Homeಕರ್ನಾಟಕತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

ತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

- Advertisement -
- Advertisement -

ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ಕೇಂದ್ರ ನಾಯಕತ್ವದ ಮೇಲೆ ಒತ್ತಡಗಳು ಹೆಚ್ಚುವ ಸೂಚನೆಗಳು ದೊರೆತಿವೆ.

ಕಾಂಗ್ರೆಸ್ ಪಕ್ಷದ ನಾಯಕ ಸಚಿನ್ ಪೈಲಟ್ ತನ್ನದೇ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ. ಭ್ರಷ್ಟಾಚಾರ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಗುರುವಾರ ಅಜ್ಮೀರ್‌ನಿಂದ ‘ಜನಸಂಘರ್ಷ್ ಯಾತ್ರೆ’ ಆರಂಭಿಸಿರುವ ಸಚಿನ್‌, ಐದು ದಿನಗಳಲ್ಲಿ ಸುಮಾರು 125 ಕಿ.ಮೀ. ಕ್ರಮಿಸಲಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ನಡೆಸಿರುವ ಭ್ರಷ್ಟಾಚಾರಗಳ ಕುರಿತು ಯಾವುದೇ ಕ್ರಮವನ್ನು ಗೆಹ್ಲೋಟ್ ನೇತೃತ್ವದ ಸರ್ಕಾರ ಜರುಗಿಸಿಲ್ಲ ಎಂದು ಕಳೆದ ತಿಂಗಳು ಒಂದು ದಿನದ ಉಪವಾಸವನ್ನು ನಡೆಸಿ ಸಚಿನ್‌ ಗಮನ ಸೆಳೆದಿದ್ದರು.

ಗುರುವಾರ ಮಧ್ಯಾಹ್ನದ ಸುಮಾರಿಗೆ ಜೈಪುರ ರಸ್ತೆಯ ಅಶೋಕ್ ಉದ್ಯಾನ್ ಬಳಿ ಪೈಲಟ್ ಅವರು ರಾಜ್ಯ ರಾಜಧಾನಿ ಕಡೆಗೆ ಮೆರವಣಿಗೆಯನ್ನು ಪ್ರಾರಂಭಿಸುವ ಮೊದಲು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಕಿಶನ್‌ಗಢದ ತೊಲಮಲ್ ಗ್ರಾಮದಲ್ಲಿ ರಾತ್ರಿ ತಂಗಲಿದ್ದಾರೆ.

ಗೆಹ್ಲೋಟ್ ಮತ್ತು ಪೈಲಟ್ ನಡುವೆ ತಿಕ್ಕಾಟ ತಾರಕಕ್ಕೇರುತ್ತಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ ಸಾರ್ವಜನಿಕವಾಗಿ ಗುದ್ದಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂದು 2020ರಲ್ಲಿ ಸಚಿನ್‌ ಬಂಡಾಯ ತೋರಿದ್ದರು.

ಆದಾಗ್ಯೂ, ಗೆಹ್ಲೋಟ್ ಅಧಿಕಾರದಲ್ಲಿ ಮುಂದುವರಿಯುವಲ್ಲಿ ಯಶಸ್ವಿಯಾದರು. ಪೈಲಟ್ ಮತ್ತು ಅವರ ಕೆಲವು ನಿಷ್ಠರನ್ನು ನಂತರ ರಾಜ್ಯ ಕ್ಯಾಬಿನೆಟ್‌ನಿಂದ ಹೊರಹಾಕಲಾಯಿತು.

ಭಾನುವಾರ ಧೋಲ್‌ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿ, ಬಿಜೆಪಿ ನಾಯಕರಾದ ವಸುಂಧರಾ ರಾಜೇ ಮತ್ತು ಕೈಲಾಶ್ ಮೇಘವಾಲ್ ಅವರು ಹಣಬಲವನ್ನು ನೀಡಲಿಲ್ಲ. ಚುನಾಯಿತ ಸರ್ಕಾರವನ್ನು ಉರುಳಿಸುವ ಪಿತೂರಿಯನ್ನು ಬೆಂಬಲಿಸಲು ಅವರು ನಿರಾಕರಿಸಿದ್ದರಿಂದ 2020ರಲ್ಲಿ ಕೆಲವು ಕಾಂಗ್ರೆಸ್ ಶಾಸಕರ ಬಂಡಾಯ ಯಶಸ್ವಿಯಾಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಪೈಲಟ್ ಅವರು ಗೆಹ್ಲೋಟ್ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಗೆಹ್ಲೋಟ್ ಅವರು ಆರೋಪಗಳು ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಇತ್ತೀಚೆಗೆ ಮಾತನಾಡಿದ್ದ ಫೈಲಟ್‌, “ನಮ್ಮ ಮಕ್ಕಳು ವರ್ಷಗಳ ಕಾಲ ಕಷ್ಟಪಟ್ಟಿರುತ್ತಾರೆ, ಪೋಷಕರು ಮಕ್ಕಳ ಟ್ಯೂಷನ್ ತರಗತಿಗಳಿಗಾಗಿ ಅರೆಹೊಟ್ಟೆ ಮಾಡಿಕೊಂಡಿರುತ್ತಾರೆ. ಅವರು ಪರೀಕ್ಷೆಗಳಿಗೆ ಹಾಜರಾಗುತ್ತಾರೆ, ಪತ್ರಿಕೆ ಸೋರಿಕೆಯಾಗುತ್ತದೆ, ರದ್ದುಗೊಳ್ಳುತ್ತದೆ. ಅದರ ಮೇಲೆ ಕ್ರಮ ಕೈಗೊಳ್ಳಲು ಏಕೆ ಇಷ್ಟು ಸಮಯ ಬೇಕಾಗುತ್ತದೆ? ನ್ಯಾಯ ಪಡೆಯುವುದು ಏಕೆ ಕಷ್ಟ?” ಎಂದು ಪ್ರಶ್ನಿಸಿದ್ದರು.

“ಉನ್ನತ ಹುದ್ದೆಯಲ್ಲಿರುವವರಿಗೆ ಶಿಕ್ಷಣಕ್ಕಾಗಿ ಖರ್ಚು ಮಾಡುವ ಸಾವಿರಾರು ರೂಪಾಯಿಗಳ ಮೌಲ್ಯ ತಿಳಿದಿಲ್ಲ. ಆದ್ದರಿಂದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ತುಂಬಾ ಸಮಯ ತೆಗೆದುಕೊಳ್ಳಲಾಗುತ್ತದೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...