Homeಮುಖಪುಟಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಕೃತಕ ಬುದ್ಧಿಮತ್ತೆ (ಎಐ) ವ್ಯವಸ್ಥೆಗಳಿಗೆ, ವಿಶೇಷವಾಗಿ ನೈಜ ವ್ಯಕ್ತಿಗಳ ಸಂಶ್ಲೇಷಿತ ಚಿತ್ರಗಳು, ವಿಡಿಯೋಗಳು ಮತ್ತು ಆಡಿಯೊ ಅನುಕರಣೆಗಳನ್ನು ಸೃಷ್ಟಿಸುವ ಸಾಮರ್ಥ್ಯವಿರುವ ವ್ಯವಸ್ಥೆಗಳಿಗೆ ಸಮಗ್ರ ನಿಯಂತ್ರಕ ಮತ್ತು ಪರವಾನಗಿ ಚೌಕಟ್ಟನ್ನು ರೂಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ವಕೀಲೆ ಆರತಿ ಸಹಾ ಎಂಬವರು ಸಲ್ಲಿಸಿರುವ ಅರ್ಜಿಯಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿ) ಮತ್ತು ದೂರಸಂಪರ್ಕ ಇಲಾಖೆ (ಡಿಒಟಿ) ಗೆ ಎಐ ತಂತ್ರಜ್ಞಾನಗಳ ಜವಾಬ್ದಾರಿಯುತ ಬಳಕೆಗಾಗಿ ಶಾಸನಬದ್ಧ ಕಾರ್ಯವಿಧಾನವನ್ನು ರೂಪಿಸಲು ಮತ್ತು ಮೆಟಾ ಪ್ಲಾಟ್‌ಫಾರ್ಮ್‌ಗಳು, ಗೂಗಲ್‌ನಂತಹ ಡಿಜಿಟಲ್ ಮಧ್ಯವರ್ತಿಗಳು ಅವುಗಳನ್ನು ಪಾಲಿಸಲು ಆದೇಶ ಹೊರಡಿಸುವಂತೆ ನ್ಯಾಯಾಲಯವನ್ನು ಕೋರಲಾಗಿದೆ.

ಅರ್ಜಿಯ ಪ್ರಕಾರ, ಡೀಪ್‌ಫೇಕ್‌ಗಳು ಎಂದು ಜನಪ್ರಿಯವಾಗಿ ಕರೆಯಲ್ಪಡುವ ಎಐ-ರಚಿತ ವಿಷಯದ ಅನಿಯಂತ್ರಿತ ಹರಡುವಿಕೆಯು ಗೌಪ್ಯತೆ, ಘನತೆ ಮತ್ತು ಖ್ಯಾತಿಯ ಗಂಭೀರ ಉಲ್ಲಂಘನೆಗೆ ಕಾರಣವಾಗಿದೆ. “ಧ್ವನಿಗಳು ಮತ್ತು ಚಿತ್ರಗಳನ್ನು ಕ್ಲೋನಿಂಗ್ ಮಾಡುವ ಸಾಮರ್ಥ್ಯವಿರುವ ಎಐ ಪರಿಕರಗಳ ಅನಿಯಂತ್ರಿತ ಬಳಕೆಯು ಈಗಾಗಲೇ ವ್ಯಕ್ತಿಗಳಿಗೆ ಅಪಾರ ಹಾನಿಯನ್ನುಂಟುಮಾಡಿದೆ ಮತ್ತು ಸಾರ್ವಜನಿಕ ನಂಬಿಕೆ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯನ್ನು ಒಡ್ಡುತ್ತದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಸೆಲೆಬ್ರಿಟಿಗಳು ಮತ್ತು ಪತ್ರಕರ್ತರು ಸೇರಿದಂತೆ ಸಾರ್ವಜನಿಕ ವ್ಯಕ್ತಿಗಳನ್ನು ಗುರಿಯಾಗಿಸಿಕೊಳ್ಳುವ ಡೀಪ್‌ಫೇಕ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಳವಾಗಿದೆ. ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ಗಳು ಇಂತಹ ಹಲವಾರು ಪ್ರಕರಣಗಳಲ್ಲಿ ಮಧ್ಯಂತರ ರಕ್ಷಣೆ ನೀಡಿವೆ. ಅಕ್ಷಯ್ ಕುಮಾರ್, ಕುಮಾರ್ ಸಾನು ಮತ್ತು ಪತ್ರಕರ್ತ ಸುಧೀರ್ ಚೌಧರಿ ಸೇರಿದ್ದಾರೆ ಹಲವರು ನ್ಯಾಯಾಲದಿಂದ ಪರಿಹಾರ ಪಡೆದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಯುರೋಪಿಯನ್ ಯೂನಿಯನ್, ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಸಿಂಗಾಪುರದಂತಹ ದೇಶಗಳು ಎಐ-ಜನರೇಟೆಡ್ ಕಂಟೆಂಟ್‌ನ ದುರ್ಬಳಕೆಯನ್ನು ತಡೆಗಟ್ಟಲು ರಿಸ್ಕ್-ಆಧಾರಿತ ವರ್ಗೀಕರಣ, ಲೇಬಲಿಂಗ್ ಮತ್ತು ಜಾರಿ ವ್ಯವಸ್ಥೆಗಳ ಮೂಲಕ ನಿಯಂತ್ರಕ ಚೌಕಟ್ಟನ್ನು ಜಾರಿಗೆ ತಂದಿವೆ ಎಂದಿರುವ ಅರ್ಜಿ, ಭಾರತದಲ್ಲಿ ಇಂತಹ ಕಾನೂನು ರಕ್ಷಣೆಗಳ ಕೊರತೆ ಇದೆ ಎಂದು ಹೇಳಿದೆ.

ಸರ್ಕಾರದ ನಿಷ್ಕ್ರಿಯತೆಯು ಸಂವಿಧಾನದ 14, 19 ಮತ್ತು 21 ನೇ ವಿಧಿಗಳ ಅಡಿಯಲ್ಲಿ ಖಾತ್ರಿಪಡಿಸಿದ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಮೆಟಾ ಮತ್ತು ಗೂಗಲ್‌ನಂತಹ ವೇದಿಕೆಗಳು ಡೀಪ್‌ಫೇಕ್ ದುರುಪಯೋಗದ ದೂರುಗಳ ಮೇಲೆ ತ್ವರಿತವಾಗಿ ಕಾರ್ಯನಿರ್ವಹಿಸಲು ವಿಫಲವಾಗಿವೆ. ಇದರಿಂದಾಗಿ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳು ನಿಷ್ಪರಿಣಾಮಕಾರಿಯಾಗಿವೆ ತಿಳಿಸಲಾಗಿದೆ.

ಗೌಪ್ಯತೆಗೆ ಸಂಬಂಧಿಸಿದಂತೆ ಜಸ್ಟೀಸ್ ಕೆ.ಎಸ್. ಪುಟ್ಟಸ್ವಾಮಿ (ನಿವೃತ್ತ) VS ಭಾರತ ಸರ್ಕಾರ ಮತ್ತು ಡಿಜಿಟಲ್ ಹಿಂಸೆಯನ್ನು ತಡೆಗಟ್ಟುವ ಬಗ್ಗೆ ತೆಹ್ಸೀನ್ ಎಸ್. ಪೂನಾವಾಲಾ VS ಭಾರತ ಸರ್ಕಾರದಂತಹ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿರುವ ಅರ್ಜಿದಾರರು, ಈಗ ಜನರ ಡಿಜಿಟಲ್ ಘನತೆಯನ್ನು ರಕ್ಷಿಸಲು ಮತ್ತು ಮುಂದಿನ ಹಾನಿಯನ್ನು ತಡೆಗಟ್ಟಲು ನ್ಯಾಯಾಂಗದ ಮಧ್ಯಸ್ಥಿಕೆ ಅತ್ಯಗತ್ಯ ಎಂದು ಹೇಳಿದ್ಧಾರೆ.

ಡೀಪ್‌ಫೇಕ್‌ಗಳು ಕ್ಷಣಗಳಲ್ಲಿ ಜೀವನ, ಖ್ಯಾತಿ ಮತ್ತು ಸಂಸ್ಥೆಗಳನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿವೆ ಎಂದು ಅರ್ಜಿಯಲ್ಲಿ ಒತ್ತಿ ಹೇಳಲಾಗಿದೆ. ಚುನಾವಣೆಗಳ ಮೇಲೆ ಪ್ರಭಾವ ಬೀರಲು, ಕೋಮು ಸಂಘರ್ಷವನ್ನು ಪ್ರಚೋದಿಸಲು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಸಾರ್ವಜನಿಕ ನಂಬಿಕೆಯನ್ನು ದುರ್ಬಲಗೊಳಿಸಲು ಅವುಗಳನ್ನು ಆಯುಧಗಳಾಗಿ ಬಳಸಿಕೊಳ್ಳಬಹುದು ಎಂಬ ಆತಂಕವನ್ನು ಅರ್ಜಿದಾರರು ವ್ಯಕ್ತಪಡಿಸಿದ್ದಾರೆ.

‘ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?’..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....