Homeಕರ್ನಾಟಕತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

ತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

- Advertisement -
- Advertisement -

ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ಕೇಂದ್ರ ನಾಯಕತ್ವದ ಮೇಲೆ ಒತ್ತಡಗಳು ಹೆಚ್ಚುವ ಸೂಚನೆಗಳು ದೊರೆತಿವೆ.

ಕಾಂಗ್ರೆಸ್ ಪಕ್ಷದ ನಾಯಕ ಸಚಿನ್ ಪೈಲಟ್ ತನ್ನದೇ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ. ಭ್ರಷ್ಟಾಚಾರ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಗುರುವಾರ ಅಜ್ಮೀರ್‌ನಿಂದ ‘ಜನಸಂಘರ್ಷ್ ಯಾತ್ರೆ’ ಆರಂಭಿಸಿರುವ ಸಚಿನ್‌, ಐದು ದಿನಗಳಲ್ಲಿ ಸುಮಾರು 125 ಕಿ.ಮೀ. ಕ್ರಮಿಸಲಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ನಡೆಸಿರುವ ಭ್ರಷ್ಟಾಚಾರಗಳ ಕುರಿತು ಯಾವುದೇ ಕ್ರಮವನ್ನು ಗೆಹ್ಲೋಟ್ ನೇತೃತ್ವದ ಸರ್ಕಾರ ಜರುಗಿಸಿಲ್ಲ ಎಂದು ಕಳೆದ ತಿಂಗಳು ಒಂದು ದಿನದ ಉಪವಾಸವನ್ನು ನಡೆಸಿ ಸಚಿನ್‌ ಗಮನ ಸೆಳೆದಿದ್ದರು.

ಗುರುವಾರ ಮಧ್ಯಾಹ್ನದ ಸುಮಾರಿಗೆ ಜೈಪುರ ರಸ್ತೆಯ ಅಶೋಕ್ ಉದ್ಯಾನ್ ಬಳಿ ಪೈಲಟ್ ಅವರು ರಾಜ್ಯ ರಾಜಧಾನಿ ಕಡೆಗೆ ಮೆರವಣಿಗೆಯನ್ನು ಪ್ರಾರಂಭಿಸುವ ಮೊದಲು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಕಿಶನ್‌ಗಢದ ತೊಲಮಲ್ ಗ್ರಾಮದಲ್ಲಿ ರಾತ್ರಿ ತಂಗಲಿದ್ದಾರೆ.

ಗೆಹ್ಲೋಟ್ ಮತ್ತು ಪೈಲಟ್ ನಡುವೆ ತಿಕ್ಕಾಟ ತಾರಕಕ್ಕೇರುತ್ತಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ ಸಾರ್ವಜನಿಕವಾಗಿ ಗುದ್ದಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂದು 2020ರಲ್ಲಿ ಸಚಿನ್‌ ಬಂಡಾಯ ತೋರಿದ್ದರು.

ಆದಾಗ್ಯೂ, ಗೆಹ್ಲೋಟ್ ಅಧಿಕಾರದಲ್ಲಿ ಮುಂದುವರಿಯುವಲ್ಲಿ ಯಶಸ್ವಿಯಾದರು. ಪೈಲಟ್ ಮತ್ತು ಅವರ ಕೆಲವು ನಿಷ್ಠರನ್ನು ನಂತರ ರಾಜ್ಯ ಕ್ಯಾಬಿನೆಟ್‌ನಿಂದ ಹೊರಹಾಕಲಾಯಿತು.

ಭಾನುವಾರ ಧೋಲ್‌ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿ, ಬಿಜೆಪಿ ನಾಯಕರಾದ ವಸುಂಧರಾ ರಾಜೇ ಮತ್ತು ಕೈಲಾಶ್ ಮೇಘವಾಲ್ ಅವರು ಹಣಬಲವನ್ನು ನೀಡಲಿಲ್ಲ. ಚುನಾಯಿತ ಸರ್ಕಾರವನ್ನು ಉರುಳಿಸುವ ಪಿತೂರಿಯನ್ನು ಬೆಂಬಲಿಸಲು ಅವರು ನಿರಾಕರಿಸಿದ್ದರಿಂದ 2020ರಲ್ಲಿ ಕೆಲವು ಕಾಂಗ್ರೆಸ್ ಶಾಸಕರ ಬಂಡಾಯ ಯಶಸ್ವಿಯಾಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಪೈಲಟ್ ಅವರು ಗೆಹ್ಲೋಟ್ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಗೆಹ್ಲೋಟ್ ಅವರು ಆರೋಪಗಳು ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಇತ್ತೀಚೆಗೆ ಮಾತನಾಡಿದ್ದ ಫೈಲಟ್‌, “ನಮ್ಮ ಮಕ್ಕಳು ವರ್ಷಗಳ ಕಾಲ ಕಷ್ಟಪಟ್ಟಿರುತ್ತಾರೆ, ಪೋಷಕರು ಮಕ್ಕಳ ಟ್ಯೂಷನ್ ತರಗತಿಗಳಿಗಾಗಿ ಅರೆಹೊಟ್ಟೆ ಮಾಡಿಕೊಂಡಿರುತ್ತಾರೆ. ಅವರು ಪರೀಕ್ಷೆಗಳಿಗೆ ಹಾಜರಾಗುತ್ತಾರೆ, ಪತ್ರಿಕೆ ಸೋರಿಕೆಯಾಗುತ್ತದೆ, ರದ್ದುಗೊಳ್ಳುತ್ತದೆ. ಅದರ ಮೇಲೆ ಕ್ರಮ ಕೈಗೊಳ್ಳಲು ಏಕೆ ಇಷ್ಟು ಸಮಯ ಬೇಕಾಗುತ್ತದೆ? ನ್ಯಾಯ ಪಡೆಯುವುದು ಏಕೆ ಕಷ್ಟ?” ಎಂದು ಪ್ರಶ್ನಿಸಿದ್ದರು.

“ಉನ್ನತ ಹುದ್ದೆಯಲ್ಲಿರುವವರಿಗೆ ಶಿಕ್ಷಣಕ್ಕಾಗಿ ಖರ್ಚು ಮಾಡುವ ಸಾವಿರಾರು ರೂಪಾಯಿಗಳ ಮೌಲ್ಯ ತಿಳಿದಿಲ್ಲ. ಆದ್ದರಿಂದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ತುಂಬಾ ಸಮಯ ತೆಗೆದುಕೊಳ್ಳಲಾಗುತ್ತದೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ; ಪುನರ್ವಸತಿ ಕಾರ್ಯದಲ್ಲಿ ಸಂತ್ರಸ್ತರಿಗೆ 229 ಮನೆಗಳನ್ನು ಹಸ್ತಾಂತರಿಸಿದ ಕೇರಳ ಸರ್ಕಾರ, ಐಯುಎಂಎಲ್

ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಬೃಹತ್ ಭೂಕುಸಿತದ ಸುಮಾರು ಎರಡು ವರ್ಷಗಳ ನಂತರ, ರಾಜ್ಯ ಸರ್ಕಾರವು ಭಾನುವಾರ ಕಲ್ಪೆಟ್ಟಾದ ಪುನರ್ವಸತಿ ಪಟ್ಟಣದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ₹299...

ಬೆಂಗಳೂರು | ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ : ಮತ್ತೆ ಮೂವರ ಬಂಧನ

ಬೆಂಗಳೂರಿನ ಜಕ್ಕೂರು ಬಳಿಯ ವಿಲ್ಲಾವೊಂದರಲ್ಲಿ ತಮಿಳುನಾಡಿನ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಅಮೃತಹಳ್ಳಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ...

ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಹತ್ಯೆ

ಇಸ್ರೇಲ್ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಶನಿವಾರ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯು ಟೆಹ್ರಾನ್‌ನ ಈಶಾನ್ಯ ನರ್ಮಕ್ ಜಿಲ್ಲೆಯಲ್ಲಿರುವ ಅಹ್ಮದಿನೆಜಾದ್...

ಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಸಂಘರ್ಷಕ್ಕೆ ಈಗ ಹಿಝ್ಬುಲ್ಲಾ ಎಂಟ್ರಿಯಾಗಿದೆ. ಇಸ್ರೇಲ್ ಮತ್ತು ಲೆಬನಾನ್‌ನ ಹಿಝ್ಬುಲ್ಲಾ ನಡುವಿನ ಕಾಳಗ ಸೋಮವಾರ (ಮಾ.2) ತೀವ್ರಗೊಂಡಿದೆ. ಇಸ್ರೇಲ್ ಪಡೆಗಳು ಹಿಝ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಲೆಬನಾನ್...

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ 'ಅಘೋಷಿತ ಯುದ್ದ'ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು. ಕಲಬುರಗಿ...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

"ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ 'ನೊಬೆಲ್ ಶಾಂತಿ ಪ್ರಶಸ್ತಿ' ಕೊಡಿ" ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ...

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...