Homeಮುಖಪುಟಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ...

ಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ ಕಂಪನಿ!

- Advertisement -
- Advertisement -

COVID-19 ಸಮಯದಲ್ಲಿ ಕಂಪನಿಯೊಂದು PM CARES ನಿಧಿಗೆ ದೇಣಿಗೆ ನೀಡಿದರೆ ಅದನ್ನು ತನ್ನ ಪರವಾನಗಿಯೆಂದು ಭಾವಿಸಬಹುದೇ? ಹೀಗೊಂದು ಪ್ರಶ್ನೆ ಪಾನ್ ಮಸಾಲ ಕಂಪನಿಯ ವಿಚಾರದಲ್ಲಿ ಭುಗಿಲೆದ್ದಿದೆ. ಈ ವಾರ ಅಲಹಾಬಾದ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ಸಂದರ್ಭದಲ್ಲಿ ಹಾಜರಾದ ‘ರಜನಿಗಂಧ’ ಬ್ರಾಂಡ್ ಪಾನ್ ಮಸಾಲ ತಯಾರಕರಾದ ಧರಂಪಾಲ್ ಸತ್ಯಪಾಲ್ ಲಿಮಿಟೆಡ್ ಅವರು ಸಲ್ಲಿಸಿದ ಮನವಿಯು ಈ ಪ್ರಶ್ನೆಯನ್ನು ಮುನ್ನೆಲೆಗೆ ತಂದಿದೆ.

ಕೊರೊನಾ ವೈರಸ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಪಾನ್ ಮಸಾಲ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಪಿಐಎಲ್‌ ಒಂದು ದಾಖಲಾಗಿದೆ. ಏಕೆಂದರೆ ಇದನ್ನು ಬಳಸುವವರು ಪದೇ ಪದೇ ಉಗುಳುವುದರಿಂದಾಗಿ ಕೊರೊನಾ ವೈರಸ್ ಹರಡುವಿಕೆ ಅಧಿಕವಾಗುತ್ತದೆ ಎಂದು ದೂರಲಾಗಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ ರಜನಿಗಂಧ ತನ್ನ ಅಫಿಡವಿಟ್‌ನಲ್ಲಿ “ಈ ಕಠೋರ ಕ್ಷಣದಲ್ಲಿ ತನ್ನ ಜವಾಬ್ದಾರಿಗಳ ಬಗ್ಗೆ ತಿಳಿದಿದೆ.  ಹಾಗಾಗಿ ‘ಪಿಎಂ ಕೇರ್ಸ್’ ನಿಧಿಗೆ 10 ಕೋಟಿ ರೂ. ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಸಂಸ್ಥೆಗಳಿಗೆ ಸಹಾಯ ಮಾಡಲು 10 ಕೋಟಿ ರೂ ನೀಡಿದ್ದೇವೆ ಎಂದು ಹೇಳಿಕೊಂಡಿದೆ.

ಸೋಮವಾರ ಸಾರ್ವಜನಿಕ ವಲಯದಲ್ಲಿ ವೈರಲ್ ಆದ ಅಫಿಡವಿಟ್‌ನಲ್ಲಿ, “ಇದು ನೋಯ್ಡಾದಲ್ಲಿ ವೈದ್ಯರಿಗೆ (ಕರೋನಾ ಯೋಧರಿಗೆ) ಹೋಟೆಲ್ ಹಾಸಿಗೆಗಳನ್ನು ಕಾಯ್ದಿರಿಸುವುದು, ಅಗತ್ಯವಿರುವವರಿಗೆ ಆಹಾರ ಮತ್ತು ಪಡಿತರ ಒದಗಿಸುವುದಕ್ಕಾಗಿ ಗುರುದ್ವಾರ ಪ್ರಬಂಧಕ್ ಸಮಿತಿಯು ಅಗತ್ಯವಿರುವವರಿಗೆ ತಮ್ಮ ಸಾಮುದಾಯಿಕ ಆಹಾರ ಕೇಂದ್ರವನ್ನು ಮುಂದುವರಿಸಲು ಬೆಂಬಲ ನೀಡಿದೆ” ಎಂದು ಬರೆದುಕೊಂಡಿದೆ.

ಕುತೂಹಲಕಾರಿಯಾಗಿ, ರಾಷ್ಟ್ರೀಯ ಲಾಕ್ ಡೌನ್ ಘೋಷಣೆಯಾದ ಕೆಲವೇ ದಿನಗಳಲ್ಲಿ “ಸಾರ್ವಜನಿಕ ಆರೋಗ್ಯ” ದ ಹಿತದೃಷ್ಟಿಯಿಂದ ಪಾನ್ ಮಸಾಲ ಮಾರಾಟವನ್ನು ನಿಷೇಧಿಸಲು ಉತ್ತರ ಪ್ರದೇಶ ಸರ್ಕಾರ ಮಾರ್ಚ್ 25 ರಂದು ಆದೇಶಿಸಿತು. ಪಾನ್ ಮಸಾಲವನ್ನು ಅಗಿಯುವುದು ಮತ್ತು ಉಗುಳುವುದು COVID-19 ಹರಡುವಿಕೆಯನ್ನು ಹೆಚ್ಚಿಸುತ್ತದೆ ಮತ್ತು ವೇಗಗೊಳಿಸುತ್ತದೆ ಎಂಬ ಎಚ್ಚರಿಕೆಯಿಂದ ಈ ಕ್ರಮ ಕೈಗೊಂಡಿತ್ತು.

ಆದರೆ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಾಗಲೇ ಯುಪಿ ಸರ್ಕಾರವು ಮೇ 6 ರಂದು ಇದ್ದಕ್ಕಿದ್ದಂತೆ ಪಾನ್ ಮಸಾಲ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರ್ಧರಿಸಿತು. ತಂಬಾಕು ಅಥವಾ ನಿಕೋಟಿನ್ ಅನ್ನು ಹೊಂದಿರದ ಪಾನ್ ಮಸಾಲಾವನ್ನು ಮಾತ್ರ ಅನುಮತಿಸಲಾಗುವುದು ಎಂದು ತಿಳಿಸಿತು.

ನಿಷೇಧವನ್ನು ತೆಗೆದುಹಾಕುವ ಸರ್ಕಾರದ ಕ್ರಮ ಪ್ರಶ್ನಿಸಿ ಲಕ್ನೋ ಮೂಲದ ಪತ್ರಕರ್ತ ಸಂಜಯ್ ಶರ್ಮಾ ಅವರು ಪಿಐಎಲ್ ಸಲ್ಲಿಸಿದ್ದಾರೆ.

ಇತ್ತೀಚೆಗೆ ಯುಪಿ ಸರ್ಕಾರದ ಆಹಾರ ಸುರಕ್ಷತೆ ಮತ್ತು ಔಷಧಿಗಳ ಆಡಳಿತದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಐಎಎಸ್ ಅಧಿಕಾರಿ ಅನಿತಾ ಸಿಂಗ್, ಉದ್ಯಮದ ಜೊತೆಗೆ ರೈತರ ಬಗೆಗಿನ ವಿಶಾಲ ಹಿತದೃಷ್ಟಿಯಿಂದ ಇದನ್ನು ಮಾಡಬೇಕಾಗಿದೆ ಎಂಬ ಮನವಿಯನ್ನು ಮಂಡಿಸಿದರು. “ನಿಷೇಧದ ಕಾರಣದಿಂದಾಗಿ ಪಾನ್ ಉದ್ಯಮ ಮತ್ತು ಕೃಷಿ ಸಮುದಾಯ ಎರಡೂ ಗಂಭೀರ ಪರಿಣಾಮ ಎದುರಿಸಿದೆ. ಮಸಾಲದ ಎಲ್ಲಾ ಕಚ್ಚಾ ವಸ್ತುಗಳು ರೈತರಿಂದ ಬರುವುದರಿಂದ ಉದ್ಯಮದ ಮೇಲಿನ ಇಲಾಖೆಯು ನಿಷೇಧವನ್ನು ತೆಗೆದುಹಾಕುವ ಕ್ರಮವನ್ನು ಅಂತಿಮ ನಿರ್ಧಾರವನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ರಜನಿಗಂಧ ಕಂಪನಿಯು ತನ್ನ ಅಫಿಡವಿಟ್ನಲ್ಲಿ “ಪಾನ್‌ ಮಸಾಲ ಕೇವಲ ಮೌತ್ ಫ್ರೆಶನರ್ ಆಗಿದೆ, ಅದು ತಂಬಾಕನ್ನು ಹೊಂದಿರುವುದಿಲ್ಲ. ಸಾವಿರಾರು ಜನರ ಜೀವನೋಪಾಯವು ಪಾನ್‌ ಮಸಾಲದ ವ್ಯವಹಾರದೊಂದಿಗೆ ಸಂಬಂಧ ಹೊಂದಿದೆ. ಹಾಗಾಗಿ ನಾವು ಉತ್ಪನ್ನದ ಮಾರಾಟವನ್ನು ಸಮರ್ಥಿಸಿಕೊಳ್ಳುತ್ತೇವೆ. ಆದ್ದರಿಂದ ಇದು ಯಾವುದೇ ನಿಷೇಧದಿಂದ ಮುಕ್ತವಾಗಿರಬೇಕು” ಎಂದಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 8 ಕ್ಕೆ ನಿಗದಿಪಡಿಸಲಾಗಿದೆ. ಕೋರ್ಟ್ ಏನು ತೀರ್ಪು ನೀಡಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...