Homeಚಳವಳಿಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಸುಪ್ರೀಂ ಕೋರ್ಟ್‌‌ನಲ್ಲಿ ಪಿಐಎಲ್‌ ಸಲ್ಲಿಕೆ

ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಸುಪ್ರೀಂ ಕೋರ್ಟ್‌‌ನಲ್ಲಿ ಪಿಐಎಲ್‌ ಸಲ್ಲಿಕೆ

ಅರ್ಜಿಯು ಕೇಂದ್ರದ ಹೊರತಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಗೋವಾ, ಅಸ್ಸಾಂ, ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳನ್ನು ಪ್ರತಿವಾದಿ ಪಕ್ಷಗಳನ್ನಾಗಿ ಮಾಡಿದೆ.

- Advertisement -
- Advertisement -

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯು ಕಾರ್ಮಿಕರು ಶಾಂತಿಯುತವಾಗಿ ಪ್ರತಿಭಟಿಸುವ, ಒಕ್ಕೂಟಗಳನ್ನು ಅಥವಾ ಸಂಘಗಳನ್ನು ರಚಿಸುವ ಹಕ್ಕನ್ನು ನಿರಾಕರಿಸುತ್ತದೆ ಎಂದು ವಾದಿಸಿ ಕೇರಳ ಮೂಲದ ಕಾನೂನು ವಿದ್ಯಾರ್ಥಿಯೊಬ್ಬರು ಸುಪ್ರೀಂ ಕೋರ್ಟ್‌‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

COVID-19 ಸಾಂಕ್ರಾಮಿಕದ ಮಧ್ಯೆ ಕಾರ್ಮಿಕ ಕಾನೂನುಗಳಲ್ಲಿ ಮಾಡಿದ ಬದಲಾವಣೆಗಳು, ಆರ್ಥಿಕ ಚಟುವಟಿಕೆ ಮತ್ತು ಮಾರುಕಟ್ಟೆ ಸುಧಾರಣೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದು ವಾಸ್ತವದಲ್ಲಿ ಕಾರ್ಮಿಕರನ್ನು ಬಲವಂತದ ದುಡಿಮೆಗೆ ತಳ್ಳುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಕೆಲವು ರಾಜ್ಯ ಸರ್ಕಾರಗಳು ಹೊರಡಿಸಿದ ಸುಗ್ರೀವಾಜ್ಞೆಗಳು ಮತ್ತು ಅಧಿಸೂಚನೆಗಳು “ದೇಶದ ಕಾರ್ಮಿಕ ಕಾನೂನು ಚೌಕಟ್ಟಿನಲ್ಲಿ ಮೂಲಭೂತ ಬದಲಾವಣೆಗಳನ್ನು ಮಾಡಿವೆ” ಎಂದು ವಕೀಲರಾದ ಕಲೀಶ್ವರಂ ರಾಜ್  ಮತ್ತು ವಕೀಲ ನಿಶೆ ರಾಜೇನ್ ಶೋಂಕರ್ ಮೂಲಕ ಅರ್ಜಿ ಸಲ್ಲಿಸಿರುವ ನಂದಿನಿ ಪ್ರವೀಣ್ ಅವರು ದೂರಿದ್ದಾರೆ.

ಅರ್ಜಿಯು ಕೇಂದ್ರದ ಹೊರತಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಗೋವಾ, ಅಸ್ಸಾಂ, ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳನ್ನು ಪ್ರತಿವಾದಿ ಪಕ್ಷಗಳನ್ನಾಗಿ ಮಾಡಿದೆ.

ಹರಿಯಾಣ, ಅಸ್ಸಾಂ, ಪಂಜಾಬ್ ಮತ್ತು ಗೋವಾ ರಾಜ್ಯಗಳು ಕೆಲಸದ ಅವಧಿಯನ್ನು ವಿಸ್ತರಿಸುವ ಅಧಿಸೂಚನೆಗಳನ್ನು ನೀಡಿವೆ ಎಂದು ಅದು ಹೇಳಿದೆ.

ಉತ್ತರ ಪ್ರದೇಶದ ಸುಗ್ರೀವಾಜ್ಞೆಯು “ಉತ್ಪಾದನಾ ಪ್ರಕ್ರಿಯೆಯಲ್ಲಿ ತೊಡಗಿರುವ ಎಲ್ಲಾ ಕಾರ್ಖಾನೆಗಳು ಮತ್ತು ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಮಿಕ ಕಾನೂನುಗಳ ಕಾರ್ಯಾಚರಣೆಯನ್ನು ಕೆಲವು ಷರತ್ತುಗಳಿಗೆ ಒಳಪಟ್ಟಿ ಮೂರು ವರ್ಷಗಳ ಅವಧಿಗೆ ವಿನಾಯಿತಿ ನೀಡಲಾಗುವುದು” ಎಂದು ಹೇಳಿದೆ.

“ವೇತನ ಸಂಹಿತೆಯನ್ನು ಅಮಾನತುಗೊಳಿಸಲಾಗಿದೆ ಮತ್ತು ವೇತನ ಪಾವತಿ ಕಾಯ್ದೆಯನ್ನು ರದ್ದುಗೊಳಿಸಲಾಗಿರುವುದರಿಂದ, ಕಾರ್ಖಾನೆಗಳು ಮತ್ತು ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಸಮಯೋಚಿತ ವೇತನವನ್ನು ನೀಡಲು ಯಾವುದೇ ಶಾಸನಬದ್ಧ ಬಾಧ್ಯತೆಯಿರುವುಲ್ಲ. ಆದ್ದರಿಂದ, ಸುಗ್ರೀವಾಜ್ಞೆಯು ಮೂಲಭೂತವಾಗಿ ಈ ಸಂಸ್ಥೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ರದ್ದುಗೊಳಿಸಲು ಕಾರಣವಾಗಿದೆ” ಎಂದು ಉತ್ತರ ಪ್ರದೇಶಕ್ಕೆ ಸಂಬಂಧಿಸಿದಂತೆ ಅರ್ಜಿಯಲ್ಲಿ ತಿಳಿಸಲಾಗಿದೆ.

“ಕಾರ್ಮಿಕರ ಕಲ್ಯಾಣ ಮತ್ತು ಆರೋಗ್ಯ ಕ್ರಮಗಳನ್ನು ಸ್ಥಗಿತಗೊಳಿಸುವ ಮೂಲಕ ಮತ್ತು ಕೆಲಸದ ಸಮಯವನ್ನು ಹೆಚ್ಚಿಸುವುದು 1982 ರ ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (ಪಿಯುಡಿಆರ್) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯು ಕಾರ್ಮಿಕರು ಶಾಂತಿಯುತವಾಗಿ ಪ್ರತಿಭಟಿಸುವ, ಒಕ್ಕೂಟಗಳನ್ನು ಅಥವಾ ಸಂಘಗಳನ್ನು ರಚಿಸುವ ಹಕ್ಕನ್ನು ನಿರಾಕರಿಸುತ್ತದೆ. ಕಾರ್ಮಿಕ ಸಂಘಗಳ ಮಾನ್ಯತೆ ಸ್ಥಗಿತಗೊಳ್ಳಲಿದೆ. ಈ ಹೊಸ ಕಾನೂನುಗಳು ಕಾರ್ಮಿಕರ ಆರೋಗ್ಯದ ಹಕ್ಕು, ವಿರಾಮ, ಸುರಕ್ಷಿತ ಕೆಲಸದ ಪರಿಸ್ಥಿತಿಗಳ ಮೇಲೆ ಪರಿಣಾಮ ಬೀರುತ್ತವೆ. ಅದು ಸಂವಿಧಾನದ 21 ನೇ ಪರಿಚ್ಛೇಧದ ಅಡಿಯಲ್ಲಿ ಜೀವಿಸುವ ಹಕ್ಕಿನ ವ್ಯಾಪ್ತಿಯಲ್ಲಿ ಬರುತ್ತದೆ. ಕಾರ್ಮಿಕ ಕಾನೂನುಗಳ ಕುರಿತಾದ ಅಂತರರಾಷ್ಟ್ರೀಯ ಚೌಕಟ್ಟನ್ನು ಈ ತಿದ್ದುಪಡಿಗಳು ಉಲ್ಲಂಘಿಸಿವೆ ಎಂದು ಆರೋಪಿಸಲಾಗಿದೆ.

ಕೈಗಾರಿಕಾ ವಿವಾದ ಕಾಯ್ದೆ

ಅನ್ಯಾಯದ ಕಾರ್ಮಿಕ ಪದ್ಧತಿಗಳನ್ನು ನಿಷೇಧಿಸುವ ನಿರ್ಣಾಯಕ ಕಾನೂನಾದ ಕೈಗಾರಿಕಾ ವಿವಾದ ಕಾಯ್ದೆಯ ವ್ಯಾಪ್ತಿಯಿಂದ ಕೆಲವು ರಾಜ್ಯಗಳು ಕಾರ್ಖಾನೆಗಳಿಗೆ ವಿನಾಯಿತಿ ನೀಡಿವೆ ಎಂದು ಅರ್ಜಿಯಲ್ಲಿ ಸೂಚಿಸಲಾಗಿದೆ.

“ವಿವಾದಗಳ ತನಿಖೆ ಮತ್ತು ಇತ್ಯರ್ಥಕ್ಕೆ ಸಾಕಷ್ಟು ಯಾಂತ್ರಿಕ ವ್ಯವಸ್ಥೆ ಇಲ್ಲದಿದ್ದರೆ ಯಾವುದೇ ರಾಜ್ಯ ಸರ್ಕಾರವು ಕಾಯ್ದೆಯಲ್ಲಿ ವಿನಾಯಿತಿ ನೀಡಲು ಅನುಮತಿಸುವುದಿಲ್ಲ. ಇದು ಪೂರ್ವಾಪೇಕ್ಷಿತವಾಗಿದೆ. ಎರಡನೆಯದಾಗಿ, COVID-19 ಸಾಂಕ್ರಾಮಿಕದಂತಹ ಬಿಕ್ಕಟ್ಟಿನಲ್ಲಿ, ಯಾವುದೇ ಪರ್ಯಾಯವಿಲ್ಲದೆ ಇಡೀ ಕಾಯಿದೆಗೆ ವಿನಾಯಿತಿ ನೀಡಲು ರಾಜ್ಯಗಳಿಗೆ ಅಧಿಕಾರವಿಲ್ಲ ಎಂದು ಅದು ವಾದಿಸಿದೆ.

ಈ ಕುರಿತು ಅರ್ಜಿದಾರರ ಪರ ವಕೀಲರಲ್ಲಿ ಒಬ್ಬರಾದ ಮೈತ್ರೇಯಿ ಎಸ್‌ ಹೆಗಡೆಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ದೇಶ ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಮತ್ತುಷ್ಟು ಮಗದಷ್ಟು ದುಡಿಯಿರಿ ಎಂದು ಅದರ ಭಾರವನ್ನು ಕಾರ್ಮಿಕರ ಮೇಲೆ ಹಾಕುವುದು ಕಾನೂನಿಗೆ ವಿರುದ್ಧ ಎನ್ನುವುದಕ್ಕಿಂತ ಅಮಾನವೀಯ ಎನ್ನುವುದೇ ಸೂಕ್ತ. ಕೋವಿಡ್‌ನಿಂದಾಗಿ ಅತ್ಯಂತ ಕಷ್ಟಪಡುವ, ನಷ್ಟ ಅನುಭವಿಸುವ ವರ್ಗವೆಂದರೆ ಅದು ಕಾರ್ಮಿಕರಾಗಿದ್ದಾರೆ. ಅವರ ಮೇಲಿನ ಈ ದೌರ್ಜನ್ಯವನ್ನು ತಡೆಯಲು ನಾವು ಪಿಐಎಲ್‌ ಸಲ್ಲಿಸಿದ್ದೇವೆ ಎಂದರು.

ಉತ್ತರ ಪ್ರದೇಶ ಸರ್ಕಾರವು ಜನರ ಒತ್ತಡಕ್ಕೆ ಮಣಿದು ಕೆಲಸದ ಅವಧಿಯ ಹೆಚ್ಚಳವನ್ನು ಮಾತ್ರ ವಾಪಸ್‌ ಪಡೆದಿದ್ದಾರೆ. ಉಳಿದಂತೆ ವೇತನ ಕಾಯ್ದೆ, ಫ್ಯಾಕ್ಟರಿ ಕಾಯ್ದೆ ಮತ್ತು ಕೈಗಾರಿಕಾ ವಿವಾದ ಕಾಯ್ದೆಯ ಮೂಲಕ ಕಾರ್ಮಿಕರಿಗಿದ್ದ ಹಲವಾರು ಸೌಲಭ್ಯಗಳನ್ನು ಅಮಾನತ್ತು ಮಾಡಲಾಗಿದೆ. ಮಾಲೀಕರು ಕಾರ್ಮಿಕರಿಗೆ ಬೆದರಿಕೆ ಹಾಕುವ, ಕೆಲಸದಿಂದ ಕಿತ್ತೊಸೆಯಲು ಅವಕಾಶ ನೀಡಲಾಗಿದೆ. ಟ್ರಿಬ್ಯುನಲ್‌ಗಳನ್ನು ಕಿತ್ತುಹಾಕಲಾಗುತ್ತಿದೆ ಎಂದರು.

ಕರ್ನಾಟಕದಲ್ಲಿಯೂ ಕಾಯ್ದೆಗಳನ್ನು ಬಲಹೀನಗೊಳಿಸಲು ತಯಾರಿ ನಡೆಯುತ್ತಿದೆ. ಅದರ ಭಾಗವಾಗಿಯೇ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಬದಲಾವಣೆಯಾಗಿದೆ. ಕರ್ನಾಟಕ ಸರ್ಕಾರವು ಉಳಿದ ರಾಜ್ಯಗಳಲ್ಲಿನ ತಿದ್ದುಪಡಿಗೆ ಬರುತ್ತಿರುವ ವಿರೋಧ, ಪ್ರತಿಕ್ರಿಯೆಯ ಫಲಿತಾಂಶದ ಆಧಾರದಲ್ಲಿ ಕಾಯ್ದೆ ತಿದ್ದುಪಡಿ ಮಾಡಲು ಯೋಚಿಸುತ್ತಿದ್ದಾರೆ. ಖಂಡಿತವಾಗಿಯೂ ಅವರು ಅದನ್ನು ಇಲ್ಲಿಯೂ ತರುತ್ತಾರೆ ಎಂದು ವಿಷಾಧ ವ್ಯಕ್ತಪಡಿಸಿದರು.


ಇದನ್ನೂ ಓದಿ: ಕಾರ್ಮಿಕ ಕಾಯಿದೆಗಳ ರದ್ದು ಎಷ್ಟು ಸರಿ? – ಡಾ.ಚಂದ್ರಪೂಜಾರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...