Homeಮುಖಪುಟಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಅಗ್ಗದ ಪ್ರಚಾರ ಪಡೆಯಲು ಮತ್ತು ನ್ಯಾಯಾಲಯದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ಅರ್ಜಿ ಸಲ್ಲಿಸಿದ್ದ ವಾರಣಾಸಿಯ ನಾಗೇಶ್ವರ ಮಿಶ್ರಾ ಅವರಿಗೆ ನ್ಯಾಯಾಲಯ 25 ಸಾವಿರ ದಂಡ ವಿಧಿಸಿದೆ.

- Advertisement -
- Advertisement -

ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ, ಯುವ ನಾಯಕ ಕನ್ಹಯ್ಯ ಕುಮಾರ್ ಅವರ ಪೌರತ್ವ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಇಂತಹ ಅರ್ಜಿ ಸಲ್ಲಿಸಿದವರಿಗೆ ನ್ಯಾಯಾಲಯ 25,000 ರೂ ದಂಡ ವಿಧಿಸಿದೆ.

2016 ರಲ್ಲಿ ಜೆಎನ್‌ಯು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಸಭೆಯಲ್ಲಿ ಅವರು ರಾಷ್ಟ್ರವಿರೋಧಿ ಘೋಷಣೆ ಕೂಗಿದ್ದರು ಎಂದು ಆರೋಪಿಸಿ ಪೌರತ್ವ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು. “ಅಂತಹ ಘೋಷಣೆ ಕೂಗಿಲ್ಲ ಮತ್ತು ಆ ವಿಡಿಯೋ ನಕಲಿ ಎಂದು ಕನ್ಹಯ್ಯ ಸಮರ್ಥಿಸಿಕೊಂಡಿದ್ದರು”.

ನ್ಯಾಯಮೂರ್ತಿ ಎಸ್.ಕೆ.ಗುಪ್ತಾ ಮತ್ತು ನ್ಯಾಯಮೂರ್ತಿ ಶಮೀಮ್ ಅಹ್ಮದ್ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ. ಅಗ್ಗದ ಪ್ರಚಾರ ಪಡೆಯಲು ಮತ್ತು ನ್ಯಾಯಾಲಯದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ಅರ್ಜಿ ಸಲ್ಲಿಸಿದ್ದ ವಾರಣಾಸಿಯ ನಾಗೇಶ್ವರ ಮಿಶ್ರಾ ಅವರಿಗೆ ನ್ಯಾಯಾಲಯ 25 ಸಾವಿರ ದಂಡ ವಿಧಿಸಿದೆ. ರಿಜಿಸ್ಟರ್ ಮೂಲಕ ಕೋರ್ಟ್‌ಗೆ ದಂಡ ಕಟ್ಟಲು ತಾಕೀತು ಮಾಡಿದೆ.

 ಇದನ್ನೂ ಓದಿ: ಗೌರಿ ಲಂಕೇಶ್ ಮುಸ್ಲಿಂ ಪಕ್ಷಪಾತಿಯಾಗಿದ್ದರೇ? – ಇಸ್ಮತ್ ಪಜೀರ್

ಅರ್ಜಿದಾರರ ಅರ್ಜಿಯು 1955 ರ ಭಾರತೀಯ ಪೌರತ್ವ ಕಾಯ್ದೆಯ ಸೆಕ್ಷನ್ 10 ಅನ್ನು ಅವಲಂಬಿಸಿರುವುದರಿಂದ ಅರ್ಜಿಯು ‘ಅರ್ಹತೆಯಿಲ್ಲದ’ ಮತ್ತು ‘ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲ್ಪಟ್ಟಿದೆ’ ಎಂದು ನ್ಯಾಯಾಲಯ ಹೇಳಿದೆ. ಈ ಕಾಯ್ದೆಯು ನಾಗರಿಕರಲ್ಲದವರಿಗೆ ಕೇಂದ್ರ ಸರ್ಕಾರವು ಪೌರತ್ವವನ್ನು ನೀಡುವ ಸಂದರ್ಭಗಳಲ್ಲಿ ಅನ್ವಯಿಸುತ್ತದೆ. ಆದರೆ ಹುಟ್ಟಿನಿಂದ ಭಾರತೀಯ ಪ್ರಜೆಯಾಗಿದ್ದವರಿಗಲ್ಲ ಎಂದು ಕೋರ್ಟ್ ಹೇಳಿದೆ.

ಕನ್ಹಯ್ಯ ಕುಮಾರ್ ಪೌರತ್ವವನ್ನು ಕಳೆದುಕೊಳ್ಳುವ ಪ್ರಶ್ನೆಯು ಉದ್ಭವಿಸುವುದಿಲ್ಲ, ಏಕೆಂದರೆ ಅವರು (ಕನ್ಹಯ್ಯ ಕುಮಾರ್) ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪದ ಮೇಲೆ ದೆಹಲಿಯ ನ್ಯಾಯಾಲಯದ ಮುಂದೆ ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ತಿಳಿಸಿದೆ.

“ಪೌರತ್ವವನ್ನು ಕಳೆದುಕೊಳ್ಳುವುದು ಗಂಭೀರ ಅಂಶವಾಗಿದೆ, ಏಕೆಂದರೆ ಇದು ಭಾರತದಲ್ಲಿ ವಾಸಿಸುವ ವ್ಯಕ್ತಿಯ ಹಕ್ಕಿನ ಮೇಲೆ ಪರಿಣಾಮ ಬೀರುತ್ತದೆ“ ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ಕನ್ಹಯ್ಯ ಅವರು ಫೆಬ್ರವರಿ 9, 2016 ರಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲ (ಜೆಎನ್‌ಯು) ಕ್ಯಾಂಪಸ್‌ನಲ್ಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಅರ್ಜಿದಾರರು ಹೇಳಿಕೊಂಡಿದ್ದರು ಆದರೆ ಕೇಂದ್ರವು ಈವರೆಗೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಜೊತೆಗೆ “ಕುಮಾರ್ ಮತ್ತು ಅವರ ಸಹಚರರು ಭಯೋತ್ಪಾದಕ ಗುಂಪುಗಳ ಸ್ವಾತಂತ್ರ್ಯ ಹೋರಾಟವನ್ನು ಬೆಂಬಲಿಸುತ್ತಿದ್ದಾರೆ, ಅವರು ಐಕ್ಯತೆಯನ್ನು ಅಸ್ಥಿರಗೊಳಿಸಲು ಮತ್ತು ನಮ್ಮ ದೇಶದ ಶಾಂತಿಯನ್ನು ಭಂಗಗೊಳಿಸಲು ಪಾಕಿಸ್ತಾನದ ಪ್ರಚೋದನೆಯ ಮೇಲೆ ಕೆಲಸ ಮಾಡುತ್ತಿದ್ದಾರೆ” ಎಂಬ ಗಭೀರ ಆರೋಪಗಳನ್ನು ಅರ್ಜಿದಾರರು ಆರೋಪಿಸಿದ್ದರು. ಆದರೆ ನ್ಯಾಯಾಲಯ ಈ ಎಲ್ಲ ಆರೋಪಗಳನ್ನು ತಳ್ಳಿ ಹಾಕಿ, ಯಾವುದೇ ಸಾಕ್ಷ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ.


ಇದನ್ನೂ ಓದಿ: ಕಡೆಗಾಲದಲ್ಲಿ ಹೀಗೇಕೆ ಮಾಡಿದ್ದರು ಪ್ರಣಬ್ ಬಾಬು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...