Homeಮುಖಪುಟಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ...

ಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ ಪಿಣರಾಯಿ ಸರ್ಕಾರ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಎರಡನೇ ಅಲೆಯಿಂದ ಉಂಟಾದ ಆರ್ಥಿಕ ಕುಸಿತವನ್ನು ಸರಿದೂಗಿಸಲು 100 ದಿನಗಳ ಕ್ರಿಯಾ ಯೋಜನೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ತಿರುವನಂತಪುರಂನಲ್ಲಿ ಪ್ರಕಟಿಸಿದ್ದಾರೆ. ಯೋಜನೆಯು ಕೃಷಿ ಉತ್ಪಾದನೆಯನ್ನು ಹೆಚ್ಚಿಸುವುದು, ಗುಣಮಟ್ಟದ ಉದ್ಯೋಗವನ್ನು ಸೃಷ್ಟಿಸುವುದು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುವುದು ಸೇರಿದಂತೆ ಹಲವು ಯೋಜನೆಗಳನ್ನು ಕೇಂದ್ರೀಕರಿಸುತ್ತದೆ ಮತ್ತು ಇದು ಜೂನ್ 11 ಮತ್ತು ಸೆಪ್ಟೆಂಬರ್ 19 ರ ನಡುವೆ ಜಾರಿಗೆ ಬರಲಿದೆ.

ವಿಜ್ಞಾನ, ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಕೇಂದ್ರೀಕರಿಸಿ ಜ್ಞಾನಾಧಾರಿತ ಆರ್ಥಿಕತೆಯ ನಿರ್ಮಾಣಕ್ಕೆ ಅನುವು ಮಾಡಿಕೊಡುವುದು ಕೂಡಾ ಇದರ ಉದ್ದೇಶ ಎಂದು ಪಿಣರಾಯಿ ವಿಜಯನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಭದ್ರತೆಯ ಸಾಧನೆಗಳನ್ನು ಮುನ್ನಡೆಸಲು, ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು ಹಾಗೂ ಗುಣಮಟ್ಟದ ಉದ್ಯೋಗವನ್ನು ಸೃಷ್ಟಿಸಲು ಬೇಕಾಗಿ ನೀತಿಗಳು ಮತ್ತು ಯೋಜನೆಗಳಿಗೆ ಒತ್ತು ನೀಡಲಾಗುವುದು” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 7 ತಿಂಗಳು: ‘ಕೃಷಿ ಉಳಿಸಿ, ಪ್ರಜಾಪ್ರಭುತ್ವ ಉಳಿಸಿ ದಿನ’ ಪ್ರತಿಭಟನೆಗೆ ರೈತರ ಕರೆ

“ಬಡತನ ನಿವಾರಣೆ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಹೋಗಲಾಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿಯ ಅನುಷ್ಠಾನ ಮತ್ತು ಆರೋಗ್ಯಕರ ನಗರ ಜೀವನಕ್ಕೆ ಅನುಕೂಲಕರವಾದ ಆಧುನಿಕ ಘನತ್ಯಾಜ್ಯ ನಿರ್ವಹಣಾ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಈ ಯೋಜನೆಯ ಅತ್ಯಂತ ಮಹತ್ವದ ಅಂಶವಾಗಿದೆ” ಎಂದು ಅವರು ಹೇಳಿದ್ದಾರೆ.

ಕೃಷಿ ಉತ್ಪಾದನೆಯನ್ನು ಹೆಚ್ಚಿಸುವುದರ ಜೊತೆಗೆ, ವಿಷಕಾರಿಯಲ್ಲದ ಆಹಾರದ ಉತ್ಪಾದನೆಯೂ ಈ ಯೋಜನೆಯ ಆದ್ಯತೆಯಾಗಿದೆ ಎಂದು ಪಿಣರಾಯಿ ಹೇಳಿದ್ದಾರೆ.

5,898 ಕೋಟಿ ರೂ.ಗಳ ಸಾಲವನ್ನು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳಾದ ವಿಶ್ವ ಬ್ಯಾಂಕ್, ಜರ್ಮನ್ ಬ್ಯಾಂಕ್ ಕೆಎಫ್‌ಡಬ್ಲ್ಯೂ ಮತ್ತು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (ಎಐಐಬಿ) ನಿಂದ ರೀಬ್ಯುಲ್ಡ್‌ ಕೇರಳ ಇನಿಶಿಯೇಟಿವ್ (ಆರ್‌ಕೆಐ) ಗೆ ಮಂಜೂರು ಮಾಡಲಾಗಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

“ಈ ಸಾಲಕ್ಕೆ ರಾಜ್ಯದ ಪಾಲನ್ನು ಸೇರಿಸಿದರೆ ಆರ್‌ಕೆಐ ಯೋಜನೆಗಳಿಗೆ 8,425 ಕೋಟಿ ರೂ. ಲಭ್ಯವಾಗುತ್ತದೆ. ಮುಂದಿನ 100 ದಿನಗಳಲ್ಲಿ 945.35 ಕೋಟಿ ರೂ.ಗಳ ಒಂಬತ್ತು ರಸ್ತೆ ಯೋಜನೆಗಳನ್ನು ಆರ್‌ಕೆಐ ಹಣವನ್ನು ಬಳಸಿಕೊಂಡು ಪ್ರಾರಂಭಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ಇದಲ್ಲದೆ, ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ)ಯು ಈ 100 ದಿನಗಳಲ್ಲಿ 1,519.57 ಕೋಟಿ ರೂ.ಗಳ ಯೋಜನೆಗಳನ್ನು ಪೂರ್ಣಗೊಳಿಸಲಿದೆ ಎಂದರು.

ಪಿಡಬ್ಲ್ಯುಡಿ, ಆರ್‌ಕೆಐ ಮತ್ತು ಕೇರಳ ಇನ್ಪ್ರಾಸ್ಟ್ರಕ್ಚರ್‌‌ ಇನ್ವೆಸ್ಟ್‌ಮೆಂಟ್‌‌ ಫಂಡ್‌ ಬೋರ್ಡ್‌ ಮೂಲಕ 2,464.92 ಕೋಟಿ ರೂ.ಗಳ 100 ದಿನಗಳ ಕ್ರಿಯಾ ಯೋಜನೆಯು ನಡೆಯಲಿದೆ ಎಂದು ಸರ್ಕಾರದ ಪತ್ರಿಕಾ ಹೇಳಿಕೆಯು ತಿಳಿಸಿದೆ.

“ಕೆ-ಡಿಐಎಸ್ಸಿ (ಕೇರಳ ಅಭಿವೃದ್ಧಿ ಮತ್ತು ಇನ್ನೋವೇಶನ್ ಸ್ಟ್ರಾಟೆಜಿಕ್ ಕೌನ್ಸಿಲ್) ರಾಜ್ಯದ 20 ಲಕ್ಷ ವಿದ್ಯಾವಂತರಿಗೆ ಉದ್ಯೋಗ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪೂರ್ಣಗೊಳಿಸುತ್ತಿದೆ. ಎಲ್ಲಾ ಸ್ಥಳೀಯ ಸಂಸ್ಥೆಗಳು 1,000 ಜನರಲ್ಲಿ ಐದು ಜನರಿಗೆ ಉದ್ಯೋಗ ಸೃಷ್ಟಿಸುವ ಕರಡು ಯೋಜನೆಯನ್ನು ಸಿದ್ಧಪಡಿಸುತ್ತವೆ” ಎಂದು ಹೇಳಿಕೆ ತಿಳಿಸಿದೆ.

ಕೈಗಾರಿಕೆಗಳು ಮತ್ತು ವಾಣಿಜ್ಯ ವಿಭಾಗದಲ್ಲಿ ತಲಾ 10,000 ಉದ್ಯೋಗಗಳು, ಕುಡುಂಬಶ್ರೀಯಲ್ಲಿ 2,000, ಮತ್ತು ಸಾರಿಗೆ ಇಲಾಖೆಯಲ್ಲಿ 7,500 ಉದ್ಯೋಗಗಳು ಸೇರಿದಂತೆ ವಿವಿಧ ಇಲಾಖೆಗಳ ಅಡಿಯಲ್ಲಿ ಸುಮಾರು 77,350 ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು 100 ದಿನಗಳಲ್ಲಿ ಸೃಷ್ಟಿಸಲಾಗುವುದು ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...