Homeಮುಖಪುಟಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಅಗ್ಗದ ಪ್ರಚಾರ ಪಡೆಯಲು ಮತ್ತು ನ್ಯಾಯಾಲಯದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ಅರ್ಜಿ ಸಲ್ಲಿಸಿದ್ದ ವಾರಣಾಸಿಯ ನಾಗೇಶ್ವರ ಮಿಶ್ರಾ ಅವರಿಗೆ ನ್ಯಾಯಾಲಯ 25 ಸಾವಿರ ದಂಡ ವಿಧಿಸಿದೆ.

- Advertisement -
- Advertisement -

ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ, ಯುವ ನಾಯಕ ಕನ್ಹಯ್ಯ ಕುಮಾರ್ ಅವರ ಪೌರತ್ವ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಇಂತಹ ಅರ್ಜಿ ಸಲ್ಲಿಸಿದವರಿಗೆ ನ್ಯಾಯಾಲಯ 25,000 ರೂ ದಂಡ ವಿಧಿಸಿದೆ.

2016 ರಲ್ಲಿ ಜೆಎನ್‌ಯು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಸಭೆಯಲ್ಲಿ ಅವರು ರಾಷ್ಟ್ರವಿರೋಧಿ ಘೋಷಣೆ ಕೂಗಿದ್ದರು ಎಂದು ಆರೋಪಿಸಿ ಪೌರತ್ವ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು. “ಅಂತಹ ಘೋಷಣೆ ಕೂಗಿಲ್ಲ ಮತ್ತು ಆ ವಿಡಿಯೋ ನಕಲಿ ಎಂದು ಕನ್ಹಯ್ಯ ಸಮರ್ಥಿಸಿಕೊಂಡಿದ್ದರು”.

ನ್ಯಾಯಮೂರ್ತಿ ಎಸ್.ಕೆ.ಗುಪ್ತಾ ಮತ್ತು ನ್ಯಾಯಮೂರ್ತಿ ಶಮೀಮ್ ಅಹ್ಮದ್ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ. ಅಗ್ಗದ ಪ್ರಚಾರ ಪಡೆಯಲು ಮತ್ತು ನ್ಯಾಯಾಲಯದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ಅರ್ಜಿ ಸಲ್ಲಿಸಿದ್ದ ವಾರಣಾಸಿಯ ನಾಗೇಶ್ವರ ಮಿಶ್ರಾ ಅವರಿಗೆ ನ್ಯಾಯಾಲಯ 25 ಸಾವಿರ ದಂಡ ವಿಧಿಸಿದೆ. ರಿಜಿಸ್ಟರ್ ಮೂಲಕ ಕೋರ್ಟ್‌ಗೆ ದಂಡ ಕಟ್ಟಲು ತಾಕೀತು ಮಾಡಿದೆ.

 ಇದನ್ನೂ ಓದಿ: ಗೌರಿ ಲಂಕೇಶ್ ಮುಸ್ಲಿಂ ಪಕ್ಷಪಾತಿಯಾಗಿದ್ದರೇ? – ಇಸ್ಮತ್ ಪಜೀರ್

ಅರ್ಜಿದಾರರ ಅರ್ಜಿಯು 1955 ರ ಭಾರತೀಯ ಪೌರತ್ವ ಕಾಯ್ದೆಯ ಸೆಕ್ಷನ್ 10 ಅನ್ನು ಅವಲಂಬಿಸಿರುವುದರಿಂದ ಅರ್ಜಿಯು ‘ಅರ್ಹತೆಯಿಲ್ಲದ’ ಮತ್ತು ‘ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲ್ಪಟ್ಟಿದೆ’ ಎಂದು ನ್ಯಾಯಾಲಯ ಹೇಳಿದೆ. ಈ ಕಾಯ್ದೆಯು ನಾಗರಿಕರಲ್ಲದವರಿಗೆ ಕೇಂದ್ರ ಸರ್ಕಾರವು ಪೌರತ್ವವನ್ನು ನೀಡುವ ಸಂದರ್ಭಗಳಲ್ಲಿ ಅನ್ವಯಿಸುತ್ತದೆ. ಆದರೆ ಹುಟ್ಟಿನಿಂದ ಭಾರತೀಯ ಪ್ರಜೆಯಾಗಿದ್ದವರಿಗಲ್ಲ ಎಂದು ಕೋರ್ಟ್ ಹೇಳಿದೆ.

ಕನ್ಹಯ್ಯ ಕುಮಾರ್ ಪೌರತ್ವವನ್ನು ಕಳೆದುಕೊಳ್ಳುವ ಪ್ರಶ್ನೆಯು ಉದ್ಭವಿಸುವುದಿಲ್ಲ, ಏಕೆಂದರೆ ಅವರು (ಕನ್ಹಯ್ಯ ಕುಮಾರ್) ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪದ ಮೇಲೆ ದೆಹಲಿಯ ನ್ಯಾಯಾಲಯದ ಮುಂದೆ ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ತಿಳಿಸಿದೆ.

“ಪೌರತ್ವವನ್ನು ಕಳೆದುಕೊಳ್ಳುವುದು ಗಂಭೀರ ಅಂಶವಾಗಿದೆ, ಏಕೆಂದರೆ ಇದು ಭಾರತದಲ್ಲಿ ವಾಸಿಸುವ ವ್ಯಕ್ತಿಯ ಹಕ್ಕಿನ ಮೇಲೆ ಪರಿಣಾಮ ಬೀರುತ್ತದೆ“ ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ಕನ್ಹಯ್ಯ ಅವರು ಫೆಬ್ರವರಿ 9, 2016 ರಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲ (ಜೆಎನ್‌ಯು) ಕ್ಯಾಂಪಸ್‌ನಲ್ಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಅರ್ಜಿದಾರರು ಹೇಳಿಕೊಂಡಿದ್ದರು ಆದರೆ ಕೇಂದ್ರವು ಈವರೆಗೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಜೊತೆಗೆ “ಕುಮಾರ್ ಮತ್ತು ಅವರ ಸಹಚರರು ಭಯೋತ್ಪಾದಕ ಗುಂಪುಗಳ ಸ್ವಾತಂತ್ರ್ಯ ಹೋರಾಟವನ್ನು ಬೆಂಬಲಿಸುತ್ತಿದ್ದಾರೆ, ಅವರು ಐಕ್ಯತೆಯನ್ನು ಅಸ್ಥಿರಗೊಳಿಸಲು ಮತ್ತು ನಮ್ಮ ದೇಶದ ಶಾಂತಿಯನ್ನು ಭಂಗಗೊಳಿಸಲು ಪಾಕಿಸ್ತಾನದ ಪ್ರಚೋದನೆಯ ಮೇಲೆ ಕೆಲಸ ಮಾಡುತ್ತಿದ್ದಾರೆ” ಎಂಬ ಗಭೀರ ಆರೋಪಗಳನ್ನು ಅರ್ಜಿದಾರರು ಆರೋಪಿಸಿದ್ದರು. ಆದರೆ ನ್ಯಾಯಾಲಯ ಈ ಎಲ್ಲ ಆರೋಪಗಳನ್ನು ತಳ್ಳಿ ಹಾಕಿ, ಯಾವುದೇ ಸಾಕ್ಷ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ.


ಇದನ್ನೂ ಓದಿ: ಕಡೆಗಾಲದಲ್ಲಿ ಹೀಗೇಕೆ ಮಾಡಿದ್ದರು ಪ್ರಣಬ್ ಬಾಬು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...