Homeಮುಖಪುಟಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ...

ಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ ಕಂಪನಿ!

- Advertisement -
- Advertisement -

COVID-19 ಸಮಯದಲ್ಲಿ ಕಂಪನಿಯೊಂದು PM CARES ನಿಧಿಗೆ ದೇಣಿಗೆ ನೀಡಿದರೆ ಅದನ್ನು ತನ್ನ ಪರವಾನಗಿಯೆಂದು ಭಾವಿಸಬಹುದೇ? ಹೀಗೊಂದು ಪ್ರಶ್ನೆ ಪಾನ್ ಮಸಾಲ ಕಂಪನಿಯ ವಿಚಾರದಲ್ಲಿ ಭುಗಿಲೆದ್ದಿದೆ. ಈ ವಾರ ಅಲಹಾಬಾದ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ಸಂದರ್ಭದಲ್ಲಿ ಹಾಜರಾದ ‘ರಜನಿಗಂಧ’ ಬ್ರಾಂಡ್ ಪಾನ್ ಮಸಾಲ ತಯಾರಕರಾದ ಧರಂಪಾಲ್ ಸತ್ಯಪಾಲ್ ಲಿಮಿಟೆಡ್ ಅವರು ಸಲ್ಲಿಸಿದ ಮನವಿಯು ಈ ಪ್ರಶ್ನೆಯನ್ನು ಮುನ್ನೆಲೆಗೆ ತಂದಿದೆ.

ಕೊರೊನಾ ವೈರಸ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಪಾನ್ ಮಸಾಲ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಪಿಐಎಲ್‌ ಒಂದು ದಾಖಲಾಗಿದೆ. ಏಕೆಂದರೆ ಇದನ್ನು ಬಳಸುವವರು ಪದೇ ಪದೇ ಉಗುಳುವುದರಿಂದಾಗಿ ಕೊರೊನಾ ವೈರಸ್ ಹರಡುವಿಕೆ ಅಧಿಕವಾಗುತ್ತದೆ ಎಂದು ದೂರಲಾಗಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ ರಜನಿಗಂಧ ತನ್ನ ಅಫಿಡವಿಟ್‌ನಲ್ಲಿ “ಈ ಕಠೋರ ಕ್ಷಣದಲ್ಲಿ ತನ್ನ ಜವಾಬ್ದಾರಿಗಳ ಬಗ್ಗೆ ತಿಳಿದಿದೆ.  ಹಾಗಾಗಿ ‘ಪಿಎಂ ಕೇರ್ಸ್’ ನಿಧಿಗೆ 10 ಕೋಟಿ ರೂ. ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಸಂಸ್ಥೆಗಳಿಗೆ ಸಹಾಯ ಮಾಡಲು 10 ಕೋಟಿ ರೂ ನೀಡಿದ್ದೇವೆ ಎಂದು ಹೇಳಿಕೊಂಡಿದೆ.

ಸೋಮವಾರ ಸಾರ್ವಜನಿಕ ವಲಯದಲ್ಲಿ ವೈರಲ್ ಆದ ಅಫಿಡವಿಟ್‌ನಲ್ಲಿ, “ಇದು ನೋಯ್ಡಾದಲ್ಲಿ ವೈದ್ಯರಿಗೆ (ಕರೋನಾ ಯೋಧರಿಗೆ) ಹೋಟೆಲ್ ಹಾಸಿಗೆಗಳನ್ನು ಕಾಯ್ದಿರಿಸುವುದು, ಅಗತ್ಯವಿರುವವರಿಗೆ ಆಹಾರ ಮತ್ತು ಪಡಿತರ ಒದಗಿಸುವುದಕ್ಕಾಗಿ ಗುರುದ್ವಾರ ಪ್ರಬಂಧಕ್ ಸಮಿತಿಯು ಅಗತ್ಯವಿರುವವರಿಗೆ ತಮ್ಮ ಸಾಮುದಾಯಿಕ ಆಹಾರ ಕೇಂದ್ರವನ್ನು ಮುಂದುವರಿಸಲು ಬೆಂಬಲ ನೀಡಿದೆ” ಎಂದು ಬರೆದುಕೊಂಡಿದೆ.

ಕುತೂಹಲಕಾರಿಯಾಗಿ, ರಾಷ್ಟ್ರೀಯ ಲಾಕ್ ಡೌನ್ ಘೋಷಣೆಯಾದ ಕೆಲವೇ ದಿನಗಳಲ್ಲಿ “ಸಾರ್ವಜನಿಕ ಆರೋಗ್ಯ” ದ ಹಿತದೃಷ್ಟಿಯಿಂದ ಪಾನ್ ಮಸಾಲ ಮಾರಾಟವನ್ನು ನಿಷೇಧಿಸಲು ಉತ್ತರ ಪ್ರದೇಶ ಸರ್ಕಾರ ಮಾರ್ಚ್ 25 ರಂದು ಆದೇಶಿಸಿತು. ಪಾನ್ ಮಸಾಲವನ್ನು ಅಗಿಯುವುದು ಮತ್ತು ಉಗುಳುವುದು COVID-19 ಹರಡುವಿಕೆಯನ್ನು ಹೆಚ್ಚಿಸುತ್ತದೆ ಮತ್ತು ವೇಗಗೊಳಿಸುತ್ತದೆ ಎಂಬ ಎಚ್ಚರಿಕೆಯಿಂದ ಈ ಕ್ರಮ ಕೈಗೊಂಡಿತ್ತು.

ಆದರೆ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಾಗಲೇ ಯುಪಿ ಸರ್ಕಾರವು ಮೇ 6 ರಂದು ಇದ್ದಕ್ಕಿದ್ದಂತೆ ಪಾನ್ ಮಸಾಲ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರ್ಧರಿಸಿತು. ತಂಬಾಕು ಅಥವಾ ನಿಕೋಟಿನ್ ಅನ್ನು ಹೊಂದಿರದ ಪಾನ್ ಮಸಾಲಾವನ್ನು ಮಾತ್ರ ಅನುಮತಿಸಲಾಗುವುದು ಎಂದು ತಿಳಿಸಿತು.

ನಿಷೇಧವನ್ನು ತೆಗೆದುಹಾಕುವ ಸರ್ಕಾರದ ಕ್ರಮ ಪ್ರಶ್ನಿಸಿ ಲಕ್ನೋ ಮೂಲದ ಪತ್ರಕರ್ತ ಸಂಜಯ್ ಶರ್ಮಾ ಅವರು ಪಿಐಎಲ್ ಸಲ್ಲಿಸಿದ್ದಾರೆ.

ಇತ್ತೀಚೆಗೆ ಯುಪಿ ಸರ್ಕಾರದ ಆಹಾರ ಸುರಕ್ಷತೆ ಮತ್ತು ಔಷಧಿಗಳ ಆಡಳಿತದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಐಎಎಸ್ ಅಧಿಕಾರಿ ಅನಿತಾ ಸಿಂಗ್, ಉದ್ಯಮದ ಜೊತೆಗೆ ರೈತರ ಬಗೆಗಿನ ವಿಶಾಲ ಹಿತದೃಷ್ಟಿಯಿಂದ ಇದನ್ನು ಮಾಡಬೇಕಾಗಿದೆ ಎಂಬ ಮನವಿಯನ್ನು ಮಂಡಿಸಿದರು. “ನಿಷೇಧದ ಕಾರಣದಿಂದಾಗಿ ಪಾನ್ ಉದ್ಯಮ ಮತ್ತು ಕೃಷಿ ಸಮುದಾಯ ಎರಡೂ ಗಂಭೀರ ಪರಿಣಾಮ ಎದುರಿಸಿದೆ. ಮಸಾಲದ ಎಲ್ಲಾ ಕಚ್ಚಾ ವಸ್ತುಗಳು ರೈತರಿಂದ ಬರುವುದರಿಂದ ಉದ್ಯಮದ ಮೇಲಿನ ಇಲಾಖೆಯು ನಿಷೇಧವನ್ನು ತೆಗೆದುಹಾಕುವ ಕ್ರಮವನ್ನು ಅಂತಿಮ ನಿರ್ಧಾರವನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ರಜನಿಗಂಧ ಕಂಪನಿಯು ತನ್ನ ಅಫಿಡವಿಟ್ನಲ್ಲಿ “ಪಾನ್‌ ಮಸಾಲ ಕೇವಲ ಮೌತ್ ಫ್ರೆಶನರ್ ಆಗಿದೆ, ಅದು ತಂಬಾಕನ್ನು ಹೊಂದಿರುವುದಿಲ್ಲ. ಸಾವಿರಾರು ಜನರ ಜೀವನೋಪಾಯವು ಪಾನ್‌ ಮಸಾಲದ ವ್ಯವಹಾರದೊಂದಿಗೆ ಸಂಬಂಧ ಹೊಂದಿದೆ. ಹಾಗಾಗಿ ನಾವು ಉತ್ಪನ್ನದ ಮಾರಾಟವನ್ನು ಸಮರ್ಥಿಸಿಕೊಳ್ಳುತ್ತೇವೆ. ಆದ್ದರಿಂದ ಇದು ಯಾವುದೇ ನಿಷೇಧದಿಂದ ಮುಕ್ತವಾಗಿರಬೇಕು” ಎಂದಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 8 ಕ್ಕೆ ನಿಗದಿಪಡಿಸಲಾಗಿದೆ. ಕೋರ್ಟ್ ಏನು ತೀರ್ಪು ನೀಡಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...