Homeಮುಖಪುಟರಾಜಸ್ಥಾನ: ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ರಾಜಸ್ಥಾನ: ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

- Advertisement -
- Advertisement -

ರಾಜಸ್ಥಾನದ ನೂತನ ಬಿಜೆಪಿ ಸರ್ಕಾರದ ಉಪ ಮುಖ್ಯಮಂತ್ರಿಗಳಾಗಿ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರು ಪ್ರಮಾಣ ವಚನ ಸ್ವೀಕರಿಸಿರುವುದನ್ನು ಪ್ರಶ್ನಿಸಿ ಶನಿವಾರ ರಾಜಸ್ಥಾನ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ಸಲ್ಲಿಕೆಯಾಗಿದೆ.

ವಕೀಲ ಓಂ ಪ್ರಕಾಶ್ ಸೋಲಂಕಿ ಎಂಬವರು ಉಪ ಮುಖ್ಯಮಂತ್ರಿಗಳ ನೇಮಕವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಈಗಾಗಲೇ ರಾಜಸ್ಥಾನದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಕಗೊಳಿಸಿರುವುದನ್ನು ರದ್ದುಪಡಿಸುವಂತೆ ಕೋರಿದ್ದಾರೆ.

“ಸಂವಿಧಾನವು ಉಪಮುಖ್ಯಮಂತ್ರಿ ಹುದ್ದೆಗೆ ಮಾನ್ಯತೆ ನೀಡಿಲ್ಲ” ಎಂದು ಅರ್ಜಿದಾರ ಸೋಲಂಕಿ ಪ್ರತಿಪಾದಿಸಿದ್ದಾರೆ.

ಡಿಸೆಂಬರ್ 15 ಶುಕ್ರವಾರ, ಬಿಜೆಪಿ ನಾಯಕ ಭಜನ್ ಲಾಲ್ ಶರ್ಮಾ ರಾಜಸ್ಥಾನದ ನೂತನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉಪ ಮುಖ್ಯಮಂತ್ರಿಗಳಾಗಿ ದಿಯಾ ಕುಮಾರಿ ಮತ್ತು ಬೈರ್ವಾ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ.

ಉಪಮುಖ್ಯಮಂತ್ರಿ ಹುದ್ದೆ ಅಸಂವಿಧಾನಿಕವೇ?

ಉಪ ಮುಖ್ಯಮಂತ್ರಿ ಹುದ್ದೆಗಾಗಲಿ, ಉಪಪ್ರಧಾನಿ ಹುದ್ದೆಗಾಗಲಿ ಸಾಂವಿಧಾನಿಕ ಮಾನ್ಯತೆಯೇ ಇಲ್ಲ. ಸಂವಿಧಾನದಲ್ಲಿ ಈ ಬಗ್ಗೆ ಎಲ್ಲಿಯೂ ಉಲ್ಲೇಖವಿಲ್ಲ. ಆರ್ಟಿಕಲ್ 163 ಪ್ರಕಾರ ಮುಖ್ಯಮಂತ್ರಿ ನೇತೃತ್ವದ ಸಚಿವ ಸಂಪುಟ ಇದ್ದು, ಅದು ರಾಜ್ಯಪಾಲರಿಗೆ ಅವರ ಕಾರ್ಯಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಆರ್ಟಿಕಲ್ 164ರ ಪ್ರಕಾರ ರಾಜ್ಯಪಾಲರು ಮುಖ್ಯಮಂತ್ರಿಯನ್ನು ನೇಮಕ ಮಾಡುತ್ತಾರೆ. ಹಾಗೆಯೇ ಮುಖ್ಯಮಂತ್ರಿಯ ಸಲಹೆಯ ಮೇರೆಗೆ ಇತರ ಸಚಿವರನ್ನೂ ಸಹ ರಾಜ್ಯಪಾಲರು ನೇಮಿಸುತ್ತಾರೆ. ಒಟ್ಟಾರೆ ಸಚಿವ ಸಂಪುಟವು ರಾಜ್ಯ ವಿಧಾನಸಭೆಗೆ ಉತ್ತರದಾಯಿತ್ವವಾಗಿರುತ್ತದೆ.

ಸಂವಿಧಾನ 3ನೇ ಶೆಡ್ಯೂಲ್‌ನಲ್ಲಿ ತಿಳಿಸಿರುವ ಹಾಗೆ ರಾಜ್ಯಪಾಲರು ಸಚಿವರಿಗೂ ಪ್ರತಿಜ್ಷಾವಿಧಿಯನ್ನು ಭೋದಿಸುತ್ತಾರೆ. ಇದನ್ನು ಗಮನಿಸಿದರೆ ಸಂವಿಧಾನದ ಪ್ರಕಾರ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರು ಮಾತ್ರವೆ ಇರುತ್ತಾರೆ. ಮುಖ್ಯಮಂತ್ರಿಯನ್ನು ಬಿಟ್ಟು ಉಳಿದವ ಶಾಸಕರು ಯಾರೇ ಪ್ರಮಾಣವಚನ ಸ್ವೀಕರಿಸುವಾಗಲೂ ಸಚಿವರೆಂದು ಸ್ವೀಕರಿಸಬೇಕೆ ಹೊರತು, ಇಂಥ ಇಲಾಖೆಯ ಸಚಿವ ಎಂದಲ್ಲ. ಹಾಗಾಗಿ ಉಪಮುಖ್ಯಮಂತ್ರಿಯಾದವರಿಗೆ ಅಥವಾ ಉಪಪ್ರಧಾನಿಯಾದವರಿಗೆ ಸಂವಿಧಾನ ಬದ್ದವಾದ ಯಾವುದೇ ವಿಷೇಶವಾದ ಅಧಿಕಾರಗಳು ಇರುವುದಿಲ್ಲ.

ಇದನ್ನೂ ಓದಿ: ಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...