Homeಕರ್ನಾಟಕತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

ತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

- Advertisement -
- Advertisement -

ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ಕೇಂದ್ರ ನಾಯಕತ್ವದ ಮೇಲೆ ಒತ್ತಡಗಳು ಹೆಚ್ಚುವ ಸೂಚನೆಗಳು ದೊರೆತಿವೆ.

ಕಾಂಗ್ರೆಸ್ ಪಕ್ಷದ ನಾಯಕ ಸಚಿನ್ ಪೈಲಟ್ ತನ್ನದೇ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ. ಭ್ರಷ್ಟಾಚಾರ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಗುರುವಾರ ಅಜ್ಮೀರ್‌ನಿಂದ ‘ಜನಸಂಘರ್ಷ್ ಯಾತ್ರೆ’ ಆರಂಭಿಸಿರುವ ಸಚಿನ್‌, ಐದು ದಿನಗಳಲ್ಲಿ ಸುಮಾರು 125 ಕಿ.ಮೀ. ಕ್ರಮಿಸಲಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ನಡೆಸಿರುವ ಭ್ರಷ್ಟಾಚಾರಗಳ ಕುರಿತು ಯಾವುದೇ ಕ್ರಮವನ್ನು ಗೆಹ್ಲೋಟ್ ನೇತೃತ್ವದ ಸರ್ಕಾರ ಜರುಗಿಸಿಲ್ಲ ಎಂದು ಕಳೆದ ತಿಂಗಳು ಒಂದು ದಿನದ ಉಪವಾಸವನ್ನು ನಡೆಸಿ ಸಚಿನ್‌ ಗಮನ ಸೆಳೆದಿದ್ದರು.

ಗುರುವಾರ ಮಧ್ಯಾಹ್ನದ ಸುಮಾರಿಗೆ ಜೈಪುರ ರಸ್ತೆಯ ಅಶೋಕ್ ಉದ್ಯಾನ್ ಬಳಿ ಪೈಲಟ್ ಅವರು ರಾಜ್ಯ ರಾಜಧಾನಿ ಕಡೆಗೆ ಮೆರವಣಿಗೆಯನ್ನು ಪ್ರಾರಂಭಿಸುವ ಮೊದಲು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಕಿಶನ್‌ಗಢದ ತೊಲಮಲ್ ಗ್ರಾಮದಲ್ಲಿ ರಾತ್ರಿ ತಂಗಲಿದ್ದಾರೆ.

ಗೆಹ್ಲೋಟ್ ಮತ್ತು ಪೈಲಟ್ ನಡುವೆ ತಿಕ್ಕಾಟ ತಾರಕಕ್ಕೇರುತ್ತಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ ಸಾರ್ವಜನಿಕವಾಗಿ ಗುದ್ದಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂದು 2020ರಲ್ಲಿ ಸಚಿನ್‌ ಬಂಡಾಯ ತೋರಿದ್ದರು.

ಆದಾಗ್ಯೂ, ಗೆಹ್ಲೋಟ್ ಅಧಿಕಾರದಲ್ಲಿ ಮುಂದುವರಿಯುವಲ್ಲಿ ಯಶಸ್ವಿಯಾದರು. ಪೈಲಟ್ ಮತ್ತು ಅವರ ಕೆಲವು ನಿಷ್ಠರನ್ನು ನಂತರ ರಾಜ್ಯ ಕ್ಯಾಬಿನೆಟ್‌ನಿಂದ ಹೊರಹಾಕಲಾಯಿತು.

ಭಾನುವಾರ ಧೋಲ್‌ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿ, ಬಿಜೆಪಿ ನಾಯಕರಾದ ವಸುಂಧರಾ ರಾಜೇ ಮತ್ತು ಕೈಲಾಶ್ ಮೇಘವಾಲ್ ಅವರು ಹಣಬಲವನ್ನು ನೀಡಲಿಲ್ಲ. ಚುನಾಯಿತ ಸರ್ಕಾರವನ್ನು ಉರುಳಿಸುವ ಪಿತೂರಿಯನ್ನು ಬೆಂಬಲಿಸಲು ಅವರು ನಿರಾಕರಿಸಿದ್ದರಿಂದ 2020ರಲ್ಲಿ ಕೆಲವು ಕಾಂಗ್ರೆಸ್ ಶಾಸಕರ ಬಂಡಾಯ ಯಶಸ್ವಿಯಾಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಪೈಲಟ್ ಅವರು ಗೆಹ್ಲೋಟ್ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಗೆಹ್ಲೋಟ್ ಅವರು ಆರೋಪಗಳು ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಇತ್ತೀಚೆಗೆ ಮಾತನಾಡಿದ್ದ ಫೈಲಟ್‌, “ನಮ್ಮ ಮಕ್ಕಳು ವರ್ಷಗಳ ಕಾಲ ಕಷ್ಟಪಟ್ಟಿರುತ್ತಾರೆ, ಪೋಷಕರು ಮಕ್ಕಳ ಟ್ಯೂಷನ್ ತರಗತಿಗಳಿಗಾಗಿ ಅರೆಹೊಟ್ಟೆ ಮಾಡಿಕೊಂಡಿರುತ್ತಾರೆ. ಅವರು ಪರೀಕ್ಷೆಗಳಿಗೆ ಹಾಜರಾಗುತ್ತಾರೆ, ಪತ್ರಿಕೆ ಸೋರಿಕೆಯಾಗುತ್ತದೆ, ರದ್ದುಗೊಳ್ಳುತ್ತದೆ. ಅದರ ಮೇಲೆ ಕ್ರಮ ಕೈಗೊಳ್ಳಲು ಏಕೆ ಇಷ್ಟು ಸಮಯ ಬೇಕಾಗುತ್ತದೆ? ನ್ಯಾಯ ಪಡೆಯುವುದು ಏಕೆ ಕಷ್ಟ?” ಎಂದು ಪ್ರಶ್ನಿಸಿದ್ದರು.

“ಉನ್ನತ ಹುದ್ದೆಯಲ್ಲಿರುವವರಿಗೆ ಶಿಕ್ಷಣಕ್ಕಾಗಿ ಖರ್ಚು ಮಾಡುವ ಸಾವಿರಾರು ರೂಪಾಯಿಗಳ ಮೌಲ್ಯ ತಿಳಿದಿಲ್ಲ. ಆದ್ದರಿಂದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ತುಂಬಾ ಸಮಯ ತೆಗೆದುಕೊಳ್ಳಲಾಗುತ್ತದೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...