Homeಕರ್ನಾಟಕತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

ತನ್ನದೇ ಸರ್ಕಾರದ ವಿರುದ್ಧ ಪೈಲಟ್‌ ‘ಜನಸಂಘರ್ಷ ಯಾತ್ರೆ’: ಕಾಂಗ್ರೆಸ್‌ನಲ್ಲಿ ನಿಲ್ಲದ ತಿಕ್ಕಾಟ

- Advertisement -
- Advertisement -

ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ಕೇಂದ್ರ ನಾಯಕತ್ವದ ಮೇಲೆ ಒತ್ತಡಗಳು ಹೆಚ್ಚುವ ಸೂಚನೆಗಳು ದೊರೆತಿವೆ.

ಕಾಂಗ್ರೆಸ್ ಪಕ್ಷದ ನಾಯಕ ಸಚಿನ್ ಪೈಲಟ್ ತನ್ನದೇ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ. ಭ್ರಷ್ಟಾಚಾರ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಗುರುವಾರ ಅಜ್ಮೀರ್‌ನಿಂದ ‘ಜನಸಂಘರ್ಷ್ ಯಾತ್ರೆ’ ಆರಂಭಿಸಿರುವ ಸಚಿನ್‌, ಐದು ದಿನಗಳಲ್ಲಿ ಸುಮಾರು 125 ಕಿ.ಮೀ. ಕ್ರಮಿಸಲಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ನಡೆಸಿರುವ ಭ್ರಷ್ಟಾಚಾರಗಳ ಕುರಿತು ಯಾವುದೇ ಕ್ರಮವನ್ನು ಗೆಹ್ಲೋಟ್ ನೇತೃತ್ವದ ಸರ್ಕಾರ ಜರುಗಿಸಿಲ್ಲ ಎಂದು ಕಳೆದ ತಿಂಗಳು ಒಂದು ದಿನದ ಉಪವಾಸವನ್ನು ನಡೆಸಿ ಸಚಿನ್‌ ಗಮನ ಸೆಳೆದಿದ್ದರು.

ಗುರುವಾರ ಮಧ್ಯಾಹ್ನದ ಸುಮಾರಿಗೆ ಜೈಪುರ ರಸ್ತೆಯ ಅಶೋಕ್ ಉದ್ಯಾನ್ ಬಳಿ ಪೈಲಟ್ ಅವರು ರಾಜ್ಯ ರಾಜಧಾನಿ ಕಡೆಗೆ ಮೆರವಣಿಗೆಯನ್ನು ಪ್ರಾರಂಭಿಸುವ ಮೊದಲು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಕಿಶನ್‌ಗಢದ ತೊಲಮಲ್ ಗ್ರಾಮದಲ್ಲಿ ರಾತ್ರಿ ತಂಗಲಿದ್ದಾರೆ.

ಗೆಹ್ಲೋಟ್ ಮತ್ತು ಪೈಲಟ್ ನಡುವೆ ತಿಕ್ಕಾಟ ತಾರಕಕ್ಕೇರುತ್ತಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ ಸಾರ್ವಜನಿಕವಾಗಿ ಗುದ್ದಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂದು 2020ರಲ್ಲಿ ಸಚಿನ್‌ ಬಂಡಾಯ ತೋರಿದ್ದರು.

ಆದಾಗ್ಯೂ, ಗೆಹ್ಲೋಟ್ ಅಧಿಕಾರದಲ್ಲಿ ಮುಂದುವರಿಯುವಲ್ಲಿ ಯಶಸ್ವಿಯಾದರು. ಪೈಲಟ್ ಮತ್ತು ಅವರ ಕೆಲವು ನಿಷ್ಠರನ್ನು ನಂತರ ರಾಜ್ಯ ಕ್ಯಾಬಿನೆಟ್‌ನಿಂದ ಹೊರಹಾಕಲಾಯಿತು.

ಭಾನುವಾರ ಧೋಲ್‌ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿ, ಬಿಜೆಪಿ ನಾಯಕರಾದ ವಸುಂಧರಾ ರಾಜೇ ಮತ್ತು ಕೈಲಾಶ್ ಮೇಘವಾಲ್ ಅವರು ಹಣಬಲವನ್ನು ನೀಡಲಿಲ್ಲ. ಚುನಾಯಿತ ಸರ್ಕಾರವನ್ನು ಉರುಳಿಸುವ ಪಿತೂರಿಯನ್ನು ಬೆಂಬಲಿಸಲು ಅವರು ನಿರಾಕರಿಸಿದ್ದರಿಂದ 2020ರಲ್ಲಿ ಕೆಲವು ಕಾಂಗ್ರೆಸ್ ಶಾಸಕರ ಬಂಡಾಯ ಯಶಸ್ವಿಯಾಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಪೈಲಟ್ ಅವರು ಗೆಹ್ಲೋಟ್ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಗೆಹ್ಲೋಟ್ ಅವರು ಆರೋಪಗಳು ನಿರಾಧಾರ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಇತ್ತೀಚೆಗೆ ಮಾತನಾಡಿದ್ದ ಫೈಲಟ್‌, “ನಮ್ಮ ಮಕ್ಕಳು ವರ್ಷಗಳ ಕಾಲ ಕಷ್ಟಪಟ್ಟಿರುತ್ತಾರೆ, ಪೋಷಕರು ಮಕ್ಕಳ ಟ್ಯೂಷನ್ ತರಗತಿಗಳಿಗಾಗಿ ಅರೆಹೊಟ್ಟೆ ಮಾಡಿಕೊಂಡಿರುತ್ತಾರೆ. ಅವರು ಪರೀಕ್ಷೆಗಳಿಗೆ ಹಾಜರಾಗುತ್ತಾರೆ, ಪತ್ರಿಕೆ ಸೋರಿಕೆಯಾಗುತ್ತದೆ, ರದ್ದುಗೊಳ್ಳುತ್ತದೆ. ಅದರ ಮೇಲೆ ಕ್ರಮ ಕೈಗೊಳ್ಳಲು ಏಕೆ ಇಷ್ಟು ಸಮಯ ಬೇಕಾಗುತ್ತದೆ? ನ್ಯಾಯ ಪಡೆಯುವುದು ಏಕೆ ಕಷ್ಟ?” ಎಂದು ಪ್ರಶ್ನಿಸಿದ್ದರು.

“ಉನ್ನತ ಹುದ್ದೆಯಲ್ಲಿರುವವರಿಗೆ ಶಿಕ್ಷಣಕ್ಕಾಗಿ ಖರ್ಚು ಮಾಡುವ ಸಾವಿರಾರು ರೂಪಾಯಿಗಳ ಮೌಲ್ಯ ತಿಳಿದಿಲ್ಲ. ಆದ್ದರಿಂದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ತುಂಬಾ ಸಮಯ ತೆಗೆದುಕೊಳ್ಳಲಾಗುತ್ತದೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...