Homeಮುಖಪುಟಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ...

ಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ ಕಂಪನಿ!

- Advertisement -
- Advertisement -

COVID-19 ಸಮಯದಲ್ಲಿ ಕಂಪನಿಯೊಂದು PM CARES ನಿಧಿಗೆ ದೇಣಿಗೆ ನೀಡಿದರೆ ಅದನ್ನು ತನ್ನ ಪರವಾನಗಿಯೆಂದು ಭಾವಿಸಬಹುದೇ? ಹೀಗೊಂದು ಪ್ರಶ್ನೆ ಪಾನ್ ಮಸಾಲ ಕಂಪನಿಯ ವಿಚಾರದಲ್ಲಿ ಭುಗಿಲೆದ್ದಿದೆ. ಈ ವಾರ ಅಲಹಾಬಾದ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ಸಂದರ್ಭದಲ್ಲಿ ಹಾಜರಾದ ‘ರಜನಿಗಂಧ’ ಬ್ರಾಂಡ್ ಪಾನ್ ಮಸಾಲ ತಯಾರಕರಾದ ಧರಂಪಾಲ್ ಸತ್ಯಪಾಲ್ ಲಿಮಿಟೆಡ್ ಅವರು ಸಲ್ಲಿಸಿದ ಮನವಿಯು ಈ ಪ್ರಶ್ನೆಯನ್ನು ಮುನ್ನೆಲೆಗೆ ತಂದಿದೆ.

ಕೊರೊನಾ ವೈರಸ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಪಾನ್ ಮಸಾಲ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಪಿಐಎಲ್‌ ಒಂದು ದಾಖಲಾಗಿದೆ. ಏಕೆಂದರೆ ಇದನ್ನು ಬಳಸುವವರು ಪದೇ ಪದೇ ಉಗುಳುವುದರಿಂದಾಗಿ ಕೊರೊನಾ ವೈರಸ್ ಹರಡುವಿಕೆ ಅಧಿಕವಾಗುತ್ತದೆ ಎಂದು ದೂರಲಾಗಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ ರಜನಿಗಂಧ ತನ್ನ ಅಫಿಡವಿಟ್‌ನಲ್ಲಿ “ಈ ಕಠೋರ ಕ್ಷಣದಲ್ಲಿ ತನ್ನ ಜವಾಬ್ದಾರಿಗಳ ಬಗ್ಗೆ ತಿಳಿದಿದೆ.  ಹಾಗಾಗಿ ‘ಪಿಎಂ ಕೇರ್ಸ್’ ನಿಧಿಗೆ 10 ಕೋಟಿ ರೂ. ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಸಂಸ್ಥೆಗಳಿಗೆ ಸಹಾಯ ಮಾಡಲು 10 ಕೋಟಿ ರೂ ನೀಡಿದ್ದೇವೆ ಎಂದು ಹೇಳಿಕೊಂಡಿದೆ.

ಸೋಮವಾರ ಸಾರ್ವಜನಿಕ ವಲಯದಲ್ಲಿ ವೈರಲ್ ಆದ ಅಫಿಡವಿಟ್‌ನಲ್ಲಿ, “ಇದು ನೋಯ್ಡಾದಲ್ಲಿ ವೈದ್ಯರಿಗೆ (ಕರೋನಾ ಯೋಧರಿಗೆ) ಹೋಟೆಲ್ ಹಾಸಿಗೆಗಳನ್ನು ಕಾಯ್ದಿರಿಸುವುದು, ಅಗತ್ಯವಿರುವವರಿಗೆ ಆಹಾರ ಮತ್ತು ಪಡಿತರ ಒದಗಿಸುವುದಕ್ಕಾಗಿ ಗುರುದ್ವಾರ ಪ್ರಬಂಧಕ್ ಸಮಿತಿಯು ಅಗತ್ಯವಿರುವವರಿಗೆ ತಮ್ಮ ಸಾಮುದಾಯಿಕ ಆಹಾರ ಕೇಂದ್ರವನ್ನು ಮುಂದುವರಿಸಲು ಬೆಂಬಲ ನೀಡಿದೆ” ಎಂದು ಬರೆದುಕೊಂಡಿದೆ.

ಕುತೂಹಲಕಾರಿಯಾಗಿ, ರಾಷ್ಟ್ರೀಯ ಲಾಕ್ ಡೌನ್ ಘೋಷಣೆಯಾದ ಕೆಲವೇ ದಿನಗಳಲ್ಲಿ “ಸಾರ್ವಜನಿಕ ಆರೋಗ್ಯ” ದ ಹಿತದೃಷ್ಟಿಯಿಂದ ಪಾನ್ ಮಸಾಲ ಮಾರಾಟವನ್ನು ನಿಷೇಧಿಸಲು ಉತ್ತರ ಪ್ರದೇಶ ಸರ್ಕಾರ ಮಾರ್ಚ್ 25 ರಂದು ಆದೇಶಿಸಿತು. ಪಾನ್ ಮಸಾಲವನ್ನು ಅಗಿಯುವುದು ಮತ್ತು ಉಗುಳುವುದು COVID-19 ಹರಡುವಿಕೆಯನ್ನು ಹೆಚ್ಚಿಸುತ್ತದೆ ಮತ್ತು ವೇಗಗೊಳಿಸುತ್ತದೆ ಎಂಬ ಎಚ್ಚರಿಕೆಯಿಂದ ಈ ಕ್ರಮ ಕೈಗೊಂಡಿತ್ತು.

ಆದರೆ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಾಗಲೇ ಯುಪಿ ಸರ್ಕಾರವು ಮೇ 6 ರಂದು ಇದ್ದಕ್ಕಿದ್ದಂತೆ ಪಾನ್ ಮಸಾಲ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರ್ಧರಿಸಿತು. ತಂಬಾಕು ಅಥವಾ ನಿಕೋಟಿನ್ ಅನ್ನು ಹೊಂದಿರದ ಪಾನ್ ಮಸಾಲಾವನ್ನು ಮಾತ್ರ ಅನುಮತಿಸಲಾಗುವುದು ಎಂದು ತಿಳಿಸಿತು.

ನಿಷೇಧವನ್ನು ತೆಗೆದುಹಾಕುವ ಸರ್ಕಾರದ ಕ್ರಮ ಪ್ರಶ್ನಿಸಿ ಲಕ್ನೋ ಮೂಲದ ಪತ್ರಕರ್ತ ಸಂಜಯ್ ಶರ್ಮಾ ಅವರು ಪಿಐಎಲ್ ಸಲ್ಲಿಸಿದ್ದಾರೆ.

ಇತ್ತೀಚೆಗೆ ಯುಪಿ ಸರ್ಕಾರದ ಆಹಾರ ಸುರಕ್ಷತೆ ಮತ್ತು ಔಷಧಿಗಳ ಆಡಳಿತದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಐಎಎಸ್ ಅಧಿಕಾರಿ ಅನಿತಾ ಸಿಂಗ್, ಉದ್ಯಮದ ಜೊತೆಗೆ ರೈತರ ಬಗೆಗಿನ ವಿಶಾಲ ಹಿತದೃಷ್ಟಿಯಿಂದ ಇದನ್ನು ಮಾಡಬೇಕಾಗಿದೆ ಎಂಬ ಮನವಿಯನ್ನು ಮಂಡಿಸಿದರು. “ನಿಷೇಧದ ಕಾರಣದಿಂದಾಗಿ ಪಾನ್ ಉದ್ಯಮ ಮತ್ತು ಕೃಷಿ ಸಮುದಾಯ ಎರಡೂ ಗಂಭೀರ ಪರಿಣಾಮ ಎದುರಿಸಿದೆ. ಮಸಾಲದ ಎಲ್ಲಾ ಕಚ್ಚಾ ವಸ್ತುಗಳು ರೈತರಿಂದ ಬರುವುದರಿಂದ ಉದ್ಯಮದ ಮೇಲಿನ ಇಲಾಖೆಯು ನಿಷೇಧವನ್ನು ತೆಗೆದುಹಾಕುವ ಕ್ರಮವನ್ನು ಅಂತಿಮ ನಿರ್ಧಾರವನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ರಜನಿಗಂಧ ಕಂಪನಿಯು ತನ್ನ ಅಫಿಡವಿಟ್ನಲ್ಲಿ “ಪಾನ್‌ ಮಸಾಲ ಕೇವಲ ಮೌತ್ ಫ್ರೆಶನರ್ ಆಗಿದೆ, ಅದು ತಂಬಾಕನ್ನು ಹೊಂದಿರುವುದಿಲ್ಲ. ಸಾವಿರಾರು ಜನರ ಜೀವನೋಪಾಯವು ಪಾನ್‌ ಮಸಾಲದ ವ್ಯವಹಾರದೊಂದಿಗೆ ಸಂಬಂಧ ಹೊಂದಿದೆ. ಹಾಗಾಗಿ ನಾವು ಉತ್ಪನ್ನದ ಮಾರಾಟವನ್ನು ಸಮರ್ಥಿಸಿಕೊಳ್ಳುತ್ತೇವೆ. ಆದ್ದರಿಂದ ಇದು ಯಾವುದೇ ನಿಷೇಧದಿಂದ ಮುಕ್ತವಾಗಿರಬೇಕು” ಎಂದಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 8 ಕ್ಕೆ ನಿಗದಿಪಡಿಸಲಾಗಿದೆ. ಕೋರ್ಟ್ ಏನು ತೀರ್ಪು ನೀಡಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...