Homeಮುಖಪುಟಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಕೃತಕ ಬುದ್ಧಿಮತ್ತೆ (ಎಐ) ವ್ಯವಸ್ಥೆಗಳಿಗೆ, ವಿಶೇಷವಾಗಿ ನೈಜ ವ್ಯಕ್ತಿಗಳ ಸಂಶ್ಲೇಷಿತ ಚಿತ್ರಗಳು, ವಿಡಿಯೋಗಳು ಮತ್ತು ಆಡಿಯೊ ಅನುಕರಣೆಗಳನ್ನು ಸೃಷ್ಟಿಸುವ ಸಾಮರ್ಥ್ಯವಿರುವ ವ್ಯವಸ್ಥೆಗಳಿಗೆ ಸಮಗ್ರ ನಿಯಂತ್ರಕ ಮತ್ತು ಪರವಾನಗಿ ಚೌಕಟ್ಟನ್ನು ರೂಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ವಕೀಲೆ ಆರತಿ ಸಹಾ ಎಂಬವರು ಸಲ್ಲಿಸಿರುವ ಅರ್ಜಿಯಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿ) ಮತ್ತು ದೂರಸಂಪರ್ಕ ಇಲಾಖೆ (ಡಿಒಟಿ) ಗೆ ಎಐ ತಂತ್ರಜ್ಞಾನಗಳ ಜವಾಬ್ದಾರಿಯುತ ಬಳಕೆಗಾಗಿ ಶಾಸನಬದ್ಧ ಕಾರ್ಯವಿಧಾನವನ್ನು ರೂಪಿಸಲು ಮತ್ತು ಮೆಟಾ ಪ್ಲಾಟ್‌ಫಾರ್ಮ್‌ಗಳು, ಗೂಗಲ್‌ನಂತಹ ಡಿಜಿಟಲ್ ಮಧ್ಯವರ್ತಿಗಳು ಅವುಗಳನ್ನು ಪಾಲಿಸಲು ಆದೇಶ ಹೊರಡಿಸುವಂತೆ ನ್ಯಾಯಾಲಯವನ್ನು ಕೋರಲಾಗಿದೆ.

ಅರ್ಜಿಯ ಪ್ರಕಾರ, ಡೀಪ್‌ಫೇಕ್‌ಗಳು ಎಂದು ಜನಪ್ರಿಯವಾಗಿ ಕರೆಯಲ್ಪಡುವ ಎಐ-ರಚಿತ ವಿಷಯದ ಅನಿಯಂತ್ರಿತ ಹರಡುವಿಕೆಯು ಗೌಪ್ಯತೆ, ಘನತೆ ಮತ್ತು ಖ್ಯಾತಿಯ ಗಂಭೀರ ಉಲ್ಲಂಘನೆಗೆ ಕಾರಣವಾಗಿದೆ. “ಧ್ವನಿಗಳು ಮತ್ತು ಚಿತ್ರಗಳನ್ನು ಕ್ಲೋನಿಂಗ್ ಮಾಡುವ ಸಾಮರ್ಥ್ಯವಿರುವ ಎಐ ಪರಿಕರಗಳ ಅನಿಯಂತ್ರಿತ ಬಳಕೆಯು ಈಗಾಗಲೇ ವ್ಯಕ್ತಿಗಳಿಗೆ ಅಪಾರ ಹಾನಿಯನ್ನುಂಟುಮಾಡಿದೆ ಮತ್ತು ಸಾರ್ವಜನಿಕ ನಂಬಿಕೆ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯನ್ನು ಒಡ್ಡುತ್ತದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಸೆಲೆಬ್ರಿಟಿಗಳು ಮತ್ತು ಪತ್ರಕರ್ತರು ಸೇರಿದಂತೆ ಸಾರ್ವಜನಿಕ ವ್ಯಕ್ತಿಗಳನ್ನು ಗುರಿಯಾಗಿಸಿಕೊಳ್ಳುವ ಡೀಪ್‌ಫೇಕ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಳವಾಗಿದೆ. ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ಗಳು ಇಂತಹ ಹಲವಾರು ಪ್ರಕರಣಗಳಲ್ಲಿ ಮಧ್ಯಂತರ ರಕ್ಷಣೆ ನೀಡಿವೆ. ಅಕ್ಷಯ್ ಕುಮಾರ್, ಕುಮಾರ್ ಸಾನು ಮತ್ತು ಪತ್ರಕರ್ತ ಸುಧೀರ್ ಚೌಧರಿ ಸೇರಿದ್ದಾರೆ ಹಲವರು ನ್ಯಾಯಾಲದಿಂದ ಪರಿಹಾರ ಪಡೆದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಯುರೋಪಿಯನ್ ಯೂನಿಯನ್, ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಸಿಂಗಾಪುರದಂತಹ ದೇಶಗಳು ಎಐ-ಜನರೇಟೆಡ್ ಕಂಟೆಂಟ್‌ನ ದುರ್ಬಳಕೆಯನ್ನು ತಡೆಗಟ್ಟಲು ರಿಸ್ಕ್-ಆಧಾರಿತ ವರ್ಗೀಕರಣ, ಲೇಬಲಿಂಗ್ ಮತ್ತು ಜಾರಿ ವ್ಯವಸ್ಥೆಗಳ ಮೂಲಕ ನಿಯಂತ್ರಕ ಚೌಕಟ್ಟನ್ನು ಜಾರಿಗೆ ತಂದಿವೆ ಎಂದಿರುವ ಅರ್ಜಿ, ಭಾರತದಲ್ಲಿ ಇಂತಹ ಕಾನೂನು ರಕ್ಷಣೆಗಳ ಕೊರತೆ ಇದೆ ಎಂದು ಹೇಳಿದೆ.

ಸರ್ಕಾರದ ನಿಷ್ಕ್ರಿಯತೆಯು ಸಂವಿಧಾನದ 14, 19 ಮತ್ತು 21 ನೇ ವಿಧಿಗಳ ಅಡಿಯಲ್ಲಿ ಖಾತ್ರಿಪಡಿಸಿದ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಮೆಟಾ ಮತ್ತು ಗೂಗಲ್‌ನಂತಹ ವೇದಿಕೆಗಳು ಡೀಪ್‌ಫೇಕ್ ದುರುಪಯೋಗದ ದೂರುಗಳ ಮೇಲೆ ತ್ವರಿತವಾಗಿ ಕಾರ್ಯನಿರ್ವಹಿಸಲು ವಿಫಲವಾಗಿವೆ. ಇದರಿಂದಾಗಿ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳು ನಿಷ್ಪರಿಣಾಮಕಾರಿಯಾಗಿವೆ ತಿಳಿಸಲಾಗಿದೆ.

ಗೌಪ್ಯತೆಗೆ ಸಂಬಂಧಿಸಿದಂತೆ ಜಸ್ಟೀಸ್ ಕೆ.ಎಸ್. ಪುಟ್ಟಸ್ವಾಮಿ (ನಿವೃತ್ತ) VS ಭಾರತ ಸರ್ಕಾರ ಮತ್ತು ಡಿಜಿಟಲ್ ಹಿಂಸೆಯನ್ನು ತಡೆಗಟ್ಟುವ ಬಗ್ಗೆ ತೆಹ್ಸೀನ್ ಎಸ್. ಪೂನಾವಾಲಾ VS ಭಾರತ ಸರ್ಕಾರದಂತಹ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿರುವ ಅರ್ಜಿದಾರರು, ಈಗ ಜನರ ಡಿಜಿಟಲ್ ಘನತೆಯನ್ನು ರಕ್ಷಿಸಲು ಮತ್ತು ಮುಂದಿನ ಹಾನಿಯನ್ನು ತಡೆಗಟ್ಟಲು ನ್ಯಾಯಾಂಗದ ಮಧ್ಯಸ್ಥಿಕೆ ಅತ್ಯಗತ್ಯ ಎಂದು ಹೇಳಿದ್ಧಾರೆ.

ಡೀಪ್‌ಫೇಕ್‌ಗಳು ಕ್ಷಣಗಳಲ್ಲಿ ಜೀವನ, ಖ್ಯಾತಿ ಮತ್ತು ಸಂಸ್ಥೆಗಳನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿವೆ ಎಂದು ಅರ್ಜಿಯಲ್ಲಿ ಒತ್ತಿ ಹೇಳಲಾಗಿದೆ. ಚುನಾವಣೆಗಳ ಮೇಲೆ ಪ್ರಭಾವ ಬೀರಲು, ಕೋಮು ಸಂಘರ್ಷವನ್ನು ಪ್ರಚೋದಿಸಲು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಸಾರ್ವಜನಿಕ ನಂಬಿಕೆಯನ್ನು ದುರ್ಬಲಗೊಳಿಸಲು ಅವುಗಳನ್ನು ಆಯುಧಗಳಾಗಿ ಬಳಸಿಕೊಳ್ಳಬಹುದು ಎಂಬ ಆತಂಕವನ್ನು ಅರ್ಜಿದಾರರು ವ್ಯಕ್ತಪಡಿಸಿದ್ದಾರೆ.

‘ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?’..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೈಸೂರು| ಬನ್ನೂರು ಫಾರಂ ಹೌಸ್ ನಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ಪತ್ತೆಹಚ್ಚಿದ ಆರೋಗ್ಯ ಇಲಾಖೆ

ಮೈಸೂರಿನ ಬನ್ನೂರು ಬಳಿಯ ಫಾರಂ ಹೌಸ್ ಒಂದರಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ನಡೆಸುತ್ತಿದ್ದ ತಂಡವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌...

‘ಬಿಜೆಪಿಯಿಂದ ಮುಂಬೈ ರಕ್ಷಿಸಲು ಕೈಜೋಡಿಸಿ..’; ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಶಿವಸೇನೆ ಸಂಸದ ಸಂಜಯ್ ರಾವತ್

ಮುಂಬರುವ ನಾಗರಿಕ ಸ್ಥಳೀಯಚುನಾವಣೆಗೆ ಮುಂಚಿತವಾಗಿ, ಬಿಜೆಪಿಯಿಂದ ಮುಂಬೈಗಿರುವ ಸನ್ನಿಹಿತ ಅಪಾಯವನ್ನು ನೋಡಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಮನವಿ ಮಾಡಿದ್ದಾರೆ. ಕಾಂಗ್ರೆಸ್‌ನ ಮರಾಠಿ ನಾಯಕತ್ವವು ಆಂತರಿಕ ಭಿನ್ನಾಭಿಪ್ರಾಯಗಳನ್ನು...

ಗುರುಗ್ರಾಮ: ಚಲಿಸುವ ಕಾರಿನಿಂದ ರಸ್ತೆಗೆ ಮೂತ್ರ ವಿಸರ್ಜಸಿ ವಿಕೃತಿ ಮೆರೆದ ಯುವಕ

ಹರಿಯಾಣದ ಗುರುಗ್ರಾಮದಿಂದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ಗುರುಗ್ರಾಮದ ಸದರ್ ಬಜಾರ್ ಪ್ರದೇಶದ ಬಳಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ಚಲಿಸುವ ಥಾರ್‌ನ ಕಿಟಕಿಯಿಂದ ಮೂತ್ರ ವಿಸರ್ಜನೆ ಮಾಡಿದ್ದಾನೆ. ಯುವಕ ಸೋಹ್ನಾ ಚೌಕ್‌ನಿಂದ ಸದರ್ ಬಜಾರ್...

ದಲಿತ ಚಾಲಕನನ್ನು ಅಪಹರಿಸಿ ಹಲ್ಲೆ, ಮೂತ್ರ ಕುಡಿಸಿದ ಆರೋಪ: ಮೂವರ ಬಂಧನ

ಜಾತಿ ದೌರ್ಜನ್ಯ ಮತ್ತು ಹಿಂಸಾಚಾರದ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಸೋಮವಾರ (ಅ.20) ರಾತ್ರಿ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಗ್ವಾಲಿಯರ್‌ನ ದಲಿತ ಚಾಲಕನನ್ನು ಮೂವರು ಪ್ರಬಲ ಜಾತಿಯ ವ್ಯಕ್ತಿಗಳು ಅಪಹರಿಸಿ,...

ನವೆಂಬರ್ 4 ರಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ; 6 ರಂದು ಫಲಿತಾಂಶ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣಾ ಸಮಿತಿಯು ಗುರುವಾರ 2025-26 ರ ವಿದ್ಯಾರ್ಥಿ ಚುನಾವಣೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ನವೆಂಬರ್ 4 ರಂದು ಮತದಾನ ಮತ್ತು ನವೆಂಬರ್ 6 ರಂದು...

ನಿರ್ದಿಷ್ಟ ಜಾತಿ, ವಂಶಾವಳಿಯಿಂದ ದೇವಾಲಯಗಳ ಅರ್ಚಕರ ನೇಮಕ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ: ಕೇರಳ ಹೈಕೋರ್ಟ್

ದೇವಾಲಯಗಳ ಅರ್ಚಕರ ನೇಮಕಾತಿಯು ಒಂದು ನಿರ್ದಿಷ್ಟ ಜಾತಿ ಅಥವಾ ವಂಶಾವಳಿಯಿಂದ ಮಾತ್ರ ಆಗಿರಬೇಕು ಎಂದು ಯಾರೂ ಒತ್ತಾಯಿಸಲು ಸಾಧ್ಯವಿಲ್ಲ. ಅಂತಹ ಜಾತಿ ಅಥವಾ ವಂಶಾಧಾರಿತ ನೇಮಕಾತಿಯು ಭಾರತದ ಸಂವಿಧಾನದಡಿ ರಕ್ಷಣೆ ಪಡೆಯಲು ಕಡ್ಡಾಯ...

ಪಶ್ಚಿಮ ಬಂಗಾಳ: ಸರ್ಕಾರಿ ಆಸ್ಪತ್ರೆಯಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಎಸ್‌ಎಸ್‌ಕೆಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಗರ ಪೊಲೀಸ್...

ಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ ಅಧಿಕಾರ

ಕೇಂದ್ರ ಸರ್ಕಾರವು 2021ರ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಬುಧವಾರ ಬದಲಾಯಿಸಿದೆ. ಈ ಬದಲಾವಣೆಯಿಂದ, ಇಂಟರ್‌ನೆಟ್‌ನಲ್ಲಿ ಹಾಕಲಾದ ವಿಷಯ (ಕಂಟೆಂಟ್) ಅನ್ನು ತೆಗೆದುಹಾಕಲು ಯಾವ ಸರ್ಕಾರಿ ಸಂಸ್ಥೆಗಳು ಅಥವಾ ಅಧಿಕಾರಿಗಳು ಆದೇಶಿಸಬಹುದು ಎಂಬುದನ್ನು ಸ್ಪಷ್ಟವಾಗಿ...

ಆಂಧ್ರಪ್ರದೇಶ| ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಿ

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ 'ಲೈಂಗಿಕ ದೌರ್ಜನ್ಯ'ಕ್ಕೆ ಸಂಬಂಧಿಸಿದ ಪ್ರಕರಣವು ಯಾರೂ ಊಹಿಸದ ತಿರುವು ಪಡೆದುಕೊಂಡಿದೆ. ಪೋಕ್ಸೋ ಪ್ರಕರಣದ ಆರೋಪಿ ನಾರಾಯಣ ರಾವ್ ಎಂಬಾತನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಆತ...

ಬಿಹಾರ ಚುನಾವಣೆ| ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್

ಮಿತ್ರ ಪಕ್ಷಗಳ ನಡುವೆ ವಾರಗಳ ಕಾಲ ನಡೆದ ವಾಗ್ವಾದ ಮತ್ತು ತೀವ್ರ ಚರ್ಚೆಗಳ ನಂತರ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಯಿತು. ಈ ಮೂಲಕ ವಿರೋಧ...