Homeಕರ್ನಾಟಕತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

ತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

- Advertisement -
- Advertisement -

ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ಕೇಂದ್ರ ನಾಯಕತ್ವದ ಮೇಲೆ ಒತ್ತಡಗಳು ಹೆಚ್ಚುವ ಸೂಚನೆಗಳು ದೊರೆತಿವೆ.

ಕಾಂಗ್ರೆಸ್ ಪಕ್ಷದ ನಾಯಕ ಸಚಿನ್ ಪೈಲಟ್ ತನ್ನದೇ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ. ಭ್ರಷ್ಟಾಚಾರ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಗುರುವಾರ ಅಜ್ಮೀರ್‌ನಿಂದ ‘ಜನಸಂಘರ್ಷ್ ಯಾತ್ರೆ’ ಆರಂಭಿಸಿರುವ ಸಚಿನ್‌, ಐದು ದಿನಗಳಲ್ಲಿ ಸುಮಾರು 125 ಕಿ.ಮೀ. ಕ್ರಮಿಸಲಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ನಡೆಸಿರುವ ಭ್ರಷ್ಟಾಚಾರಗಳ ಕುರಿತು ಯಾವುದೇ ಕ್ರಮವನ್ನು ಗೆಹ್ಲೋಟ್ ನೇತೃತ್ವದ ಸರ್ಕಾರ ಜರುಗಿಸಿಲ್ಲ ಎಂದು ಕಳೆದ ತಿಂಗಳು ಒಂದು ದಿನದ ಉಪವಾಸವನ್ನು ನಡೆಸಿ ಸಚಿನ್‌ ಗಮನ ಸೆಳೆದಿದ್ದರು.

ಗುರುವಾರ ಮಧ್ಯಾಹ್ನದ ಸುಮಾರಿಗೆ ಜೈಪುರ ರಸ್ತೆಯ ಅಶೋಕ್ ಉದ್ಯಾನ್ ಬಳಿ ಪೈಲಟ್ ಅವರು ರಾಜ್ಯ ರಾಜಧಾನಿ ಕಡೆಗೆ ಮೆರವಣಿಗೆಯನ್ನು ಪ್ರಾರಂಭಿಸುವ ಮೊದಲು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಕಿಶನ್‌ಗಢದ ತೊಲಮಲ್ ಗ್ರಾಮದಲ್ಲಿ ರಾತ್ರಿ ತಂಗಲಿದ್ದಾರೆ.

ಗೆಹ್ಲೋಟ್ ಮತ್ತು ಪೈಲಟ್ ನಡುವೆ ತಿಕ್ಕಾಟ ತಾರಕಕ್ಕೇರುತ್ತಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ ಸಾರ್ವಜನಿಕವಾಗಿ ಗುದ್ದಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂದು 2020ರಲ್ಲಿ ಸಚಿನ್‌ ಬಂಡಾಯ ತೋರಿದ್ದರು.

ಆದಾಗ್ಯೂ, ಗೆಹ್ಲೋಟ್ ಅಧಿಕಾರದಲ್ಲಿ ಮುಂದುವರಿಯುವಲ್ಲಿ ಯಶಸ್ವಿಯಾದರು. ಪೈಲಟ್ ಮತ್ತು ಅವರ ಕೆಲವು ನಿಷ್ಠರನ್ನು ನಂತರ ರಾಜ್ಯ ಕ್ಯಾಬಿನೆಟ್‌ನಿಂದ ಹೊರಹಾಕಲಾಯಿತು.

ಭಾನುವಾರ ಧೋಲ್‌ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿ, ಬಿಜೆಪಿ ನಾಯಕರಾದ ವಸುಂಧರಾ ರಾಜೇ ಮತ್ತು ಕೈಲಾಶ್ ಮೇಘವಾಲ್ ಅವರು ಹಣಬಲವನ್ನು ನೀಡಲಿಲ್ಲ. ಚುನಾಯಿತ ಸರ್ಕಾರವನ್ನು ಉರುಳಿಸುವ ಪಿತೂರಿಯನ್ನು ಬೆಂಬಲಿಸಲು ಅವರು ನಿರಾಕರಿಸಿದ್ದರಿಂದ 2020ರಲ್ಲಿ ಕೆಲವು ಕಾಂಗ್ರೆಸ್ ಶಾಸಕರ ಬಂಡಾಯ ಯಶಸ್ವಿಯಾಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಪೈಲಟ್ ಅವರು ಗೆಹ್ಲೋಟ್ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಗೆಹ್ಲೋಟ್ ಅವರು ಆರೋಪಗಳು ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಇತ್ತೀಚೆಗೆ ಮಾತನಾಡಿದ್ದ ಫೈಲಟ್‌, “ನಮ್ಮ ಮಕ್ಕಳು ವರ್ಷಗಳ ಕಾಲ ಕಷ್ಟಪಟ್ಟಿರುತ್ತಾರೆ, ಪೋಷಕರು ಮಕ್ಕಳ ಟ್ಯೂಷನ್ ತರಗತಿಗಳಿಗಾಗಿ ಅರೆಹೊಟ್ಟೆ ಮಾಡಿಕೊಂಡಿರುತ್ತಾರೆ. ಅವರು ಪರೀಕ್ಷೆಗಳಿಗೆ ಹಾಜರಾಗುತ್ತಾರೆ, ಪತ್ರಿಕೆ ಸೋರಿಕೆಯಾಗುತ್ತದೆ, ರದ್ದುಗೊಳ್ಳುತ್ತದೆ. ಅದರ ಮೇಲೆ ಕ್ರಮ ಕೈಗೊಳ್ಳಲು ಏಕೆ ಇಷ್ಟು ಸಮಯ ಬೇಕಾಗುತ್ತದೆ? ನ್ಯಾಯ ಪಡೆಯುವುದು ಏಕೆ ಕಷ್ಟ?” ಎಂದು ಪ್ರಶ್ನಿಸಿದ್ದರು.

“ಉನ್ನತ ಹುದ್ದೆಯಲ್ಲಿರುವವರಿಗೆ ಶಿಕ್ಷಣಕ್ಕಾಗಿ ಖರ್ಚು ಮಾಡುವ ಸಾವಿರಾರು ರೂಪಾಯಿಗಳ ಮೌಲ್ಯ ತಿಳಿದಿಲ್ಲ. ಆದ್ದರಿಂದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ತುಂಬಾ ಸಮಯ ತೆಗೆದುಕೊಳ್ಳಲಾಗುತ್ತದೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...