Homeಮುಖಪುಟಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಕೃತಕ ಬುದ್ಧಿಮತ್ತೆ (ಎಐ) ವ್ಯವಸ್ಥೆಗಳಿಗೆ, ವಿಶೇಷವಾಗಿ ನೈಜ ವ್ಯಕ್ತಿಗಳ ಸಂಶ್ಲೇಷಿತ ಚಿತ್ರಗಳು, ವಿಡಿಯೋಗಳು ಮತ್ತು ಆಡಿಯೊ ಅನುಕರಣೆಗಳನ್ನು ಸೃಷ್ಟಿಸುವ ಸಾಮರ್ಥ್ಯವಿರುವ ವ್ಯವಸ್ಥೆಗಳಿಗೆ ಸಮಗ್ರ ನಿಯಂತ್ರಕ ಮತ್ತು ಪರವಾನಗಿ ಚೌಕಟ್ಟನ್ನು ರೂಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ವಕೀಲೆ ಆರತಿ ಸಹಾ ಎಂಬವರು ಸಲ್ಲಿಸಿರುವ ಅರ್ಜಿಯಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿ) ಮತ್ತು ದೂರಸಂಪರ್ಕ ಇಲಾಖೆ (ಡಿಒಟಿ) ಗೆ ಎಐ ತಂತ್ರಜ್ಞಾನಗಳ ಜವಾಬ್ದಾರಿಯುತ ಬಳಕೆಗಾಗಿ ಶಾಸನಬದ್ಧ ಕಾರ್ಯವಿಧಾನವನ್ನು ರೂಪಿಸಲು ಮತ್ತು ಮೆಟಾ ಪ್ಲಾಟ್‌ಫಾರ್ಮ್‌ಗಳು, ಗೂಗಲ್‌ನಂತಹ ಡಿಜಿಟಲ್ ಮಧ್ಯವರ್ತಿಗಳು ಅವುಗಳನ್ನು ಪಾಲಿಸಲು ಆದೇಶ ಹೊರಡಿಸುವಂತೆ ನ್ಯಾಯಾಲಯವನ್ನು ಕೋರಲಾಗಿದೆ.

ಅರ್ಜಿಯ ಪ್ರಕಾರ, ಡೀಪ್‌ಫೇಕ್‌ಗಳು ಎಂದು ಜನಪ್ರಿಯವಾಗಿ ಕರೆಯಲ್ಪಡುವ ಎಐ-ರಚಿತ ವಿಷಯದ ಅನಿಯಂತ್ರಿತ ಹರಡುವಿಕೆಯು ಗೌಪ್ಯತೆ, ಘನತೆ ಮತ್ತು ಖ್ಯಾತಿಯ ಗಂಭೀರ ಉಲ್ಲಂಘನೆಗೆ ಕಾರಣವಾಗಿದೆ. “ಧ್ವನಿಗಳು ಮತ್ತು ಚಿತ್ರಗಳನ್ನು ಕ್ಲೋನಿಂಗ್ ಮಾಡುವ ಸಾಮರ್ಥ್ಯವಿರುವ ಎಐ ಪರಿಕರಗಳ ಅನಿಯಂತ್ರಿತ ಬಳಕೆಯು ಈಗಾಗಲೇ ವ್ಯಕ್ತಿಗಳಿಗೆ ಅಪಾರ ಹಾನಿಯನ್ನುಂಟುಮಾಡಿದೆ ಮತ್ತು ಸಾರ್ವಜನಿಕ ನಂಬಿಕೆ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯನ್ನು ಒಡ್ಡುತ್ತದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಸೆಲೆಬ್ರಿಟಿಗಳು ಮತ್ತು ಪತ್ರಕರ್ತರು ಸೇರಿದಂತೆ ಸಾರ್ವಜನಿಕ ವ್ಯಕ್ತಿಗಳನ್ನು ಗುರಿಯಾಗಿಸಿಕೊಳ್ಳುವ ಡೀಪ್‌ಫೇಕ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಳವಾಗಿದೆ. ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ಗಳು ಇಂತಹ ಹಲವಾರು ಪ್ರಕರಣಗಳಲ್ಲಿ ಮಧ್ಯಂತರ ರಕ್ಷಣೆ ನೀಡಿವೆ. ಅಕ್ಷಯ್ ಕುಮಾರ್, ಕುಮಾರ್ ಸಾನು ಮತ್ತು ಪತ್ರಕರ್ತ ಸುಧೀರ್ ಚೌಧರಿ ಸೇರಿದ್ದಾರೆ ಹಲವರು ನ್ಯಾಯಾಲದಿಂದ ಪರಿಹಾರ ಪಡೆದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಯುರೋಪಿಯನ್ ಯೂನಿಯನ್, ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಸಿಂಗಾಪುರದಂತಹ ದೇಶಗಳು ಎಐ-ಜನರೇಟೆಡ್ ಕಂಟೆಂಟ್‌ನ ದುರ್ಬಳಕೆಯನ್ನು ತಡೆಗಟ್ಟಲು ರಿಸ್ಕ್-ಆಧಾರಿತ ವರ್ಗೀಕರಣ, ಲೇಬಲಿಂಗ್ ಮತ್ತು ಜಾರಿ ವ್ಯವಸ್ಥೆಗಳ ಮೂಲಕ ನಿಯಂತ್ರಕ ಚೌಕಟ್ಟನ್ನು ಜಾರಿಗೆ ತಂದಿವೆ ಎಂದಿರುವ ಅರ್ಜಿ, ಭಾರತದಲ್ಲಿ ಇಂತಹ ಕಾನೂನು ರಕ್ಷಣೆಗಳ ಕೊರತೆ ಇದೆ ಎಂದು ಹೇಳಿದೆ.

ಸರ್ಕಾರದ ನಿಷ್ಕ್ರಿಯತೆಯು ಸಂವಿಧಾನದ 14, 19 ಮತ್ತು 21 ನೇ ವಿಧಿಗಳ ಅಡಿಯಲ್ಲಿ ಖಾತ್ರಿಪಡಿಸಿದ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಮೆಟಾ ಮತ್ತು ಗೂಗಲ್‌ನಂತಹ ವೇದಿಕೆಗಳು ಡೀಪ್‌ಫೇಕ್ ದುರುಪಯೋಗದ ದೂರುಗಳ ಮೇಲೆ ತ್ವರಿತವಾಗಿ ಕಾರ್ಯನಿರ್ವಹಿಸಲು ವಿಫಲವಾಗಿವೆ. ಇದರಿಂದಾಗಿ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳು ನಿಷ್ಪರಿಣಾಮಕಾರಿಯಾಗಿವೆ ತಿಳಿಸಲಾಗಿದೆ.

ಗೌಪ್ಯತೆಗೆ ಸಂಬಂಧಿಸಿದಂತೆ ಜಸ್ಟೀಸ್ ಕೆ.ಎಸ್. ಪುಟ್ಟಸ್ವಾಮಿ (ನಿವೃತ್ತ) VS ಭಾರತ ಸರ್ಕಾರ ಮತ್ತು ಡಿಜಿಟಲ್ ಹಿಂಸೆಯನ್ನು ತಡೆಗಟ್ಟುವ ಬಗ್ಗೆ ತೆಹ್ಸೀನ್ ಎಸ್. ಪೂನಾವಾಲಾ VS ಭಾರತ ಸರ್ಕಾರದಂತಹ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿರುವ ಅರ್ಜಿದಾರರು, ಈಗ ಜನರ ಡಿಜಿಟಲ್ ಘನತೆಯನ್ನು ರಕ್ಷಿಸಲು ಮತ್ತು ಮುಂದಿನ ಹಾನಿಯನ್ನು ತಡೆಗಟ್ಟಲು ನ್ಯಾಯಾಂಗದ ಮಧ್ಯಸ್ಥಿಕೆ ಅತ್ಯಗತ್ಯ ಎಂದು ಹೇಳಿದ್ಧಾರೆ.

ಡೀಪ್‌ಫೇಕ್‌ಗಳು ಕ್ಷಣಗಳಲ್ಲಿ ಜೀವನ, ಖ್ಯಾತಿ ಮತ್ತು ಸಂಸ್ಥೆಗಳನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿವೆ ಎಂದು ಅರ್ಜಿಯಲ್ಲಿ ಒತ್ತಿ ಹೇಳಲಾಗಿದೆ. ಚುನಾವಣೆಗಳ ಮೇಲೆ ಪ್ರಭಾವ ಬೀರಲು, ಕೋಮು ಸಂಘರ್ಷವನ್ನು ಪ್ರಚೋದಿಸಲು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಸಾರ್ವಜನಿಕ ನಂಬಿಕೆಯನ್ನು ದುರ್ಬಲಗೊಳಿಸಲು ಅವುಗಳನ್ನು ಆಯುಧಗಳಾಗಿ ಬಳಸಿಕೊಳ್ಳಬಹುದು ಎಂಬ ಆತಂಕವನ್ನು ಅರ್ಜಿದಾರರು ವ್ಯಕ್ತಪಡಿಸಿದ್ದಾರೆ.

‘ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?’..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...