Homeಕರ್ನಾಟಕತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

ತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

- Advertisement -
- Advertisement -

ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ಕೇಂದ್ರ ನಾಯಕತ್ವದ ಮೇಲೆ ಒತ್ತಡಗಳು ಹೆಚ್ಚುವ ಸೂಚನೆಗಳು ದೊರೆತಿವೆ.

ಕಾಂಗ್ರೆಸ್ ಪಕ್ಷದ ನಾಯಕ ಸಚಿನ್ ಪೈಲಟ್ ತನ್ನದೇ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ. ಭ್ರಷ್ಟಾಚಾರ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಗುರುವಾರ ಅಜ್ಮೀರ್‌ನಿಂದ ‘ಜನಸಂಘರ್ಷ್ ಯಾತ್ರೆ’ ಆರಂಭಿಸಿರುವ ಸಚಿನ್‌, ಐದು ದಿನಗಳಲ್ಲಿ ಸುಮಾರು 125 ಕಿ.ಮೀ. ಕ್ರಮಿಸಲಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ನಡೆಸಿರುವ ಭ್ರಷ್ಟಾಚಾರಗಳ ಕುರಿತು ಯಾವುದೇ ಕ್ರಮವನ್ನು ಗೆಹ್ಲೋಟ್ ನೇತೃತ್ವದ ಸರ್ಕಾರ ಜರುಗಿಸಿಲ್ಲ ಎಂದು ಕಳೆದ ತಿಂಗಳು ಒಂದು ದಿನದ ಉಪವಾಸವನ್ನು ನಡೆಸಿ ಸಚಿನ್‌ ಗಮನ ಸೆಳೆದಿದ್ದರು.

ಗುರುವಾರ ಮಧ್ಯಾಹ್ನದ ಸುಮಾರಿಗೆ ಜೈಪುರ ರಸ್ತೆಯ ಅಶೋಕ್ ಉದ್ಯಾನ್ ಬಳಿ ಪೈಲಟ್ ಅವರು ರಾಜ್ಯ ರಾಜಧಾನಿ ಕಡೆಗೆ ಮೆರವಣಿಗೆಯನ್ನು ಪ್ರಾರಂಭಿಸುವ ಮೊದಲು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಕಿಶನ್‌ಗಢದ ತೊಲಮಲ್ ಗ್ರಾಮದಲ್ಲಿ ರಾತ್ರಿ ತಂಗಲಿದ್ದಾರೆ.

ಗೆಹ್ಲೋಟ್ ಮತ್ತು ಪೈಲಟ್ ನಡುವೆ ತಿಕ್ಕಾಟ ತಾರಕಕ್ಕೇರುತ್ತಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ ಸಾರ್ವಜನಿಕವಾಗಿ ಗುದ್ದಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂದು 2020ರಲ್ಲಿ ಸಚಿನ್‌ ಬಂಡಾಯ ತೋರಿದ್ದರು.

ಆದಾಗ್ಯೂ, ಗೆಹ್ಲೋಟ್ ಅಧಿಕಾರದಲ್ಲಿ ಮುಂದುವರಿಯುವಲ್ಲಿ ಯಶಸ್ವಿಯಾದರು. ಪೈಲಟ್ ಮತ್ತು ಅವರ ಕೆಲವು ನಿಷ್ಠರನ್ನು ನಂತರ ರಾಜ್ಯ ಕ್ಯಾಬಿನೆಟ್‌ನಿಂದ ಹೊರಹಾಕಲಾಯಿತು.

ಭಾನುವಾರ ಧೋಲ್‌ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿ, ಬಿಜೆಪಿ ನಾಯಕರಾದ ವಸುಂಧರಾ ರಾಜೇ ಮತ್ತು ಕೈಲಾಶ್ ಮೇಘವಾಲ್ ಅವರು ಹಣಬಲವನ್ನು ನೀಡಲಿಲ್ಲ. ಚುನಾಯಿತ ಸರ್ಕಾರವನ್ನು ಉರುಳಿಸುವ ಪಿತೂರಿಯನ್ನು ಬೆಂಬಲಿಸಲು ಅವರು ನಿರಾಕರಿಸಿದ್ದರಿಂದ 2020ರಲ್ಲಿ ಕೆಲವು ಕಾಂಗ್ರೆಸ್ ಶಾಸಕರ ಬಂಡಾಯ ಯಶಸ್ವಿಯಾಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಪೈಲಟ್ ಅವರು ಗೆಹ್ಲೋಟ್ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಗೆಹ್ಲೋಟ್ ಅವರು ಆರೋಪಗಳು ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಇತ್ತೀಚೆಗೆ ಮಾತನಾಡಿದ್ದ ಫೈಲಟ್‌, “ನಮ್ಮ ಮಕ್ಕಳು ವರ್ಷಗಳ ಕಾಲ ಕಷ್ಟಪಟ್ಟಿರುತ್ತಾರೆ, ಪೋಷಕರು ಮಕ್ಕಳ ಟ್ಯೂಷನ್ ತರಗತಿಗಳಿಗಾಗಿ ಅರೆಹೊಟ್ಟೆ ಮಾಡಿಕೊಂಡಿರುತ್ತಾರೆ. ಅವರು ಪರೀಕ್ಷೆಗಳಿಗೆ ಹಾಜರಾಗುತ್ತಾರೆ, ಪತ್ರಿಕೆ ಸೋರಿಕೆಯಾಗುತ್ತದೆ, ರದ್ದುಗೊಳ್ಳುತ್ತದೆ. ಅದರ ಮೇಲೆ ಕ್ರಮ ಕೈಗೊಳ್ಳಲು ಏಕೆ ಇಷ್ಟು ಸಮಯ ಬೇಕಾಗುತ್ತದೆ? ನ್ಯಾಯ ಪಡೆಯುವುದು ಏಕೆ ಕಷ್ಟ?” ಎಂದು ಪ್ರಶ್ನಿಸಿದ್ದರು.

“ಉನ್ನತ ಹುದ್ದೆಯಲ್ಲಿರುವವರಿಗೆ ಶಿಕ್ಷಣಕ್ಕಾಗಿ ಖರ್ಚು ಮಾಡುವ ಸಾವಿರಾರು ರೂಪಾಯಿಗಳ ಮೌಲ್ಯ ತಿಳಿದಿಲ್ಲ. ಆದ್ದರಿಂದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ತುಂಬಾ ಸಮಯ ತೆಗೆದುಕೊಳ್ಳಲಾಗುತ್ತದೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...