Homeಮುಖಪುಟಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ...

ಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ ಕಂಪನಿ!

- Advertisement -
- Advertisement -

COVID-19 ಸಮಯದಲ್ಲಿ ಕಂಪನಿಯೊಂದು PM CARES ನಿಧಿಗೆ ದೇಣಿಗೆ ನೀಡಿದರೆ ಅದನ್ನು ತನ್ನ ಪರವಾನಗಿಯೆಂದು ಭಾವಿಸಬಹುದೇ? ಹೀಗೊಂದು ಪ್ರಶ್ನೆ ಪಾನ್ ಮಸಾಲ ಕಂಪನಿಯ ವಿಚಾರದಲ್ಲಿ ಭುಗಿಲೆದ್ದಿದೆ. ಈ ವಾರ ಅಲಹಾಬಾದ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ಸಂದರ್ಭದಲ್ಲಿ ಹಾಜರಾದ ‘ರಜನಿಗಂಧ’ ಬ್ರಾಂಡ್ ಪಾನ್ ಮಸಾಲ ತಯಾರಕರಾದ ಧರಂಪಾಲ್ ಸತ್ಯಪಾಲ್ ಲಿಮಿಟೆಡ್ ಅವರು ಸಲ್ಲಿಸಿದ ಮನವಿಯು ಈ ಪ್ರಶ್ನೆಯನ್ನು ಮುನ್ನೆಲೆಗೆ ತಂದಿದೆ.

ಕೊರೊನಾ ವೈರಸ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಪಾನ್ ಮಸಾಲ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಪಿಐಎಲ್‌ ಒಂದು ದಾಖಲಾಗಿದೆ. ಏಕೆಂದರೆ ಇದನ್ನು ಬಳಸುವವರು ಪದೇ ಪದೇ ಉಗುಳುವುದರಿಂದಾಗಿ ಕೊರೊನಾ ವೈರಸ್ ಹರಡುವಿಕೆ ಅಧಿಕವಾಗುತ್ತದೆ ಎಂದು ದೂರಲಾಗಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ ರಜನಿಗಂಧ ತನ್ನ ಅಫಿಡವಿಟ್‌ನಲ್ಲಿ “ಈ ಕಠೋರ ಕ್ಷಣದಲ್ಲಿ ತನ್ನ ಜವಾಬ್ದಾರಿಗಳ ಬಗ್ಗೆ ತಿಳಿದಿದೆ.  ಹಾಗಾಗಿ ‘ಪಿಎಂ ಕೇರ್ಸ್’ ನಿಧಿಗೆ 10 ಕೋಟಿ ರೂ. ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಸಂಸ್ಥೆಗಳಿಗೆ ಸಹಾಯ ಮಾಡಲು 10 ಕೋಟಿ ರೂ ನೀಡಿದ್ದೇವೆ ಎಂದು ಹೇಳಿಕೊಂಡಿದೆ.

ಸೋಮವಾರ ಸಾರ್ವಜನಿಕ ವಲಯದಲ್ಲಿ ವೈರಲ್ ಆದ ಅಫಿಡವಿಟ್‌ನಲ್ಲಿ, “ಇದು ನೋಯ್ಡಾದಲ್ಲಿ ವೈದ್ಯರಿಗೆ (ಕರೋನಾ ಯೋಧರಿಗೆ) ಹೋಟೆಲ್ ಹಾಸಿಗೆಗಳನ್ನು ಕಾಯ್ದಿರಿಸುವುದು, ಅಗತ್ಯವಿರುವವರಿಗೆ ಆಹಾರ ಮತ್ತು ಪಡಿತರ ಒದಗಿಸುವುದಕ್ಕಾಗಿ ಗುರುದ್ವಾರ ಪ್ರಬಂಧಕ್ ಸಮಿತಿಯು ಅಗತ್ಯವಿರುವವರಿಗೆ ತಮ್ಮ ಸಾಮುದಾಯಿಕ ಆಹಾರ ಕೇಂದ್ರವನ್ನು ಮುಂದುವರಿಸಲು ಬೆಂಬಲ ನೀಡಿದೆ” ಎಂದು ಬರೆದುಕೊಂಡಿದೆ.

ಕುತೂಹಲಕಾರಿಯಾಗಿ, ರಾಷ್ಟ್ರೀಯ ಲಾಕ್ ಡೌನ್ ಘೋಷಣೆಯಾದ ಕೆಲವೇ ದಿನಗಳಲ್ಲಿ “ಸಾರ್ವಜನಿಕ ಆರೋಗ್ಯ” ದ ಹಿತದೃಷ್ಟಿಯಿಂದ ಪಾನ್ ಮಸಾಲ ಮಾರಾಟವನ್ನು ನಿಷೇಧಿಸಲು ಉತ್ತರ ಪ್ರದೇಶ ಸರ್ಕಾರ ಮಾರ್ಚ್ 25 ರಂದು ಆದೇಶಿಸಿತು. ಪಾನ್ ಮಸಾಲವನ್ನು ಅಗಿಯುವುದು ಮತ್ತು ಉಗುಳುವುದು COVID-19 ಹರಡುವಿಕೆಯನ್ನು ಹೆಚ್ಚಿಸುತ್ತದೆ ಮತ್ತು ವೇಗಗೊಳಿಸುತ್ತದೆ ಎಂಬ ಎಚ್ಚರಿಕೆಯಿಂದ ಈ ಕ್ರಮ ಕೈಗೊಂಡಿತ್ತು.

ಆದರೆ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಾಗಲೇ ಯುಪಿ ಸರ್ಕಾರವು ಮೇ 6 ರಂದು ಇದ್ದಕ್ಕಿದ್ದಂತೆ ಪಾನ್ ಮಸಾಲ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರ್ಧರಿಸಿತು. ತಂಬಾಕು ಅಥವಾ ನಿಕೋಟಿನ್ ಅನ್ನು ಹೊಂದಿರದ ಪಾನ್ ಮಸಾಲಾವನ್ನು ಮಾತ್ರ ಅನುಮತಿಸಲಾಗುವುದು ಎಂದು ತಿಳಿಸಿತು.

ನಿಷೇಧವನ್ನು ತೆಗೆದುಹಾಕುವ ಸರ್ಕಾರದ ಕ್ರಮ ಪ್ರಶ್ನಿಸಿ ಲಕ್ನೋ ಮೂಲದ ಪತ್ರಕರ್ತ ಸಂಜಯ್ ಶರ್ಮಾ ಅವರು ಪಿಐಎಲ್ ಸಲ್ಲಿಸಿದ್ದಾರೆ.

ಇತ್ತೀಚೆಗೆ ಯುಪಿ ಸರ್ಕಾರದ ಆಹಾರ ಸುರಕ್ಷತೆ ಮತ್ತು ಔಷಧಿಗಳ ಆಡಳಿತದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಐಎಎಸ್ ಅಧಿಕಾರಿ ಅನಿತಾ ಸಿಂಗ್, ಉದ್ಯಮದ ಜೊತೆಗೆ ರೈತರ ಬಗೆಗಿನ ವಿಶಾಲ ಹಿತದೃಷ್ಟಿಯಿಂದ ಇದನ್ನು ಮಾಡಬೇಕಾಗಿದೆ ಎಂಬ ಮನವಿಯನ್ನು ಮಂಡಿಸಿದರು. “ನಿಷೇಧದ ಕಾರಣದಿಂದಾಗಿ ಪಾನ್ ಉದ್ಯಮ ಮತ್ತು ಕೃಷಿ ಸಮುದಾಯ ಎರಡೂ ಗಂಭೀರ ಪರಿಣಾಮ ಎದುರಿಸಿದೆ. ಮಸಾಲದ ಎಲ್ಲಾ ಕಚ್ಚಾ ವಸ್ತುಗಳು ರೈತರಿಂದ ಬರುವುದರಿಂದ ಉದ್ಯಮದ ಮೇಲಿನ ಇಲಾಖೆಯು ನಿಷೇಧವನ್ನು ತೆಗೆದುಹಾಕುವ ಕ್ರಮವನ್ನು ಅಂತಿಮ ನಿರ್ಧಾರವನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ರಜನಿಗಂಧ ಕಂಪನಿಯು ತನ್ನ ಅಫಿಡವಿಟ್ನಲ್ಲಿ “ಪಾನ್‌ ಮಸಾಲ ಕೇವಲ ಮೌತ್ ಫ್ರೆಶನರ್ ಆಗಿದೆ, ಅದು ತಂಬಾಕನ್ನು ಹೊಂದಿರುವುದಿಲ್ಲ. ಸಾವಿರಾರು ಜನರ ಜೀವನೋಪಾಯವು ಪಾನ್‌ ಮಸಾಲದ ವ್ಯವಹಾರದೊಂದಿಗೆ ಸಂಬಂಧ ಹೊಂದಿದೆ. ಹಾಗಾಗಿ ನಾವು ಉತ್ಪನ್ನದ ಮಾರಾಟವನ್ನು ಸಮರ್ಥಿಸಿಕೊಳ್ಳುತ್ತೇವೆ. ಆದ್ದರಿಂದ ಇದು ಯಾವುದೇ ನಿಷೇಧದಿಂದ ಮುಕ್ತವಾಗಿರಬೇಕು” ಎಂದಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 8 ಕ್ಕೆ ನಿಗದಿಪಡಿಸಲಾಗಿದೆ. ಕೋರ್ಟ್ ಏನು ತೀರ್ಪು ನೀಡಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...