Homeಕರ್ನಾಟಕತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

ತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

- Advertisement -
- Advertisement -

ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ಕೇಂದ್ರ ನಾಯಕತ್ವದ ಮೇಲೆ ಒತ್ತಡಗಳು ಹೆಚ್ಚುವ ಸೂಚನೆಗಳು ದೊರೆತಿವೆ.

ಕಾಂಗ್ರೆಸ್ ಪಕ್ಷದ ನಾಯಕ ಸಚಿನ್ ಪೈಲಟ್ ತನ್ನದೇ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ. ಭ್ರಷ್ಟಾಚಾರ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಗುರುವಾರ ಅಜ್ಮೀರ್‌ನಿಂದ ‘ಜನಸಂಘರ್ಷ್ ಯಾತ್ರೆ’ ಆರಂಭಿಸಿರುವ ಸಚಿನ್‌, ಐದು ದಿನಗಳಲ್ಲಿ ಸುಮಾರು 125 ಕಿ.ಮೀ. ಕ್ರಮಿಸಲಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ನಡೆಸಿರುವ ಭ್ರಷ್ಟಾಚಾರಗಳ ಕುರಿತು ಯಾವುದೇ ಕ್ರಮವನ್ನು ಗೆಹ್ಲೋಟ್ ನೇತೃತ್ವದ ಸರ್ಕಾರ ಜರುಗಿಸಿಲ್ಲ ಎಂದು ಕಳೆದ ತಿಂಗಳು ಒಂದು ದಿನದ ಉಪವಾಸವನ್ನು ನಡೆಸಿ ಸಚಿನ್‌ ಗಮನ ಸೆಳೆದಿದ್ದರು.

ಗುರುವಾರ ಮಧ್ಯಾಹ್ನದ ಸುಮಾರಿಗೆ ಜೈಪುರ ರಸ್ತೆಯ ಅಶೋಕ್ ಉದ್ಯಾನ್ ಬಳಿ ಪೈಲಟ್ ಅವರು ರಾಜ್ಯ ರಾಜಧಾನಿ ಕಡೆಗೆ ಮೆರವಣಿಗೆಯನ್ನು ಪ್ರಾರಂಭಿಸುವ ಮೊದಲು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಕಿಶನ್‌ಗಢದ ತೊಲಮಲ್ ಗ್ರಾಮದಲ್ಲಿ ರಾತ್ರಿ ತಂಗಲಿದ್ದಾರೆ.

ಗೆಹ್ಲೋಟ್ ಮತ್ತು ಪೈಲಟ್ ನಡುವೆ ತಿಕ್ಕಾಟ ತಾರಕಕ್ಕೇರುತ್ತಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ ಸಾರ್ವಜನಿಕವಾಗಿ ಗುದ್ದಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂದು 2020ರಲ್ಲಿ ಸಚಿನ್‌ ಬಂಡಾಯ ತೋರಿದ್ದರು.

ಆದಾಗ್ಯೂ, ಗೆಹ್ಲೋಟ್ ಅಧಿಕಾರದಲ್ಲಿ ಮುಂದುವರಿಯುವಲ್ಲಿ ಯಶಸ್ವಿಯಾದರು. ಪೈಲಟ್ ಮತ್ತು ಅವರ ಕೆಲವು ನಿಷ್ಠರನ್ನು ನಂತರ ರಾಜ್ಯ ಕ್ಯಾಬಿನೆಟ್‌ನಿಂದ ಹೊರಹಾಕಲಾಯಿತು.

ಭಾನುವಾರ ಧೋಲ್‌ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿ, ಬಿಜೆಪಿ ನಾಯಕರಾದ ವಸುಂಧರಾ ರಾಜೇ ಮತ್ತು ಕೈಲಾಶ್ ಮೇಘವಾಲ್ ಅವರು ಹಣಬಲವನ್ನು ನೀಡಲಿಲ್ಲ. ಚುನಾಯಿತ ಸರ್ಕಾರವನ್ನು ಉರುಳಿಸುವ ಪಿತೂರಿಯನ್ನು ಬೆಂಬಲಿಸಲು ಅವರು ನಿರಾಕರಿಸಿದ್ದರಿಂದ 2020ರಲ್ಲಿ ಕೆಲವು ಕಾಂಗ್ರೆಸ್ ಶಾಸಕರ ಬಂಡಾಯ ಯಶಸ್ವಿಯಾಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಪೈಲಟ್ ಅವರು ಗೆಹ್ಲೋಟ್ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಗೆಹ್ಲೋಟ್ ಅವರು ಆರೋಪಗಳು ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಇತ್ತೀಚೆಗೆ ಮಾತನಾಡಿದ್ದ ಫೈಲಟ್‌, “ನಮ್ಮ ಮಕ್ಕಳು ವರ್ಷಗಳ ಕಾಲ ಕಷ್ಟಪಟ್ಟಿರುತ್ತಾರೆ, ಪೋಷಕರು ಮಕ್ಕಳ ಟ್ಯೂಷನ್ ತರಗತಿಗಳಿಗಾಗಿ ಅರೆಹೊಟ್ಟೆ ಮಾಡಿಕೊಂಡಿರುತ್ತಾರೆ. ಅವರು ಪರೀಕ್ಷೆಗಳಿಗೆ ಹಾಜರಾಗುತ್ತಾರೆ, ಪತ್ರಿಕೆ ಸೋರಿಕೆಯಾಗುತ್ತದೆ, ರದ್ದುಗೊಳ್ಳುತ್ತದೆ. ಅದರ ಮೇಲೆ ಕ್ರಮ ಕೈಗೊಳ್ಳಲು ಏಕೆ ಇಷ್ಟು ಸಮಯ ಬೇಕಾಗುತ್ತದೆ? ನ್ಯಾಯ ಪಡೆಯುವುದು ಏಕೆ ಕಷ್ಟ?” ಎಂದು ಪ್ರಶ್ನಿಸಿದ್ದರು.

“ಉನ್ನತ ಹುದ್ದೆಯಲ್ಲಿರುವವರಿಗೆ ಶಿಕ್ಷಣಕ್ಕಾಗಿ ಖರ್ಚು ಮಾಡುವ ಸಾವಿರಾರು ರೂಪಾಯಿಗಳ ಮೌಲ್ಯ ತಿಳಿದಿಲ್ಲ. ಆದ್ದರಿಂದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ತುಂಬಾ ಸಮಯ ತೆಗೆದುಕೊಳ್ಳಲಾಗುತ್ತದೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...