Homeಮುಖಪುಟಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ...

ಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ ಕಂಪನಿ!

- Advertisement -
- Advertisement -

COVID-19 ಸಮಯದಲ್ಲಿ ಕಂಪನಿಯೊಂದು PM CARES ನಿಧಿಗೆ ದೇಣಿಗೆ ನೀಡಿದರೆ ಅದನ್ನು ತನ್ನ ಪರವಾನಗಿಯೆಂದು ಭಾವಿಸಬಹುದೇ? ಹೀಗೊಂದು ಪ್ರಶ್ನೆ ಪಾನ್ ಮಸಾಲ ಕಂಪನಿಯ ವಿಚಾರದಲ್ಲಿ ಭುಗಿಲೆದ್ದಿದೆ. ಈ ವಾರ ಅಲಹಾಬಾದ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ಸಂದರ್ಭದಲ್ಲಿ ಹಾಜರಾದ ‘ರಜನಿಗಂಧ’ ಬ್ರಾಂಡ್ ಪಾನ್ ಮಸಾಲ ತಯಾರಕರಾದ ಧರಂಪಾಲ್ ಸತ್ಯಪಾಲ್ ಲಿಮಿಟೆಡ್ ಅವರು ಸಲ್ಲಿಸಿದ ಮನವಿಯು ಈ ಪ್ರಶ್ನೆಯನ್ನು ಮುನ್ನೆಲೆಗೆ ತಂದಿದೆ.

ಕೊರೊನಾ ವೈರಸ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಪಾನ್ ಮಸಾಲ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಪಿಐಎಲ್‌ ಒಂದು ದಾಖಲಾಗಿದೆ. ಏಕೆಂದರೆ ಇದನ್ನು ಬಳಸುವವರು ಪದೇ ಪದೇ ಉಗುಳುವುದರಿಂದಾಗಿ ಕೊರೊನಾ ವೈರಸ್ ಹರಡುವಿಕೆ ಅಧಿಕವಾಗುತ್ತದೆ ಎಂದು ದೂರಲಾಗಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ ರಜನಿಗಂಧ ತನ್ನ ಅಫಿಡವಿಟ್‌ನಲ್ಲಿ “ಈ ಕಠೋರ ಕ್ಷಣದಲ್ಲಿ ತನ್ನ ಜವಾಬ್ದಾರಿಗಳ ಬಗ್ಗೆ ತಿಳಿದಿದೆ.  ಹಾಗಾಗಿ ‘ಪಿಎಂ ಕೇರ್ಸ್’ ನಿಧಿಗೆ 10 ಕೋಟಿ ರೂ. ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಸಂಸ್ಥೆಗಳಿಗೆ ಸಹಾಯ ಮಾಡಲು 10 ಕೋಟಿ ರೂ ನೀಡಿದ್ದೇವೆ ಎಂದು ಹೇಳಿಕೊಂಡಿದೆ.

ಸೋಮವಾರ ಸಾರ್ವಜನಿಕ ವಲಯದಲ್ಲಿ ವೈರಲ್ ಆದ ಅಫಿಡವಿಟ್‌ನಲ್ಲಿ, “ಇದು ನೋಯ್ಡಾದಲ್ಲಿ ವೈದ್ಯರಿಗೆ (ಕರೋನಾ ಯೋಧರಿಗೆ) ಹೋಟೆಲ್ ಹಾಸಿಗೆಗಳನ್ನು ಕಾಯ್ದಿರಿಸುವುದು, ಅಗತ್ಯವಿರುವವರಿಗೆ ಆಹಾರ ಮತ್ತು ಪಡಿತರ ಒದಗಿಸುವುದಕ್ಕಾಗಿ ಗುರುದ್ವಾರ ಪ್ರಬಂಧಕ್ ಸಮಿತಿಯು ಅಗತ್ಯವಿರುವವರಿಗೆ ತಮ್ಮ ಸಾಮುದಾಯಿಕ ಆಹಾರ ಕೇಂದ್ರವನ್ನು ಮುಂದುವರಿಸಲು ಬೆಂಬಲ ನೀಡಿದೆ” ಎಂದು ಬರೆದುಕೊಂಡಿದೆ.

ಕುತೂಹಲಕಾರಿಯಾಗಿ, ರಾಷ್ಟ್ರೀಯ ಲಾಕ್ ಡೌನ್ ಘೋಷಣೆಯಾದ ಕೆಲವೇ ದಿನಗಳಲ್ಲಿ “ಸಾರ್ವಜನಿಕ ಆರೋಗ್ಯ” ದ ಹಿತದೃಷ್ಟಿಯಿಂದ ಪಾನ್ ಮಸಾಲ ಮಾರಾಟವನ್ನು ನಿಷೇಧಿಸಲು ಉತ್ತರ ಪ್ರದೇಶ ಸರ್ಕಾರ ಮಾರ್ಚ್ 25 ರಂದು ಆದೇಶಿಸಿತು. ಪಾನ್ ಮಸಾಲವನ್ನು ಅಗಿಯುವುದು ಮತ್ತು ಉಗುಳುವುದು COVID-19 ಹರಡುವಿಕೆಯನ್ನು ಹೆಚ್ಚಿಸುತ್ತದೆ ಮತ್ತು ವೇಗಗೊಳಿಸುತ್ತದೆ ಎಂಬ ಎಚ್ಚರಿಕೆಯಿಂದ ಈ ಕ್ರಮ ಕೈಗೊಂಡಿತ್ತು.

ಆದರೆ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಾಗಲೇ ಯುಪಿ ಸರ್ಕಾರವು ಮೇ 6 ರಂದು ಇದ್ದಕ್ಕಿದ್ದಂತೆ ಪಾನ್ ಮಸಾಲ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರ್ಧರಿಸಿತು. ತಂಬಾಕು ಅಥವಾ ನಿಕೋಟಿನ್ ಅನ್ನು ಹೊಂದಿರದ ಪಾನ್ ಮಸಾಲಾವನ್ನು ಮಾತ್ರ ಅನುಮತಿಸಲಾಗುವುದು ಎಂದು ತಿಳಿಸಿತು.

ನಿಷೇಧವನ್ನು ತೆಗೆದುಹಾಕುವ ಸರ್ಕಾರದ ಕ್ರಮ ಪ್ರಶ್ನಿಸಿ ಲಕ್ನೋ ಮೂಲದ ಪತ್ರಕರ್ತ ಸಂಜಯ್ ಶರ್ಮಾ ಅವರು ಪಿಐಎಲ್ ಸಲ್ಲಿಸಿದ್ದಾರೆ.

ಇತ್ತೀಚೆಗೆ ಯುಪಿ ಸರ್ಕಾರದ ಆಹಾರ ಸುರಕ್ಷತೆ ಮತ್ತು ಔಷಧಿಗಳ ಆಡಳಿತದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಐಎಎಸ್ ಅಧಿಕಾರಿ ಅನಿತಾ ಸಿಂಗ್, ಉದ್ಯಮದ ಜೊತೆಗೆ ರೈತರ ಬಗೆಗಿನ ವಿಶಾಲ ಹಿತದೃಷ್ಟಿಯಿಂದ ಇದನ್ನು ಮಾಡಬೇಕಾಗಿದೆ ಎಂಬ ಮನವಿಯನ್ನು ಮಂಡಿಸಿದರು. “ನಿಷೇಧದ ಕಾರಣದಿಂದಾಗಿ ಪಾನ್ ಉದ್ಯಮ ಮತ್ತು ಕೃಷಿ ಸಮುದಾಯ ಎರಡೂ ಗಂಭೀರ ಪರಿಣಾಮ ಎದುರಿಸಿದೆ. ಮಸಾಲದ ಎಲ್ಲಾ ಕಚ್ಚಾ ವಸ್ತುಗಳು ರೈತರಿಂದ ಬರುವುದರಿಂದ ಉದ್ಯಮದ ಮೇಲಿನ ಇಲಾಖೆಯು ನಿಷೇಧವನ್ನು ತೆಗೆದುಹಾಕುವ ಕ್ರಮವನ್ನು ಅಂತಿಮ ನಿರ್ಧಾರವನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ರಜನಿಗಂಧ ಕಂಪನಿಯು ತನ್ನ ಅಫಿಡವಿಟ್ನಲ್ಲಿ “ಪಾನ್‌ ಮಸಾಲ ಕೇವಲ ಮೌತ್ ಫ್ರೆಶನರ್ ಆಗಿದೆ, ಅದು ತಂಬಾಕನ್ನು ಹೊಂದಿರುವುದಿಲ್ಲ. ಸಾವಿರಾರು ಜನರ ಜೀವನೋಪಾಯವು ಪಾನ್‌ ಮಸಾಲದ ವ್ಯವಹಾರದೊಂದಿಗೆ ಸಂಬಂಧ ಹೊಂದಿದೆ. ಹಾಗಾಗಿ ನಾವು ಉತ್ಪನ್ನದ ಮಾರಾಟವನ್ನು ಸಮರ್ಥಿಸಿಕೊಳ್ಳುತ್ತೇವೆ. ಆದ್ದರಿಂದ ಇದು ಯಾವುದೇ ನಿಷೇಧದಿಂದ ಮುಕ್ತವಾಗಿರಬೇಕು” ಎಂದಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 8 ಕ್ಕೆ ನಿಗದಿಪಡಿಸಲಾಗಿದೆ. ಕೋರ್ಟ್ ಏನು ತೀರ್ಪು ನೀಡಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...