Homeಮುಖಪುಟಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ...

ಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ ಪೈಲಟ್‌ಗಳ ಒಕ್ಕೂಟ

- Advertisement -
- Advertisement -

ಜೂನ್ 12 ರಂದು ನಡೆದ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಪೈಲಟ್ ದೋಷ ಅಥವಾ ಕಾಕ್‌ಪಿಟ್ ಗೊಂದಲ ಕಾರಣ ಎಂದು ಉಲ್ಲೇಖಿಸಿ ವರದಿ ಮಾಡಿದ ‘ದಿ ವಾಲ್ ಸ್ಟ್ರೀಟ್ ಜರ್ನಲ್’ ಮತ್ತು ‘ರಾಯಿಟರ್ಸ್’ ಸುದ್ದಿ ಸಂಸ್ಥೆಗಳಿಗೆ ಭಾರತೀಯ ಪೈಲಟ್‌ಗಳ ಒಕ್ಕೂಟ (ಎಫ್‌ಐಪಿ) ಲೀಗಲ್ ನೋಟಿಸ್ ನೀಡಿದೆ ಎಂದು ವರದಿಯಾಗಿದೆ.

ಪೈಲಟ್ ದೋಷದಿಂದಾಗಿ ಅಪಘಾತ ಸಂಭವಿಸಿದೆ ಎಂಬುವುದನ್ನು ಯಾವುದೇ ಪುರಾವೆಗಳಿಲ್ಲದೆ ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ ಎಂದು ಪೈಲಟ್‌ಗಳ ಒಕ್ಕೂಟ ನೋಟಿಸ್‌ನಲ್ಲಿ ತಿಳಿಸಿದೆ.

ಎರಡು ಮಾಧ್ಯಮ ಸಂಸ್ಥೆಗಳ ವರದಿಗಳನ್ನು ಪೈಲಟ್‌ಗಳ ಸಂಘಟನೆ ಪಕ್ಷಪಾತದಿಂದ ಕೂಡಿದ್ದು ಮತ್ತು ಪರಿಶೀಲಿಸದ ವರದಿ ಎಂದು ಟೀಕಿಸಿವೆ. ಈ ಸಂಬಂಧ ಕ್ಷಮೆ ಯಾಚಿಸುವಂತೆ ಫಾರ್ಮಲ್ ಲೀಗಲ್ ನೋಟಿಸ್‌ನಲ್ಲಿ ಒತ್ತಾಯಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ದುರಂತದ ಕಾರಣದ ಬಗ್ಗೆ ತನಿಖೆ ನಡೆಯುತ್ತಿರುವಾಗ ಈ ರೀತಿಯ ವರದಿ ಪ್ರಕಟಿಸಿರುವುದು ಬೇಜವಾಬ್ದಾರಿಯನ್ನು ಎಂದು ಎತ್ತಿ ತೋರಿಸಿದೆ. ಮಾಧ್ಯಮಗಳು ಪತ್ರಿಕೋದ್ಯಮದ ಸಮಗ್ರತೆಯನ್ನು ಎತ್ತಿಹಿಡಿಯಬೇಕು ಮತ್ತು ಸಾರ್ವಜನಿಕರನ್ನು ದಾರಿ ತಪ್ಪಿಸುವ ತಪ್ಪು ಮಾಹಿತಿಯನ್ನು ಹರಡುವುದನ್ನು ತಪ್ಪಿಸಬೇಕು ಎಂದು ಒಕ್ಕೂಟ ಹೇಳಿದೆ.

“ಇಂತಹ ಊಹಾತ್ಮಕ ವಿಷಯಗಳ ಪ್ರಕಟಣೆಯು ಅತ್ಯಂತ ಬೇಜವಾಬ್ದಾರಿಯಿಂದ ಕೂಡಿದ್ದು, ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಾಗದ ಮೃತ ಪೈಲಟ್‌ಗಳ ಖ್ಯಾತಿಗೆ ಗಂಭೀರ ಮತ್ತು ಸರಿಪಡಿಸಲಾಗದ ಹಾನಿಯನ್ನುಂಟುಮಾಡಿದೆ. ಈ ಮೂಲಕ ರಾಯಿಟರ್ಸ್ ದುಃಖಿತ ಕುಟುಂಬಗಳಿಗೆ ಅನಗತ್ಯ ತೊಂದರೆಯನ್ನುಂಟುಮಾಡಿದೆ. ಅಲ್ಲದೆ, ಅಪಾರ ಒತ್ತಡ ಮತ್ತು ಸಾರ್ವಜನಿಕ ಜವಾಬ್ದಾರಿಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಪೈಲಟ್ ಭ್ರಾತೃತ್ವದ ನೈತಿಕತೆಯನ್ನು ಕುಗ್ಗಿಸಿದೆ” ಎಂದು ಲೀಗಲ್ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಅಪಘಾತವು ಸಾರ್ವಜನಿಕರ ಗಮನವನ್ನು ಸೆಳೆದಿದ್ದರೂ, “ವಿಶೇಷವಾಗಿ ಆಧಾರರಹಿತ ಸಂಗತಿಗಳ ಆಧಾರದ ಮೇಲೆ ಭಾರತೀಯ ವಾಯುಯಾನ ಉದ್ಯಮದ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಅಥವಾ ತಲ್ಲಣವನ್ನು ಸೃಷ್ಟಿಸುವ ಸಮಯ ಇದಲ್ಲ” ಎಂದು ಒಕ್ಕೂಟದ ಒತ್ತಿ ಹೇಳಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಮಾಧ್ಯಮಗಳು ಊಹಾಪೋಹಗಳಿಂದ ದೂರವಿರುವಂತೆ ಮನವಿ ಮಾಡಿದೆ.

ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಇತ್ತೀಚೆಗೆ ಬಿಡುಗಡೆ ಮಾಡಿದ ಪ್ರಾಥಮಿಕ ವರದಿಯಲ್ಲಿ, ಅಹ್ಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ವಿಮಾನದ ಇಂಜಿನ್‌ಗಳ ಇಂಧನ ನಿಯಂತ್ರಣ ಸ್ವಿಚ್‌ಗಳು ಡಿಕ್ಕಿ ಹೊಡೆಯುವ ಕೆಲವೇ ಕ್ಷಣಗಳ ಮೊದಲು “ರನ್” ನಿಂದ “ಕಟ್ಆಫ್”ಗೆ ತಿರುಗಿತ್ತು. ಇದರಿಂದ ಎರಡೂ ಇಂಜಿನ್‌ಗಳಿಗೆ ಇಂಧನ ಪೂರೈಕೆ ಕಡಿತಗೊಂಡಿತ್ತು ಎಂದು ಹೇಳಿತ್ತು. ಇಂಧನ ಸ್ವಿಚ್‌ಗಳ ಕುರಿತು ಪೈಲಟ್‌ಗಳ ನಡುವಿನ ಸಂಭಾಷಣೆಯನ್ನುಉಲ್ಲೇಖಿಸಿದ್ದ ವರದಿಯು, “ಒಬ್ಬ ಪೈಲಟ್ ಸ್ಚಿಚ್ ಯಾರು ಕಟ್‌ಆಫ್‌ ಮಾಡಿತ್ತು ಎಂದು ಕೇಳಿದಾಗ, ಮತ್ತೊಬ್ಬರು ಪೈಲಟ್‌ ನನಗೆ ಗೊತ್ತಿಲ್ಲ” ಎಂದು ಹೇಳಿದ್ದಾರೆ” ಎಂದಿತ್ತು.

ಅಮೆರಿಕದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯ (ಎನ್‌ಟಿಎಸ್‌ಬಿ) ಮುಖ್ಯಸ್ಥರು ಏರ್ ಇಂಡಿಯಾ ವಿಮಾನ ಅಪಘಾತದ ತನಿಖೆಯ ವಿವರಗಳನ್ನು ವರದಿ ಮಾಡುವಾಗ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದರು. ಇತ್ತೀಚಿನ ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳು ಅಕಾಲಿಕವಾಗಿವೆ ಮತ್ತು ಸರಿಯಾದ ತನಿಖಾ ಸಂದರ್ಭವನ್ನು ಹೊಂದಿಲ್ಲ ಎಂದು ಹೇಳಿದ್ದರು.

ಎಂವಿಎ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ ಉದ್ಧವ್ ಠಾಕ್ರೆ: ಮೈತ್ರಿಕೂಟದಿಂದ ನಿರ್ಗಮಿಸುವ ಮುನ್ಸೂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...