Homeಮುಖಪುಟಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಕೃತಕ ಬುದ್ಧಿಮತ್ತೆ (ಎಐ) ವ್ಯವಸ್ಥೆಗಳಿಗೆ, ವಿಶೇಷವಾಗಿ ನೈಜ ವ್ಯಕ್ತಿಗಳ ಸಂಶ್ಲೇಷಿತ ಚಿತ್ರಗಳು, ವಿಡಿಯೋಗಳು ಮತ್ತು ಆಡಿಯೊ ಅನುಕರಣೆಗಳನ್ನು ಸೃಷ್ಟಿಸುವ ಸಾಮರ್ಥ್ಯವಿರುವ ವ್ಯವಸ್ಥೆಗಳಿಗೆ ಸಮಗ್ರ ನಿಯಂತ್ರಕ ಮತ್ತು ಪರವಾನಗಿ ಚೌಕಟ್ಟನ್ನು ರೂಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ವಕೀಲೆ ಆರತಿ ಸಹಾ ಎಂಬವರು ಸಲ್ಲಿಸಿರುವ ಅರ್ಜಿಯಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿ) ಮತ್ತು ದೂರಸಂಪರ್ಕ ಇಲಾಖೆ (ಡಿಒಟಿ) ಗೆ ಎಐ ತಂತ್ರಜ್ಞಾನಗಳ ಜವಾಬ್ದಾರಿಯುತ ಬಳಕೆಗಾಗಿ ಶಾಸನಬದ್ಧ ಕಾರ್ಯವಿಧಾನವನ್ನು ರೂಪಿಸಲು ಮತ್ತು ಮೆಟಾ ಪ್ಲಾಟ್‌ಫಾರ್ಮ್‌ಗಳು, ಗೂಗಲ್‌ನಂತಹ ಡಿಜಿಟಲ್ ಮಧ್ಯವರ್ತಿಗಳು ಅವುಗಳನ್ನು ಪಾಲಿಸಲು ಆದೇಶ ಹೊರಡಿಸುವಂತೆ ನ್ಯಾಯಾಲಯವನ್ನು ಕೋರಲಾಗಿದೆ.

ಅರ್ಜಿಯ ಪ್ರಕಾರ, ಡೀಪ್‌ಫೇಕ್‌ಗಳು ಎಂದು ಜನಪ್ರಿಯವಾಗಿ ಕರೆಯಲ್ಪಡುವ ಎಐ-ರಚಿತ ವಿಷಯದ ಅನಿಯಂತ್ರಿತ ಹರಡುವಿಕೆಯು ಗೌಪ್ಯತೆ, ಘನತೆ ಮತ್ತು ಖ್ಯಾತಿಯ ಗಂಭೀರ ಉಲ್ಲಂಘನೆಗೆ ಕಾರಣವಾಗಿದೆ. “ಧ್ವನಿಗಳು ಮತ್ತು ಚಿತ್ರಗಳನ್ನು ಕ್ಲೋನಿಂಗ್ ಮಾಡುವ ಸಾಮರ್ಥ್ಯವಿರುವ ಎಐ ಪರಿಕರಗಳ ಅನಿಯಂತ್ರಿತ ಬಳಕೆಯು ಈಗಾಗಲೇ ವ್ಯಕ್ತಿಗಳಿಗೆ ಅಪಾರ ಹಾನಿಯನ್ನುಂಟುಮಾಡಿದೆ ಮತ್ತು ಸಾರ್ವಜನಿಕ ನಂಬಿಕೆ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯನ್ನು ಒಡ್ಡುತ್ತದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಸೆಲೆಬ್ರಿಟಿಗಳು ಮತ್ತು ಪತ್ರಕರ್ತರು ಸೇರಿದಂತೆ ಸಾರ್ವಜನಿಕ ವ್ಯಕ್ತಿಗಳನ್ನು ಗುರಿಯಾಗಿಸಿಕೊಳ್ಳುವ ಡೀಪ್‌ಫೇಕ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಳವಾಗಿದೆ. ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ಗಳು ಇಂತಹ ಹಲವಾರು ಪ್ರಕರಣಗಳಲ್ಲಿ ಮಧ್ಯಂತರ ರಕ್ಷಣೆ ನೀಡಿವೆ. ಅಕ್ಷಯ್ ಕುಮಾರ್, ಕುಮಾರ್ ಸಾನು ಮತ್ತು ಪತ್ರಕರ್ತ ಸುಧೀರ್ ಚೌಧರಿ ಸೇರಿದ್ದಾರೆ ಹಲವರು ನ್ಯಾಯಾಲದಿಂದ ಪರಿಹಾರ ಪಡೆದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಯುರೋಪಿಯನ್ ಯೂನಿಯನ್, ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಸಿಂಗಾಪುರದಂತಹ ದೇಶಗಳು ಎಐ-ಜನರೇಟೆಡ್ ಕಂಟೆಂಟ್‌ನ ದುರ್ಬಳಕೆಯನ್ನು ತಡೆಗಟ್ಟಲು ರಿಸ್ಕ್-ಆಧಾರಿತ ವರ್ಗೀಕರಣ, ಲೇಬಲಿಂಗ್ ಮತ್ತು ಜಾರಿ ವ್ಯವಸ್ಥೆಗಳ ಮೂಲಕ ನಿಯಂತ್ರಕ ಚೌಕಟ್ಟನ್ನು ಜಾರಿಗೆ ತಂದಿವೆ ಎಂದಿರುವ ಅರ್ಜಿ, ಭಾರತದಲ್ಲಿ ಇಂತಹ ಕಾನೂನು ರಕ್ಷಣೆಗಳ ಕೊರತೆ ಇದೆ ಎಂದು ಹೇಳಿದೆ.

ಸರ್ಕಾರದ ನಿಷ್ಕ್ರಿಯತೆಯು ಸಂವಿಧಾನದ 14, 19 ಮತ್ತು 21 ನೇ ವಿಧಿಗಳ ಅಡಿಯಲ್ಲಿ ಖಾತ್ರಿಪಡಿಸಿದ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಮೆಟಾ ಮತ್ತು ಗೂಗಲ್‌ನಂತಹ ವೇದಿಕೆಗಳು ಡೀಪ್‌ಫೇಕ್ ದುರುಪಯೋಗದ ದೂರುಗಳ ಮೇಲೆ ತ್ವರಿತವಾಗಿ ಕಾರ್ಯನಿರ್ವಹಿಸಲು ವಿಫಲವಾಗಿವೆ. ಇದರಿಂದಾಗಿ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳು ನಿಷ್ಪರಿಣಾಮಕಾರಿಯಾಗಿವೆ ತಿಳಿಸಲಾಗಿದೆ.

ಗೌಪ್ಯತೆಗೆ ಸಂಬಂಧಿಸಿದಂತೆ ಜಸ್ಟೀಸ್ ಕೆ.ಎಸ್. ಪುಟ್ಟಸ್ವಾಮಿ (ನಿವೃತ್ತ) VS ಭಾರತ ಸರ್ಕಾರ ಮತ್ತು ಡಿಜಿಟಲ್ ಹಿಂಸೆಯನ್ನು ತಡೆಗಟ್ಟುವ ಬಗ್ಗೆ ತೆಹ್ಸೀನ್ ಎಸ್. ಪೂನಾವಾಲಾ VS ಭಾರತ ಸರ್ಕಾರದಂತಹ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿರುವ ಅರ್ಜಿದಾರರು, ಈಗ ಜನರ ಡಿಜಿಟಲ್ ಘನತೆಯನ್ನು ರಕ್ಷಿಸಲು ಮತ್ತು ಮುಂದಿನ ಹಾನಿಯನ್ನು ತಡೆಗಟ್ಟಲು ನ್ಯಾಯಾಂಗದ ಮಧ್ಯಸ್ಥಿಕೆ ಅತ್ಯಗತ್ಯ ಎಂದು ಹೇಳಿದ್ಧಾರೆ.

ಡೀಪ್‌ಫೇಕ್‌ಗಳು ಕ್ಷಣಗಳಲ್ಲಿ ಜೀವನ, ಖ್ಯಾತಿ ಮತ್ತು ಸಂಸ್ಥೆಗಳನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿವೆ ಎಂದು ಅರ್ಜಿಯಲ್ಲಿ ಒತ್ತಿ ಹೇಳಲಾಗಿದೆ. ಚುನಾವಣೆಗಳ ಮೇಲೆ ಪ್ರಭಾವ ಬೀರಲು, ಕೋಮು ಸಂಘರ್ಷವನ್ನು ಪ್ರಚೋದಿಸಲು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಸಾರ್ವಜನಿಕ ನಂಬಿಕೆಯನ್ನು ದುರ್ಬಲಗೊಳಿಸಲು ಅವುಗಳನ್ನು ಆಯುಧಗಳಾಗಿ ಬಳಸಿಕೊಳ್ಳಬಹುದು ಎಂಬ ಆತಂಕವನ್ನು ಅರ್ಜಿದಾರರು ವ್ಯಕ್ತಪಡಿಸಿದ್ದಾರೆ.

‘ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?’..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...