Homeಕರ್ನಾಟಕತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

ತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

- Advertisement -
- Advertisement -

ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ಕೇಂದ್ರ ನಾಯಕತ್ವದ ಮೇಲೆ ಒತ್ತಡಗಳು ಹೆಚ್ಚುವ ಸೂಚನೆಗಳು ದೊರೆತಿವೆ.

ಕಾಂಗ್ರೆಸ್ ಪಕ್ಷದ ನಾಯಕ ಸಚಿನ್ ಪೈಲಟ್ ತನ್ನದೇ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ. ಭ್ರಷ್ಟಾಚಾರ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಗುರುವಾರ ಅಜ್ಮೀರ್‌ನಿಂದ ‘ಜನಸಂಘರ್ಷ್ ಯಾತ್ರೆ’ ಆರಂಭಿಸಿರುವ ಸಚಿನ್‌, ಐದು ದಿನಗಳಲ್ಲಿ ಸುಮಾರು 125 ಕಿ.ಮೀ. ಕ್ರಮಿಸಲಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ನಡೆಸಿರುವ ಭ್ರಷ್ಟಾಚಾರಗಳ ಕುರಿತು ಯಾವುದೇ ಕ್ರಮವನ್ನು ಗೆಹ್ಲೋಟ್ ನೇತೃತ್ವದ ಸರ್ಕಾರ ಜರುಗಿಸಿಲ್ಲ ಎಂದು ಕಳೆದ ತಿಂಗಳು ಒಂದು ದಿನದ ಉಪವಾಸವನ್ನು ನಡೆಸಿ ಸಚಿನ್‌ ಗಮನ ಸೆಳೆದಿದ್ದರು.

ಗುರುವಾರ ಮಧ್ಯಾಹ್ನದ ಸುಮಾರಿಗೆ ಜೈಪುರ ರಸ್ತೆಯ ಅಶೋಕ್ ಉದ್ಯಾನ್ ಬಳಿ ಪೈಲಟ್ ಅವರು ರಾಜ್ಯ ರಾಜಧಾನಿ ಕಡೆಗೆ ಮೆರವಣಿಗೆಯನ್ನು ಪ್ರಾರಂಭಿಸುವ ಮೊದಲು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಕಿಶನ್‌ಗಢದ ತೊಲಮಲ್ ಗ್ರಾಮದಲ್ಲಿ ರಾತ್ರಿ ತಂಗಲಿದ್ದಾರೆ.

ಗೆಹ್ಲೋಟ್ ಮತ್ತು ಪೈಲಟ್ ನಡುವೆ ತಿಕ್ಕಾಟ ತಾರಕಕ್ಕೇರುತ್ತಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ ಸಾರ್ವಜನಿಕವಾಗಿ ಗುದ್ದಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂದು 2020ರಲ್ಲಿ ಸಚಿನ್‌ ಬಂಡಾಯ ತೋರಿದ್ದರು.

ಆದಾಗ್ಯೂ, ಗೆಹ್ಲೋಟ್ ಅಧಿಕಾರದಲ್ಲಿ ಮುಂದುವರಿಯುವಲ್ಲಿ ಯಶಸ್ವಿಯಾದರು. ಪೈಲಟ್ ಮತ್ತು ಅವರ ಕೆಲವು ನಿಷ್ಠರನ್ನು ನಂತರ ರಾಜ್ಯ ಕ್ಯಾಬಿನೆಟ್‌ನಿಂದ ಹೊರಹಾಕಲಾಯಿತು.

ಭಾನುವಾರ ಧೋಲ್‌ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿ, ಬಿಜೆಪಿ ನಾಯಕರಾದ ವಸುಂಧರಾ ರಾಜೇ ಮತ್ತು ಕೈಲಾಶ್ ಮೇಘವಾಲ್ ಅವರು ಹಣಬಲವನ್ನು ನೀಡಲಿಲ್ಲ. ಚುನಾಯಿತ ಸರ್ಕಾರವನ್ನು ಉರುಳಿಸುವ ಪಿತೂರಿಯನ್ನು ಬೆಂಬಲಿಸಲು ಅವರು ನಿರಾಕರಿಸಿದ್ದರಿಂದ 2020ರಲ್ಲಿ ಕೆಲವು ಕಾಂಗ್ರೆಸ್ ಶಾಸಕರ ಬಂಡಾಯ ಯಶಸ್ವಿಯಾಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಪೈಲಟ್ ಅವರು ಗೆಹ್ಲೋಟ್ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಗೆಹ್ಲೋಟ್ ಅವರು ಆರೋಪಗಳು ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಇತ್ತೀಚೆಗೆ ಮಾತನಾಡಿದ್ದ ಫೈಲಟ್‌, “ನಮ್ಮ ಮಕ್ಕಳು ವರ್ಷಗಳ ಕಾಲ ಕಷ್ಟಪಟ್ಟಿರುತ್ತಾರೆ, ಪೋಷಕರು ಮಕ್ಕಳ ಟ್ಯೂಷನ್ ತರಗತಿಗಳಿಗಾಗಿ ಅರೆಹೊಟ್ಟೆ ಮಾಡಿಕೊಂಡಿರುತ್ತಾರೆ. ಅವರು ಪರೀಕ್ಷೆಗಳಿಗೆ ಹಾಜರಾಗುತ್ತಾರೆ, ಪತ್ರಿಕೆ ಸೋರಿಕೆಯಾಗುತ್ತದೆ, ರದ್ದುಗೊಳ್ಳುತ್ತದೆ. ಅದರ ಮೇಲೆ ಕ್ರಮ ಕೈಗೊಳ್ಳಲು ಏಕೆ ಇಷ್ಟು ಸಮಯ ಬೇಕಾಗುತ್ತದೆ? ನ್ಯಾಯ ಪಡೆಯುವುದು ಏಕೆ ಕಷ್ಟ?” ಎಂದು ಪ್ರಶ್ನಿಸಿದ್ದರು.

“ಉನ್ನತ ಹುದ್ದೆಯಲ್ಲಿರುವವರಿಗೆ ಶಿಕ್ಷಣಕ್ಕಾಗಿ ಖರ್ಚು ಮಾಡುವ ಸಾವಿರಾರು ರೂಪಾಯಿಗಳ ಮೌಲ್ಯ ತಿಳಿದಿಲ್ಲ. ಆದ್ದರಿಂದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ತುಂಬಾ ಸಮಯ ತೆಗೆದುಕೊಳ್ಳಲಾಗುತ್ತದೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...