Homeಮುಖಪುಟಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ...

ಕೊರೊನಾ ಆರ್ಥಿಕ ಹಿಂಜರಿತ: 77,350 ಉದ್ಯೋಗ ಸೃಷ್ಟಿ; 100 ದಿನಗಳ ಕ್ರಿಯಾ ಯೋಜನೆ ಘೋಷಿಸಿದ ಪಿಣರಾಯಿ ಸರ್ಕಾರ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಎರಡನೇ ಅಲೆಯಿಂದ ಉಂಟಾದ ಆರ್ಥಿಕ ಕುಸಿತವನ್ನು ಸರಿದೂಗಿಸಲು 100 ದಿನಗಳ ಕ್ರಿಯಾ ಯೋಜನೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ತಿರುವನಂತಪುರಂನಲ್ಲಿ ಪ್ರಕಟಿಸಿದ್ದಾರೆ. ಯೋಜನೆಯು ಕೃಷಿ ಉತ್ಪಾದನೆಯನ್ನು ಹೆಚ್ಚಿಸುವುದು, ಗುಣಮಟ್ಟದ ಉದ್ಯೋಗವನ್ನು ಸೃಷ್ಟಿಸುವುದು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುವುದು ಸೇರಿದಂತೆ ಹಲವು ಯೋಜನೆಗಳನ್ನು ಕೇಂದ್ರೀಕರಿಸುತ್ತದೆ ಮತ್ತು ಇದು ಜೂನ್ 11 ಮತ್ತು ಸೆಪ್ಟೆಂಬರ್ 19 ರ ನಡುವೆ ಜಾರಿಗೆ ಬರಲಿದೆ.

ವಿಜ್ಞಾನ, ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಕೇಂದ್ರೀಕರಿಸಿ ಜ್ಞಾನಾಧಾರಿತ ಆರ್ಥಿಕತೆಯ ನಿರ್ಮಾಣಕ್ಕೆ ಅನುವು ಮಾಡಿಕೊಡುವುದು ಕೂಡಾ ಇದರ ಉದ್ದೇಶ ಎಂದು ಪಿಣರಾಯಿ ವಿಜಯನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಭದ್ರತೆಯ ಸಾಧನೆಗಳನ್ನು ಮುನ್ನಡೆಸಲು, ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು ಹಾಗೂ ಗುಣಮಟ್ಟದ ಉದ್ಯೋಗವನ್ನು ಸೃಷ್ಟಿಸಲು ಬೇಕಾಗಿ ನೀತಿಗಳು ಮತ್ತು ಯೋಜನೆಗಳಿಗೆ ಒತ್ತು ನೀಡಲಾಗುವುದು” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 7 ತಿಂಗಳು: ‘ಕೃಷಿ ಉಳಿಸಿ, ಪ್ರಜಾಪ್ರಭುತ್ವ ಉಳಿಸಿ ದಿನ’ ಪ್ರತಿಭಟನೆಗೆ ರೈತರ ಕರೆ

“ಬಡತನ ನಿವಾರಣೆ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಹೋಗಲಾಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿಯ ಅನುಷ್ಠಾನ ಮತ್ತು ಆರೋಗ್ಯಕರ ನಗರ ಜೀವನಕ್ಕೆ ಅನುಕೂಲಕರವಾದ ಆಧುನಿಕ ಘನತ್ಯಾಜ್ಯ ನಿರ್ವಹಣಾ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಈ ಯೋಜನೆಯ ಅತ್ಯಂತ ಮಹತ್ವದ ಅಂಶವಾಗಿದೆ” ಎಂದು ಅವರು ಹೇಳಿದ್ದಾರೆ.

ಕೃಷಿ ಉತ್ಪಾದನೆಯನ್ನು ಹೆಚ್ಚಿಸುವುದರ ಜೊತೆಗೆ, ವಿಷಕಾರಿಯಲ್ಲದ ಆಹಾರದ ಉತ್ಪಾದನೆಯೂ ಈ ಯೋಜನೆಯ ಆದ್ಯತೆಯಾಗಿದೆ ಎಂದು ಪಿಣರಾಯಿ ಹೇಳಿದ್ದಾರೆ.

5,898 ಕೋಟಿ ರೂ.ಗಳ ಸಾಲವನ್ನು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳಾದ ವಿಶ್ವ ಬ್ಯಾಂಕ್, ಜರ್ಮನ್ ಬ್ಯಾಂಕ್ ಕೆಎಫ್‌ಡಬ್ಲ್ಯೂ ಮತ್ತು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (ಎಐಐಬಿ) ನಿಂದ ರೀಬ್ಯುಲ್ಡ್‌ ಕೇರಳ ಇನಿಶಿಯೇಟಿವ್ (ಆರ್‌ಕೆಐ) ಗೆ ಮಂಜೂರು ಮಾಡಲಾಗಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

“ಈ ಸಾಲಕ್ಕೆ ರಾಜ್ಯದ ಪಾಲನ್ನು ಸೇರಿಸಿದರೆ ಆರ್‌ಕೆಐ ಯೋಜನೆಗಳಿಗೆ 8,425 ಕೋಟಿ ರೂ. ಲಭ್ಯವಾಗುತ್ತದೆ. ಮುಂದಿನ 100 ದಿನಗಳಲ್ಲಿ 945.35 ಕೋಟಿ ರೂ.ಗಳ ಒಂಬತ್ತು ರಸ್ತೆ ಯೋಜನೆಗಳನ್ನು ಆರ್‌ಕೆಐ ಹಣವನ್ನು ಬಳಸಿಕೊಂಡು ಪ್ರಾರಂಭಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ಇದಲ್ಲದೆ, ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ)ಯು ಈ 100 ದಿನಗಳಲ್ಲಿ 1,519.57 ಕೋಟಿ ರೂ.ಗಳ ಯೋಜನೆಗಳನ್ನು ಪೂರ್ಣಗೊಳಿಸಲಿದೆ ಎಂದರು.

ಪಿಡಬ್ಲ್ಯುಡಿ, ಆರ್‌ಕೆಐ ಮತ್ತು ಕೇರಳ ಇನ್ಪ್ರಾಸ್ಟ್ರಕ್ಚರ್‌‌ ಇನ್ವೆಸ್ಟ್‌ಮೆಂಟ್‌‌ ಫಂಡ್‌ ಬೋರ್ಡ್‌ ಮೂಲಕ 2,464.92 ಕೋಟಿ ರೂ.ಗಳ 100 ದಿನಗಳ ಕ್ರಿಯಾ ಯೋಜನೆಯು ನಡೆಯಲಿದೆ ಎಂದು ಸರ್ಕಾರದ ಪತ್ರಿಕಾ ಹೇಳಿಕೆಯು ತಿಳಿಸಿದೆ.

“ಕೆ-ಡಿಐಎಸ್ಸಿ (ಕೇರಳ ಅಭಿವೃದ್ಧಿ ಮತ್ತು ಇನ್ನೋವೇಶನ್ ಸ್ಟ್ರಾಟೆಜಿಕ್ ಕೌನ್ಸಿಲ್) ರಾಜ್ಯದ 20 ಲಕ್ಷ ವಿದ್ಯಾವಂತರಿಗೆ ಉದ್ಯೋಗ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪೂರ್ಣಗೊಳಿಸುತ್ತಿದೆ. ಎಲ್ಲಾ ಸ್ಥಳೀಯ ಸಂಸ್ಥೆಗಳು 1,000 ಜನರಲ್ಲಿ ಐದು ಜನರಿಗೆ ಉದ್ಯೋಗ ಸೃಷ್ಟಿಸುವ ಕರಡು ಯೋಜನೆಯನ್ನು ಸಿದ್ಧಪಡಿಸುತ್ತವೆ” ಎಂದು ಹೇಳಿಕೆ ತಿಳಿಸಿದೆ.

ಕೈಗಾರಿಕೆಗಳು ಮತ್ತು ವಾಣಿಜ್ಯ ವಿಭಾಗದಲ್ಲಿ ತಲಾ 10,000 ಉದ್ಯೋಗಗಳು, ಕುಡುಂಬಶ್ರೀಯಲ್ಲಿ 2,000, ಮತ್ತು ಸಾರಿಗೆ ಇಲಾಖೆಯಲ್ಲಿ 7,500 ಉದ್ಯೋಗಗಳು ಸೇರಿದಂತೆ ವಿವಿಧ ಇಲಾಖೆಗಳ ಅಡಿಯಲ್ಲಿ ಸುಮಾರು 77,350 ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು 100 ದಿನಗಳಲ್ಲಿ ಸೃಷ್ಟಿಸಲಾಗುವುದು ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...