Homeಮುಖಪುಟರಾಜಸ್ಥಾನ: ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ರಾಜಸ್ಥಾನ: ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

- Advertisement -
- Advertisement -

ರಾಜಸ್ಥಾನದ ನೂತನ ಬಿಜೆಪಿ ಸರ್ಕಾರದ ಉಪ ಮುಖ್ಯಮಂತ್ರಿಗಳಾಗಿ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರು ಪ್ರಮಾಣ ವಚನ ಸ್ವೀಕರಿಸಿರುವುದನ್ನು ಪ್ರಶ್ನಿಸಿ ಶನಿವಾರ ರಾಜಸ್ಥಾನ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ಸಲ್ಲಿಕೆಯಾಗಿದೆ.

ವಕೀಲ ಓಂ ಪ್ರಕಾಶ್ ಸೋಲಂಕಿ ಎಂಬವರು ಉಪ ಮುಖ್ಯಮಂತ್ರಿಗಳ ನೇಮಕವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಈಗಾಗಲೇ ರಾಜಸ್ಥಾನದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಕಗೊಳಿಸಿರುವುದನ್ನು ರದ್ದುಪಡಿಸುವಂತೆ ಕೋರಿದ್ದಾರೆ.

“ಸಂವಿಧಾನವು ಉಪಮುಖ್ಯಮಂತ್ರಿ ಹುದ್ದೆಗೆ ಮಾನ್ಯತೆ ನೀಡಿಲ್ಲ” ಎಂದು ಅರ್ಜಿದಾರ ಸೋಲಂಕಿ ಪ್ರತಿಪಾದಿಸಿದ್ದಾರೆ.

ಡಿಸೆಂಬರ್ 15 ಶುಕ್ರವಾರ, ಬಿಜೆಪಿ ನಾಯಕ ಭಜನ್ ಲಾಲ್ ಶರ್ಮಾ ರಾಜಸ್ಥಾನದ ನೂತನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉಪ ಮುಖ್ಯಮಂತ್ರಿಗಳಾಗಿ ದಿಯಾ ಕುಮಾರಿ ಮತ್ತು ಬೈರ್ವಾ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ.

ಉಪಮುಖ್ಯಮಂತ್ರಿ ಹುದ್ದೆ ಅಸಂವಿಧಾನಿಕವೇ?

ಉಪ ಮುಖ್ಯಮಂತ್ರಿ ಹುದ್ದೆಗಾಗಲಿ, ಉಪಪ್ರಧಾನಿ ಹುದ್ದೆಗಾಗಲಿ ಸಾಂವಿಧಾನಿಕ ಮಾನ್ಯತೆಯೇ ಇಲ್ಲ. ಸಂವಿಧಾನದಲ್ಲಿ ಈ ಬಗ್ಗೆ ಎಲ್ಲಿಯೂ ಉಲ್ಲೇಖವಿಲ್ಲ. ಆರ್ಟಿಕಲ್ 163 ಪ್ರಕಾರ ಮುಖ್ಯಮಂತ್ರಿ ನೇತೃತ್ವದ ಸಚಿವ ಸಂಪುಟ ಇದ್ದು, ಅದು ರಾಜ್ಯಪಾಲರಿಗೆ ಅವರ ಕಾರ್ಯಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಆರ್ಟಿಕಲ್ 164ರ ಪ್ರಕಾರ ರಾಜ್ಯಪಾಲರು ಮುಖ್ಯಮಂತ್ರಿಯನ್ನು ನೇಮಕ ಮಾಡುತ್ತಾರೆ. ಹಾಗೆಯೇ ಮುಖ್ಯಮಂತ್ರಿಯ ಸಲಹೆಯ ಮೇರೆಗೆ ಇತರ ಸಚಿವರನ್ನೂ ಸಹ ರಾಜ್ಯಪಾಲರು ನೇಮಿಸುತ್ತಾರೆ. ಒಟ್ಟಾರೆ ಸಚಿವ ಸಂಪುಟವು ರಾಜ್ಯ ವಿಧಾನಸಭೆಗೆ ಉತ್ತರದಾಯಿತ್ವವಾಗಿರುತ್ತದೆ.

ಸಂವಿಧಾನ 3ನೇ ಶೆಡ್ಯೂಲ್‌ನಲ್ಲಿ ತಿಳಿಸಿರುವ ಹಾಗೆ ರಾಜ್ಯಪಾಲರು ಸಚಿವರಿಗೂ ಪ್ರತಿಜ್ಷಾವಿಧಿಯನ್ನು ಭೋದಿಸುತ್ತಾರೆ. ಇದನ್ನು ಗಮನಿಸಿದರೆ ಸಂವಿಧಾನದ ಪ್ರಕಾರ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರು ಮಾತ್ರವೆ ಇರುತ್ತಾರೆ. ಮುಖ್ಯಮಂತ್ರಿಯನ್ನು ಬಿಟ್ಟು ಉಳಿದವ ಶಾಸಕರು ಯಾರೇ ಪ್ರಮಾಣವಚನ ಸ್ವೀಕರಿಸುವಾಗಲೂ ಸಚಿವರೆಂದು ಸ್ವೀಕರಿಸಬೇಕೆ ಹೊರತು, ಇಂಥ ಇಲಾಖೆಯ ಸಚಿವ ಎಂದಲ್ಲ. ಹಾಗಾಗಿ ಉಪಮುಖ್ಯಮಂತ್ರಿಯಾದವರಿಗೆ ಅಥವಾ ಉಪಪ್ರಧಾನಿಯಾದವರಿಗೆ ಸಂವಿಧಾನ ಬದ್ದವಾದ ಯಾವುದೇ ವಿಷೇಶವಾದ ಅಧಿಕಾರಗಳು ಇರುವುದಿಲ್ಲ.

ಇದನ್ನೂ ಓದಿ: ಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...