Homeಮುಖಪುಟಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ...

ಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ ಪಿಣರಾಯಿ ಸರ್ಕಾರ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಎರಡನೇ ಅಲೆಯಿಂದ ಉಂಟಾದ ಆರ್ಥಿಕ ಕುಸಿತವನ್ನು ಸರಿದೂಗಿಸಲು 100 ದಿನಗಳ ಕ್ರಿಯಾ ಯೋಜನೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ತಿರುವನಂತಪುರಂನಲ್ಲಿ ಪ್ರಕಟಿಸಿದ್ದಾರೆ. ಯೋಜನೆಯು ಕೃಷಿ ಉತ್ಪಾದನೆಯನ್ನು ಹೆಚ್ಚಿಸುವುದು, ಗುಣಮಟ್ಟದ ಉದ್ಯೋಗವನ್ನು ಸೃಷ್ಟಿಸುವುದು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುವುದು ಸೇರಿದಂತೆ ಹಲವು ಯೋಜನೆಗಳನ್ನು ಕೇಂದ್ರೀಕರಿಸುತ್ತದೆ ಮತ್ತು ಇದು ಜೂನ್ 11 ಮತ್ತು ಸೆಪ್ಟೆಂಬರ್ 19 ರ ನಡುವೆ ಜಾರಿಗೆ ಬರಲಿದೆ.

ವಿಜ್ಞಾನ, ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಕೇಂದ್ರೀಕರಿಸಿ ಜ್ಞಾನಾಧಾರಿತ ಆರ್ಥಿಕತೆಯ ನಿರ್ಮಾಣಕ್ಕೆ ಅನುವು ಮಾಡಿಕೊಡುವುದು ಕೂಡಾ ಇದರ ಉದ್ದೇಶ ಎಂದು ಪಿಣರಾಯಿ ವಿಜಯನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಭದ್ರತೆಯ ಸಾಧನೆಗಳನ್ನು ಮುನ್ನಡೆಸಲು, ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು ಹಾಗೂ ಗುಣಮಟ್ಟದ ಉದ್ಯೋಗವನ್ನು ಸೃಷ್ಟಿಸಲು ಬೇಕಾಗಿ ನೀತಿಗಳು ಮತ್ತು ಯೋಜನೆಗಳಿಗೆ ಒತ್ತು ನೀಡಲಾಗುವುದು” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 7 ತಿಂಗಳು: ‘ಕೃಷಿ ಉಳಿಸಿ, ಪ್ರಜಾಪ್ರಭುತ್ವ ಉಳಿಸಿ ದಿನ’ ಪ್ರತಿಭಟನೆಗೆ ರೈತರ ಕರೆ

“ಬಡತನ ನಿವಾರಣೆ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಹೋಗಲಾಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿಯ ಅನುಷ್ಠಾನ ಮತ್ತು ಆರೋಗ್ಯಕರ ನಗರ ಜೀವನಕ್ಕೆ ಅನುಕೂಲಕರವಾದ ಆಧುನಿಕ ಘನತ್ಯಾಜ್ಯ ನಿರ್ವಹಣಾ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಈ ಯೋಜನೆಯ ಅತ್ಯಂತ ಮಹತ್ವದ ಅಂಶವಾಗಿದೆ” ಎಂದು ಅವರು ಹೇಳಿದ್ದಾರೆ.

ಕೃಷಿ ಉತ್ಪಾದನೆಯನ್ನು ಹೆಚ್ಚಿಸುವುದರ ಜೊತೆಗೆ, ವಿಷಕಾರಿಯಲ್ಲದ ಆಹಾರದ ಉತ್ಪಾದನೆಯೂ ಈ ಯೋಜನೆಯ ಆದ್ಯತೆಯಾಗಿದೆ ಎಂದು ಪಿಣರಾಯಿ ಹೇಳಿದ್ದಾರೆ.

5,898 ಕೋಟಿ ರೂ.ಗಳ ಸಾಲವನ್ನು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳಾದ ವಿಶ್ವ ಬ್ಯಾಂಕ್, ಜರ್ಮನ್ ಬ್ಯಾಂಕ್ ಕೆಎಫ್‌ಡಬ್ಲ್ಯೂ ಮತ್ತು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (ಎಐಐಬಿ) ನಿಂದ ರೀಬ್ಯುಲ್ಡ್‌ ಕೇರಳ ಇನಿಶಿಯೇಟಿವ್ (ಆರ್‌ಕೆಐ) ಗೆ ಮಂಜೂರು ಮಾಡಲಾಗಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

“ಈ ಸಾಲಕ್ಕೆ ರಾಜ್ಯದ ಪಾಲನ್ನು ಸೇರಿಸಿದರೆ ಆರ್‌ಕೆಐ ಯೋಜನೆಗಳಿಗೆ 8,425 ಕೋಟಿ ರೂ. ಲಭ್ಯವಾಗುತ್ತದೆ. ಮುಂದಿನ 100 ದಿನಗಳಲ್ಲಿ 945.35 ಕೋಟಿ ರೂ.ಗಳ ಒಂಬತ್ತು ರಸ್ತೆ ಯೋಜನೆಗಳನ್ನು ಆರ್‌ಕೆಐ ಹಣವನ್ನು ಬಳಸಿಕೊಂಡು ಪ್ರಾರಂಭಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ಇದಲ್ಲದೆ, ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ)ಯು ಈ 100 ದಿನಗಳಲ್ಲಿ 1,519.57 ಕೋಟಿ ರೂ.ಗಳ ಯೋಜನೆಗಳನ್ನು ಪೂರ್ಣಗೊಳಿಸಲಿದೆ ಎಂದರು.

ಪಿಡಬ್ಲ್ಯುಡಿ, ಆರ್‌ಕೆಐ ಮತ್ತು ಕೇರಳ ಇನ್ಪ್ರಾಸ್ಟ್ರಕ್ಚರ್‌‌ ಇನ್ವೆಸ್ಟ್‌ಮೆಂಟ್‌‌ ಫಂಡ್‌ ಬೋರ್ಡ್‌ ಮೂಲಕ 2,464.92 ಕೋಟಿ ರೂ.ಗಳ 100 ದಿನಗಳ ಕ್ರಿಯಾ ಯೋಜನೆಯು ನಡೆಯಲಿದೆ ಎಂದು ಸರ್ಕಾರದ ಪತ್ರಿಕಾ ಹೇಳಿಕೆಯು ತಿಳಿಸಿದೆ.

“ಕೆ-ಡಿಐಎಸ್ಸಿ (ಕೇರಳ ಅಭಿವೃದ್ಧಿ ಮತ್ತು ಇನ್ನೋವೇಶನ್ ಸ್ಟ್ರಾಟೆಜಿಕ್ ಕೌನ್ಸಿಲ್) ರಾಜ್ಯದ 20 ಲಕ್ಷ ವಿದ್ಯಾವಂತರಿಗೆ ಉದ್ಯೋಗ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪೂರ್ಣಗೊಳಿಸುತ್ತಿದೆ. ಎಲ್ಲಾ ಸ್ಥಳೀಯ ಸಂಸ್ಥೆಗಳು 1,000 ಜನರಲ್ಲಿ ಐದು ಜನರಿಗೆ ಉದ್ಯೋಗ ಸೃಷ್ಟಿಸುವ ಕರಡು ಯೋಜನೆಯನ್ನು ಸಿದ್ಧಪಡಿಸುತ್ತವೆ” ಎಂದು ಹೇಳಿಕೆ ತಿಳಿಸಿದೆ.

ಕೈಗಾರಿಕೆಗಳು ಮತ್ತು ವಾಣಿಜ್ಯ ವಿಭಾಗದಲ್ಲಿ ತಲಾ 10,000 ಉದ್ಯೋಗಗಳು, ಕುಡುಂಬಶ್ರೀಯಲ್ಲಿ 2,000, ಮತ್ತು ಸಾರಿಗೆ ಇಲಾಖೆಯಲ್ಲಿ 7,500 ಉದ್ಯೋಗಗಳು ಸೇರಿದಂತೆ ವಿವಿಧ ಇಲಾಖೆಗಳ ಅಡಿಯಲ್ಲಿ ಸುಮಾರು 77,350 ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು 100 ದಿನಗಳಲ್ಲಿ ಸೃಷ್ಟಿಸಲಾಗುವುದು ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...