Homeಮುಖಪುಟಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ...

ಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ ಕಂಪನಿ!

- Advertisement -
- Advertisement -

COVID-19 ಸಮಯದಲ್ಲಿ ಕಂಪನಿಯೊಂದು PM CARES ನಿಧಿಗೆ ದೇಣಿಗೆ ನೀಡಿದರೆ ಅದನ್ನು ತನ್ನ ಪರವಾನಗಿಯೆಂದು ಭಾವಿಸಬಹುದೇ? ಹೀಗೊಂದು ಪ್ರಶ್ನೆ ಪಾನ್ ಮಸಾಲ ಕಂಪನಿಯ ವಿಚಾರದಲ್ಲಿ ಭುಗಿಲೆದ್ದಿದೆ. ಈ ವಾರ ಅಲಹಾಬಾದ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ಸಂದರ್ಭದಲ್ಲಿ ಹಾಜರಾದ ‘ರಜನಿಗಂಧ’ ಬ್ರಾಂಡ್ ಪಾನ್ ಮಸಾಲ ತಯಾರಕರಾದ ಧರಂಪಾಲ್ ಸತ್ಯಪಾಲ್ ಲಿಮಿಟೆಡ್ ಅವರು ಸಲ್ಲಿಸಿದ ಮನವಿಯು ಈ ಪ್ರಶ್ನೆಯನ್ನು ಮುನ್ನೆಲೆಗೆ ತಂದಿದೆ.

ಕೊರೊನಾ ವೈರಸ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಪಾನ್ ಮಸಾಲ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಪಿಐಎಲ್‌ ಒಂದು ದಾಖಲಾಗಿದೆ. ಏಕೆಂದರೆ ಇದನ್ನು ಬಳಸುವವರು ಪದೇ ಪದೇ ಉಗುಳುವುದರಿಂದಾಗಿ ಕೊರೊನಾ ವೈರಸ್ ಹರಡುವಿಕೆ ಅಧಿಕವಾಗುತ್ತದೆ ಎಂದು ದೂರಲಾಗಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ ರಜನಿಗಂಧ ತನ್ನ ಅಫಿಡವಿಟ್‌ನಲ್ಲಿ “ಈ ಕಠೋರ ಕ್ಷಣದಲ್ಲಿ ತನ್ನ ಜವಾಬ್ದಾರಿಗಳ ಬಗ್ಗೆ ತಿಳಿದಿದೆ.  ಹಾಗಾಗಿ ‘ಪಿಎಂ ಕೇರ್ಸ್’ ನಿಧಿಗೆ 10 ಕೋಟಿ ರೂ. ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಸಂಸ್ಥೆಗಳಿಗೆ ಸಹಾಯ ಮಾಡಲು 10 ಕೋಟಿ ರೂ ನೀಡಿದ್ದೇವೆ ಎಂದು ಹೇಳಿಕೊಂಡಿದೆ.

ಸೋಮವಾರ ಸಾರ್ವಜನಿಕ ವಲಯದಲ್ಲಿ ವೈರಲ್ ಆದ ಅಫಿಡವಿಟ್‌ನಲ್ಲಿ, “ಇದು ನೋಯ್ಡಾದಲ್ಲಿ ವೈದ್ಯರಿಗೆ (ಕರೋನಾ ಯೋಧರಿಗೆ) ಹೋಟೆಲ್ ಹಾಸಿಗೆಗಳನ್ನು ಕಾಯ್ದಿರಿಸುವುದು, ಅಗತ್ಯವಿರುವವರಿಗೆ ಆಹಾರ ಮತ್ತು ಪಡಿತರ ಒದಗಿಸುವುದಕ್ಕಾಗಿ ಗುರುದ್ವಾರ ಪ್ರಬಂಧಕ್ ಸಮಿತಿಯು ಅಗತ್ಯವಿರುವವರಿಗೆ ತಮ್ಮ ಸಾಮುದಾಯಿಕ ಆಹಾರ ಕೇಂದ್ರವನ್ನು ಮುಂದುವರಿಸಲು ಬೆಂಬಲ ನೀಡಿದೆ” ಎಂದು ಬರೆದುಕೊಂಡಿದೆ.

ಕುತೂಹಲಕಾರಿಯಾಗಿ, ರಾಷ್ಟ್ರೀಯ ಲಾಕ್ ಡೌನ್ ಘೋಷಣೆಯಾದ ಕೆಲವೇ ದಿನಗಳಲ್ಲಿ “ಸಾರ್ವಜನಿಕ ಆರೋಗ್ಯ” ದ ಹಿತದೃಷ್ಟಿಯಿಂದ ಪಾನ್ ಮಸಾಲ ಮಾರಾಟವನ್ನು ನಿಷೇಧಿಸಲು ಉತ್ತರ ಪ್ರದೇಶ ಸರ್ಕಾರ ಮಾರ್ಚ್ 25 ರಂದು ಆದೇಶಿಸಿತು. ಪಾನ್ ಮಸಾಲವನ್ನು ಅಗಿಯುವುದು ಮತ್ತು ಉಗುಳುವುದು COVID-19 ಹರಡುವಿಕೆಯನ್ನು ಹೆಚ್ಚಿಸುತ್ತದೆ ಮತ್ತು ವೇಗಗೊಳಿಸುತ್ತದೆ ಎಂಬ ಎಚ್ಚರಿಕೆಯಿಂದ ಈ ಕ್ರಮ ಕೈಗೊಂಡಿತ್ತು.

ಆದರೆ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಾಗಲೇ ಯುಪಿ ಸರ್ಕಾರವು ಮೇ 6 ರಂದು ಇದ್ದಕ್ಕಿದ್ದಂತೆ ಪಾನ್ ಮಸಾಲ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರ್ಧರಿಸಿತು. ತಂಬಾಕು ಅಥವಾ ನಿಕೋಟಿನ್ ಅನ್ನು ಹೊಂದಿರದ ಪಾನ್ ಮಸಾಲಾವನ್ನು ಮಾತ್ರ ಅನುಮತಿಸಲಾಗುವುದು ಎಂದು ತಿಳಿಸಿತು.

ನಿಷೇಧವನ್ನು ತೆಗೆದುಹಾಕುವ ಸರ್ಕಾರದ ಕ್ರಮ ಪ್ರಶ್ನಿಸಿ ಲಕ್ನೋ ಮೂಲದ ಪತ್ರಕರ್ತ ಸಂಜಯ್ ಶರ್ಮಾ ಅವರು ಪಿಐಎಲ್ ಸಲ್ಲಿಸಿದ್ದಾರೆ.

ಇತ್ತೀಚೆಗೆ ಯುಪಿ ಸರ್ಕಾರದ ಆಹಾರ ಸುರಕ್ಷತೆ ಮತ್ತು ಔಷಧಿಗಳ ಆಡಳಿತದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಐಎಎಸ್ ಅಧಿಕಾರಿ ಅನಿತಾ ಸಿಂಗ್, ಉದ್ಯಮದ ಜೊತೆಗೆ ರೈತರ ಬಗೆಗಿನ ವಿಶಾಲ ಹಿತದೃಷ್ಟಿಯಿಂದ ಇದನ್ನು ಮಾಡಬೇಕಾಗಿದೆ ಎಂಬ ಮನವಿಯನ್ನು ಮಂಡಿಸಿದರು. “ನಿಷೇಧದ ಕಾರಣದಿಂದಾಗಿ ಪಾನ್ ಉದ್ಯಮ ಮತ್ತು ಕೃಷಿ ಸಮುದಾಯ ಎರಡೂ ಗಂಭೀರ ಪರಿಣಾಮ ಎದುರಿಸಿದೆ. ಮಸಾಲದ ಎಲ್ಲಾ ಕಚ್ಚಾ ವಸ್ತುಗಳು ರೈತರಿಂದ ಬರುವುದರಿಂದ ಉದ್ಯಮದ ಮೇಲಿನ ಇಲಾಖೆಯು ನಿಷೇಧವನ್ನು ತೆಗೆದುಹಾಕುವ ಕ್ರಮವನ್ನು ಅಂತಿಮ ನಿರ್ಧಾರವನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ರಜನಿಗಂಧ ಕಂಪನಿಯು ತನ್ನ ಅಫಿಡವಿಟ್ನಲ್ಲಿ “ಪಾನ್‌ ಮಸಾಲ ಕೇವಲ ಮೌತ್ ಫ್ರೆಶನರ್ ಆಗಿದೆ, ಅದು ತಂಬಾಕನ್ನು ಹೊಂದಿರುವುದಿಲ್ಲ. ಸಾವಿರಾರು ಜನರ ಜೀವನೋಪಾಯವು ಪಾನ್‌ ಮಸಾಲದ ವ್ಯವಹಾರದೊಂದಿಗೆ ಸಂಬಂಧ ಹೊಂದಿದೆ. ಹಾಗಾಗಿ ನಾವು ಉತ್ಪನ್ನದ ಮಾರಾಟವನ್ನು ಸಮರ್ಥಿಸಿಕೊಳ್ಳುತ್ತೇವೆ. ಆದ್ದರಿಂದ ಇದು ಯಾವುದೇ ನಿಷೇಧದಿಂದ ಮುಕ್ತವಾಗಿರಬೇಕು” ಎಂದಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 8 ಕ್ಕೆ ನಿಗದಿಪಡಿಸಲಾಗಿದೆ. ಕೋರ್ಟ್ ಏನು ತೀರ್ಪು ನೀಡಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...