗ ನಾನು ಏನು ಮಾಡಬೇಕು? ನಿಂತುಕೊಂಡು ಚಪ್ಪಾಳೆ ಹೊಡೆಯಬೇಕೇ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...