Homeಮುಖಪುಟರಾಮಮಂದಿರ ಪ್ರಾಣಪ್ರತಿಷ್ಠಾನ: ಮೋದಿ, ಯೋಗಿಗೆ ನಿರ್ಬಂಧ ವಿಧಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ರಾಮಮಂದಿರ ಪ್ರಾಣಪ್ರತಿಷ್ಠಾನ: ಮೋದಿ, ಯೋಗಿಗೆ ನಿರ್ಬಂಧ ವಿಧಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

- Advertisement -
- Advertisement -

ರಾಮಮಂದಿರದ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ನಾಲ್ಕು ದಿನಗಳು ಬಾಕಿ ಇದೆ. ಈ ಮಧ್ಯೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ಸಲ್ಲಿಸಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಗಾಝಿಯಾಬಾದ್ ಜಿಲ್ಲೆಯ ಭೋಲಾ ದಾಸ್ ಎಂಬವರು ಈ ಬಗ್ಗೆ ಮೊದಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, 2024ರ ಸಂಸತ್ತಿನ ಚುನಾವಣೆ ಮುಗಿಯುವವರೆಗೆ ಅಯೋಧ್ಯೆಯಲ್ಲಿ ನಡೆಯುವ ಪ್ರಾಣ-ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾರತದ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಭಾಗವಹಿಸಲು ಅವಕಾಶ ನೀಡದಂತೆ ನ್ಯಾಯಾಲಯದ ನಿರ್ದೇಶನವನ್ನು ಕೋರಿದ್ದಾರೆ.

ಸನಾತನ ಧರ್ಮದ ಶಂಕರಾಚಾರ್ಯರುಗಳ ಅನುಮತಿ ದೊರೆಯುವ ತನಕ ನ್ಯಾಯದ ಹಿತಾಸಕ್ತಿಯಿಂದ ಮೇಲಿನ ನಿರ್ಬಂಧಗಳನ್ನು ಪ್ರಧಾನಿ ಹಾಗೂ ಉತ್ತರಪ್ರದೇಶ ಸಿಎಂಗೆ ಹೇರಬೇಕೆಂದೂ ಪಿಐಎಲ್‌ನಲ್ಲಿ ಕೋರಲಾಗಿದೆ.

ಪಿಐಎಲ್‌ನಲ್ಲಿ ಅರ್ಜಿದಾರರು ಕೆಂದ್ರ ಸರಕಾರ, ಪ್ರಧಾನಿ, ಯುಪಿ ಮುಖ್ಯಮಂತ್ರಿ, ಯುಪಿ ರಾಜ್ಯ ಮತ್ತು ನಾಲ್ವರು ಶಂಕರಾಚಾರ್ಯರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ. ಆಡಳಿತಾರೂಢ ಬಿಜೆಪಿಯು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಮತ್ತು ಲೋಕಸಭೆ ಚುನಾವಣೆಗೆ ಮುಂದಿರುವ ಪಕ್ಷದ ರಾಜಕೀಯ ಹಿತಾಸಕ್ತಿಯಲ್ಲಿ ಸನಾತನ ಸಂಸ್ಕೃತಿಯನ್ನು ನಾಶಪಡಿಸುತ್ತಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ನಿರ್ಬಂಧ ವಿಧಿಸಲು ಕೂಡ ಅರ್ಜಿದಾರರು ಆಗ್ರಹಿಸಿದ್ದಾರೆ. ಹಿಂದೂ ಪಂಚಾಂಗದ ಪ್ರಕಾರ, ಪುಷ್ಯ ಮಾಸದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ಆಯೋಜಿಸಬಾರದು. ಅಲ್ಲದೆ ದೇವಾಲಯ ಇನ್ನೂ ನಿರ್ಮಾಣ ಹಂತದಲ್ಲಿದ್ದು, ಉದ್ಘಾಟನೆ ಸನಾತನ ಸಂಪ್ರದಾಯಕ್ಕೆ ವ್ಯತಿರಿಕ್ತವಾಗಿರುವುದರಿಂದ ದೇವರ ಪ್ರತಿಷ್ಠಾಪನೆ ಮಾಡಬಾರದು ಎಂದು ಅರ್ಜಿದಾರರು ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಶಂಕರಾಚಾರ್ಯರ ಆಕ್ಷೇಪವಿದೆ. ದೇವಾಲಯ ಅಪೂರ್ಣವಾಗಿದ್ದು, ದೇವರ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಸನಾತನ ಧರ್ಮದ ಆಚರಣೆಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ಬಿಜೆಪಿ ಈ ಸಮಾರಂಭ ಹಮ್ಮಿಕೊಂಡಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಈ ಮೊದಲು ರಾಮಂದಿರದ ಕಾಮಗಾರಿ ಪೂರ್ತಿಯಾಗದೆ ಪ್ರಾಣ ಪ್ರತಿಷ್ಠಾಪನೆಗೆ ಶಂಕಾರಾಚಾರ್ಯ ಮಠದ ನಾಲ್ವರು ಪ್ರಸಿದ್ದ ಮಠಾದೀಶರು ವಿರೋಧವನ್ನು ವ್ಯಕ್ತಪಡಿಸಿದ್ದರು. ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ ಮತ್ತು ಸಂವಿಧಾನವೂ ಇದನ್ನು ಅನುಮತಿಸುವುದಿಲ್ಲ ಎಂದು ಪುರಿಯ ಶಂಕರಾಚಾರ್ಯ ಮಠದ ನಿಶ್ಚಲಾನಂದ ಸರಸ್ವತಿ ಅವರು ಹೇಳಿದ್ದರು.

ಸಮಾರಂಭದಲ್ಲಿ ಶಾಸ್ತ್ರಗಳನ್ನು ಪಾಲಿಸದ ಕಾರಣ ಉದ್ಘಾಟನೆಗೆ ಬರುವುದಿಲ್ಲ. ಧರ್ಮಗ್ರಂಥಗಳ ಪ್ರಕಾರ ಪ್ರಾಣ ಪ್ರತಿಷ್ಟಾಪನೆಗೆ ನಿಯಮಗಳಿವೆ ಮತ್ತು ಪ್ರಧಾನ ಮಂತ್ರಿ ಅವುಗಳನ್ನು ಅನುಸರಿಸಬೇಕು. ಒಬ್ಬರ ಹೆಸರನ್ನು ಪ್ರಚಾರ ಮಾಡಲು ಈ ನಿಯಮಗಳನ್ನು ಮೀರುವುದು ವಿನಾಶದ ಹಾದಿಯಲ್ಲಿ ಹೋಗುವುದಾಗಿದೆ ಎಂದು ಶಂಕರಾಚಾರ್ಯರು ಹೇಳಿದ್ದರು.

ಜ.4ರಂದು ಸುದ್ದಿಗಾರರ ಜೊತೆ ಮಾತನಾಡಿದ್ದ ಪುರಿ ಶಂಕರಾಚಾರ್ಯರು, ನನಗೆ ನನ್ನ ಸ್ಥಾನದ ಘನತೆಯ ಅರಿವಿದೆ. ಹೀಗಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಲ್ಲಿ ಭಾಗವಹಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ರಾಮ ಮಂದಿರವನ್ನು ಉದ್ಘಾಟಿಸುತ್ತಾರೆ. ಅವರು ವಿಗ್ರಹವನ್ನು ಸ್ಪರ್ಶಿಸುತ್ತಾರೆ. ಆಗ ನಾನು ಏನು ಮಾಡಬೇಕು? ನಿಂತುಕೊಂಡು ಚಪ್ಪಾಳೆ ಹೊಡೆಯಬೇಕೇ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...