Homeಚಳವಳಿಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಸುಪ್ರೀಂ ಕೋರ್ಟ್‌‌ನಲ್ಲಿ ಪಿಐಎಲ್‌ ಸಲ್ಲಿಕೆ

ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಸುಪ್ರೀಂ ಕೋರ್ಟ್‌‌ನಲ್ಲಿ ಪಿಐಎಲ್‌ ಸಲ್ಲಿಕೆ

ಅರ್ಜಿಯು ಕೇಂದ್ರದ ಹೊರತಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಗೋವಾ, ಅಸ್ಸಾಂ, ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳನ್ನು ಪ್ರತಿವಾದಿ ಪಕ್ಷಗಳನ್ನಾಗಿ ಮಾಡಿದೆ.

- Advertisement -
- Advertisement -

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯು ಕಾರ್ಮಿಕರು ಶಾಂತಿಯುತವಾಗಿ ಪ್ರತಿಭಟಿಸುವ, ಒಕ್ಕೂಟಗಳನ್ನು ಅಥವಾ ಸಂಘಗಳನ್ನು ರಚಿಸುವ ಹಕ್ಕನ್ನು ನಿರಾಕರಿಸುತ್ತದೆ ಎಂದು ವಾದಿಸಿ ಕೇರಳ ಮೂಲದ ಕಾನೂನು ವಿದ್ಯಾರ್ಥಿಯೊಬ್ಬರು ಸುಪ್ರೀಂ ಕೋರ್ಟ್‌‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

COVID-19 ಸಾಂಕ್ರಾಮಿಕದ ಮಧ್ಯೆ ಕಾರ್ಮಿಕ ಕಾನೂನುಗಳಲ್ಲಿ ಮಾಡಿದ ಬದಲಾವಣೆಗಳು, ಆರ್ಥಿಕ ಚಟುವಟಿಕೆ ಮತ್ತು ಮಾರುಕಟ್ಟೆ ಸುಧಾರಣೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದು ವಾಸ್ತವದಲ್ಲಿ ಕಾರ್ಮಿಕರನ್ನು ಬಲವಂತದ ದುಡಿಮೆಗೆ ತಳ್ಳುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಕೆಲವು ರಾಜ್ಯ ಸರ್ಕಾರಗಳು ಹೊರಡಿಸಿದ ಸುಗ್ರೀವಾಜ್ಞೆಗಳು ಮತ್ತು ಅಧಿಸೂಚನೆಗಳು “ದೇಶದ ಕಾರ್ಮಿಕ ಕಾನೂನು ಚೌಕಟ್ಟಿನಲ್ಲಿ ಮೂಲಭೂತ ಬದಲಾವಣೆಗಳನ್ನು ಮಾಡಿವೆ” ಎಂದು ವಕೀಲರಾದ ಕಲೀಶ್ವರಂ ರಾಜ್  ಮತ್ತು ವಕೀಲ ನಿಶೆ ರಾಜೇನ್ ಶೋಂಕರ್ ಮೂಲಕ ಅರ್ಜಿ ಸಲ್ಲಿಸಿರುವ ನಂದಿನಿ ಪ್ರವೀಣ್ ಅವರು ದೂರಿದ್ದಾರೆ.

ಅರ್ಜಿಯು ಕೇಂದ್ರದ ಹೊರತಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಗೋವಾ, ಅಸ್ಸಾಂ, ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳನ್ನು ಪ್ರತಿವಾದಿ ಪಕ್ಷಗಳನ್ನಾಗಿ ಮಾಡಿದೆ.

ಹರಿಯಾಣ, ಅಸ್ಸಾಂ, ಪಂಜಾಬ್ ಮತ್ತು ಗೋವಾ ರಾಜ್ಯಗಳು ಕೆಲಸದ ಅವಧಿಯನ್ನು ವಿಸ್ತರಿಸುವ ಅಧಿಸೂಚನೆಗಳನ್ನು ನೀಡಿವೆ ಎಂದು ಅದು ಹೇಳಿದೆ.

ಉತ್ತರ ಪ್ರದೇಶದ ಸುಗ್ರೀವಾಜ್ಞೆಯು “ಉತ್ಪಾದನಾ ಪ್ರಕ್ರಿಯೆಯಲ್ಲಿ ತೊಡಗಿರುವ ಎಲ್ಲಾ ಕಾರ್ಖಾನೆಗಳು ಮತ್ತು ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಮಿಕ ಕಾನೂನುಗಳ ಕಾರ್ಯಾಚರಣೆಯನ್ನು ಕೆಲವು ಷರತ್ತುಗಳಿಗೆ ಒಳಪಟ್ಟಿ ಮೂರು ವರ್ಷಗಳ ಅವಧಿಗೆ ವಿನಾಯಿತಿ ನೀಡಲಾಗುವುದು” ಎಂದು ಹೇಳಿದೆ.

“ವೇತನ ಸಂಹಿತೆಯನ್ನು ಅಮಾನತುಗೊಳಿಸಲಾಗಿದೆ ಮತ್ತು ವೇತನ ಪಾವತಿ ಕಾಯ್ದೆಯನ್ನು ರದ್ದುಗೊಳಿಸಲಾಗಿರುವುದರಿಂದ, ಕಾರ್ಖಾನೆಗಳು ಮತ್ತು ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಸಮಯೋಚಿತ ವೇತನವನ್ನು ನೀಡಲು ಯಾವುದೇ ಶಾಸನಬದ್ಧ ಬಾಧ್ಯತೆಯಿರುವುಲ್ಲ. ಆದ್ದರಿಂದ, ಸುಗ್ರೀವಾಜ್ಞೆಯು ಮೂಲಭೂತವಾಗಿ ಈ ಸಂಸ್ಥೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ರದ್ದುಗೊಳಿಸಲು ಕಾರಣವಾಗಿದೆ” ಎಂದು ಉತ್ತರ ಪ್ರದೇಶಕ್ಕೆ ಸಂಬಂಧಿಸಿದಂತೆ ಅರ್ಜಿಯಲ್ಲಿ ತಿಳಿಸಲಾಗಿದೆ.

“ಕಾರ್ಮಿಕರ ಕಲ್ಯಾಣ ಮತ್ತು ಆರೋಗ್ಯ ಕ್ರಮಗಳನ್ನು ಸ್ಥಗಿತಗೊಳಿಸುವ ಮೂಲಕ ಮತ್ತು ಕೆಲಸದ ಸಮಯವನ್ನು ಹೆಚ್ಚಿಸುವುದು 1982 ರ ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (ಪಿಯುಡಿಆರ್) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯು ಕಾರ್ಮಿಕರು ಶಾಂತಿಯುತವಾಗಿ ಪ್ರತಿಭಟಿಸುವ, ಒಕ್ಕೂಟಗಳನ್ನು ಅಥವಾ ಸಂಘಗಳನ್ನು ರಚಿಸುವ ಹಕ್ಕನ್ನು ನಿರಾಕರಿಸುತ್ತದೆ. ಕಾರ್ಮಿಕ ಸಂಘಗಳ ಮಾನ್ಯತೆ ಸ್ಥಗಿತಗೊಳ್ಳಲಿದೆ. ಈ ಹೊಸ ಕಾನೂನುಗಳು ಕಾರ್ಮಿಕರ ಆರೋಗ್ಯದ ಹಕ್ಕು, ವಿರಾಮ, ಸುರಕ್ಷಿತ ಕೆಲಸದ ಪರಿಸ್ಥಿತಿಗಳ ಮೇಲೆ ಪರಿಣಾಮ ಬೀರುತ್ತವೆ. ಅದು ಸಂವಿಧಾನದ 21 ನೇ ಪರಿಚ್ಛೇಧದ ಅಡಿಯಲ್ಲಿ ಜೀವಿಸುವ ಹಕ್ಕಿನ ವ್ಯಾಪ್ತಿಯಲ್ಲಿ ಬರುತ್ತದೆ. ಕಾರ್ಮಿಕ ಕಾನೂನುಗಳ ಕುರಿತಾದ ಅಂತರರಾಷ್ಟ್ರೀಯ ಚೌಕಟ್ಟನ್ನು ಈ ತಿದ್ದುಪಡಿಗಳು ಉಲ್ಲಂಘಿಸಿವೆ ಎಂದು ಆರೋಪಿಸಲಾಗಿದೆ.

ಕೈಗಾರಿಕಾ ವಿವಾದ ಕಾಯ್ದೆ

ಅನ್ಯಾಯದ ಕಾರ್ಮಿಕ ಪದ್ಧತಿಗಳನ್ನು ನಿಷೇಧಿಸುವ ನಿರ್ಣಾಯಕ ಕಾನೂನಾದ ಕೈಗಾರಿಕಾ ವಿವಾದ ಕಾಯ್ದೆಯ ವ್ಯಾಪ್ತಿಯಿಂದ ಕೆಲವು ರಾಜ್ಯಗಳು ಕಾರ್ಖಾನೆಗಳಿಗೆ ವಿನಾಯಿತಿ ನೀಡಿವೆ ಎಂದು ಅರ್ಜಿಯಲ್ಲಿ ಸೂಚಿಸಲಾಗಿದೆ.

“ವಿವಾದಗಳ ತನಿಖೆ ಮತ್ತು ಇತ್ಯರ್ಥಕ್ಕೆ ಸಾಕಷ್ಟು ಯಾಂತ್ರಿಕ ವ್ಯವಸ್ಥೆ ಇಲ್ಲದಿದ್ದರೆ ಯಾವುದೇ ರಾಜ್ಯ ಸರ್ಕಾರವು ಕಾಯ್ದೆಯಲ್ಲಿ ವಿನಾಯಿತಿ ನೀಡಲು ಅನುಮತಿಸುವುದಿಲ್ಲ. ಇದು ಪೂರ್ವಾಪೇಕ್ಷಿತವಾಗಿದೆ. ಎರಡನೆಯದಾಗಿ, COVID-19 ಸಾಂಕ್ರಾಮಿಕದಂತಹ ಬಿಕ್ಕಟ್ಟಿನಲ್ಲಿ, ಯಾವುದೇ ಪರ್ಯಾಯವಿಲ್ಲದೆ ಇಡೀ ಕಾಯಿದೆಗೆ ವಿನಾಯಿತಿ ನೀಡಲು ರಾಜ್ಯಗಳಿಗೆ ಅಧಿಕಾರವಿಲ್ಲ ಎಂದು ಅದು ವಾದಿಸಿದೆ.

ಈ ಕುರಿತು ಅರ್ಜಿದಾರರ ಪರ ವಕೀಲರಲ್ಲಿ ಒಬ್ಬರಾದ ಮೈತ್ರೇಯಿ ಎಸ್‌ ಹೆಗಡೆಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ದೇಶ ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಮತ್ತುಷ್ಟು ಮಗದಷ್ಟು ದುಡಿಯಿರಿ ಎಂದು ಅದರ ಭಾರವನ್ನು ಕಾರ್ಮಿಕರ ಮೇಲೆ ಹಾಕುವುದು ಕಾನೂನಿಗೆ ವಿರುದ್ಧ ಎನ್ನುವುದಕ್ಕಿಂತ ಅಮಾನವೀಯ ಎನ್ನುವುದೇ ಸೂಕ್ತ. ಕೋವಿಡ್‌ನಿಂದಾಗಿ ಅತ್ಯಂತ ಕಷ್ಟಪಡುವ, ನಷ್ಟ ಅನುಭವಿಸುವ ವರ್ಗವೆಂದರೆ ಅದು ಕಾರ್ಮಿಕರಾಗಿದ್ದಾರೆ. ಅವರ ಮೇಲಿನ ಈ ದೌರ್ಜನ್ಯವನ್ನು ತಡೆಯಲು ನಾವು ಪಿಐಎಲ್‌ ಸಲ್ಲಿಸಿದ್ದೇವೆ ಎಂದರು.

ಉತ್ತರ ಪ್ರದೇಶ ಸರ್ಕಾರವು ಜನರ ಒತ್ತಡಕ್ಕೆ ಮಣಿದು ಕೆಲಸದ ಅವಧಿಯ ಹೆಚ್ಚಳವನ್ನು ಮಾತ್ರ ವಾಪಸ್‌ ಪಡೆದಿದ್ದಾರೆ. ಉಳಿದಂತೆ ವೇತನ ಕಾಯ್ದೆ, ಫ್ಯಾಕ್ಟರಿ ಕಾಯ್ದೆ ಮತ್ತು ಕೈಗಾರಿಕಾ ವಿವಾದ ಕಾಯ್ದೆಯ ಮೂಲಕ ಕಾರ್ಮಿಕರಿಗಿದ್ದ ಹಲವಾರು ಸೌಲಭ್ಯಗಳನ್ನು ಅಮಾನತ್ತು ಮಾಡಲಾಗಿದೆ. ಮಾಲೀಕರು ಕಾರ್ಮಿಕರಿಗೆ ಬೆದರಿಕೆ ಹಾಕುವ, ಕೆಲಸದಿಂದ ಕಿತ್ತೊಸೆಯಲು ಅವಕಾಶ ನೀಡಲಾಗಿದೆ. ಟ್ರಿಬ್ಯುನಲ್‌ಗಳನ್ನು ಕಿತ್ತುಹಾಕಲಾಗುತ್ತಿದೆ ಎಂದರು.

ಕರ್ನಾಟಕದಲ್ಲಿಯೂ ಕಾಯ್ದೆಗಳನ್ನು ಬಲಹೀನಗೊಳಿಸಲು ತಯಾರಿ ನಡೆಯುತ್ತಿದೆ. ಅದರ ಭಾಗವಾಗಿಯೇ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಬದಲಾವಣೆಯಾಗಿದೆ. ಕರ್ನಾಟಕ ಸರ್ಕಾರವು ಉಳಿದ ರಾಜ್ಯಗಳಲ್ಲಿನ ತಿದ್ದುಪಡಿಗೆ ಬರುತ್ತಿರುವ ವಿರೋಧ, ಪ್ರತಿಕ್ರಿಯೆಯ ಫಲಿತಾಂಶದ ಆಧಾರದಲ್ಲಿ ಕಾಯ್ದೆ ತಿದ್ದುಪಡಿ ಮಾಡಲು ಯೋಚಿಸುತ್ತಿದ್ದಾರೆ. ಖಂಡಿತವಾಗಿಯೂ ಅವರು ಅದನ್ನು ಇಲ್ಲಿಯೂ ತರುತ್ತಾರೆ ಎಂದು ವಿಷಾಧ ವ್ಯಕ್ತಪಡಿಸಿದರು.


ಇದನ್ನೂ ಓದಿ: ಕಾರ್ಮಿಕ ಕಾಯಿದೆಗಳ ರದ್ದು ಎಷ್ಟು ಸರಿ? – ಡಾ.ಚಂದ್ರಪೂಜಾರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...